AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI: ಅಭಿಮಾನಿ ನೀಡಿದ ವಿಶೇಷ ಉಡುಗೊರೆಗೆ ಮನಸೋತ ಕೊಹ್ಲಿ; ವಿಡಿಯೋ ನೋಡಿ

Virat Kohli: ಅಭಿಮಾನಿಗಳ ಆಸೆಯನ್ನು ಹುಸಿಗೊಳಿಸಿದ ಟೀಂ ಇಂಡಿಯಾ ಆಟಗಾರರು ಅಭಿಮಾನಿಗಳನ್ನು ಭೇಟಿಯಾಗಿ ಅವರೊಂದಿಗೆ ಸೆಲ್ಫಿ ತೆಗೆದುಕೊಂಡಿದ್ದಲ್ಲದೆ, ಅಭಿಮಾನಿಗಳು ನೀಡಿದ ಪುಟ್ಟ ಉಡುಗೊರೆಯನ್ನು ತೆಗೆದುಕೊಂಡರು.

IND vs WI: ಅಭಿಮಾನಿ ನೀಡಿದ ವಿಶೇಷ ಉಡುಗೊರೆಗೆ ಮನಸೋತ ಕೊಹ್ಲಿ; ವಿಡಿಯೋ ನೋಡಿ
ಅಭಿಮಾನಿಗಳೊಂದಿಗೆ ಕೊಹ್ಲಿ
ಪೃಥ್ವಿಶಂಕರ
|

Updated on:Jul 30, 2023 | 12:41 PM

Share

ಭಾರತ ಕ್ರಿಕೆಟ್ ತಂಡ ಪ್ರಸ್ತುತ ವೆಸ್ಟ್ ಇಂಡೀಸ್ (India vs West Indies) ಪ್ರವಾಸದಲ್ಲಿದೆ. ಟೆಸ್ಟ್ ಸರಣಿ ವಶಪಡಿಸಿಕೊಂಡ ನಂತರ ಟೀಂ ಇಂಡಿಯಾ (Team India) ಏಕದಿನ ಸರಣಿಯನ್ನು ಆಡುತ್ತಿದೆ. ಎರಡನೇ ಪಂದ್ಯದಲ್ಲಿ ಭಾರತ ಸೋಲನುಭವಿಸಿದ್ದು, ಇದರೊಂದಿಗೆ ವೆಸ್ಟ್ ಇಂಡೀಸ್ ಮೂರು ಪಂದ್ಯಗಳ ಸರಣಿಯಲ್ಲಿ 1-1 ರಿಂದ ಸಮಬಲ ಸಾಧಿಸಿದೆ. ಈ ನಡುವೆ ಎರಡನೇ ಏಕದಿನ ಪಂದ್ಯ ಆರಂಭಕ್ಕೂ ಮುನ್ನ ಟೀಂ ಇಂಡಿಯಾದ ಆಟಗಾರರು ಅಭ್ಯಾಸ ನಡೆಸುತ್ತಿದ್ದಾಗ ಮೈದಾನದಲ್ಲಿ ಅಭಿಮಾನಿಗಳು ಹಾಜರಿದ್ದು ಆಟಗಾರರನ್ನು ಭೇಟಿಯಾಗಲು ಬಯಸಿದ್ದರು. ಅಭಿಮಾನಿಗಳ ಆಸೆಯನ್ನು ಹುಸಿಗೊಳಿಸಿದ ಟೀಂ ಇಂಡಿಯಾ ಆಟಗಾರರು ಅಭಿಮಾನಿಗಳನ್ನು ಭೇಟಿಯಾಗಿ ಅವರೊಂದಿಗೆ ಸೆಲ್ಫಿ ತೆಗೆದುಕೊಂಡಿದ್ದಲ್ಲದೆ, ಅಭಿಮಾನಿಗಳು ನೀಡಿದ ಪುಟ್ಟ ಉಡುಗೊರೆಯನ್ನು ತೆಗೆದುಕೊಂಡರು.

ವಿರಾಟ್‌ಗೆ ವಿಶೇಷ ಉಡುಗೊರೆ

ಟೀಂ ಇಂಡಿಯಾ ಮೈದಾನದಲ್ಲಿ ಅಭ್ಯಾಸ ನಡೆಸುತ್ತಿದ್ದಾಗ ಸ್ಟ್ಯಾಂಡ್‌ನಿಂದ ಹುಡುಗಿಯೊಬ್ಬಳು ಕೊಹ್ಲಿ-ಕೊಹ್ಲಿ ಎಂದು ಮತ್ತೆ ಮತ್ತೆ ಕರೆಯುತ್ತಿರುವುದು ಕೇಳಿಸಿತು. ಕೊಹ್ಲಿಯನ್ನು ಭೇಟಿಯಾಗಲು ಬಯಸಿದ್ದ ಪೋರಿ, ಅವರಿಗಾಗಿ ವಿಶೇಷ ಉಡುಗೊರೆಯೊಂದನ್ನು ತಂದಿದ್ದಳು. ಈ ಹುಡುಗಿಯ ಧ್ವನಿಯನ್ನು ಕೇಳಿದ ನಂತರ ಆಕೆಯನ್ನು ಭೇಟಿಯಾಗಲು ಕೊಹ್ಲಿ ಬಂದರು. ಈ ವೇಳೆ ಆ ಹುಡುಗಿ ಕೊಹ್ಲಿ ಕೈಗೆ ಧರಿಸುವ ಬ್ರೇಸ್​ಲೆಟ್ ಒಂದನ್ನು ತಂದಿದ್ದಳು. ಅದನ್ನು ನಯವಾಗಿ ಸ್ವೀಕರಿಸಿದ ಕೊಹ್ಲಿ, ತನ್ನ ಕೈಗೆ ಧರಿಸಿಕೊಂಡರು. ಆ ಬಳಿಕ ಆ ಬಾಲಕಿಯ ಕುಟುಂಬದೊಂದಿಗೆ ಕೊಹ್ಲಿ ಸೆಲ್ಫಿ ಕೂಡ ತೆಗೆದುಕೊಂಡರು.

ಇನ್ನು ಕೆಲವು ಅಭಿಮಾನಿಗಳೊಂದಿಗೆ ಕೊಹ್ಲಿ ಸೆಲ್ಫಿಗೆ ಪೋಸ್ ನೀಡಿದರು. ಇದೇ ವೇಳೆ ಟೀಂ ಇಂಡಿಯಾದ ಮಧ್ಯಮ ಕ್ರಮಾಂಕದ ಬ್ಯಾಟ್ಸ್​ಮನ್ ಸೂರ್ಯಕುಮಾರ್ ಯಾದವ್ ಕೂಡ ಅಭಿಮಾನಿಗಳನ್ನು ಭೇಟಿಯಾಗಿ ಆಟೋಗ್ರಾಫ್ ನೀಡಿದರು. ಹಾಗೆಯೇ ತಂಡದ ನಾಯಕ ರೋಹಿತ್ ಕೂಡ ಅಭಿಮಾನಿಗಳೊಂದಿಗೆ ಸೆಲ್ಫಿಗೆ ಪೋಸ್ ನೀಡಿದರು.

ಎರಡನೇ ಏಕದಿನ ಪಂದ್ಯದಲ್ಲಿ ವಿಶ್ರಾಂತಿ

ಎರಡನೇ ಏಕದಿನ ಪಂದ್ಯದಲ್ಲಿ ಕೊಹ್ಲಿ ಮತ್ತು ರೋಹಿತ್ ಆಡಿರಲಿಲ್ಲ. ಅವರಿಗೆ ವಿಶ್ರಾಂತಿ ನೀಡಲು ತಂಡದ ಆಡಳಿತ ಮಂಡಳಿ ನಿರ್ಧರಿಸಿತ್ತು. ಎರಡನೇ ಪಂದ್ಯದಲ್ಲಿ ಭಾರತ ಸೋಲನುಭವಿಸಿದ್ದರಿಂದ ತಂಡವು ಇದರ ಭಾರವನ್ನು ಅನುಭವಿಸಬೇಕಾಯಿತು. ಈ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ತಂಡದ ನಾಯಕರಾಗಿದ್ದರು. ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಕೇವಲ 181 ರನ್ ಗಳಿಸಲಷ್ಟೇ ಶಕ್ತವಾಗಿತ್ತು. ಈ ಗುರಿ ಬೆನ್ನಟ್ಟಿದ ವಿಂಡೀಸ್ ನಾಲ್ಕು ವಿಕೆಟ್ ಕಳೆದುಕೊಂಡು ಈ ಗುರಿಯನ್ನು ಸಾಧಿಸಿತು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:38 pm, Sun, 30 July 23

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?