AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ZIM: ಚೊಚ್ಚಲ ಪಂದ್ಯದಲ್ಲಿ ಶತಕ, ಈಗ ಟೀಂ ಇಂಡಿಯಾ ನಾಯಕ; ಜಿಂಬಾಬ್ವೆ ನೆಲದಲ್ಲಿ ಕನ್ನಡಿಗನ ಕಮಾಲ್

KL Rahul: ರಾಹುಲ್ ತಮ್ಮ ಚೊಚ್ಚಲ ಏಕದಿನ ಪಂದ್ಯದಲ್ಲೇ ಅದ್ಭುತ ಶತಕವನ್ನು ಗಳಿಸುವ ಮೂಲಕ ಇತಿಹಾಸವನ್ನು ಸೃಷ್ಟಿಸಿದರು. ಇದುವರೆಗೆ ಈ ಸಾಧನೆ ಮಾಡಿದ ಏಕೈಕ ಭಾರತೀಯ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೂ ಕೂಡ  ಪಾತ್ರರಾಗಿದ್ದಾರೆ.

IND vs ZIM: ಚೊಚ್ಚಲ ಪಂದ್ಯದಲ್ಲಿ ಶತಕ, ಈಗ ಟೀಂ ಇಂಡಿಯಾ ನಾಯಕ; ಜಿಂಬಾಬ್ವೆ ನೆಲದಲ್ಲಿ ಕನ್ನಡಿಗನ ಕಮಾಲ್
Team India
TV9 Web
| Edited By: |

Updated on: Aug 15, 2022 | 5:18 PM

Share

ಇನ್ನು ಮೂರು ದಿನಗಳಲ್ಲಿ ಭಾರತ-ಜಿಂಬಾಬ್ವೆ (India-Zimbabwe) ಮುಖಾಮುಖಿ ಪ್ರಾರಂಭವಾಗುತ್ತದೆ. ಕೆಎಲ್ ರಾಹುಲ್ (KL Rahul) ನಾಯಕತ್ವದಲ್ಲಿ ಭಾರತ ತಂಡ ಜಿಂಬಾಬ್ವೆ ತಲುಪಿದ್ದು, ಆಗಸ್ಟ್ 18 ರಿಂದ ಮೂರು ಏಕದಿನ ಪಂದ್ಯಗಳ ಸರಣಿ ಆರಂಭವಾಗಲಿದೆ. ಈ ಸರಣಿಯೊಂದಿಗೆ 6 ವರ್ಷಗಳ ಕಾಯುವಿಕೆಯೂ ಕೊನೆಗೊಳ್ಳಲಿದೆ. ಭಾರತ ಕೊನೆಯದಾಗಿ 6 ​​ವರ್ಷಗಳ ಹಿಂದೆ 2016 ರಲ್ಲಿ ಜಿಂಬಾಬ್ವೆ ಪ್ರವಾಸ ಮಾಡಿತು. ಅಂದಿನಿಂದ ಎರಡೂ ತಂಡಗಳಲ್ಲಿ ಬಹಳಷ್ಟು ಬದಲಾವಣೆ ಆಗಿದೆ. ಅಂತಹ ಪರಿಸ್ಥಿತಿಯಲ್ಲಿ ಈ ಎರಡು ಸರಣಿಗಳಲ್ಲಿ ಯಾವ ಆಟಗಾರರು ಭಾಗವಾಗಿದ್ದಾರೆ ಎಂಬುದನ್ನು ತಿಳಿದುಕೊಳ್ಳುವುದು ಮುಖ್ಯವಾಗಿದೆ.

6 ವರ್ಷಗಳ ಹಿಂದೆಯೂ ಕೊಹ್ಲಿ-ರೋಹಿತ್ ಇರಲಿಲ್ಲ

ಭಾರತ ಕೊನೆಯದಾಗಿ ಜೂನ್ 2016 ರಲ್ಲಿ ಜಿಂಬಾಬ್ವೆ ಪ್ರವಾಸ ಕೈಗೊಂಡಿತ್ತು. ಆಗ ಮಹೇಂದ್ರ ಸಿಂಗ್ ಧೋನಿ ಟೀಮ್ ಇಂಡಿಯಾದ ನಾಯಕರಾಗಿದ್ದರು. ಅವರ ನಾಯಕತ್ವದಲ್ಲಿ ಭಾರತ ತಂಡವು ಮೂರು ಏಕದಿನ ಮತ್ತು ಮೂರು T20 ಪಂದ್ಯಗಳಿಗೆ ಈ ಪ್ರವಾಸವನ್ನು ಕೈಗೊಂಡಿತು. ಆ ಪ್ರವಾಸಕ್ಕೂ ಈಗಿನ ಪ್ರವಾಸಕ್ಕೂ ಖಂಡಿತ ಸಾಮ್ಯತೆ ಇದೆ. ಆ ವೇಳೆ ಟೀಂ ಇಂಡಿಯಾದ ಪ್ರಮುಖ ಆಟಗಾರರಿಗೂ ವಿಶ್ರಾಂತಿ ನೀಡಲಾಗಿತ್ತು. ನಾಯಕ ಧೋನಿ ಹೊರತುಪಡಿಸಿ ಯಾವುದೇ ಹಿರಿಯ ಆಟಗಾರ ಈ ಪ್ರವಾಸದ ಭಾಗವಾಗಿರಲಿಲ್ಲ. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಭುವನೇಶ್ವರ್ ಕುಮಾರ್, ರವೀಂದ್ರ ಜಡೇಜಾ ಮತ್ತು ರವಿಚಂದ್ರನ್ ಅಶ್ವಿನ್ ಅವರಂತಹ ಆಟಗಾರರಿಗೆ ಆ ಪ್ರವಾದಲ್ಲಿ ವಿಶ್ರಾಂತಿ ನೀಡಲಾಗಿತ್ತು.

ಇದನ್ನೂ ಓದಿ
Image
IND vs ZIM: ಏಕದಿನ ಸರಣಿಯಲ್ಲಿ ಭಾರತಕ್ಕೆ ಸವಾಲೊಡ್ಡುವ ಜಿಂಬಾಬ್ವೆ ತಂಡದ ಐವರು ಕ್ರಿಕೆಟಿಗರಿವರು
Image
IND vs ZIM: ಏಕದಿನ ಸರಣಿಗಾಗಿ ಜಿಂಬಾಬ್ವೆಗೆ ಹಾರಿದ ಟೀಂ ಇಂಡಿಯಾ; DSLR ಕ್ಯಾಮರಾ ಖರೀದಿಸಿ ಎಂದ ನೆಟ್ಟಿಗರು
Image
IND vs ZIM: ಜಿಂಬಾಬ್ವೆ ನೆಲದಲ್ಲಿ ಭಾರತದ ಪ್ರದರ್ಶನ ಹೇಗಿದೆ ಗೊತ್ತಾ? ಇದು ಅಂಕಿ ಅಂಶ ಹೇಳಿದ ಸತ್ಯ

ಬುಮ್ರಾ-ಚಾಹಲ್ ಆಗ ಹೊಸ ಮುಖಗಳು

ಆ ಸಮಯದಲ್ಲಿ ತಂಡದಲ್ಲಿ ಸೇರಿಸಲಾದ ಅನೇಕ ಆಟಗಾರರು ಇಂದು ಟೀಂ ಇಂಡಿಯಾದ ಪ್ರಮುಖ ಆಟಗಾರರಾಗಿ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ದೊಡ್ಡ ಹೆಸರುಗಳಾಗಿದ್ದಾರೆ. ಉದಾಹರಣೆಗೆ, ಜಸ್ಪ್ರೀತ್ ಬುಮ್ರಾ, ಯುಜ್ವೇಂದ್ರ ಚಹಾಲ್ ಅವರಂತಹ ಆಟಗಾರರು ತಂಡದಲ್ಲಿ ಪ್ರಮುಖ ಬೌಲರ್​ಗಳಾಗಿದ್ದಾರೆ. ಅಂಬಟಿ ರಾಯುಡು, ಮನೀಶ್ ಪಾಂಡೆ ಮತ್ತು ಕೇದಾರ್ ಜಾಧವ್ ಅವರಂತಹ ಆಟಗಾರರು ಸಹ ಭಾರತ ತಂಡದಲ್ಲಿ ಸಾಕಷ್ಟು ಸಮಯವನ್ನು ಕಳೆದಿದ್ದಾರೆ. ಆದರೆ ಆ ಸಮಯದಲ್ಲಿ ಟೀಮ್ ಇಂಡಿಯಾದಲ್ಲಿ ಹೆಚ್ಚು ವಯಸ್ಸಾಗಿಲ್ಲದ ಮತ್ತು ಆ ಪ್ರವಾಸದ ಭಾಗವಾಗಿದ್ದ ಇನ್ನೂ ಇಬ್ಬರು ಆಟಗಾರರಿದ್ದಾರೆ. ಈ ಇಬ್ಬರೂ ಆಟಗಾರರು ಈಗ ಟೀಮ್ ಇಂಡಿಯಾದ ಪ್ರಸ್ತುತ ಮತ್ತು ಭವಿಷ್ಯದ ಸ್ಟಾರ್ ಆಗಿದ್ದಾರೆ. ಅವರೆಂದರೆ- ಕೆಎಲ್ ರಾಹುಲ್ ಮತ್ತು ಅಕ್ಷರ್ ಪಟೇಲ್.

ರಾಹುಲ್- ಅಕ್ಷರ್​ಗೆ ಸ್ಮರಣೀಯ ಸರಣಿ

6 ವರ್ಷಗಳಲ್ಲಿ ಹೊಸ ಮುಖದಿಂದ ಇಲ್ಲಿಯವರೆಗೆ ಜಿಂಬಾಬ್ವೆಗೆ ನಾಯಕನಾಗಿ ಹೋಗಿರುವ ಕೆಎಲ್ ರಾಹುಲ್ ಅವರಿಗೆ ಈ ಪ್ರವಾಸವು ತುಂಬಾ ವಿಶೇಷವಾಗಿದೆ. ಅವರು 2016 ರಲ್ಲಿ ಜಿಂಬಾಬ್ವೆ ಪ್ರವಾಸದಿಂದ ODI ಮತ್ತು T20 ಕ್ರಿಕೆಟ್‌ನಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು. ರಾಹುಲ್ ತಮ್ಮ ಚೊಚ್ಚಲ ಏಕದಿನ ಪಂದ್ಯದಲ್ಲೇ ಅದ್ಭುತ ಶತಕವನ್ನು ಗಳಿಸುವ ಮೂಲಕ ಇತಿಹಾಸವನ್ನು ಸೃಷ್ಟಿಸಿದರು. ಇದುವರೆಗೆ ಈ ಸಾಧನೆ ಮಾಡಿದ ಏಕೈಕ ಭಾರತೀಯ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೂ ಕೂಡ  ಪಾತ್ರರಾಗಿದ್ದಾರೆ. ಅಂದಿನಿಂದ, ರಾಹುಲ್ 42 ಪಂದ್ಯಗಳಲ್ಲಿ 46 ರ ಸರಾಸರಿಯಲ್ಲಿ 5 ಶತಕ ಮತ್ತು 10 ಅರ್ಧ ಶತಕಗಳೊಂದಿಗೆ 1634 ರನ್ ಗಳಿಸಿದ್ದಾರೆ.

ಅದೇ ಸಮಯದಲ್ಲಿ, ಎಡಗೈ ಸ್ಪಿನ್-ಆಲ್-ರೌಂಡರ್ ಅಕ್ಷರ್ ಪಟೇಲ್ ತಂಡದಲ್ಲಿ ತನ್ನ ಸ್ಥಾನವನ್ನು ಸಂಪೂರ್ಣವಾಗಿ ಭದ್ರಪಡಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಆದರೆ ಅವರು 2016 ರ ಸುಮಾರಿಗೆ ನಿರಂತರವಾಗಿ ODI ತಂಡದ ಭಾಗವಾಗಿದ್ದರು. ಅಕ್ಷರ್ ಇದುವರೆಗೆ 22 ಏಕದಿನ ಪಂದ್ಯಗಳಲ್ಲಿ 28 ವಿಕೆಟ್ ಪಡೆದು 91 ರನ್ ಗಳಿಸಿದ್ದಾರೆ. ಆದಾಗ್ಯೂ, 2017 ರ ನಂತರ ಅವರು ಸುಮಾರು 4 ವರ್ಷಗಳ ಕಾಲ ತಂಡದಿಂದ ಹೊರಗಿದ್ದಿದ್ದು, ಈಗ ತಂಡಕ್ಕೆ ಮರಳಿದ್ದಾರೆ. ಅಕ್ಷರ್ ಇದುವರೆಗೆ 41 ಪಂದ್ಯಗಳಲ್ಲಿ 47 ವಿಕೆಟ್ ಪಡೆದಿದ್ದಾರೆ. ಆದರೆ ಈತ್ತೀಚೆಗೆ ಬ್ಯಾಟಿಂಗ್‌ನಲ್ಲಿ ಅಬ್ಬರಿಸುತ್ತಿರುವ ಅಕ್ಷರ್, ವಿಂಡೀಸ್ ಪ್ರವಾದಲ್ಲಿ ಅರ್ಧಶತಕ ಸೇರಿದಂತೆ 266 ರನ್ ಗಳಿಸಿದ್ದರು.

ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!