AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI: ಅಭಿಮಾನಿ ನೀಡಿದ ವಿಶೇಷ ಉಡುಗೊರೆಗೆ ಮನಸೋತ ಕೊಹ್ಲಿ; ವಿಡಿಯೋ ನೋಡಿ

Virat Kohli: ಅಭಿಮಾನಿಗಳ ಆಸೆಯನ್ನು ಹುಸಿಗೊಳಿಸಿದ ಟೀಂ ಇಂಡಿಯಾ ಆಟಗಾರರು ಅಭಿಮಾನಿಗಳನ್ನು ಭೇಟಿಯಾಗಿ ಅವರೊಂದಿಗೆ ಸೆಲ್ಫಿ ತೆಗೆದುಕೊಂಡಿದ್ದಲ್ಲದೆ, ಅಭಿಮಾನಿಗಳು ನೀಡಿದ ಪುಟ್ಟ ಉಡುಗೊರೆಯನ್ನು ತೆಗೆದುಕೊಂಡರು.

IND vs WI: ಅಭಿಮಾನಿ ನೀಡಿದ ವಿಶೇಷ ಉಡುಗೊರೆಗೆ ಮನಸೋತ ಕೊಹ್ಲಿ; ವಿಡಿಯೋ ನೋಡಿ
ಅಭಿಮಾನಿಗಳೊಂದಿಗೆ ಕೊಹ್ಲಿ
ಪೃಥ್ವಿಶಂಕರ
|

Updated on:Jul 30, 2023 | 12:41 PM

Share

ಭಾರತ ಕ್ರಿಕೆಟ್ ತಂಡ ಪ್ರಸ್ತುತ ವೆಸ್ಟ್ ಇಂಡೀಸ್ (India vs West Indies) ಪ್ರವಾಸದಲ್ಲಿದೆ. ಟೆಸ್ಟ್ ಸರಣಿ ವಶಪಡಿಸಿಕೊಂಡ ನಂತರ ಟೀಂ ಇಂಡಿಯಾ (Team India) ಏಕದಿನ ಸರಣಿಯನ್ನು ಆಡುತ್ತಿದೆ. ಎರಡನೇ ಪಂದ್ಯದಲ್ಲಿ ಭಾರತ ಸೋಲನುಭವಿಸಿದ್ದು, ಇದರೊಂದಿಗೆ ವೆಸ್ಟ್ ಇಂಡೀಸ್ ಮೂರು ಪಂದ್ಯಗಳ ಸರಣಿಯಲ್ಲಿ 1-1 ರಿಂದ ಸಮಬಲ ಸಾಧಿಸಿದೆ. ಈ ನಡುವೆ ಎರಡನೇ ಏಕದಿನ ಪಂದ್ಯ ಆರಂಭಕ್ಕೂ ಮುನ್ನ ಟೀಂ ಇಂಡಿಯಾದ ಆಟಗಾರರು ಅಭ್ಯಾಸ ನಡೆಸುತ್ತಿದ್ದಾಗ ಮೈದಾನದಲ್ಲಿ ಅಭಿಮಾನಿಗಳು ಹಾಜರಿದ್ದು ಆಟಗಾರರನ್ನು ಭೇಟಿಯಾಗಲು ಬಯಸಿದ್ದರು. ಅಭಿಮಾನಿಗಳ ಆಸೆಯನ್ನು ಹುಸಿಗೊಳಿಸಿದ ಟೀಂ ಇಂಡಿಯಾ ಆಟಗಾರರು ಅಭಿಮಾನಿಗಳನ್ನು ಭೇಟಿಯಾಗಿ ಅವರೊಂದಿಗೆ ಸೆಲ್ಫಿ ತೆಗೆದುಕೊಂಡಿದ್ದಲ್ಲದೆ, ಅಭಿಮಾನಿಗಳು ನೀಡಿದ ಪುಟ್ಟ ಉಡುಗೊರೆಯನ್ನು ತೆಗೆದುಕೊಂಡರು.

ವಿರಾಟ್‌ಗೆ ವಿಶೇಷ ಉಡುಗೊರೆ

ಟೀಂ ಇಂಡಿಯಾ ಮೈದಾನದಲ್ಲಿ ಅಭ್ಯಾಸ ನಡೆಸುತ್ತಿದ್ದಾಗ ಸ್ಟ್ಯಾಂಡ್‌ನಿಂದ ಹುಡುಗಿಯೊಬ್ಬಳು ಕೊಹ್ಲಿ-ಕೊಹ್ಲಿ ಎಂದು ಮತ್ತೆ ಮತ್ತೆ ಕರೆಯುತ್ತಿರುವುದು ಕೇಳಿಸಿತು. ಕೊಹ್ಲಿಯನ್ನು ಭೇಟಿಯಾಗಲು ಬಯಸಿದ್ದ ಪೋರಿ, ಅವರಿಗಾಗಿ ವಿಶೇಷ ಉಡುಗೊರೆಯೊಂದನ್ನು ತಂದಿದ್ದಳು. ಈ ಹುಡುಗಿಯ ಧ್ವನಿಯನ್ನು ಕೇಳಿದ ನಂತರ ಆಕೆಯನ್ನು ಭೇಟಿಯಾಗಲು ಕೊಹ್ಲಿ ಬಂದರು. ಈ ವೇಳೆ ಆ ಹುಡುಗಿ ಕೊಹ್ಲಿ ಕೈಗೆ ಧರಿಸುವ ಬ್ರೇಸ್​ಲೆಟ್ ಒಂದನ್ನು ತಂದಿದ್ದಳು. ಅದನ್ನು ನಯವಾಗಿ ಸ್ವೀಕರಿಸಿದ ಕೊಹ್ಲಿ, ತನ್ನ ಕೈಗೆ ಧರಿಸಿಕೊಂಡರು. ಆ ಬಳಿಕ ಆ ಬಾಲಕಿಯ ಕುಟುಂಬದೊಂದಿಗೆ ಕೊಹ್ಲಿ ಸೆಲ್ಫಿ ಕೂಡ ತೆಗೆದುಕೊಂಡರು.

ಇನ್ನು ಕೆಲವು ಅಭಿಮಾನಿಗಳೊಂದಿಗೆ ಕೊಹ್ಲಿ ಸೆಲ್ಫಿಗೆ ಪೋಸ್ ನೀಡಿದರು. ಇದೇ ವೇಳೆ ಟೀಂ ಇಂಡಿಯಾದ ಮಧ್ಯಮ ಕ್ರಮಾಂಕದ ಬ್ಯಾಟ್ಸ್​ಮನ್ ಸೂರ್ಯಕುಮಾರ್ ಯಾದವ್ ಕೂಡ ಅಭಿಮಾನಿಗಳನ್ನು ಭೇಟಿಯಾಗಿ ಆಟೋಗ್ರಾಫ್ ನೀಡಿದರು. ಹಾಗೆಯೇ ತಂಡದ ನಾಯಕ ರೋಹಿತ್ ಕೂಡ ಅಭಿಮಾನಿಗಳೊಂದಿಗೆ ಸೆಲ್ಫಿಗೆ ಪೋಸ್ ನೀಡಿದರು.

ಎರಡನೇ ಏಕದಿನ ಪಂದ್ಯದಲ್ಲಿ ವಿಶ್ರಾಂತಿ

ಎರಡನೇ ಏಕದಿನ ಪಂದ್ಯದಲ್ಲಿ ಕೊಹ್ಲಿ ಮತ್ತು ರೋಹಿತ್ ಆಡಿರಲಿಲ್ಲ. ಅವರಿಗೆ ವಿಶ್ರಾಂತಿ ನೀಡಲು ತಂಡದ ಆಡಳಿತ ಮಂಡಳಿ ನಿರ್ಧರಿಸಿತ್ತು. ಎರಡನೇ ಪಂದ್ಯದಲ್ಲಿ ಭಾರತ ಸೋಲನುಭವಿಸಿದ್ದರಿಂದ ತಂಡವು ಇದರ ಭಾರವನ್ನು ಅನುಭವಿಸಬೇಕಾಯಿತು. ಈ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ತಂಡದ ನಾಯಕರಾಗಿದ್ದರು. ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಕೇವಲ 181 ರನ್ ಗಳಿಸಲಷ್ಟೇ ಶಕ್ತವಾಗಿತ್ತು. ಈ ಗುರಿ ಬೆನ್ನಟ್ಟಿದ ವಿಂಡೀಸ್ ನಾಲ್ಕು ವಿಕೆಟ್ ಕಳೆದುಕೊಂಡು ಈ ಗುರಿಯನ್ನು ಸಾಧಿಸಿತು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:38 pm, Sun, 30 July 23

ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ