AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ZIM: 10 ವಿಕೆಟ್​ಗಳಿಂದ ಗೆದ್ದು ಟಿ20 ಸರಣಿ ವಶಪಡಿಸಿಕೊಂಡ ಟೀಂ ಇಂಡಿಯಾ

IND vs ZIM: ಹರಾರೆಯಲ್ಲಿ ಜಿಂಬಾಬ್ವೆ ವಿರುದ್ಧ ಇಂದು ನಡೆದ ನಾಲ್ಕನೇ ಟಿ20 ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿದ ಯಂಗ್ ಇಂಡಿಯಾ, ಆತಿಥೇಯ ತಂಡವನ್ನು 10 ವಿಕೆಟ್​ಗಳಿಂದ ಮಣಿಸಿದೆ. ಇದೇ ಮೈದಾನದಲ್ಲಿ ನಡೆದಿದ್ದ ಮೊದಲ ಮೂರು ಪಂದ್ಯಗಳಲ್ಲಿ 1 ರಲ್ಲಿ ಸೋತು ಎರಡರಲ್ಲಿ ಗೆದ್ದಿದ್ದ ಟೀಂ ಇಂಡಿಯಾ ಸತತ ಮೂರು ಪಂದ್ಯಗಳನ್ನು ಗೆಲ್ಲುವ ಮೂಲಕ ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ ಟಿ20 ಸರಣಿಯನ್ನು ತನ್ನದಾಗಿಸಿಕೊಂಡಿದೆ.

IND vs ZIM: 10 ವಿಕೆಟ್​ಗಳಿಂದ ಗೆದ್ದು ಟಿ20 ಸರಣಿ ವಶಪಡಿಸಿಕೊಂಡ ಟೀಂ ಇಂಡಿಯಾ
ಭಾರತ- ಜಿಂಬಾಬ್ವೆ
Follow us
ಪೃಥ್ವಿಶಂಕರ
|

Updated on:Jul 13, 2024 | 7:46 PM

ಹರಾರೆಯಲ್ಲಿ ಜಿಂಬಾಬ್ವೆ ವಿರುದ್ಧ ಇಂದು ನಡೆದ ನಾಲ್ಕನೇ ಟಿ20 ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿದ ಯಂಗ್ ಇಂಡಿಯಾ, ಆತಿಥೇಯ ತಂಡವನ್ನು 10 ವಿಕೆಟ್​ಗಳಿಂದ ಮಣಿಸಿದೆ. ಇದೇ ಮೈದಾನದಲ್ಲಿ ನಡೆದಿದ್ದ ಮೊದಲ ಮೂರು ಪಂದ್ಯಗಳಲ್ಲಿ 1 ರಲ್ಲಿ ಸೋತು ಎರಡರಲ್ಲಿ ಗೆದ್ದಿದ್ದ ಟೀಂ ಇಂಡಿಯಾ ಸತತ ಮೂರು ಪಂದ್ಯಗಳನ್ನು ಗೆಲ್ಲುವ ಮೂಲಕ ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ ಟಿ20 ಸರಣಿಯನ್ನು ತನ್ನದಾಗಿಸಿಕೊಂಡಿದೆ. ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಜಿಂಬಾಬ್ವೆ ತಂಡ 20 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 152 ರನ್ ಗಳಿಸಿತು. ಈ ಗುರಿಯನ್ನು ಬೆನ್ನಟ್ಟಿದ ಭಾರತ ತಂಡ ಯಾವುದೇ ವಿಕೆಟ್ ಕಳೆದುಕೊಳ್ಳದೆ 28 ಎಸೆತಗಳನ್ನು ಇನ್ನು ಬಾಕಿ ಇರುವಂತೆಯೇ ಗೆಲುವಿನ ದಡ ಮುಟ್ಟಿತು. ಇದರೊಂದಿಗೆ ಐದು ಪಂದ್ಯಗಳ ಸರಣಿಯಲ್ಲಿ ಭಾರತ 3-1 ಅಂತರದ ಮುನ್ನಡೆ ಕಾಯ್ದುಕೊಂಡಿದೆ.

152 ರನ್‌ಗಳ ಟಾರ್ಗೆಟ್

ಈ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ಶುಭ್​ಮಲ್ ಗಿಲ್ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ಜಿಂಬಾಬ್ವೆ ಪರ ತಂಡದ ಆರಂಭಿಕರು ಉತ್ತಮ ಆರಂಭ ನೀಡಿದರು. ಆದರೆ ಈ ಆರಂಭವನ್ನು ದೊಡ್ಡ ಸ್ಕೋರ್‌ಗೆ ಕೊಂಡೊಯ್ಯಲು ತಂಡಕ್ಕೆ ಸಾಧ್ಯವಾಗಲಿಲ್ಲ. ಈ ಮೂಲಕ ಜಿಂಬಾಬ್ವೆ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 152 ರನ್ ಗಳಿಸಿತು. ತಂಡದ ಪರ ನಾಯಕ ಸಿಕಂದರ್ ರಾಝಾ 46 ರನ್​ಗಳ ಇನ್ನಿಂಗ್ಸ್ ಆಡಿದರೆ, ತಡಿವಾನಾಶೆ ಮರುಮಣಿ 32 ರನ್​ಗಳ ಕಾಣಿಕೆ ನೀಡಿದರು. ಟೀಂ ಇಂಡಿಯಾ ಪರ ಖಲೀಲ್ ಅಹ್ಮದ್ 4 ಓವರ್‌ಗಳಲ್ಲಿ 32 ರನ್ ನೀಡಿ 2 ವಿಕೆಟ್ ಪಡೆದರೆ, ತುಷಾರ್ ದೇಶಪಾಂಡೆ, ಅಭಿಷೇಕ್ ಶರ್ಮಾ, ವಾಷಿಂಗ್ಟನ್ ಸುಂದರ್ ಮತ್ತು ಶಿವಂ ದುಬೆ ತಲಾ 1 ವಿಕೆಟ್ ಪಡೆದರು.

ಭಾರತಕ್ಕೆ 10 ವಿಕೆಟ್ ಜಯ

153 ರನ್‌ಗಳ ಗುರಿಗೆ ಉತ್ತರವಾಗಿ ಯಶಸ್ವಿ ಜೈಸ್ವಾಲ್ ಮತ್ತು ಶುಭ್​ಮನ್ ಗಿಲ್ ಇನ್ನಿಂಗ್ಸ್ ಆರಂಭಿಸಿದರು. ಈ ಇಬ್ಬರೂ ಅಜೇಯ ಜೊತೆಯಾಟದ ಮೂಲಕ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು. ಆರಂಭದಿಂದಲೇ ಯಶಸ್ವಿ ಜೈಸ್ವಾಲ್ ತುಂಬಾ ಆಕ್ರಮಣಕಾರಿ ಬ್ಯಾಟಿಂಗ್ ಮಾಡಿದರು ಮತ್ತು ಶುಭಮನ್ ಗಿಲ್ ಅವರಿಗೆ ಸಂಪೂರ್ಣ ಬೆಂಬಲ ನೀಡಿದರು. ಜೈಸ್ವಾಲ್ 53 ಎಸೆತಗಳಲ್ಲಿ ಅಜೇಯ 93 ರನ್ ಬಾರಿಸಿದರೆ, ಅವರ ಈ ಇನ್ನಿಂಗ್ಸ್‌ನಲ್ಲಿ 13 ಬೌಂಡರಿ ಮತ್ತು 2 ಸಿಕ್ಸರ್‌ಗಳು ಸೇರಿದ್ದವು. ಅದೇ ಸಮಯದಲ್ಲಿ, ನಾಯಕ ಗಿಲ್ 39 ಎಸೆತಗಳಲ್ಲಿ 6 ಬೌಂಡರಿ ಮತ್ತು 2 ಸಿಕ್ಸರ್ ಒಳಗೊಂಡಂತೆ 58 ರನ್ ಸಿಡಿಸಿದರು.

ಟೀಂ ಇಂಡಿಯಾಗೆ ಸರಣಿ

ಈ ಪ್ರವಾಸದಲ್ಲ ಟೀಂ ಇಂಡಿಯಾಗೆ ಗೆಲುವಿನ ಶುಭಾರಂಭ ಮಾಡಲು ಸಾಧ್ಯವಾಗಲಿಲ್ಲ. ತಂಡ ತನ್ನ ಮೊದಲ ಪಂದ್ಯದಲ್ಲಿಯೇ ದೊಡ್ಡ ಸೋಲನ್ನು ಎದುರಿಸಬೇಕಾಯಿತು. ಆ ಪಂದ್ಯದಲ್ಲಿ ಭಾರತ ತಂಡ 102 ರನ್‌ಗಳಿಗೆ ಆಲೌಟ್ ಆಗಿತ್ತು. ಆದರೆ ಇದರ ನಂತರ ಟೀಂ ಇಂಡಿಯಾ ಅದ್ಭುತ ಪುನರಾಗಮನ ಮಾಡಿ ಸತತ ಮೂರು ಪಂದ್ಯಗಳನ್ನು ಗೆದ್ದು ಸರಣಿ ವಶಪಡಿಸಿಕೊಂಡಿದೆ. ಇದೀಗ ಸರಣಿಯ ಕೊನೆಯ ಪಂದ್ಯ ಜುಲೈ 14 ರಂದು ನಡೆಯಲಿದೆ. ಈ ಪಂದ್ಯವನ್ನು ಗೆಲ್ಲುವ ಮೂಲಕ ಪ್ರವಾಸವನ್ನು ಅಂತ್ಯಗೊಳಿಸುವ ಇರಾದೆಯಲ್ಲಿ ಶುಭ್​ಮನ್ ಗಿಲ್ ಪಡೆ ಇದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:33 pm, Sat, 13 July 24

ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಖರ್ಗೆ ಬಾಯಲ್ಲಿ ಪಾಪಿ ಪಾಕಿಸ್ತಾನದ ಹೆಸರು ಬರಬಾರದು: ವಿ ಸೋಮಣ್ಣ
ಖರ್ಗೆ ಬಾಯಲ್ಲಿ ಪಾಪಿ ಪಾಕಿಸ್ತಾನದ ಹೆಸರು ಬರಬಾರದು: ವಿ ಸೋಮಣ್ಣ