AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI: ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್​ಗೂ ಮುನ್ನ ಎರಡು ವಿಶೇಷ ಪಂದ್ಯ ಆಡಲಿದೆ ಟೀಮ್ ಇಂಡಿಯಾ

Team India Squad for WI Series: ಭಾರತ ಐಸಿಸಿ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಬಳಿಕ ನೇರವಾಗಿ ವೆಸ್ಟ್ ಇಂಡೀಸ್ ವಿರುದ್ಧ ಮೊದಲ ಟೆಸ್ಟ್​ನಲ್ಲಿ ಕಣಕ್ಕಿಳಿಯಲಿದೆ ಎನ್ನಲಾಗಿತ್ತು. ಆದರೆ, ಡಬ್ಲ್ಯೂಟಿಸಿ ಫೈನಲ್​ನಲ್ಲಿ ಸೋತ ಬಳಿಕ ಎಚ್ಚೆತ್ತು ಕೊಂಡಿರುವ ಮ್ಯಾನೇಜ್ಮೆಂಟ್ ಕೆರಿಬಿಯನ್ ವಾತಾವರಣಕ್ಕೆ ಹೊಂದಿಕೊಳ್ಳಲು ಅಭ್ಯಾಸ ಪಂದ್ಯಗಳನ್ನು ಆಯೋಜಿಸಲು ಮುಂದಾಗಿದೆ.

IND vs WI: ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್​ಗೂ ಮುನ್ನ ಎರಡು ವಿಶೇಷ ಪಂದ್ಯ ಆಡಲಿದೆ ಟೀಮ್ ಇಂಡಿಯಾ
Team India Test
Vinay Bhat
|

Updated on: Jun 24, 2023 | 7:24 AM

Share

ಭಾರತ ಕ್ರಿಕೆಟ್ ತಂಡದ ಆಟಗಾರರು ವಿಶ್ರಾಂತಿಯಿಂದ ಎಚ್ಚೆತ್ತು ಕೊಂಡಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ವೆಸ್ಟ್ ಇಂಡೀಸ್ ವಿರುದ್ಧದ ಎರಡು ಟೆಸ್ಟ್ ಮತ್ತು ಮೂರು ಏಕದಿನ ಪಂದ್ಯಗಳ ಸರಣಿಗೆ ಟೀಮ್ ಇಂಡಿಯಾವನ್ನು (Team India) ಪ್ರಕಟ ಮಾಡಿದೆ. ಕೆಲವೊಂದು ಅಚ್ಚರಿಯ ಬೆಳವಣಿಗೆಗಳು ಭಾರತ ತಂಡದಲ್ಲಿ ನಡೆದಿದ್ದು, ಟೆಸ್ಟ್ ತಂಡದಿಂದ ಚೇತೇಶ್ವರ್ ಪೂಜಾರ ಅವರನ್ನು ಕೈಬಿಡಲಾಗಿದೆ. ರುತುರಾಜ್ ಗಾಯಕ್ವಾಡ್ ಆಯ್ಕೆ ಆಗಿದ್ದು, ಅಜಿಂಕ್ಯ ರಹಾನೆಗೆ ಉಪ ನಾಯಕನ ಪಟ್ಟ ನೀಡಲಾಗಿದೆ. ಜುಲೈ 12 ರಿಂದ ಡೊಮಿನಿಕಾದ ವಿಂಡ್ಸರ್ ಪಾರ್ಕ್​ನಲ್ಲಿ ಮೊದಲ ಟೆಸ್ಟ್ ಆರಂಭವಾಗಲಿದೆ. ಆದರೆ, ಇದಕ್ಕೂ ಮುನ್ನ ರೋಹಿತ್ (Rohit Sharma) ಪಡೆ ಎರಡು ವಾರ್ಮ್-ಅಪ್ ಪಂದ್ಯಗಳಲ್ಲಿ ಕಣಕ್ಕಿಳಿಯಲಿದೆ.

ಬಿಸಿಸಿಐ ಈ ಹಿಂದೆ ಯಾವುದೇ ಅಭ್ಯಾಸ ಪಂದ್ಯ ಇರುವುದಿಲ್ಲ ಎಂದು ಹೇಳಿತ್ತು. ಐಸಿಸಿ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಬಳಿಕ ನೇರವಾಗಿ ವೆಸ್ಟ್ ಇಂಡೀಸ್ ವಿರುದ್ಧ ಮೊದಲ ಟೆಸ್ಟ್​ನಲ್ಲಿ ಕಣಕ್ಕಿಳಿಯಲಿದೆ ಎನ್ನಲಾಗಿತ್ತು. ಆದರೆ, ಡಬ್ಲ್ಯೂಟಿಸಿ ಫೈನಲ್​ನಲ್ಲಿ ಸೋತ ಬಳಿಕ ಎಚ್ಚೆತ್ತು ಕೊಂಡಿರುವ ಮ್ಯಾನೇಜ್ಮೆಂಟ್ ಕೆರಿಬಿಯನ್ ವಾತಾವರಣಕ್ಕೆ ಹೊಂದಿಕೊಳ್ಳಲು ಎರಡು ಅಭ್ಯಾಸ ಪಂದ್ಯಗಳನ್ನು ಆಯೋಜಿಸಲು ಮುಂದಾಗಿದೆ. ಹೀಗಾಗಿ ಜುಲೈ 2 ರಂದು ಟೀಮ್ ಇಂಡಿಯಾದ ಮೊದಲ ಬ್ಯಾಚ್ ವಿಂಡೀಸ್ ನಾಡಿಗೆ ಪ್ರಯಾಣ ಬೆಳೆಸಲಿದೆ.

IND vs WI: ತಂಡದಿಂದಲೇ ಹೊರಬಿದ್ದಿದ್ದ ರಹಾನೆ ಇದೀಗ ಟೀಂ ಇಂಡಿಯಾದ ಉಪನಾಯಕ..!

ಇದನ್ನೂ ಓದಿ
Image
IND vs WI: ರಣಜಿಯಲ್ಲಿ ರನ್ ಲೂಟಿ ಮಾಡಿದ ಈ ಮೂವರಿಗೆ ತಂಡದಲ್ಲಿ ಸ್ಥಾನ ಸಿಕ್ಕಿಲ್ಲ..!
Image
Suresh Raina: ಐಷಾರಾಮಿ ರೆಸ್ಟೋರೆಂಟ್ ಆರಂಭಿಸಿದ ಮಿ. ಐಪಿಎಲ್ ಸುರೇಶ್ ರೈನಾ; ಫೋಟೋ ನೋಡಿ
Image
IND vs WI: ಬರೋಬ್ಬರಿ 10 ವರ್ಷಗಳ ಬಳಿಕ ಏಕದಿನ ತಂಡದಲ್ಲಿ ಸ್ಥಾನ ಪಡೆದ ಎಡಗೈ ವೇಗಿ..!
Image
IND vs WI: ದೇಶೀ ಕ್ರಿಕೆಟ್​ನ ಸೂಪರ್ ಸ್ಟಾರ್​ಗೆ ಮತ್ತೆ ಮೋಸ; ಇದು ಅನ್ಯಾಯ ಎಂದ ನೆಟ್ಟಿಗರು

ಬಾರ್ಬಡೋಸ್‌ನಲ್ಲಿ ನಡೆಯಲಿರುವ ವಾರ್ಮ್-ಅಪ್ ಮ್ಯಾಚ್ ಯಾವ ದಿನಾಂಕದಂದು ನಡೆಯಲಿದೆ ಎಂಬ ಬಗ್ಗೆ ವೇಳಾಪಟ್ಟಿ ಇನ್ನಷ್ಟೆ ಪ್ರಕಟವಾಗಬೇಕಿದೆ. ಸದ್ಯ ಬಿಸಿಸಿಐ ಟೆಸ್ಟ್ ಸರಣಿಗೆ ಪ್ರಕಟಿಸಿರುವ 16 ಸದಸ್ಯರ ಪೈಕಿ ಯಶಸ್ವಿ ಜೈಸ್ವಾಲ್, ರುತುರಾಜ್ ಗಾಯಕ್ವಾಡ್, ಮುಖೇಶ್ ಕುಮಾರ್ ಹೊಸ ಮುಖಗಳಾಗಿದ್ದಾರೆ. ಇವರು ಅಭ್ಯಾಸ ಪಂದ್ಯದಲ್ಲಿ ಆಡಲಿದ್ದು, ಉತ್ತಮ ಪ್ರದರ್ಶನ ತೋರಿದರೆ ಮೊದಲ ಟೆಸ್ಟ್​ನ ಆಡುವ ಬಳಗದಲ್ಲಿ ಸ್ಥಾನ ಪಡೆಯಬಹುದು. ಜೊತೆಗೆ ಇಶಾನ್ ಕಿಶನ್​ಗೂ ಇದೊಂದು ಉತ್ತಮ ವೇದಿಕೆ ಆಗಿದೆ.

ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್, ಅಜಿಂಕ್ಯ ರಹಾನೆ (ಉಪನಾಯಕ), ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಆರ್. ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಯದೇವ್ ಉನದ್ಕಟ್, ನವದೀಪ್ ಸೈನಿ.

ಏಕದಿನ ಸರಣಿಗೆ ಭಾರತ ತಂಡ ಹೇಗಿದೆ?:

ಟೆಸ್ಟ್ ಜೊತೆ ವೆಸ್ಟ್ ಇಂಡೀಸ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೂ ಬಿಸಿಸಿಐ ತಂಡವನ್ನು ಪ್ರಕಟ ಮಾಡಿದೆ. ತಂಡದ ಉಪನಾಯಕತ್ವವನ್ನು ಹಾರ್ದಿಕ್ ಪಾಂಡ್ಯಗೆ ಹಸ್ತಾಂತರಿಸಲಾಗಿದ್ದು, ತಂಡದಲ್ಲಿ ಸಂಜು ಸ್ಯಾಮ್ಸನ್, ರುತುರಾಜ್ ಗಾಯಕ್ವಾಡ್ ಹಾಗೂ ಮುಖೇಶ್‌ ಕುಮಾರ್ ಸ್ಥಾನ ಪಡೆದುಕೊಂಡಿದ್ದಾರೆ. ಹಾಗೆಯೇ ವೇಗಿ ಜಯದೇವ್ ಉನದ್ಕಟ್ ಬರೋಬ್ಬರಿ 10 ವರ್ಷಗಳ ನಂತರ ಏಕದಿನ ತಂಡಕ್ಕೆ ಮರಳಿದ್ದಾರೆ. ಟೀಮ್ ಇಂಡಿಯಾ ಮುಂದಿನ ತಿಂಗಳು ಜುಲೈ 27 ರಿಂದ ಆಗಸ್ಟ್ 1 ರವರೆಗೆ 3 ಏಕದಿನ ಪಂದ್ಯಗಳ ಸರಣಿಯನ್ನು ಆಡಲಿದೆ.

ಭಾರತ ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪ ನಾಯಕ), ಶಾರ್ದೂಲ್ ಠಾಕೂರ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಯದೇವ್ ಉನದ್ಕಟ್,ಉಮ್ರಾನ್ ಮಲಿಕ್, ಮುಖೇಶ್ ಕುಮಾರ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ