AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅದ್ಭುತ ಫಾರ್ಮ್​ನಲ್ಲಿದ್ದ ಕುಲ್ದೀಪ್​ರನ್ನು ತಂಡದಿಂದ ಕೈ ಬಿಟ್ಟಿದ್ಯಾಕೆ? ಬಿಸಿಸಿಐ ನೀಡಿದ ಸ್ಪಷ್ಟನೆ ಏನು?

India vs West Indies: ವಿಂಡೀಸ್ ವಿರುದ್ಧದ ವೈಟ್ ಬಾಲ್ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿರುವ ಚೈನಾಮನ್ ಸ್ಪಿನ್ನರ್ ಕುಲ್ದೀಪ್ ಯಾದವ್ ಗಾಯಗೊಂಡಿದ್ದು, ಅವರನ್ನು ಎರಡನೇ ಟಿ20 ಪಂದ್ಯದಲ್ಲಿ ಹೊರಗಿಡಲಾಗಿತ್ತು.

ಅದ್ಭುತ ಫಾರ್ಮ್​ನಲ್ಲಿದ್ದ ಕುಲ್ದೀಪ್​ರನ್ನು ತಂಡದಿಂದ ಕೈ ಬಿಟ್ಟಿದ್ಯಾಕೆ? ಬಿಸಿಸಿಐ ನೀಡಿದ ಸ್ಪಷ್ಟನೆ ಏನು?
ಟೀಂ ಇಂಡಿಯಾ
ಪೃಥ್ವಿಶಂಕರ
|

Updated on:Aug 07, 2023 | 7:41 AM

Share

ಪ್ರಮುಖ ಆಟಗಾರರ ಇಂಜುರಿ ಸಮಸ್ಯೆಯಿಂದ ಐಸಿಸಿ (ICC) ಈವೆಂಟ್​ಗಳನ್ನು ಗೆದ್ದುಕೊಳ್ಳುವಲ್ಲಿ ಸತತವಾಗಿ ವೈಫಲ್ಯ ಕಾಣುತ್ತಿರುವ ಟೀಂ ಇಂಡಿಯಾಕ್ಕೆ ಏಷ್ಯಾಕಪ್ (Asia Cup) ಹಾಗೂ ವಿಶ್ವಕಪ್ (ODI World Cup) ಸಮೀಪಿಸುತ್ತಿದ್ದಂತೆ, ಗಾಯಗೊಂಡ ಆಟಗಾರರ ಚೇತರಿಕೆಯ ಸುದ್ದಿ ಕೊಂಚ ಸಮಾಧಾನ ತಂದಿತ್ತು. ಪ್ರಮುಖ ಆಟಗಾರರಾದ ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್, ಜಸ್ಪ್ರೀತ್ ಬುಮ್ರಾ ಹಾಗೂ ಪ್ರಸಿದ್ಧ್ ಕೃಷ್ಣ ತಮ್ಮ ತಮ್ಮ ಇಂಜುರಿಗಳಿಂದ ಚೇತರಿಸಿಕೊಂಡಿದ್ದು, ಒಬ್ಬೋಬ್ಬರಾಗಿ ಟೀಂ ಇಂಡಿಯಾವನ್ನು (Team India) ಸೇರಿಕೊಳ್ಳುತ್ತಿದ್ದಾರೆ. ಪ್ರಮುಖ ಐಸಿಸಿ ಈವೆಂಟ್​ಗೂ ಮುನ್ನ ಈ ಸುದ್ದಿ ಟೀಂ ಇಂಡಿಯಾಗೆ ಕೊಂಚ ನೆಮ್ಮದಿ ತಂದಿತ್ತು. ಆದರೆ ಪ್ರಸ್ತುತ ವೆಸ್ಟ್ ಇಂಡೀಸ್ ಪ್ರವಾಸದಲ್ಲಿರುವ ಟೀಂ ಇಂಡಿಯಾಕ್ಕೆ (India vs West Indies) ಮತ್ತೆ ಗಾಯದ ಸಮಸ್ಯೆ ಕಾಡಲಾರಂಭಿಸಿದೆ. ವಿಂಡೀಸ್ ವಿರುದ್ಧದ ವೈಟ್ ಬಾಲ್ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿರುವ ಚೈನಾಮನ್ ಸ್ಪಿನ್ನರ್ ಕುಲ್ದೀಪ್ ಯಾದವ್ (Kuldeep Yadav) ಗಾಯಗೊಂಡಿದ್ದು, ಅವರನ್ನು ಎರಡನೇ ಟಿ20 ಪಂದ್ಯದಲ್ಲಿ ಹೊರಗಿಡಲಾಗಿತ್ತು.

ವಾಸ್ತವವಾಗಿ ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಕುಲ್ದೀಪ್ ಯಾದವ್ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ಈ ಪ್ರವಾಸದಲ್ಲಿ ಆಡಿರುವ 4 ಪಂದ್ಯಗಳಲ್ಲಿ ಒಟ್ಟು 8 ವಿಕೆಟ್ ಪಡೆದಿರುವ ಕುಲ್ದೀಪ್ 3 ಪಂದ್ಯಗಳ ಏಕದಿನ ಸರಣಿಯಲ್ಲಿ 7 ವಿಕೆಟ್ ಹಾಗೂ ಕೊನೆಯ ಟಿ20 ಪಂದ್ಯದಲ್ಲಿ ಒಂದು ವಿಕೆಟ್ ಪಡೆದಿದ್ದರು. ಹೀಗಾಗಿ ಅತ್ಯುತ್ತಮ ಫಾರ್ಮ್‌ನಲ್ಲಿದ್ದರೂ ಕುಲ್ದೀಪ್ ಅವರನ್ನು ಎರಡನೇ ಟಿ20 ಪಂದ್ಯದಿಂದ ಹೊರಗಿಡಲಾಗಿತ್ತು. ಹೀಗಾಗಿ ಆಯ್ಕೆ ಮಂಡಳಿಯ ನಡೆಗೆ ಆಕ್ರೋಶ ವ್ಯಕ್ತವಾಗಿತ್ತು.

IND vs WI: 3 ಓವರ್, 4 ವಿಕೆಟ್; ವಿಂಡೀಸ್ ನೆಲದಲ್ಲಿ ಇತಿಹಾಸ ಸೃಷ್ಟಿಸಿದ ಕುಲ್ದೀಪ್ ಯಾದವ್

ಕುಲ್ದೀಪ್ ಕೈಗೆ ಪೆಟ್ಟು

ಆ ಬಳಿಕ ಕುಲ್ದೀಪ್ ಯಾದವ್ ತಂಡಕ್ಕೆ ಆಯ್ಕೆಯಾಗದಿರುವ ಬಗ್ಗೆ ಮಾಹಿತಿ ನೀಡಿದ ಬಿಸಿಸಿಐ, ಹಾಗೂ ನಾಯಕ ಹಾರ್ದಿಕ್ ಪಾಂಡ್ಯ, ನೆಟ್ಸ್‌ನಲ್ಲಿ ನಿನ್ನೆ ಕುಲ್ದೀಪ್ ಕೈಗೆ ಪೆಟ್ಟು ಬಿದ್ದಿದ್ದು, ಅವರ ಬದಲಿಗೆ ರವಿ ಬಿಷ್ಣೋಯ್ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ. ಗಾಯ ಗಂಭೀರವಾಗಿಲ್ಲದಿದ್ದರೂ, ಮುನ್ನೆಚ್ಚರಿಕೆ ಕ್ರಮವಾಗಿ ಅವರಿಗೆ ವಿಶ್ರಾಂತಿ ನೀಡಲಾಗಿದೆ ಎಂದು ಹಾರ್ದಿಕ್ ಪಾಂಡ್ಯ ಹೇಳಿದ್ದರು.

ಕುಲ್ದೀಪ್ ಉಪಸ್ಥಿತಿ ಭಾರತಕ್ಕೆ ಅವಶ್ಯಕ

ಸದ್ಯ ಗಾಯ ಗಂಭೀರವಾಗಿಲ್ಲ ಎಂಬ ನಾಯಕನ ಹೇಳಿಕೆ ಟೀಂ ಇಂಡಿಯಾ ಅಭಿಮಾನಿಗಳಿಗೆ ಕೊಂಚ ಸಮಾಧಾನ ತಂದಿದೆ. ಏಕೆಂದರೆ, ಏಷ್ಯಾಕಪ್ ಹಾಗೂ ವಿಶ್ವಕಪ್ ದೃಷ್ಟಿಯಿಂದ ಕುಲ್ದೀಪ್ ಯಾದವ್ ಟೀಂ ಇಂಡಿಯಾದಲ್ಲಿ ಇರುವುದು ಬಹಳ ಮುಖ್ಯವಾಗಿದೆ. ಟೀಂ ಇಂಡಿಯಾದ ಸ್ಪಿನ್ ವಿಭಾಗದಲ್ಲಿ ಅದ್ಭುತ ಫಾರ್ಮ್​ನಲ್ಲಿರುವ ಕುಲ್ದೀಪ್ ಉಪಸ್ಥಿತಿ ಭಾರತಕ್ಕೆ ಅವಶ್ಯಕವಾಗಿ ಬೇಕಾಗಿದೆ. ಅಲ್ಲದೆ ಈ ಬಾರಿಯ ಏಕದಿನ ವಿಶ್ವಕಪ್ ಭಾರತದಲ್ಲೇ ನಡೆಯುತ್ತಿರುವುದರಿಂದ ಭಾರತದ ಪಿಚ್​ಗಳು ಸ್ಪಿನ್ನರ್​ಗಳಿಗೆ ಎಷ್ಟು ಸಹಕಾರಿ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರವೇ. ಹೀಗಾಗಿ ಕುಲ್ದೀಪ್ ಬೇಗ ಚೇತರಿಸಿಕೊಂಡು ತಂಡ ಸೇರಿಕೊಳ್ಳಬೇಕಿದೆ.

ಇನ್ನು ಎರಡನೇ ಟಿ20 ಪಂದ್ಯದಲ್ಲಿ ಮತ್ತೊಂದು ಸೋಲು ಕಂಡಿರುವ ಟೀಂ ಇಂಡಿಯಾ 5 ಪಂದ್ಯಗಳ ಟಿ20 ಸರಣಿಯಲ್ಲಿ 2-0 ಅಂತರದಿಂದ ಹಿನ್ನಡೆ ಕಾಯ್ದುಕೊಂಡಿದೆ. ಅಲ್ಲದೆ ಕುಲ್ದೀಪ್ ಬದಲು ತಂಡದಲ್ಲಿ ಸ್ಥಾನ ಪಡೆದಿದ್ದ ರವಿ ಬಿಷ್ಣೋಯಿ ಎರಡನೇ ಟಿ20 ಪಂದ್ಯದಲ್ಲಿ ಯಾವುದೇ ಪ್ರಭಾವ ಬೀರಲಿಲ್ಲ. ತಮ್ಮ ಖೋಟಾದ 4 ಓವರ್​ ಬೌಲ್ ಮಾಡಿ ಯಾವುದೇ ವಿಕೆಟ್ ಪಡೆಯದೆ 31 ರನ್ ಬಿಟ್ಟುಕೊಟ್ಟರು. ಹೀಗಾಗಿ ಕುಲ್ದೀಪ್ ಆದಷ್ಟು ಬೇಗ ತಂಡ ಸೇರಿಕೊಂಡರೆ, ಟೀಂ ಇಂಡಿಯಾದ ಸ್ಪಿನ್ ವಿಭಾಗ ಬಲಿಷ್ಠಗೊಳ್ಳಲಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:40 am, Mon, 7 August 23

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಅಲ್ಲೆಲ್ಲೋ ಯುದ್ಧ ನಡೀತಿದ್ರೆ ಇಲ್ಯಾಕೆ ಚಿನ್ನ ಖರೀದಿ ಮಾಡಬಾರದು?
ಅಲ್ಲೆಲ್ಲೋ ಯುದ್ಧ ನಡೀತಿದ್ರೆ ಇಲ್ಯಾಕೆ ಚಿನ್ನ ಖರೀದಿ ಮಾಡಬಾರದು?
ಸಾರ್ವಜನಿಕರೇ ಬೆಂಗಳೂರಿನ ಈ ರಸ್ತೆಗಳಲ್ಲಿ ಓಡಾಡುವಾಗ ಹುಷಾರ್!
ಸಾರ್ವಜನಿಕರೇ ಬೆಂಗಳೂರಿನ ಈ ರಸ್ತೆಗಳಲ್ಲಿ ಓಡಾಡುವಾಗ ಹುಷಾರ್!
ಲವ್ ವಿಚಾರಕ್ಕೆ 17ರ ಮಗಳನ್ನೇ ಕೊಂದ ಅಪ್ಪ: ತಂದೆಯ ಅಸಲಿ ಮುಖ ಬಯಲು
ಲವ್ ವಿಚಾರಕ್ಕೆ 17ರ ಮಗಳನ್ನೇ ಕೊಂದ ಅಪ್ಪ: ತಂದೆಯ ಅಸಲಿ ಮುಖ ಬಯಲು
ಶತಕದ ಪಂದ್ಯದಲ್ಲಿ ಒಂದೇ ರನ್​ಗೆ ಸುಸ್ತಾದ ಶ್ರೇಯಸ್ ಅಯ್ಯರ್
ಶತಕದ ಪಂದ್ಯದಲ್ಲಿ ಒಂದೇ ರನ್​ಗೆ ಸುಸ್ತಾದ ಶ್ರೇಯಸ್ ಅಯ್ಯರ್
ಅರಬ್ಬಿ ಸಮುದ್ರದಲ್ಲಿ ಹೆಚ್ಚಿದ ಗಾಳಿಯ ವೇಗ: ಲಂಗರು ಹಾಕಿದ ನೂರಾರು ಬೋಟ್​​​​
ಅರಬ್ಬಿ ಸಮುದ್ರದಲ್ಲಿ ಹೆಚ್ಚಿದ ಗಾಳಿಯ ವೇಗ: ಲಂಗರು ಹಾಕಿದ ನೂರಾರು ಬೋಟ್​​​​
ನಿಯಂತ್ರಣ ತಪ್ಪಿ ಏಕಾಏಕಿ ರೆಸ್ಟೋರೆಂಟ್ ಒಳಗೆ ನುಗ್ಗಿದ ಕಾರು
ನಿಯಂತ್ರಣ ತಪ್ಪಿ ಏಕಾಏಕಿ ರೆಸ್ಟೋರೆಂಟ್ ಒಳಗೆ ನುಗ್ಗಿದ ಕಾರು
ಜಿಟಿ ದೇವೇಗೌಡಗೆ ಶಾಕ್: ಸ್ವಪಕ್ಷದ ಶಾಸಕರನ್ನ ದೂರವಿಟ್ಟು​ ಸಮಾವೇಶ
ಜಿಟಿ ದೇವೇಗೌಡಗೆ ಶಾಕ್: ಸ್ವಪಕ್ಷದ ಶಾಸಕರನ್ನ ದೂರವಿಟ್ಟು​ ಸಮಾವೇಶ
ಕಲಬುರಗಿಯಲ್ಲಿ ಮಾಜಿ ಸೈನಿಕನ ಬರ್ಬರ ಹತ್ಯೆ: ಆಗಿದ್ದೇನು?
ಕಲಬುರಗಿಯಲ್ಲಿ ಮಾಜಿ ಸೈನಿಕನ ಬರ್ಬರ ಹತ್ಯೆ: ಆಗಿದ್ದೇನು?
ನಿರಾಶ್ರಿತರ ಕೇಂದ್ರದಲ್ಲಿದ್ದ ವಿದೇಶಿ ಅಕ್ರಮ ವಲಸಿಗರು ಪರಾರಿ!
ನಿರಾಶ್ರಿತರ ಕೇಂದ್ರದಲ್ಲಿದ್ದ ವಿದೇಶಿ ಅಕ್ರಮ ವಲಸಿಗರು ಪರಾರಿ!
ಶನಿ ಅಮಾವಾಸ್ಯೆ, ವೀಕೆಂಡ್ ಹಿನ್ನೆಲೆ ಮಲೆ ಮಹದೇಶ್ವರ ಬೆಟ್ಟದಲ್ಲಿ ಭಕ್ತಸಾಗರ
ಶನಿ ಅಮಾವಾಸ್ಯೆ, ವೀಕೆಂಡ್ ಹಿನ್ನೆಲೆ ಮಲೆ ಮಹದೇಶ್ವರ ಬೆಟ್ಟದಲ್ಲಿ ಭಕ್ತಸಾಗರ