AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma Press Conference: ಇಂದು ಮಧ್ಯಾಹ್ನ 1 ಗಂಟೆಗೆ ರೋಹಿತ್ ಶರ್ಮಾ ಸುದ್ದಿಗೋಷ್ಠಿ: ಮಹತ್ವದ ಹೇಳಿಕೆ ಸಾಧ್ಯತೆ

IND vs WI T20: ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಇಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಸುದ್ದಿಗೊಷ್ಠಿ ನಡೆಸಲಿದ್ದಾರೆ. ಈ ಸಂದರ್ಭ ಭಾರತ- ವೆಸ್ಟ್ ಇಂಡೀಸ್ ಮೊದಲ ಟಿ20 ಪಂದ್ಯದ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಳ್ಳುವ ಸಾಧ್ಯತೆಯಿದೆ.

Rohit Sharma Press Conference: ಇಂದು ಮಧ್ಯಾಹ್ನ 1 ಗಂಟೆಗೆ ರೋಹಿತ್ ಶರ್ಮಾ ಸುದ್ದಿಗೋಷ್ಠಿ: ಮಹತ್ವದ ಹೇಳಿಕೆ ಸಾಧ್ಯತೆ
Captain Rohit Sharma Press Conference
TV9 Web
| Edited By: |

Updated on: Feb 15, 2022 | 10:35 AM

Share

ಬುಧವಾರ ಭಾರತ ಹಾಗೂ ವೆಸ್ಟ್ ಇಂಡೀಸ್ (India vs West Indies) ನಡುವಣ ಟಿ20 ಸರಣಿಗೆ ಚಾಲನೆ ಸಿಗಲಿದೆ. ಮೂರು ಪಂದ್ಯಗಳ ಟಿ20 ಸರಣಿ ಪೈಕಿ ನಾಳೆ (ಫೆ. 16) ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಮೊದಲ ಟಿ20 ಕದನ ನಡೆಯಲಿದ್ದು, ಈಗಾಗಲೇ ಟೀಮ್ ಇಂಡಿಯಾ (Team India) ಭರ್ಜರಿ ಅಭ್ಯಾಸದಲ್ಲಿ ನಿರತವಾಗಿದೆ. ಕೆಎಲ್ ರಾಹುಲ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್ ಸರಣಿ ಆರಂಭಕ್ಕೂ ಮುನ್ನವೇ ಹೊರಬಿದ್ದಿರುವುದು ತಂಡಕ್ಕೆ ಕೊಂಚ ಹಿನ್ನಡೆಯಾಗಿದೆ. ಆದರೆ, ರುತುರಾಜ್ ಗಾಯಕ್ವಾಡ್, ದೀಪಕ್ ಹೂಡ್ ಮತ್ತು ಕುಲ್ದೀಪ್ ಯಾದವ್ ಹೊಸದಾಗಿ ತಂಡ ಸೇರಿಕೊಂಡಿದ್ದಾರೆ. ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಇಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಸುದ್ದಿಗೊಷ್ಠಿ ನಡೆಸಲಿದ್ದಾರೆ. ಈ ಸಂದರ್ಭ ಮೊದಲ ಟಿ20 ಪಂದ್ಯದ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಳ್ಳುವ ಸಾಧ್ಯತೆಯಿದೆ. ಪತ್ರಿಕಾಗೋಷ್ಠಿಯಲ್ಲಿ ನಾಯಕನಿಗೆ ಎದುರಾಗಬಹುದಾದ ಕೆಲ ಪ್ರಶ್ನೆಗಳನ್ನು ನೋಡುವುದಾದರೆ…

  • ವಾಷಿಂಗ್ಟನ್ ಸುಂದರ್ ಬದಲು ಆಯ್ಕೆಯಾಗಿರುವ ಕುಲ್ದೀಪ್ ಯಾದವ್​ರನ್ನು ಟಿ20 ಪಂದ್ಯದಲ್ಲಿ ಕಣಕ್ಕಿಳಿಸುತ್ತೀರಾ?.
  • ಕೆಎಲ್ ರಾಹುಲ್ ಅಲಭ್ಯತೆ ನಡುವೆ ನಿಮ್ಮ ಜೊತೆ ಇನ್ನಿಂಗ್ಸ್ ಆರಂಭಿಸುವವರು ಯಾರು?, ಇಶಾನ್ ಕಿಶನ್ ಅಥವಾ ರುತುರಾಜ್ ಗಾಯಕ್ವಾಡ್?.
  • ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ವೆಂಕಟೇಶ್ ಅಯ್ಯರ್ ಅವರನ್ನು 6ನೇ ಬೌಲರ್ ಆಗಿ ಪರಿಗಣಿಸಲಾಗುತ್ತದೆಯೇ?.
  • ದೀಪಕ್ ಹೂಡ ಅವರಿಗೆ ಈ ಬಾರಿ ಅವಕಾಶ ನೀಡಲಾಗುತ್ತದೆಯೇ?.

ಹೀಗೆ ಇಂದಿನ ಸುದ್ದಿಗೋಷ್ಠಿಯಲ್ಲಿ ರೋಹಿತ್​ಗೆ ಪ್ರಶ್ನೆಗಳ ಸುರಿಮಳೆ ಸುರಿಯುವ ನಿರೀಕ್ಷೆಯಿದೆ. ಇದರ ಜೊತೆಗೆ ವಿರಾಟ್ ಕೊಹ್ಲಿ ಫಾರ್ಮ್​ ಸಮಸ್ಯೆ ಬಗ್ಗೆ ಮತ್ತೊಮ್ಮೆ ಪ್ರಶ್ನೆ ಎದ್ದರೂ ಅಚ್ಚರಿ ಪಡಬೇಕಿಲ್ಲ. ಇತ್ತೀಚೆಗಷ್ಟೆ ಹಿಟ್​ಮ್ಯಾನ್ ಈ ಪ್ರಶ್ನೆಗೆ ಖಡಕ್ ಆಗಿ ಉತ್ತರ ನೀಡಿದ್ದರು. ಕೊಹ್ಲಿ ಸಾಲುಸಾಲು ಕಳಪೆ ಪ್ರದರ್ಶನವನ್ನು ನೀಡುತ್ತಿದ್ದು ಆತ್ಮ ವಿಶ್ವಾಸವನ್ನು ಕಳೆದುಕೊಂಡಿದ್ದಾರೆ, ಇದರ ಬಗ್ಗೆ ನಿಮ್ಮ ಅಭಿಪ್ರಾಯವೇನು ಎಂಬ ಪ್ರಶ್ನೆ ರೋಹಿತ್​​ಗೆ ಸುದ್ದಿಗೋಷ್ಠಿಯಲ್ಲಿ ಕೇಳಲಾಗಿತ್ತು. ಇದಕ್ಕೆ ಉತ್ತರಿಸಿದ ಅವರು, “ವಿರಾಟ್ ಕೊಹ್ಲಿಗೆ ವಿಶ್ವಾಸ ಪಡೆದುಕೊಳ್ಳಬೇಕಾದ ಅಗತ್ಯವಿದೆ? ನೀವೇನು ಮಾತಾಡುತ್ತಿದ್ದೀರಿ, ಆತ ಶತಕ ಬಾರಿಸದೇ ಇರುವುದು ಸಮಸ್ಯೆಯಲ್ಲ ಎಂದು ನಾನು ಭಾವಿಸುತ್ತೇನೆ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಸರಣಿಯಲ್ಲಿ 3 ಪಂದ್ಯಗಳ ಪೈಕಿ 2 ಅರ್ಧಶತಕಗಳನ್ನು ಕೊಹ್ಲಿ ಬಾರಿಸಿದ್ದಾರೆ. ಕೊಹ್ಲಿ ಫಾರ್ಮ್ ವಿಷಯದಲ್ಲಿ ನನಗೆ ಯಾವುದೇ ರೀತಿಯ ತಪ್ಪು ಕಾಣಿಸುತ್ತಿಲ್ಲ ಮತ್ತು ಟೀಮ್ ಮ್ಯಾನೇಜ್‌ಮೆಂಟ್ ಕೂಡ ಇದರ ಬಗ್ಗೆ ತಲೆಕೆಡಿಸಿಕೊಂಡಿಲ್ಲ,” ಎಂದು ಉತ್ತರಿಸಿದ್ದರು.

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಟಿ-20 ಸರಣಿಗೆ ಕ್ಷಣಗಣನೆ ಆರಂಭವಾಗಿದ್ದು, ಎಲ್ಲಾ 3 ಪಂದ್ಯಗಳು ಸಹ ಕೋಲ್ಕತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆಯಲಿವೆ.  ಮೊದಲನೇ ಫೆಬ್ರವರಿ 16 ಬುಧವಾರದಂದು ನಡೆದರೆ, ಎರಡನೇ ಟಿ20 ಫೆಬ್ರವರಿ 18 ಶುಕ್ರವಾರದಂದು ಆಯೋಜಿಸಲಾಗಿದೆ. ಅಂತೆಯೆ ಅಂತಿಮ ಮೂರನೇ ಟಿ20 ಫೆಬ್ರವರಿ 20 ಭಾನುವಾರದಂದು ಜರುಗಲಿದೆ. ಎಲ್ಲ ಪಂದ್ಯ ಸಂಜೆ 7 ಗಂಟೆಗೆ ಶುರುವಾಗಲಿದೆ.

IND vs WI: ವಿಂಡೀಸ್ ವಿರುದ್ಧದ ಟಿ20 ಸರಣಿಗೆ ಭಾರತದ ಉಪ ನಾಯಕನ ಘೋಷಣೆ: ಯಾರು ಗೊತ್ತೇ?

Washington Sundar: ಸುಂದರ್ ಜಾಗಕ್ಕೆ ಭಾರತ ಟಿ20 ತಂಡದಲ್ಲಿ ಸ್ಥಾನ ಪಡೆದುಕೊಂಡ ಸ್ಟಾರ್ ಪ್ಲೇಯರ್

ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?