AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI: ಕಿಶನ್- ಜೈಸ್ವಾಲ್​ಗೆ ಟೆಸ್ಟ್ ಕ್ಯಾಪ್ ನೀಡಿದ್ದು ಯಾರು ಗೊತ್ತಾ? ವಿಡಿಯೋ ನೋಡಿ

IND vs WI: ಡೊಮಿನಿಕಾದಲ್ಲಿ ಆರಂಭವಾಗಿರುವ ಮೊದಲ ಟೆಸ್ಟ್ ಪಂದ್ಯಕ್ಕೆ ನಿರೀಕ್ಷೆಯಂತೆ ಎರಡು ಯುವ ಪ್ರತಿಭೆಗಳು ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

IND vs WI: ಕಿಶನ್- ಜೈಸ್ವಾಲ್​ಗೆ ಟೆಸ್ಟ್ ಕ್ಯಾಪ್ ನೀಡಿದ್ದು ಯಾರು ಗೊತ್ತಾ? ವಿಡಿಯೋ ನೋಡಿ
ಟೀಂ ಇಂಡಿಯಾ
ಪೃಥ್ವಿಶಂಕರ
|

Updated on: Jul 13, 2023 | 6:40 AM

Share

ಬರೋಬ್ಬರಿ ಒಂದು ತಿಂಗಳ ವಿಶ್ರಾಂತಿಯ ಬಳಿಕ ಭಾರತ ಕ್ರಿಕೆಟ್ ತಂಡ ಮತ್ತೆ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ಮರಳಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನ (WTC Final) ಸೋಲಿನ ನಂತರ, ಟೀಂ ಇಂಡಿಯಾ, ವೆಸ್ಟ್ ಇಂಡೀಸ್ (India vs West Indies) ವಿರುದ್ಧದ ಟೆಸ್ಟ್ ಸರಣಿಯೊಂದಿಗೆ ತನ್ನ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಮೂರನೇ ಆವೃತ್ತಿಯ ಅಭಿಯಾನವನ್ನು ಆರಂಭಿಸಿದೆ. ಸತತ ಎರಡನೇ ಬಾರಿಗೆ ಟೆಸ್ಟ್ ಚಾಂಪಿಯನ್​ಶಿಪ್ ಸೋತ ಬಳಿಕ ತಂಡದಲ್ಲಿ ಹಲವು ಬದಲಾವಣೆ ತರಲು ಮುಂದಾಗಿದ್ದ ಬಿಸಿಸಿಐ (BCCI) ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಹೊಸ ಮುಖಗಳಿಗೆ ಆಧ್ಯತೆ ನೀಡಿತ್ತು. ಇದೀಗ ಡೊಮಿನಿಕಾದಲ್ಲಿ ಆರಂಭವಾಗಿರುವ ಮೊದಲ ಟೆಸ್ಟ್ ಪಂದ್ಯಕ್ಕೆ ನಿರೀಕ್ಷೆಯಂತೆ ಎರಡು ಯುವ ಪ್ರತಿಭೆಗಳು ಟೀಂ ಇಂಡಿಯಾದಲ್ಲಿ (Team India) ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಸರಣಿಯಲ್ಲಿ ಯಾವ ಯುವ ಆಟಗಾರರಿಗೆ ಪದಾರ್ಪಣೆ ಮಾಡುವ ಅವಕಾಶ ಸಿಗುತ್ತದೆ ಎಂಬುದರ ಬಗ್ಗೆ ಈ ಹಿಂದೆ ಸ್ಪಷ್ಟತೆ ಸಿಕ್ಕಿತ್ತು. ಇದೀಗ ನಿರೀಕ್ಷೆಯಂತೆ ನಾಯಕ ರೋಹಿತ್ ಶರ್ಮಾ ತನ್ನ ಆರಂಭಿಕ ಜೊತೆಗಾರನನ್ನು ಬದಲಿಸಿದ್ದು, ಯುವ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್​ಗೆ ಚೊಚ್ಚಲ ಅಂತಾರಾಷ್ಟ್ರೀಯ ಪಂದ್ಯವನ್ನಾಡಲು ಅವಕಾಶ ಮಾಡಿಕೊಡಲಾಗಿದೆ. ಯಶಸ್ವಿ ಹೊರತಾಗಿ ಯುವ ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ಇಶಾನ್ ಕಿಶನ್ ಕೂಡ ಟೆಸ್ಟ್‌ಗೆ ಪದಾರ್ಪಣೆ ಮಾಡುತ್ತಿದ್ದಾರೆ. ಅವಕಾಶ ಸಿಕ್ಕ 5 ಟೆಸ್ಟ್‌ ಪಂದ್ಯಗಳಲ್ಲಿ ಪ್ರಭಾವ ಬೀರಲು ಸಾಧ್ಯವಾಗದ ಕೆಎಸ್ ಭರತ್ ಬದಲಿಗೆ ಕಿಶನ್​ ಅವರನ್ನು ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಆಗಿ ತಂಡಕ್ಕೆ ಆಯ್ಕೆ ಮಾಡಿಕೊಳ್ಳಲಾಗಿದೆ.

IND vs WI: ಮೊದಲ ದಿನದಾಟ ಅಂತ್ಯ; ಸ್ಪಿನ್ ದಾಳಿಗೆ ತತ್ತರಿಸಿದ ವಿಂಡೀಸ್ 150 ರನ್​ಗಳಿಗೆ ಆಲೌಟ್..!

ಟೆಸ್ಟ್ ಕ್ಯಾಪ್ ನೀಡಿದ್ದು ಯಾರು?

ಇನ್ನು ಈ ಇಬ್ಬರ ಆಯ್ಕೆಯನ್ನು ಟ್ವಿಟರ್​ನಲ್ಲಿ ಖಚಿತ ಪಡಿಸಿದ ಬಿಸಿಸಿಐ, ಇಬ್ಬರು ಆಟಗಾರರು ತಮ್ಮ ಚೊಚ್ಚಲ ಟೆಸ್ಟ್ ಕ್ಯಾಪ್ ಸ್ವೀಕರಿಸುವ ಫೋಟೋ ಹಾಗೂ ವಿಡಿಯೋವನ್ನು ಟ್ವೀಟ್ ಮಾಡಿತ್ತು. ನಾಯಕ ರೋಹಿತ್ ಶರ್ಮಾ ಜೈಸ್ವಾಲ್‌ಗೆ ಟೆಸ್ಟ್ ಕ್ಯಾಪ್ ನೀಡಿದರೆ, ಮಾಜಿ ನಾಯಕ ವಿರಾಟ್ ಕೊಹ್ಲಿ ಕಿಶನ್‌ಗೆ ಟೆಸ್ಟ್ ಕ್ಯಾಪ್ ನೀಡಿದರು.

ಪೂಜಾರ ಬದಲಿಗೆ ಯಶಸ್ವಿ

ಟೀಂ ಇಂಡಿಯಾದಲ್ಲಿ ಚೊಚ್ಚಲ ಅವಕಾಶ ಪಡೆದಿರುವ ಜೈಸ್ವಾಲ್, ಚೇತೇಶ್ವರ ಪೂಜಾರ ಅವರ ಬದಲಿ ಆಯ್ಕೆಯಾಗಿದ್ದರೂ, ಆರಂಭಿಕರಾಗಿ ಕಣಕ್ಕಿಳಿದಿದ್ದಾರೆ. ಹೀಗಾಗಿ ಈ ಹಿಂದೆ ರೋಹಿತ್ ಜೊತೆ ಇನ್ನಿಂಗ್ಸ್ ಆರಂಭಿಸುತ್ತಿದ್ದ ಶುಭ್​ಮನ್ ಗಿಲ್ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲಿದ್ದಾರೆ. ಅಲ್ಲದೆ ತನ್ನನ್ನು ಆರಂಭಿಕನಾಗಿ ಕಣಕ್ಕಿಳಿಸಿರುವ ಆಡಳಿತ ಮಂಡಳಿಯ ನಂಬಿಕೆ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುವ ಜೈಸ್ವಾಲ್, ಮೊದಲ ಇನ್ನಿಂಗ್ಸ್​ನಲ್ಲಿ ದಿನದಾಟದಂತ್ಯಕ್ಕೆ 40 ರನ್ ಗಳಿಸಿ ಅಜೇಯರಾಗಿ ಉಳಿದಿದ್ದಾರೆ. ಹಾಗೆಯೇ ನಾಯಕ ರೋಹಿತ್ ಜೊತೆಗೂಡಿ ಅರ್ಧಶತಕದ ಜೊತೆಯಾಟವನ್ನು ಹಂಚಿಕೊಂಡಿದ್ದಾರೆ.

ಭರತ್ ಬದಲಿಗೆ ಕಿಶನ್

ಜೈಸ್ವಾಲ್ ಜೊತೆಗೆ ಟೆಸ್ಟ್ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ ಕಿಶನ್, ಈ ಪಂದ್ಯದಲ್ಲಿ ವಿಕೆಟ್‌ಕೀಪರ್‌ನ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ. ರಿಷಬ್ ಪಂತ್ ಅನುಪಸ್ಥಿತಿಯಲ್ಲಿ ಉತ್ತಮ ವಿಕೆಟ್ ಕೀಪರ್ ಬ್ಯಾಟ್ಸ್​ಮನ್​ನನ್ನು ಹುಡುಕುತ್ತಿರುವ ಬಿಸಿಸಿಐಗೆ ಕಿಶನ್ ಉತ್ತಮ ಆಯ್ಕೆಯಾಗಿದ್ದಾರೆ. ಸದ್ಯಕ್ಕೆ ಅದ್ಭುತವಾಗಿ ವಿಕೆಟ್ ಕೀಪಿಂಗ್​ ಮಾಡಿರುವ ಕಿಶನ್, ಬ್ಯಾಟಿಂಗ್​ನಲ್ಲಿ ಯಾವ ರೀತಿಯ ಪ್ರದರ್ಶನ ನೀಡುತ್ತಾರೆ ಎಂಬುದನ್ನು ಕಾದುನೋಡಬೇಕಿದೆ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಇಶಾನ್ ಕಿಶನ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಜಯದೇವ್ ಉನದ್ಕಟ್ ಮತ್ತು ಮೊಹಮ್ಮದ್ ಸಿರಾಜ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!