AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ZIM: ಹರಾರೆಯಲ್ಲಿ ದೀರ್ಘ ಸ್ನಾನ ಮಾಡಲು ಭಾರತೀಯ ಆಟಗಾರರಿಗೆ ನಿಷೇಧ..!

IND vs ZIM:

IND vs ZIM: ಹರಾರೆಯಲ್ಲಿ ದೀರ್ಘ ಸ್ನಾನ ಮಾಡಲು ಭಾರತೀಯ ಆಟಗಾರರಿಗೆ ನಿಷೇಧ..!
Team India
TV9 Web
| Edited By: |

Updated on: Aug 16, 2022 | 2:55 PM

Share

India vs Zimbabwe: ಜಿಂಬಾಬ್ವೆ ವಿರುದ್ದದ ಸರಣಿಗಾಗಿ (IND vs ZIM) ಟೀಮ್ ಇಂಡಿಯಾ (Team India) ಹರಾರೆಗೆ ಬಂದಿಳಿದಿದೆ. ಮೂರು ಪಂದ್ಯಗಳ ಏಕದಿನ ಸರಣಿ ಆಗಸ್ಟ್ 18 ರಿಂದ ಆರಂಭವಾಗಲಿದ್ದು, ಅದಕ್ಕೂ ಮುನ್ನ ಭಾರತೀಯ ಆಟಗಾರರಿಗೆ ಸ್ನಾನದ ವಿಷಯವಾಗಿ ಬಿಸಿಸಿಐ ಖಡಕ್ ಸೂಚನೆಯೊಂದನ್ನು ನೀಡಿದೆ. ಈ ಸೂಚನೆಯಲ್ಲಿ ಅನಿವಾರ್ಯತೆಯಿದ್ದಾಗ ಮಾತ್ರ ಸ್ನಾನ ಮಾಡುವಂತೆ ತಿಳಿಸಲಾಗಿದೆ. ಅಷ್ಟೇ ಅಲ್ಲದೆ ದೀರ್ಘಕಾಲ ಸ್ನಾನ ಮಾಡುವುದನ್ನು ನಿಷೇಧಿಸಲಾಗಿದೆ. ಇಂತಹದೊಂದು ಆದೇಶ ಹೊರಡಿಸಲು ಮುಖ್ಯ ಕಾರಣ ಜಿಂಬಾಬ್ವೆ ರಾಜಧಾನಿ ಹರಾರೆಯಲ್ಲಿನ ತೀವ್ರ ನೀರಿನ ಕೊರತೆ.

ಹರಾರೆಯ ಹಲವು ಪ್ರದೇಶಗಳು ಕುಡಿಯುವ ನೀರಿನ ಸಮಸ್ಯೆಯನ್ನು ಎದುರಿಸುತ್ತಿದೆ. ಇಂತಹ ಸಂದರ್ಭಗಳಲ್ಲಿ ನೀರನ್ನು ವಿನಾಕಾರಣ ಪೋಲು ಮಾಡದಂತೆ ಬಿಸಿಸಿಐ ತಿಳಿಸಿದೆ. ಸಾಮಾನ್ಯವಾಗಿ ಆಟಗಾರರು ಒತ್ತಡದ ಸಂದರ್ಭಗಳಲ್ಲಿ ಶವರ್ ಕೆಳಗೆ ನಿಂತುಕೊಳ್ಳುವ ಅಭ್ಯಾಸವಿದೆ. ಅದರಲ್ಲೂ ಔಟಾಗಿ ಬಂದಂತಹ ಸಂದರ್ಭಗಳಲ್ಲೂ ಕೆಲ ಆಟಗಾರರು ಶವರ್ ಕೆಳಗೆ ನಿಂತು ಒತ್ತಡವನ್ನು ನಿಯಂತ್ರಿಸಲು ಮುಂದಾಗುತ್ತಾರೆ. ಇದೇ ಕಾರಣದಿಂದಾಗಿ ಅನಿವಾರ್ಯತೆಯಿದ್ದಾಗ ಮಾತ್ರ ಆಟಗಾರರು ಸ್ನಾನ ಮಾಡುವಂತೆ ಬಿಸಿಸಿಐ ಸೂಚಿಸಿದೆ.

ವರದಿಗಳ ಪ್ರಕಾರ ನಗರದ ಜಿಂಬಾಬ್ವೆ ರಾಜಧಾನಿಯ ಹಲವು ಪ್ರದೇಶಗಳಲ್ಲಿ ನೀರಿಲ್ಲ. ಕಳೆದ 3-4 ದಿನಗಳಿಂದ ಜನರು ಕುಡಿಯುವ ನೀರಿನ ಸಮಸ್ಯೆಯನ್ನೂ ಎದುರಿಸುತ್ತಿದ್ದಾರೆ. ಹರಾರೆಯಲ್ಲಿನ ಈ ಸಮಸ್ಯೆಯನ್ನು ಪರಿಗಣಿಸಿ ಬಿಸಿಸಿಐ ಆಟಗಾರರಿಗೆ ಶೀಘ್ರ ಸ್ನಾನ ಮುಗಿಸಬೇಕೆಂದು ತಾಕೀತು ಮಾಡಿದೆ. ಅಲ್ಲದೆ ಈ ಮೂಲಕ ನೀರನ್ನು ಉಳಿಸುವಂತೆ ಕೆಎಲ್ ರಾಹುಲ್ ಪಡೆಗೆ ಸಲಹೆ ನೀಡಿದೆ.

ಇದನ್ನೂ ಓದಿ
Image
Team India: 7 ತಿಂಗಳಲ್ಲಿ 7 ನಾಯಕರು: ವಿಶೇಷ ದಾಖಲೆ ಬರೆದ ಟೀಮ್ ಇಂಡಿಯಾ
Image
ಸಚಿನ್, ಧೋನಿಗೂ ಸಿಕ್ಕಿಲ್ಲ ಈ ಗೌರವ: ಇಂಗ್ಲೆಂಡ್ ಕ್ರಿಕೆಟ್ ಸ್ಟೇಡಿಯಂಗೆ ಭಾರತೀಯ ಕ್ರಿಕೆಟಿಗನ ಹೆಸರು..!
Image
Cheteshwar Pujara: ಒಟ್ಟು 997 ರನ್​: ಕೌಂಟಿ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆದ ಪೂಜಾರ
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಹರಾರೆಯಲ್ಲಿ ನೀರಿನ ಸಮಸ್ಯೆ ತೀವ್ರವಾಗಿದೆ. ಈ ಬಗ್ಗೆ ಆಟಗಾರರಿಗೆ ಮಾಹಿತಿ ನೀಡಲಾಗಿದೆ. ನೀರು ಪೋಲಾಗುವುದನ್ನು ತಪ್ಪಿಸುವಂತೆ ಮನವಿ ಮಾಡಲಾಗಿದೆ. ಅಲ್ಲದೆ, ಸ್ನಾನಕ್ಕೆ ಹೆಚ್ಚು ನೀರು ಬಳಸದಂತೆ ಮನವಿ ಮಾಡಿದ್ದೇವೆ. ಇದಲ್ಲದೆ, ಹರಾರೆಯಲ್ಲಿ ಯಾವುದೇ ಆಟಗಾರರಿಗೂ ಪೂಲ್ ಸೆಷನ್ ಕೂಡ ನೀಡಲಾಗುತ್ತಿಲ್ಲ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಟೀಮ್ ಇಂಡಿಯಾ ವಿದೇಶಿ ಪ್ರವಾಸದಲ್ಲಿ ನೀರಿನ ಸಮಸ್ಯೆಯನ್ನು ಎದುರಿಸುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ 2018 ರ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಭಾರತ ತಂಡ ಇಂತಹದ್ದೇ ಸಮಸ್ಯೆ ಎದುರಿಸಿತ್ತು. ಕೇಪ್ ಟೌನ್ ನ ಹಲವು ಪ್ರದೇಶಗಳಲ್ಲಿ ನೀರಿನ ಕೊರತೆ ಉಂಟಾದಾಗ, ಆಗಲೂ ಬಿಸಿಸಿಐ ನೀರನ್ನು ಸರಿಯಾಗಿ ಬಳಸಿಕೊಳ್ಳುವಂತೆ ಆಟಗಾರರಿಗೆ ಸೂಚಿಸಿತ್ತು. ಇದೀಗ ಹರಾರೆಯ ನೀರಿನ ಸಮಸ್ಯೆಯು ಅತ್ಯಂತ ಕೆಟ್ಟ ಹಂತದಲ್ಲಿದೆ. ಇಂತಹ ಪರಿಸ್ಥಿತಿಯಲ್ಲಿ ಆಟಗಾರರು ಜವಾಬ್ದಾರಿಯುತವಾಗಿ ನೀರನ್ನು ಬಳಸುವಂತೆ ಬಿಸಿಸಿಐ ಆಟಗಾರರಲ್ಲಿ ಮನವಿ ಮಾಡಿದೆ.

ಭಾರತ ಮತ್ತು ಜಿಂಬಾಬ್ವೆ ನಡುವಿನ ಏಕದಿನ ಸರಣಿ ಆಗಸ್ಟ್ 18 ರಿಂದ ಆರಂಭವಾಗಲಿದ್ದು, ಎರಡನೇ ಪಂದ್ಯ ಆಗಸ್ಟ್ 20ರಂದು ನಡೆಯಲಿದೆ. ಮೂರನೇ ಏಕದಿನ ಪಂದ್ಯ ಆಗಸ್ಟ್ 22 ರಂದು ನಡೆಯಲಿದೆ. ಈ ಮೂರು ಪಂದ್ಯಗಳು ಹರಾರೆಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದ್ದು, ಹೀಗಾಗಿ ಇನ್ನೊಂದು ವಾರ ಸ್ನಾನದ ವೇಳೆ ನೀರು ಪೋಲಾಗುವುದನ್ನು ತಡೆಯಲು ಆಟಗಾರರಿಗೆ ಬಿಸಿಸಿಐ ಸೂಚಿಸಿದೆ.

ಜಿಂಬಾಬ್ವೆ ಸರಣಿಗೆ ಭಾರತ ತಂಡ (India Squad): ಕೆಎಲ್ ರಾಹುಲ್ (ನಾಯಕ) ಶಿಖರ್ ಧವನ್ (ಉಪ ನಾಯಕ), ರುತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ಅವೇಶ್ ಖಾನ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್ , ದೀಪಕ್ ಚಹಾರ್, ಶಹಬಾಜ್ ಅಹ್ಮದ್.

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್