AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂವರು ಹೊಸಬರ ಎಂಟ್ರಿ: ಹೀಗಿದೆ ಟೀಮ್ ಇಂಡಿಯಾ

India vs Zimbabwe: ಭಾರತ ಮತ್ತು ಝಿಂಬಾಬ್ವೆ ನಡುವಣ ಸರಣಿಯು ಗುರುವಾರದಿಂದ ಆರಂಭವಾಗಲಿದೆ. ಹರಾರೆಯಲ್ಲಿ ಜರುಗಲಿರುವ ಈ ಸರಣಿಯಲ್ಲಿ ಒಟ್ಟು ಮೂರು ಪಂದ್ಯಗಳನ್ನಾಡಲಾಗುತ್ತದೆ. ಈ ಸರಣಿಯ ಮೊದಲ ಮ್ಯಾಚ್ ಜುಲೈ 23 ರಂದು ನಡೆದರೆ, ದ್ವಿತೀಯ ಪಂದ್ಯ ಜುಲೈ 25 ರಂದು ಜರುಗಲಿದೆ. ಇನ್ನು ಜುಲೈ 26 ರಂದು ಮೂರನೇ ಪಂದ್ಯ ನಡೆಯಲಿದೆ.

ಮೂವರು ಹೊಸಬರ ಎಂಟ್ರಿ: ಹೀಗಿದೆ ಟೀಮ್ ಇಂಡಿಯಾ
Team IndiaImage Credit source: Getty Images
ಝಾಹಿರ್ ಯೂಸುಫ್
|

Updated on: Jul 21, 2026 | 7:27 AM

Share

ಭಾರತ ಮತ್ತು ಝಿಂಬಾಬ್ವೆ ನಡುವಣ ಮೂರು ಮ್ಯಾಚ್​ಗಳ ಟಿ20 ಸರಣಿಯು ಜುಲೈ 23 ರಿಂದ ಶುರುವಾಗಲಿದೆ. ಈ ಸರಣಿಗಾಗಿ 15 ಸದಸ್ಯರ ಬಲಿಷ್ಠ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗಿದೆ. ಈ ತಂಡವನ್ನು ಶ್ರೇಯಸ್ ಅಯ್ಯರ್ ಮುನ್ನಡೆಸಲಿದ್ದು, ತಿಲಕ್ ವರ್ಮಾ ಅವರಿಗೆ ಉಪನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಈ ತಂಡದಿಂದ ಹಿರಿಯ ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್ ಅವರನ್ನು ತಂಡದಿಂದ ಕೈಬಿಡಲಾಗಿದೆ. ಅವರ ಬದಲಿಗೆ ವಿಕೆಟ್ ಕೀಪರ್ ಬ್ಯಾಟರ್​ ಪ್ರಭ್​ಸಿಮ್ರಾನ್​ ಸಿಂಗ್​ ಅವರನ್ನು ಆಯ್ಕೆ ಮಾಡಲಾಗಿದೆ.

ಮೂವರಿಗೆ ಚೊಚ್ಚಲ ಅವಕಾಶ!

ಅಂತಾರಾಷ್ಟ್ರೀಯ ಕ್ರಿಕೆಟ್ ಜಗತ್ತಿನಲ್ಲಿ ಇತ್ತೀಚೆಗಷ್ಟೇ ಅತಿ ಕಿರಿಯ ವಯಸ್ಸಿನಲ್ಲಿ ಪಾದಾರ್ಪಣೆ ಮಾಡಿ ಇತಿಹಾಸ ನಿರ್ಮಿಸಿದ್ದ ಯುವ ಆಟಗಾರ ವೈಭವ್ ಸೂರ್ಯವಂಶಿ ಝಿಂಬಾಬ್ವೆ ಪ್ರವಾಸದಲ್ಲೂ ತಮ್ಮ ಸ್ಥಾನವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಇದರೊಂದಿಗೆ ದೇಶಿ ಕ್ರಿಕೆಟ್ ಹಾಗೂ ಐಪಿಎಲ್‌ನಲ್ಲಿ ಸತತವಾಗಿ ಅತ್ಯುತ್ತಮ ಪ್ರದರ್ಶನ ನೀಡುತ್ತಾ ಬಂದಿರುವ ಮೂವರು ಯುವ ಆಟಗಾರರಿಗೆ ಮೊದಲ ಬಾರಿಗೆ ಭಾರತ ಟಿ20 ತಂಡದಲ್ಲಿ ಸ್ಥಾನ ಲಭಿಸಿದೆ.

  • ಪ್ರಭ್‌ಸಿಮ್ರಾನ್ ಸಿಂಗ್: ಪಂಜಾಬ್ ಕಿಂಗ್ಸ್ ಪರ ಅಬ್ಬರಿಸಿದ್ದ ಸ್ಫೋಟಕ ವಿಕೆಟ್ ಕೀಪರ್ ಬ್ಯಾಟರ್ ಪ್ರಭ್‌ಸಿಮ್ರಾನ್ ಸಿಂಗ್ ಈ ಬಾರಿ ಭಾರತ ಟಿ20 ತಂಡದಲ್ಲಿ ಕಾಣಿಸಿಕೊಂಡಿದ್ದಾರೆ.
  • ಯಶ್ ಠಾಕೂರ್: ಪಂಜಾಬ್ ಕಿಂಗ್ಸ್ ಪರ ಕಣಕ್ಕಿಳಿಯುತ್ತಿದ್ದ ಯುವ ವೇಗಿ ಯಶ್ ಠಾಕೂರ್ ಕೂಡ ಭಾರತ ಟಿ20 ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
  • ಅಶೋಕ್ ಶರ್ಮಾ: ಗುಜರಾತ್ ಟೈಟಾನ್ಸ್ ಪರ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ್ದ ಅಶೋಕ್ ಶರ್ಮಾ ಕೂಡ ಟೀಮ್ ಇಂಡಿಯಾದಲ್ಲಿ ಕಾಣಿಸಿಕೊಂಡಿದ್ದಾರೆ.

ಮಯಾಂಕ್ ಯಾದವ್ ಕಂಬ್ಯಾಕ್:

ಗಾಯದ ಸಮಸ್ಯೆಯಿಂದಾಗಿ ದೀರ್ಘಕಾಲ ಕ್ರಿಕೆಟ್ ಮೈದಾನದಿಂದ ದೂರವಿದ್ದ, ಗಂಟೆಗೆ 150+ ಕಿಮೀ ವೇಗದಲ್ಲಿ ಬೌಲಿಂಗ್ ಮಾಡುವ ಸಾಮರ್ಥ್ಯವಿರುವ ಎಕ್ಸ್‌ಪ್ರೆಸ್ ವೇಗಿ ಮಯಂಕ್ ಯಾದವ್ ಹಾಗೂ ಮತ್ತೊಬ್ಬ ಸ್ಫೋಟಕ ಫಿನಿಶರ್ ರಿಂಕು ಸಿಂಗ್ ತಂಡಕ್ಕೆ ಮರಳಿದ್ದಾರೆ. ಇವರೊಂದಿಗೆ ಐಪಿಎಲ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಪರ ಮಿಂಚಿದ್ದ ಆಲ್‌ರೌಂಡರ್ ಹರ್ಷ್ ದುಬೆ ಕೂಡ ತಂಡದಲ್ಲಿದ್ದಾರೆ. ಅದರಂತೆ ಝಿಂಬಾಬ್ವೆ ಸರಣಿಗೆ ಟೀಮ್ ಇಂಡಿಯಾ ಈ ಕೆಳಗಿನಂತಿದೆ.

ಭಾರತ ಟಿ20 ತಂಡ: ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ , ಇಶಾನ್ ಕಿಶನ್ (ವಿಕೆಟ್ ಕೀಪರ್), ಪ್ರಭ್‌ಸಿಮ್ರಾನ್ ಸಿಂಗ್ (ವಿಕೆಟ್ ಕೀಪರ್), ವೈಭವ್ ಸೂರ್ಯವಂಶಿ, ಅಭಿಷೇಕ್ ಶರ್ಮಾ, ಶಿವಂ ದುಬೆ, ಸೂರ್ಯಾಂಶ್ ಶೆಡ್ಗೆ, ರಿಂಕು ಸಿಂಗ್, ಹರ್ಷ್ ದುಬೆ, ವರುಣ್ ಚಕ್ರವರ್ತಿ, ಪ್ರಿನ್ಸ್ ಯಾದವ್, ಯಶ್ ಠಾಕೂರ್, ಅಶೋಕ್ ಶರ್ಮಾ ಮತ್ತು ಮಯಾಂಕ್ ಯಾದವ್.

ಭಾರತ ಮತ್ತು ಝಿಂಬಾಬ್ವೆ ಟಿ20 ಸರಣಿ ವೇಳಾಪಟ್ಟಿ:

  1. ಜುಲೈ 23 (ಗುರುವಾರ): ಮೊದಲನೇ ಟಿ20 ಪಂದ್ಯ.
  2. ಜುಲೈ 25 (ಶನಿವಾರ): ಎರಡನೇ ಟಿ20 ಪಂದ್ಯ.
  3. ಜುಲೈ 26 (ಭಾನುವಾರ): ಮೂರನೇ ಟಿ20 ಪಂದ್ಯ.

ಇದನ್ನೂ ಓದಿ: ಕ್ರಿಸ್ಟಿಯಾನೊ ರೊನಾಲ್ಡೊ ವಿಶ್ವಕಪ್ ಕನಸು ಭಗ್ನ

ಈ ಸರಣಿಯ ಎಲ್ಲಾ ಮೂರು ಪಂದ್ಯಗಳು ಝಿಂಬಾಬ್ವೆಯ ಐತಿಹಾಸಿಕ ಹರಾರೆ ಸ್ಪೋರ್ಟ್ಸ್ ಕ್ಲಬ್ ಮೈದಾನದಲ್ಲಿ ಭಾರತೀಯ ಕಾಲಮಾನ (IST) ಸಂಜೆ 4:30ಕ್ಕೆ ಆರಂಭವಾಗಲಿವೆ.

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ