AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ind vs WI: ರೋಹಿತ್ ಪಡೆಯ ಟ್ರೈನಿಂಗ್ ಸೆಷನ್ ಕ್ಯಾನ್ಸಲ್: ಭಾರತ-ವೆಸ್ಟ್ ಇಂಡೀಸ್ ಏಕದಿನ ಅನುಮಾನ

India vs West Indies: ಭಾರತ- ವೆಸ್ಟ್ ಇಂಡೀಸ್ ಏಕದಿನ ಸರಣಿ ನಿಗದಿತ ದಿನಾಂಕಕ್ಕೆ ಆರಂಭವಾಗುವುದು ಅನುಮಾನ ಎನ್ನಲಾಗುತ್ತಿದೆ. ಫೆಬ್ರವರಿ 6ಕ್ಕೆ ಆರಂಭವಾಗಬೇಕಿದ್ದ ಇಂಡೋ- ವಿಂಡೀಸ್ ಮೊದಲ ಏಕದಿನ ಸರಣಿ ಮುಂದಕ್ಕೋಗುವ ಎಲ್ಲ ಲಕ್ಷಣಗಳು ಗೋಚರಿಸುತ್ತಿದೆ.

Ind vs WI: ರೋಹಿತ್ ಪಡೆಯ ಟ್ರೈನಿಂಗ್ ಸೆಷನ್ ಕ್ಯಾನ್ಸಲ್: ಭಾರತ-ವೆಸ್ಟ್ ಇಂಡೀಸ್ ಏಕದಿನ ಅನುಮಾನ
Covid in Team India Camp
TV9 Web
| Edited By: |

Updated on: Feb 03, 2022 | 10:59 AM

Share

ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿ ಆರಂಭಕ್ಕೂ ಮುನ್ನವೇ ಭಾರತ (India vs West Indies) ತಂಡಕ್ಕೆ ದೊಡ್ಡ ಆಘಾತ ಉಂಟಾಗಿದೆ. ಟೀಮ್ ಇಂಡಿಯಾ (Team India) ಮೇಲೆ ಕೊರೊನಾ ಕರಿನೆರಳು ಬಿದ್ದಿದ್ದು ಆಟಗಾರರು ಮತ್ತು ತರಬೇತಿ ಸಿಬ್ಬಂದಿ ಒಳಗೊಂಡಂತೆ ಒಟ್ಟು 8 ಸದಸ್ಯರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಶಿಖರ್ ಧವನ್, ಶ್ರೇಯಸ್ ಅಯ್ಯರ್, ರುತುರಾಜ್ ಗಾಯಕ್ವಾಡ್ ಮತ್ತು ಸ್ಯಾಂಡ್​ಬೈ ಬೌಲರ್ ನವ್​ದೀಪ್ ಸೈನಿ ಒಂದುಕಡೆಯಾದರೆ ಇತ್ತ ನಾಲ್ಕು ತರಬೇತಿ ಸಿಬ್ಬಂದಿಗಳಿಗೆ ಆರ್​ಟಿ-ಪಿಸಿಆರ್ ಟೆಸ್ಟ್​ನಲ್ಲಿ ಕೋವಿಡ್ ಪಾಸಿಟಿವ್ (Covid- 19) ಕಾಣಿಸಿಕೊಂಡಿದೆ. ಟೀಮ್ ಇಂಡಿಯಾ ಸ್ಪಿನ್ನರ್ ಅಕ್ಷರ್ ಪಟೇಲ್ ಅವರಿಗೆ ಮನೆಯಲ್ಲೇ ಪಾಸಿಟಿವ್ ಬಂದ ಕಾರಣ ಅವರು ಅಹ್ಮದಾಬಾದ್​ಗೆ ಪ್ರಯಾಣ ಬೆಳೆಸಿಲ್ಲ. ಈ ಮಹತ್ವದ ಬೆಳವಣಿಗೆ ಬೆನ್ನಲ್ಲೇ ಇದೀಗ ಭಾರತ- ವೆಸ್ಟ್ ಇಂಡೀಸ್ ಏಕದಿನ ಸರಣಿ ನಿಗದಿತ ದಿನಾಂಕಕ್ಕೆ ಆರಂಭವಾಗುವುದು ಅನುಮಾನ ಎನ್ನಲಾಗುತ್ತಿದೆ. ಫೆಬ್ರವರಿ 6ಕ್ಕೆ ಆರಂಭವಾಗಬೇಕಿದ್ದ ಇಂಡೋ- ವಿಂಡೀಸ್ ಮೊದಲ ಏಕದಿನ ಸರಣಿ ಮುಂದಕ್ಕೋಗುವ ಎಲ್ಲ ಲಕ್ಷಣಗಳು ಗೋಚರಿಸುತ್ತಿದೆ.

ಬಿಸಿಸಿಐ ಗುರುವಾರ ಮತ್ತೊಂದು ಸುತ್ತಿನ ಆರ್​ಟಿ- ಪಿಸಿಆರ್ ಪರೀಕ್ಷೆ ನಡೆಸಲು ನಿರ್ಧರಿಸಿದೆ. ಪಾಸಿಟಿವ್ ಆದವರು ಕೊಠಡಿಗಳಲ್ಲಿ ಪ್ರತ್ಯೇಕವಾಗುಳಿದು, ಸರಕಾರದ ಮಾರ್ಗಸೂಚಿಯನ್ನು ಪಾಲಿಸಲಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಇನ್​ಸೈಡ್ ಸ್ಫೋರ್ಟ್ಸ್​ಗೆ ಬಿಸಿಸಿಐ ಮೂಲಗಳು ಮಾಹಿತಿ ತಿಳಿಸಿದ್ದು, “ಸದ್ಯಕ್ಕೆ ನಿಗದಿತ ದಿನಾಂಕದಂದೇ ಸರಣಿ ಆರಂಭವಾಗಲಿದೆ. ಆದರೆ, ಎಲ್ಲಾದರು ಇಂದು ಅಥವಾ ನಾಳೆ ತಂಡದಲ್ಲಿ ಪಾಸಿಟಿವ್ ಕೇಸ್​ಗಳ ಸಂಖ್ಯೆ ಅಧಿಕವಾದರೆ ಪಂದ್ಯದ ಆರಂಭವನ್ನು ಮುಂದೂಡಬೇಕಾದ ಅನಿವಾರ್ಯತೆ ಎದುರಾಗಬಹುದು,” ಎಂದು ಹೇಳಿದ್ದಾರೆ.

ಸದ್ಯಕ್ಕೆ ಭಾರತದ ಟ್ರೈನಿಂಗ್ ಸೆಷನ್​ ಅನ್ನು ಸ್ಥಗಿತಗೊಳಿಸಲಾಗಿದೆ. ಇಂದು ಮತ್ತೆ ಎಲ್ಲಾ ಆಟಗಾರರನ್ನು ಕೋವಿಡ್‌ ಟೆಸ್ಟ್‌ಗೆ ಒಳಪಡಿಸಲು ಬಿಸಿಸಿಐ ನಿರ್ಧರಿಸಿದೆ. ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಗಾಗಿ ಅಹ್ಮದಾಬಾದ್​ಗೆ ತೆರಳುವ ಮುನ್ನ ಮನೆಯಲ್ಲಿ ಭಾರತದ ಎಲ್ಲ ಆಟಗಾರರಿಗೆ ಆರ್​ಟಿಪಿಸಿಆರ್ ಟೆಸ್ಟ್ ಮಾಡಿಸುವಂತೆ ಸೂಚಿಸಲಾಗಿತ್ತು. ಅದರಲ್ಲಿ ಎಲ್ಲರಿಗೂ ನೆಗೆಟಿವ್ ಬಂದಿತ್ತು.

ನಂತರ ಜ. 31 ಸೋಮವಾರ ನಡೆಸಿದ ಆರ್​ಟಿಪಿಸಿಆರ್ ಟೆಸ್ಟ್​ನಲ್ಲಿ ಮೊದಲು ಧವನ್ ಮತ್ತು ನವ್​ದೀಪ್ ಸೈನಿಗೆ ಪಾಸಿಟಿವ್ ಬಂದಿದೆ. ಫೀಲ್ಡಿಂಗ್ ಕೋಚ್ ಟಿ. ದಿಲೀಪ್ ಮತ್ತು ಮತ್ತೊಬ್ಬರಿಗೆ ಕೊರೊನಾ ದೃಢಪಟ್ಟಿದೆ. ಫೆ. 1 ರಂದು ರುತುರಾಜ್ ಗಾಯಕ್ವಾಡ್​ಗೆ ಫೆ. 2 ರಂದು ಶ್ರೇಯಸ್ ಅಯ್ಯರ್ ಮತ್ತು ಸ್ಫೋಟರ್ಸ್ ಮಸಾಜ್ ಥೆರಪಿಯವರಾದ ರಾಜೀವ್ ಕುಮಾರ್​ಗೆ ಪಾಸಿಟಿವ್ ಕಂಡುಬಂದಿದೆ ಎಂದು ಬಿಸಿಸಿಐ ಹೇಳಿದೆ. ಇದರ ಬೆನ್ನಲ್ಲೇ ಭಾರತ ಏಕದಿನ ತಂಡಕ್ಕೆ ಹಿರಿಯ ಆಯ್ಕೆ ಸಮಿತಿ ಮಯಾಂಕ್ ಅಗರ್ವಾಲ್ ಅವರನ್ನು ಆಯ್ಕೆ ಮಾಡಿದೆ.

ಮೂರು ಪಂದ್ಯಗಳ ಏಕದಿನ ಸರಣಿಯು ಅಹ್ಮದಾಬಾದ್‌ನಲ್ಲಿ ಫೆ.6 ರಿಂದ ಆರಂಭವಾಗಲಿದೆ. ಇದು ಭಾರತದ 1000ನೇ ಏಕದಿನ ಪಂದ್ಯವಾಗಿದೆ. ಹೀಗಿರುವಾಗ ತಂಡದ ಆಟಗಾರರು ಹಾಗೂ ಸಹಾಯಕ ಸಿಬ್ಬಂದಿ ವರ್ಗದವರಿಗೆ ಕೊರೊನಾ ಇರುವುದು ಬುಧವಾರ ಗೊತ್ತಾಗಿದೆ. ಉಭಯ ತಂಡಗಳು ಒಂದೇ ಹೊಟೇಲ್‌ನಲ್ಲಿ ತಂಗಿದ್ದು ಪ್ರತ್ಯೇಕ ಮಹಡಿಯಲ್ಲಿವೆ. ಬಿಸಿಸಿಐ ಗುರುವಾರ ಮತ್ತೊಂದು ಸುತ್ತಿನ ಪರೀಕ್ಷೆ ನಡೆಸಲು ನಿರ್ಧರಿಸಿದೆ. ಪಾಸಿಟಿವ್ ಆದವರು ಕೊಠಡಿಗಳಲ್ಲಿ ಪ್ರತ್ಯೇಕವಾಗುಳಿದು, ಸರಕಾರದ ಮಾರ್ಗಸೂಚಿಯನ್ನು ಪಾಲಿಸಲಿದ್ದಾರೆ ಎನ್ನಲಾಗಿದೆ.

India vs West Indies: ಭಾರತದ 3 ಆಟಗಾರರಿಗೆ ಪಾಸಿಟಿವ್: ಸರಣಿಗೆ ಹೊಸ ಸ್ಟಾರ್ ಆಟಗಾರನನ್ನು ಆಯ್ಕೆ ಮಾಡಿದ ಬಿಸಿಸಿಐ

U19 World Cup: ಆಸ್ಟ್ರೇಲಿಯಾ ಎದುರು ಬ್ಯಾಟಿಂಗ್-ಬೌಲಿಂಗ್​ನಲ್ಲಿ ಧೂಳೆಬ್ಬಿಸಿದ ಯಶ್ ಪಡೆ: ಫೈನಲ್​ಗೇರಿದ ಭಾರತ ತಂಡ

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ