AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI: ಅಭಿಮಾನಿ ನೀಡಿದ ವಿಶೇಷ ಉಡುಗೊರೆಗೆ ಮನಸೋತ ಕೊಹ್ಲಿ; ವಿಡಿಯೋ ನೋಡಿ

Virat Kohli: ಅಭಿಮಾನಿಗಳ ಆಸೆಯನ್ನು ಹುಸಿಗೊಳಿಸಿದ ಟೀಂ ಇಂಡಿಯಾ ಆಟಗಾರರು ಅಭಿಮಾನಿಗಳನ್ನು ಭೇಟಿಯಾಗಿ ಅವರೊಂದಿಗೆ ಸೆಲ್ಫಿ ತೆಗೆದುಕೊಂಡಿದ್ದಲ್ಲದೆ, ಅಭಿಮಾನಿಗಳು ನೀಡಿದ ಪುಟ್ಟ ಉಡುಗೊರೆಯನ್ನು ತೆಗೆದುಕೊಂಡರು.

IND vs WI: ಅಭಿಮಾನಿ ನೀಡಿದ ವಿಶೇಷ ಉಡುಗೊರೆಗೆ ಮನಸೋತ ಕೊಹ್ಲಿ; ವಿಡಿಯೋ ನೋಡಿ
ಅಭಿಮಾನಿಗಳೊಂದಿಗೆ ಕೊಹ್ಲಿ
Follow us
ಪೃಥ್ವಿಶಂಕರ
|

Updated on:Jul 30, 2023 | 12:41 PM

ಭಾರತ ಕ್ರಿಕೆಟ್ ತಂಡ ಪ್ರಸ್ತುತ ವೆಸ್ಟ್ ಇಂಡೀಸ್ (India vs West Indies) ಪ್ರವಾಸದಲ್ಲಿದೆ. ಟೆಸ್ಟ್ ಸರಣಿ ವಶಪಡಿಸಿಕೊಂಡ ನಂತರ ಟೀಂ ಇಂಡಿಯಾ (Team India) ಏಕದಿನ ಸರಣಿಯನ್ನು ಆಡುತ್ತಿದೆ. ಎರಡನೇ ಪಂದ್ಯದಲ್ಲಿ ಭಾರತ ಸೋಲನುಭವಿಸಿದ್ದು, ಇದರೊಂದಿಗೆ ವೆಸ್ಟ್ ಇಂಡೀಸ್ ಮೂರು ಪಂದ್ಯಗಳ ಸರಣಿಯಲ್ಲಿ 1-1 ರಿಂದ ಸಮಬಲ ಸಾಧಿಸಿದೆ. ಈ ನಡುವೆ ಎರಡನೇ ಏಕದಿನ ಪಂದ್ಯ ಆರಂಭಕ್ಕೂ ಮುನ್ನ ಟೀಂ ಇಂಡಿಯಾದ ಆಟಗಾರರು ಅಭ್ಯಾಸ ನಡೆಸುತ್ತಿದ್ದಾಗ ಮೈದಾನದಲ್ಲಿ ಅಭಿಮಾನಿಗಳು ಹಾಜರಿದ್ದು ಆಟಗಾರರನ್ನು ಭೇಟಿಯಾಗಲು ಬಯಸಿದ್ದರು. ಅಭಿಮಾನಿಗಳ ಆಸೆಯನ್ನು ಹುಸಿಗೊಳಿಸಿದ ಟೀಂ ಇಂಡಿಯಾ ಆಟಗಾರರು ಅಭಿಮಾನಿಗಳನ್ನು ಭೇಟಿಯಾಗಿ ಅವರೊಂದಿಗೆ ಸೆಲ್ಫಿ ತೆಗೆದುಕೊಂಡಿದ್ದಲ್ಲದೆ, ಅಭಿಮಾನಿಗಳು ನೀಡಿದ ಪುಟ್ಟ ಉಡುಗೊರೆಯನ್ನು ತೆಗೆದುಕೊಂಡರು.

ವಿರಾಟ್‌ಗೆ ವಿಶೇಷ ಉಡುಗೊರೆ

ಟೀಂ ಇಂಡಿಯಾ ಮೈದಾನದಲ್ಲಿ ಅಭ್ಯಾಸ ನಡೆಸುತ್ತಿದ್ದಾಗ ಸ್ಟ್ಯಾಂಡ್‌ನಿಂದ ಹುಡುಗಿಯೊಬ್ಬಳು ಕೊಹ್ಲಿ-ಕೊಹ್ಲಿ ಎಂದು ಮತ್ತೆ ಮತ್ತೆ ಕರೆಯುತ್ತಿರುವುದು ಕೇಳಿಸಿತು. ಕೊಹ್ಲಿಯನ್ನು ಭೇಟಿಯಾಗಲು ಬಯಸಿದ್ದ ಪೋರಿ, ಅವರಿಗಾಗಿ ವಿಶೇಷ ಉಡುಗೊರೆಯೊಂದನ್ನು ತಂದಿದ್ದಳು. ಈ ಹುಡುಗಿಯ ಧ್ವನಿಯನ್ನು ಕೇಳಿದ ನಂತರ ಆಕೆಯನ್ನು ಭೇಟಿಯಾಗಲು ಕೊಹ್ಲಿ ಬಂದರು. ಈ ವೇಳೆ ಆ ಹುಡುಗಿ ಕೊಹ್ಲಿ ಕೈಗೆ ಧರಿಸುವ ಬ್ರೇಸ್​ಲೆಟ್ ಒಂದನ್ನು ತಂದಿದ್ದಳು. ಅದನ್ನು ನಯವಾಗಿ ಸ್ವೀಕರಿಸಿದ ಕೊಹ್ಲಿ, ತನ್ನ ಕೈಗೆ ಧರಿಸಿಕೊಂಡರು. ಆ ಬಳಿಕ ಆ ಬಾಲಕಿಯ ಕುಟುಂಬದೊಂದಿಗೆ ಕೊಹ್ಲಿ ಸೆಲ್ಫಿ ಕೂಡ ತೆಗೆದುಕೊಂಡರು.

ಇನ್ನು ಕೆಲವು ಅಭಿಮಾನಿಗಳೊಂದಿಗೆ ಕೊಹ್ಲಿ ಸೆಲ್ಫಿಗೆ ಪೋಸ್ ನೀಡಿದರು. ಇದೇ ವೇಳೆ ಟೀಂ ಇಂಡಿಯಾದ ಮಧ್ಯಮ ಕ್ರಮಾಂಕದ ಬ್ಯಾಟ್ಸ್​ಮನ್ ಸೂರ್ಯಕುಮಾರ್ ಯಾದವ್ ಕೂಡ ಅಭಿಮಾನಿಗಳನ್ನು ಭೇಟಿಯಾಗಿ ಆಟೋಗ್ರಾಫ್ ನೀಡಿದರು. ಹಾಗೆಯೇ ತಂಡದ ನಾಯಕ ರೋಹಿತ್ ಕೂಡ ಅಭಿಮಾನಿಗಳೊಂದಿಗೆ ಸೆಲ್ಫಿಗೆ ಪೋಸ್ ನೀಡಿದರು.

ಎರಡನೇ ಏಕದಿನ ಪಂದ್ಯದಲ್ಲಿ ವಿಶ್ರಾಂತಿ

ಎರಡನೇ ಏಕದಿನ ಪಂದ್ಯದಲ್ಲಿ ಕೊಹ್ಲಿ ಮತ್ತು ರೋಹಿತ್ ಆಡಿರಲಿಲ್ಲ. ಅವರಿಗೆ ವಿಶ್ರಾಂತಿ ನೀಡಲು ತಂಡದ ಆಡಳಿತ ಮಂಡಳಿ ನಿರ್ಧರಿಸಿತ್ತು. ಎರಡನೇ ಪಂದ್ಯದಲ್ಲಿ ಭಾರತ ಸೋಲನುಭವಿಸಿದ್ದರಿಂದ ತಂಡವು ಇದರ ಭಾರವನ್ನು ಅನುಭವಿಸಬೇಕಾಯಿತು. ಈ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ತಂಡದ ನಾಯಕರಾಗಿದ್ದರು. ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಕೇವಲ 181 ರನ್ ಗಳಿಸಲಷ್ಟೇ ಶಕ್ತವಾಗಿತ್ತು. ಈ ಗುರಿ ಬೆನ್ನಟ್ಟಿದ ವಿಂಡೀಸ್ ನಾಲ್ಕು ವಿಕೆಟ್ ಕಳೆದುಕೊಂಡು ಈ ಗುರಿಯನ್ನು ಸಾಧಿಸಿತು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:38 pm, Sun, 30 July 23

ಶಿವಣ್ಣ, ದರ್ಶನ್ ಅವರನ್ನು ನಿಂದಿಸಿದ್ದು ನಿಜವೇ? ಮನು ಹೇಳಿದ್ದೇನು?
ಶಿವಣ್ಣ, ದರ್ಶನ್ ಅವರನ್ನು ನಿಂದಿಸಿದ್ದು ನಿಜವೇ? ಮನು ಹೇಳಿದ್ದೇನು?
ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು