AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI: ‘ಯಾವ ಆಧಾರದ ಮೇಲೆ ಆಯ್ಕೆ ಮಾಡಿದ್ರಿ’; ಟಿ20 ತಂಡದಲ್ಲಿ ಈ ಇಬ್ಬರ ಆಯ್ಕೆಗೆ ನೆಟ್ಟಿಗರ ಆಕ್ರೋಶ!

IND vs WI: ಕಳಪೆ ಪ್ರದರ್ಶನದ ಹೊರತಾಗಿಯೂ ಈ ಆಟಗಾರರ ಆಯ್ಕೆ ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದ್ದು, ಯಾವ ಆಧಾರದ ಮೇಲೆ ಈ ಆಟಗಾರರನ್ನು ಆಯ್ಕೆ ಮಾಡಿದ್ದೀರಿ ಎಂದು ಬಿಸಿಸಿಐ ವಿರುದ್ಧ ಹರಿಹಾಯ್ದಿದ್ದಾರೆ.

IND vs WI: ‘ಯಾವ ಆಧಾರದ ಮೇಲೆ ಆಯ್ಕೆ ಮಾಡಿದ್ರಿ’; ಟಿ20 ತಂಡದಲ್ಲಿ ಈ ಇಬ್ಬರ ಆಯ್ಕೆಗೆ ನೆಟ್ಟಿಗರ ಆಕ್ರೋಶ!
ಟೀಂ ಇಂಡಿಯಾ
ಪೃಥ್ವಿಶಂಕರ
|

Updated on: Jul 06, 2023 | 12:05 PM

Share

ವೆಸ್ಟ್ ಇಂಡೀಸ್ ವಿರುದ್ಧದ (India vs West Indies) ಐದು ಪಂದ್ಯಗಳ ಟಿ20 ಸರಣಿಗೆ ನಿನ್ನೆ ಅಂದರೆ, ಜುಲೈ 5 ರಂದು ಬಿಸಿಸಿಐ (BCCI) 15 ಸದಸ್ಯರ ಯುವ ಪಡೆಯನ್ನು ಪ್ರಕಟಿಸಿದೆ. ಮೊದಲೇ ಹೇಳಿದಂತೆ ಆಯ್ಕೆ ಮಂಡಳಿ ಆಯ್ಕೆ ಮಾಡಿರುವ ತಂಡದಲ್ಲಿ ಭಾಗಶಃ ಯುವ ಆಟಗಾರರೆ ತುಂಬಿ ತುಳುಕುತ್ತಿದ್ದಾರೆ. ಒಂದರ್ಥದಲ್ಲಿ ಹೇಳಬೇಕೆಂದರೆ ದೇಶೀ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ ಆಟಗಾರರನ್ನು ಬದಿಗೊತ್ತಿ, ಐಪಿಎಲ್​ನಲ್ಲಿ (IPL 2023) ಮಿಂಚಿದವರಿಗೆ ಮಣೆ ಹಾಕಲಾಗಿದೆ. ಹಾಗೆಯೇ ಐಪಿಎಲ್​ನಲ್ಲಿ ಕಳಪೆ ಪ್ರದರ್ಶನ ನೀಡಿ, ಸೀಸನ್ ಮಧ್ಯದಲ್ಲಿಯೇ ತಂಡದಿಂದ ಗೇಟ್​ಪಾಸ್ ಪಡೆದುಕೊಂಡಿದ್ದ ಕೆಲವು ಆಟಗಾರರು ಕೂಡ ತಂಡಕ್ಕೆ ಆಯ್ಕೆಯಾಗಿದ್ದಾರೆ. ಇದೀಗ ಕಳಪೆ ಪ್ರದರ್ಶನದ ಹೊರತಾಗಿಯೂ ಈ ಆಟಗಾರರ ಆಯ್ಕೆ ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದ್ದು, ಯಾವ ಆಧಾರದ ಮೇಲೆ ಈ ಆಟಗಾರರನ್ನು ಆಯ್ಕೆ ಮಾಡಿದ್ದೀರಿ ಎಂದು ಬಿಸಿಸಿಐ ವಿರುದ್ಧ ಹರಿಹಾಯ್ದಿದ್ದಾರೆ.

ವಾಸ್ತವವಾಗಿ ನೆಟ್ಟಿಗರ ಆಕ್ರೋಶಕ್ಕೆ ಕಾರಣವೂ ಇದ್ದು, ಐಪಿಎಲ್​ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ರಿಂಕು ಸಿಂಗ್, ಜಿತೇಶ್ ಶರ್ಮಾ, ಆಕಾಶ ಮಧ್ವಲ್​ರಂತಹ ಆಟಗಾರರನ್ನು ಕಡೆಗಣಿಸಿ, ಕಳಪೆ ಪ್ರದರ್ಶನ ನೀಡಿ ತಂಡದಿಂದ ಡ್ರಾಪ್ ಔಟ್ ಆಗಿದ್ದ ಆವೇಶ್ ಖಾನ್ ಹಾಗೂ ಉಮ್ರಾನ್ ಮಲಿಕ್​ರಂತಹ ಆಟಗಾರರಿಗೆ ಬಿಸಿಸಿಐ ಮಣೆ ಹಾಕಿದೆ. ಹೀಗಾಗಿ ನೆಟ್ಟಿಗರು ಆಯ್ಕೆ ಮಂಡಳಿಯ ವಿರುದ್ಧ ಕಿಡಿಕಾರುತ್ತಿದ್ದಾರೆ.

IND vs WI: ಅಭ್ಯಾಸ ಪಂದ್ಯದಲ್ಲೂ ಅದೇ ತಪ್ಪು; ಕೇವಲ 3 ರನ್​ಗಳಿಗೆ ಸುಸ್ತಾದ ಕೊಹ್ಲಿ! ವಿಡಿಯೋ ನೋಡಿ

ಹಾಂಗ್ ಕಾಂಗ್ ವಿರುದ್ಧ ದುಬಾರಿ

ಕಳೆದ ವರ್ಷ ನಡೆದ ಏಷ್ಯಾಕಪ್‌ನಲ್ಲಿ ಭಾರತ ಪರ ಕೊನೆಯ ಪಂದ್ಯವನ್ನಾಡಿದ್ದ ಆವೇಶ್ ಖಾನ್, ಹಾಂಗ್ ಕಾಂಗ್ ವಿರುದ್ಧದ ಪಂದ್ಯದಲ್ಲಿ 13.25 ಎಕಾನಮಿ ದರದಲ್ಲಿ 53 ರನ್‌ ಬಿಟ್ಟುಕೊಟ್ಟಿದ್ದರು. ಹೀಗಾಗಿ ಆ ನಂತರ ಆವೇಶ್​ರನ್ನು ತಂಡದಿಂದ ಕೈಬಿಡಲಾಯಿತು. ಇನ್ನು ಐಪಿಎಲ್​ನಲ್ಲೂ ಮಂಕಾಗಿದ್ದ ಆವೇಶ್ 9.75 ರ ಎಕಾನಮಿಯಲ್ಲಿ ಕೇವಲ ಎಂಟು ವಿಕೆಟ್‌ಗಳನ್ನು ಪಡೆದಿದ್ದರು. ಹೀಗಾಗಿ ದುಬಾರಿಯಾಗುತ್ತಿದ್ದ ಆವೇಶ್​ರನ್ನು ಲಕ್ನೋ ಸೂಪರ್ ಜೈಂಟ್ಸ್‌ ತಂಡದಿಂದ ಕೈಬಿಟ್ಟಿತ್ತು. ಆದರೀಗ ಆಶ್ಚರ್ಯಕರ ರೀತಿಯಲ್ಲಿ ಆವೇಶ್ ಖಾನ್ ಭಾರತ ಟಿ20 ತಂಡಕ್ಕೆ ಆಯ್ಕೆಯಾಗಿದ್ದಾರೆ.

ಐಪಿಎಲ್​ನಲ್ಲಿ ಕಳಪೆ ಬೌಲಿಂಗ್

ಇವರೊಂದಿಗೆ 15 ಸದಸ್ಯರ ತಂಡದಲ್ಲಿ ಉಮ್ರಾನ್ ಮಲಿಕ್ ಅವರ ಹೆಸರನ್ನು ನೋಡಿದ ಅಭಿಮಾನಿಗಳು ಶಾಕ್ ಆಗಿದ್ದಾರೆ. ಈ ಬಾರಿಯ ಐಪಿಎಲ್​ನಲ್ಲಿ ಸನ್‌ರೈಸರ್ಸ್ ಹೈದರಾಬಾದ್‌ ಉಮ್ರಾನ್ ಮೇಲೆ ಭಾರಿ ನಿರೀಕ್ಷೆ ಇಟ್ಟಿತ್ತು. ಆದರೆ ಉಮ್ರಾನ್ ಕೇವಲ ಎಂಟು ಐಪಿಎಲ್ ಪಂದ್ಯಗಳಲ್ಲಿ 10.85 ಎಕಾನಮಿಯಲ್ಲಿ ರನ್ ಬಿಟ್ಟುಕೊಟ್ಟಿದ್ದರು. ಫಲವಾಗಿ ಕೇವಲ ಐದು ವಿಕೆಟ್ಗಳನ್ನು ಮಾತ್ರ ಪಡೆದಿದ್ದರು. ಹೀಗಾಗಿ ಉಮ್ರಾನ್​ರನ್ನು ಸನ್‌ರೈಸರ್ಸ್ ಹೈದರಾಬಾದ್‌ ಫ್ರಾಂಚೈಸ್ ಬೆಂಚ್ ಕಾಯಲು ಬಿಟ್ಟಿತ್ತು. ಇದೀಗ ಉಮ್ರಾನ್ ಮಲಿಕ್ ಕೂಡ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇದು ನೆಟ್ಟಿಗರ ಕೋಪಕ್ಕೆ ಕಾರಣವಾಗಿದ್ದು ಟ್ವಿಟರ್​ನಲ್ಲಿ ಈ ರೀತಿಯಾಗಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಟಿ20 ಸರಣಿಗೆ ಭಾರತ ತಂಡ: ಹಾರ್ದಿಕ್ ಪಾಂಡ್ಯ (ನಾಯಕ), ಸೂರ್ಯಕುಮಾರ್ ಯಾದವ್ (ಉಪನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್ ಉಮ್ರಾನ್ ಮಲಿಕ್, ಅವೇಶ್ ಖಾನ್, ಮುಖೇಶ್ ಕುಮಾರ್.

ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ಈಗಲೂ ಮಾತಿಗೆ ಬದ್ಧ; ಕೇಂದ್ರದಿಂದ ಅನುಮೋದನೆ ಕೊಡಿಸಲು ಸಿದ್ಧ: ಹೆಚ್ಡಿಕೆ
ಈಗಲೂ ಮಾತಿಗೆ ಬದ್ಧ; ಕೇಂದ್ರದಿಂದ ಅನುಮೋದನೆ ಕೊಡಿಸಲು ಸಿದ್ಧ: ಹೆಚ್ಡಿಕೆ
ಕೊಲೆ ಆರೋಪಿ ಮಹೇಶ್​ಗೆ ಗರ್ಭಧರಿಸಿದ್ದ ಹೆಂಡತಿ ಶುಭಾ ಮೇಲೆ ಸದಾ ಅನುಮಾನ
ಕೊಲೆ ಆರೋಪಿ ಮಹೇಶ್​ಗೆ ಗರ್ಭಧರಿಸಿದ್ದ ಹೆಂಡತಿ ಶುಭಾ ಮೇಲೆ ಸದಾ ಅನುಮಾನ
‘ಮ್ಯಾಕ್ಸ್ 2’ ಸಿನಿಮಾ ಯಾವಾಗ? ಅಪ್​ಡೇಟ್ ಕೊಟ್ಟ ಸುದೀಪ್
‘ಮ್ಯಾಕ್ಸ್ 2’ ಸಿನಿಮಾ ಯಾವಾಗ? ಅಪ್​ಡೇಟ್ ಕೊಟ್ಟ ಸುದೀಪ್