AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ZIM: ಏಕದಿನ ಸರಣಿಗಾಗಿ ಜಿಂಬಾಬ್ವೆಗೆ ಹಾರಿದ ಟೀಂ ಇಂಡಿಯಾ; DSLR ಕ್ಯಾಮರಾ ಖರೀದಿಸಿ ಎಂದ ನೆಟ್ಟಿಗರು

IND vs ZIM: ಟೀಂ ಇಂಡಿಯಾ, ಜಿಂಬಾಬ್ವೆಯೊಂದಿಗೆ 3 ಏಕದಿನ ಸರಣಿಯನ್ನು ಆಡಲಿದೆ. ಆಗಸ್ಟ್ 18ರಂದು ಮೊದಲ ಪಂದ್ಯ ನಡೆಯಲಿದ್ದು, ಕೆಎಲ್ ರಾಹುಲ್ ನಾಯಕತ್ವದಲ್ಲಿ ತಂಡ ಮೈದಾನಕ್ಕಿಳಿಯಲಿದೆ.

IND vs ZIM: ಏಕದಿನ ಸರಣಿಗಾಗಿ ಜಿಂಬಾಬ್ವೆಗೆ ಹಾರಿದ ಟೀಂ ಇಂಡಿಯಾ; DSLR ಕ್ಯಾಮರಾ ಖರೀದಿಸಿ ಎಂದ ನೆಟ್ಟಿಗರು
IND vs ZIM
TV9 Web
| Updated By: ಪೃಥ್ವಿಶಂಕರ|

Updated on:Aug 13, 2022 | 3:19 PM

Share

ಏಷ್ಯಾಕಪ್ (Asia Cup) ಆರಂಭವಾಗಲು ಕೆಲವೇ ದಿನಗಳು ಬಾಕಿ ಇವೆ. ಟೀಂ ಇಂಡಿಯಾ ಆಟಗಾರರು ಕೂಡ ಏಷ್ಯಾಕಪ್ ತಯಾರಿ ಆರಂಭಿಸಿದ್ದಾರೆ. ಆದರೆ ಇದಕ್ಕೂ ಮುನ್ನ ಟೀಂ ಇಂಡಿಯಾ (Team India) ತನ್ನ ಕೊನೆಯ ಸರಣಿಗಾಗಿ ಜಿಂಬಾಬ್ವೆಗೆ ತೆರಳಿದೆ. ಏಷ್ಯಾಕಪ್‌ಗೂ ಮುನ್ನ ಟೀಂ ಇಂಡಿಯಾ ತನ್ನ ಕೊನೆಯ ಸರಣಿಯನ್ನು ಜಿಂಬಾಬ್ವೆ ವಿರುದ್ಧ ಆಡಲಿದ್ದು, ಹೀಗಾಗಿ ಭಾರತ ತಂಡ ಈ ಪ್ರವಾಸಕ್ಕೆ ಹೊರಟಿದೆ. ಟೀಂ ಇಂಡಿಯಾ ಆಟಗಾರರು ಪ್ರವಾಸಕ್ಕಾಗಿ ವಿಮಾನ ಏರಿರುವ ಫೋಟೋಗಳನ್ನು ಬಿಸಿಸಿಐ (BCCI) ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ.

ಕೆಎಲ್ ರಾಹುಲ್​ಗೆ ನಾಯಕತ್ವ

ಇದನ್ನೂ ಓದಿ
Image
IND vs ZIM: ಜಿಂಬಾಬ್ವೆ ನೆಲದಲ್ಲಿ ಭಾರತದ ಪ್ರದರ್ಶನ ಹೇಗಿದೆ ಗೊತ್ತಾ? ಇದು ಅಂಕಿ ಅಂಶ ಹೇಳಿದ ಸತ್ಯ
Image
IND vs ZIM: ಟೀಂ ಇಂಡಿಯಾ ನಾಯಕತ್ವದಲ್ಲಿ ಬದಲಾವಣೆ; ಶಿಖರ್ ಧವನ್ ಬದಲು ಕನ್ನಡಿಗನಿಗೆ ನಾಯಕತ್ವ
Image
Har Ghar Tiramga Anthem: ಹರ್ ಘರ್ ತಿರಂಗಾ ಸ್ಫೂರ್ತಿ ಗೀತೆಯಲ್ಲಿ ಕನ್ನಡ ಕಲರವ; ಮನೆ ಮನೆಗೂ ತ್ರಿವರ್ಣ ಎಂದ ರಾಹುಲ್

ಟೀಂ ಇಂಡಿಯಾ, ಜಿಂಬಾಬ್ವೆಯೊಂದಿಗೆ 3 ಏಕದಿನ ಸರಣಿಯನ್ನು ಆಡಲಿದೆ. ಆಗಸ್ಟ್ 18ರಂದು ಮೊದಲ ಪಂದ್ಯ ನಡೆಯಲಿದ್ದು, ಕೆಎಲ್ ರಾಹುಲ್ ನಾಯಕತ್ವದಲ್ಲಿ ತಂಡ ಮೈದಾನಕ್ಕಿಳಿಯಲಿದೆ. ರಾಹುಲ್ ಈ ಮೊದಲು ಆರಂಭಿಕ 15 ಜನರ ತಂಡದ ಭಾಗವಾಗಿರಲಿಲ್ಲ, ಆದರೆ ಫಿಟ್‌ನೆಸ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ನಂತರ, ಶಿಖರ್ ಧವನ್ ಬದಲಿಗೆ ಈ ಪ್ರವಾಸಕ್ಕೆ ತಂಡದ ನಾಯಕತ್ವವನ್ನು ಅವರಿಗೆ ವಹಿಸಲಾಗಿದೆ. ಹೀಗಾಗಿ ಶಿಖರ್ ಧವನ್ ಅವರನ್ನು ಉಪನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ. ದೀಪಕ್ ಚಹಾರ್ ಕೂಡ ಈ ಪ್ರವಾಸದಲ್ಲಿದ್ದು, ಅವರು ಕೂಡ ಸುಮಾರು ಒಂದು ವರ್ಷದ ನಂತರ ಮೈದಾನಕ್ಕಿಳಿಯಲ್ಲಿದ್ದಾರೆ.

ಫಿಟ್‌ನೆಸ್ ಪರೀಕ್ಷೆ ಪಾಸಾಗಬೇಕು ಚಹಾರ್‌

ಜಿಂಬಾಬ್ವೆ ಸರಣಿಯು ಚಹರ್‌ಗೆ ಒಂದು ರೀತಿಯ ಫಿಟ್‌ನೆಸ್ ಪರೀಕ್ಷೆಯಾಗಿದ್ದು, ಅವರು ಸಂಪೂರ್ಣವಾಗಿ ಫಿಟ್ ಆಗಿದ್ದಾರೆ ಎಂಬುದನ್ನು ಇಲ್ಲಿ ಸಾಬೀತುಪಡಿಸಬೇಕಾಗಿದೆ. ಚಹರ್ ಈ ಸರಣಿಯಲ್ಲಿ ಅದ್ಭುತ ಆಟ ಪ್ರದರ್ಶಿಸಿದರೆ ಟಿ 20 ವಿಶ್ವಕಪ್ 2022ಕ್ಕೆ ತಂಡದಲ್ಲಿ ಅವರ ಸ್ಥಾನ ಬಹುತೇಕ ಖಚಿತವಾಗುತ್ತದೆ. ಜೊತೆಗೆ, ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ಮುಖ್ಯಸ್ಥ ವಿವಿಎಸ್ ಲಕ್ಷ್ಮಣ್ ಕೂಡ ಆಟಗಾರರೊಂದಿಗೆ ಈ ಸರಣಿಗೆ ತೆರಳಿದ್ದು, ಅವರು ಈ ಸರಣಿಗೆ ತಂಡದ ಕೋಚ್ ಆಗಿ ಕಾರ್ಯನಿರ್ವಹಿಸಲಿದ್ದಾರೆ.

ಬಿಸಿಸಿಐಯನ್ನು ಟ್ರೋಲ್ ಮಾಡಿದ ನೆಟ್ಟಿಗರು

ಆಟಗಾರರು ಜಿಂಬಾಬ್ವೆಗೆ ಹಾರಿದ ಫೋಟೋಗಳನ್ನು ಇನ್ಸ್​ಟಾಗ್ರಾಂನಲ್ಲಿ ಪೋಸ್ಟ್​ ಮಾಡಿದ ಬಿಸಿಸಿಐಯನ್ನು ಟೀಂ ಇಂಡಿಯಾ ಅಭಿಮಾನಿಗಳು ಸಖತ್ ಟ್ರೋಲ್ ಮಾಡಿಲು ಆರಂಭಿಸಿದ್ದಾರೆ. ಇದಕ್ಕೆ ಕಾರಣ ಇನ್ಸ್​ಟಾಗ್ರಾಂನಲ್ಲಿ ಬಿಸಿಸಿಐ ಪೋಸ್ಟ್ ಮಾಡಿರುವ ಫೋಟೋಗಳು ತೀರ ಕಳಪೆ ಗುಣಮಟ್ಟದ್ದವುಗಳಾಗಿರುವುದು. ಸೋಶಿಯಲ್ ಮೀಡಿಯಾದಲ್ಲಿ ಟ್ರೋಲ್ ಮಾಡಿರುವ ನೆಟ್ಟಿಗರು ಒಂದು ಉತ್ತಮ ಗುಣಮಟ್ಟದ ಡಿಎಸ್‌ಎಲ್‌ಆರ್ ಕ್ಯಾಮರಾ ಖರೀದಿಸಿ, ನೀವು ವಿಶ್ವದ ಶ್ರೀಮಂತ ಕ್ರಿಕೆಟ್ ಮಂಡಳಿ ಎಂಬುದನ್ನು ಮರೆಯಬೇಡಿ ಎಂದು ಬಿಸಿಸಿಐ ಕಾಲೆಳೆದಿದ್ದಾರೆ.

ಜಿಂಬಾಬ್ವೆ ಸರಣಿಗೆ ಟೀಂ ಇಂಡಿಯಾ

ಕೆಎಲ್ ರಾಹುಲ್ (ನಾಯಕ), ಶಿಖರ್ ಧವನ್ (ಉಪನಾಯಕ), ರುತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಇಶಾನ್ ಕಿಶನ್, ಸಂಜು ಸ್ಯಾಮ್ಸನ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ಅವೇಶ್ ಖಾನ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್, ದೀಪಕ್ ಚಾಹರ್.

ಜಿಂಬಾಬ್ವೆ ತಂಡ

ರೆಗಿಸ್ ಚಕಬ್ವಾ (ನಾಯಕ), ತನಕಾ ಚಿವಂಗಾ, ಬ್ರಾಡ್ಲಿ ಇವಾನ್ಸ್, ಲ್ಯೂಕ್ ಜೊಂಗ್ವೆ, ರಿಯಾನ್ ಬರ್ಲ್, ಇನೊಸೆಂಟ್ ಕೈಯಾ, ಕೈಟಾನೊ ತಕುಡ್ಜ್ವಾನಾಶೆ, ಕ್ಲೈವ್ ಮದಂಡೆ, ವೆಸ್ಲಿ ಮಾಧೆವೆರೆ, ತಡಿವಾನಾಶೆ ಮರುಮಾನಿ, ಜಾನ್ ಮಸಾರಾ, ಟೋನಿ ಮುನ್ಯೊಂಗಾ, ರಿಚರ್ಡ್ ಎನ್​ಗರವ, ವಿಕ್ಟೋರ್, ಸಿಕಂದರ್ ರಾಜಾ, ಡೊನಾಲ್ಡ್ ತಿರಿಪಾನೊ

Published On - 3:19 pm, Sat, 13 August 22

ಪರಮೇಶ್ವರ್ ಸಿಎಂ ಆಗಬೇಕು ಎಂದ ಸಚಿವ ವಿ ಸೋಮಣ್ಣ
ಪರಮೇಶ್ವರ್ ಸಿಎಂ ಆಗಬೇಕು ಎಂದ ಸಚಿವ ವಿ ಸೋಮಣ್ಣ
‘ಸ್ಟುಪಿಡ್’, ‘... ಎಲಿಮೆಂಟ್’: ರಜತ್ ವಿರುದ್ಧ ಅಶ್ವಿನಿ ಕೆಂಡಾಮಂಡಲ
‘ಸ್ಟುಪಿಡ್’, ‘... ಎಲಿಮೆಂಟ್’: ರಜತ್ ವಿರುದ್ಧ ಅಶ್ವಿನಿ ಕೆಂಡಾಮಂಡಲ
ತಿರುವನಂತಪುರಂ ಕಾರ್ಪೊರೇಷನ್‌ ಫಲಿತಾಂಶದ ಬಳಿಕ ಬಿಜೆಪಿ ಕಾರ್ಯಕರ್ತರ ಸಂಭ್ರಮ
ತಿರುವನಂತಪುರಂ ಕಾರ್ಪೊರೇಷನ್‌ ಫಲಿತಾಂಶದ ಬಳಿಕ ಬಿಜೆಪಿ ಕಾರ್ಯಕರ್ತರ ಸಂಭ್ರಮ
ಜ 6ರಂದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್
ಜ 6ರಂದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್
ವೋಟ್ ಚೋರಿ ವಿರೋಧಿಸಿ ರಾಹುಲ್​​ ಗಾಂಧಿ ಪ್ರತಿಭಟನೆ: ಜೋಶಿ ಏನಂದ್ರು ನೋಡಿ
ವೋಟ್ ಚೋರಿ ವಿರೋಧಿಸಿ ರಾಹುಲ್​​ ಗಾಂಧಿ ಪ್ರತಿಭಟನೆ: ಜೋಶಿ ಏನಂದ್ರು ನೋಡಿ
ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ
ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ
ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ
ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ
‘ಗೌರಿ’ ಧಾರಾವಾಹಿಯಲ್ಲಿ ಬಿಗ್ ಟ್ವಿಸ್ಟ್​; ಆಗಸದಲ್ಲೇ ಮದುವೆ
‘ಗೌರಿ’ ಧಾರಾವಾಹಿಯಲ್ಲಿ ಬಿಗ್ ಟ್ವಿಸ್ಟ್​; ಆಗಸದಲ್ಲೇ ಮದುವೆ
ಸರಿ ನಿರ್ಧಾರ ಯಾವುದು? ತಪ್ಪು ಯಾವುದು? ಪಂಚಾಯ್ತಿ ವಿಷಯ ಹೇಳಿದ ಸುದೀಪ್
ಸರಿ ನಿರ್ಧಾರ ಯಾವುದು? ತಪ್ಪು ಯಾವುದು? ಪಂಚಾಯ್ತಿ ವಿಷಯ ಹೇಳಿದ ಸುದೀಪ್
ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದು ಕಾಂಪೌಂಡ್ ಗೇಟ್​​ಗೆ ಗುದ್ದಿದ BMTC ಬಸ್
ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದು ಕಾಂಪೌಂಡ್ ಗೇಟ್​​ಗೆ ಗುದ್ದಿದ BMTC ಬಸ್