AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ZIM: ಭಾರತ ವಿರುದ್ಧದ ಏಕದಿನ ಸರಣಿಗೆ ಜಿಂಬಾಬ್ವೆ ತಂಡ ಪ್ರಕಟ

IND vs ZIM: ಇದೇ ತಿಂಗಳು ಭಾರತ ಮತ್ತು ಜಿಂಬಾಬ್ವೆ ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದ್ದು, ಇದಕ್ಕಾಗಿ ಟೀಂ ಇಂಡಿಯಾ ಜಿಂಬಾಬ್ವೆ ಪ್ರವಾಸಕ್ಕೆ ತೆರಳಲಿದೆ. ಈ ಪ್ರವಾಸಕ್ಕೆ ಭಾರತ ತಂಡವನ್ನು ಈಗಾಗಲೇ ಪ್ರಕಟಿಸಲಾಗಿತ್ತು, ಇದೀಗ ಆತಿಥೇಯ ಜಿಂಬಾಬ್ವೆ ಕೂಡ ತಂಡವನ್ನು ಪ್ರಕಟಿಸಿದೆ.

IND vs ZIM: ಭಾರತ ವಿರುದ್ಧದ ಏಕದಿನ ಸರಣಿಗೆ ಜಿಂಬಾಬ್ವೆ ತಂಡ ಪ್ರಕಟ
TV9 Web
| Edited By: |

Updated on:Aug 11, 2022 | 10:58 PM

Share

ಬಾಂಗ್ಲಾದೇಶ ವಿರುದ್ಧದ ಅಮೋಘ ಪ್ರದರ್ಶನದ ಆಧಾರದ ಮೇಲೆ ಏಕದಿನ ಸರಣಿಯನ್ನು ಗೆದ್ದುಕೊಂಡಿರುವ ಜಿಂಬಾಬ್ವೆಯ ಕಣ್ಣು ಇದೀಗ ಭಾರತ ಕ್ರಿಕೆಟ್ ತಂಡದ ಮೇಲಿದೆ. ಇದೇ ತಿಂಗಳು ಭಾರತ ಮತ್ತು ಜಿಂಬಾಬ್ವೆ ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದ್ದು, ಇದಕ್ಕಾಗಿ ಟೀಂ ಇಂಡಿಯಾ ಜಿಂಬಾಬ್ವೆ ಪ್ರವಾಸಕ್ಕೆ ತೆರಳಲಿದೆ. ಈ ಪ್ರವಾಸಕ್ಕೆ ಭಾರತ ತಂಡವನ್ನು ಈಗಾಗಲೇ ಪ್ರಕಟಿಸಲಾಗಿತ್ತು, ಇದೀಗ ಆತಿಥೇಯ ಜಿಂಬಾಬ್ವೆ ಕೂಡ ತಂಡವನ್ನು ಪ್ರಕಟಿಸಿದೆ. ತಂಡವು ತಮ್ಮ ನಿಯಮಿತ ನಾಯಕ ಕ್ರೇಗ್ ಇರ್ವಿನ್ ಇಲ್ಲದೆ ಭಾರತ ವಿರುದ್ಧ ಅಖಾಡಕ್ಕಿಳಿಯಲಿದೆ. ಹೀಗಾಗಿ ತಂಡದ ನಾಯಕತ್ವವನ್ನು ರೆಗಿಸ್ ಚಕಬ್ವಾ ಅವರಿಗೆ ನೀಡಲಾಗಿದೆ.

ಜಿಂಬಾಬ್ವೆ ಕ್ರಿಕೆಟ್ ಮಂಡಳಿಯು ಆಗಸ್ಟ್ 11 ಗುರುವಾರದಂದು ಈ ಸರಣಿಗಾಗಿ 17 ಸದಸ್ಯರ ತಂಡವನ್ನು ಘೋಷಿಸಿದೆ. ಅದರ ನಾಯಕ ಇರ್ವಿನ್ ಹೊರತುಪಡಿಸಿ, ತಂಡವು ಬಿರುಗಾಳಿಯ ವೇಗದ ಬೌಲರ್ ಬ್ಲೆಸ್ಸಿಂಗ್ ಮುಜರ್ಬಾನಿ ಕೂಡ ಈ ಸರಣಿಯಿಂದ ಹೊರಗುಳಿದಿದ್ದಾರೆ. ಮಂಡಿರಜ್ಜು ಗಾಯದಿಂದ ಇರ್ವಿನ್ ಇನ್ನೂ ಚೇತರಿಸಿಕೊಂಡಿಲ್ಲ. ಮುಜರ್ಬಾನಿಗೆ ತೊಡೆಸಂದು ಸಮಸ್ಯೆ ಇದ್ದು, ಈ ಕಾರಣದಿಂದಾಗಿ ಅವರು ಭಾರತದ ವಿರುದ್ಧ ಆಡುತ್ತಿಲ್ಲ ಎಂದು ವರದಿಯಾಗಿದೆ.

ಈ ನಿಟ್ಟಿನಲ್ಲಿ ಜಿಂಬಾಬ್ವೆ ಕ್ರಿಕೆಟ್ ಆಯ್ಕೆಯಾದ ತಂಡ, ಗಾಯಗೊಂಡ ಆಟಗಾರರು ಹಾಗೂ ನೂತನ ನಾಯಕನ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ. ಈ ಕುರಿತು ವಿವರಣೆ ನೀಡಿರುವ ಮಂಡಳಿ, ನಿಯಮಿತ ನಾಯಕ ಕ್ರೇಗ್ ಇರ್ವಿನ್ ಅನುಪಸ್ಥಿತಿಯಲ್ಲಿ ರೆಗಿಸ್ ಚಕಬ್ವಾ ತಂಡವನ್ನು ಮುನ್ನಡೆಸಲಿದ್ದಾರೆ. ಮಂಡಿರಜ್ಜು ಗಾಯದಿಂದ ಇರ್ವಿನ್ ಇನ್ನೂ ಚೇತರಿಸಿಕೊಳ್ಳುತ್ತಿದ್ದಾರೆ. ಜಿಂಬಾಬ್ವೆ ಕೂಡ ಬ್ಲೆಸಿಂಗ್ ಮುಜರ್ಬಾನಿ, ತೆಂಡೈ ಚಾತ್ರಾ ಮತ್ತು ವೆಲ್ಲಿಂಗ್ಟನ್ ಮಸಕಡ್ಜಾ ಇಲ್ಲದೆ ಆಡಬೇಕಾಗುತ್ತದೆ. ಈ ಮೂವರು ಆಟಗಾರರು ಕೂಡ ಗಾಯದಿಂದ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಹೇಳಿಕೊಂಡಿದೆ.

ಜಿಂಬಾಬ್ವೆ ಇತ್ತೀಚೆಗೆ ಟಿ20 ಸರಣಿಯಲ್ಲಿ ಬಾಂಗ್ಲಾದೇಶವನ್ನು ಸೋಲಿಸಿತು ಮತ್ತು ನಂತರ ಏಕದಿನ ಸರಣಿಯಲ್ಲಿಯೂ ಸಹ ಸೋಲಿಸಿತು. ಇರ್ವಿನ್ ಈ ಟಿ20 ಸರಣಿಯಲ್ಲಿ ತಂಡದ ನಾಯಕರಾಗಿದ್ದರು, ಆದರೆ ಈ ಸರಣಿಯ ಬಳಿಕ ಇಂಜುರಿಗೆ ತುತ್ತಾಗಿದ್ದರು. ಇಂತಹ ಪರಿಸ್ಥಿತಿಯಲ್ಲಿ ಚಕಬ್ವಾ ಏಕದಿನ ಸರಣಿಯ ನಾಯಕತ್ವವನ್ನೂ ವಹಿಸಿ ತಂಡವನ್ನು 2-1 ಅಂತರದಲ್ಲಿ ಗೆಲುವಿನತ್ತ ಮುನ್ನಡೆಸಿದರು. ಈ ವೇಳೆ ಚಕಬ್ವಾ ಎರಡನೇ ಏಕದಿನ ಪಂದ್ಯದಲ್ಲೂ ಭರ್ಜರಿ ಶತಕ ಬಾರಿಸಿದ್ದರು.

Published On - 10:52 pm, Thu, 11 August 22

ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ