AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND-W vs SL-W: ಲಂಕಾ ವಿರುದ್ಧ ಟಾಸ್ ಗೆದ್ದ ಟೀಂ ಇಂಡಿಯಾ; ಪ್ಲೇಯಿಂಗ್ 11 ಹೀಗಿದೆ

IND-W vs SL-W T20: ಭಾರತ ಹಾಗೂ ಶ್ರೀಲಂಕಾ ಮಹಿಳಾ ತಂಡಗಳ ನಡುವಿನ T20 ಸರಣಿ ಆರಂಭವಾಗಿದೆ. ಏಕದಿನ ವಿಶ್ವಕಪ್ ಗೆದ್ದ ನಂತರ ಭಾರತದ ಮೊದಲ ಪಂದ್ಯ ಇದಾಗಿದ್ದು, ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ. ವಿಶಾಖಪಟ್ಟಣಂನಲ್ಲಿ ನಡೆಯುತ್ತಿರುವ ಈ ಪಂದ್ಯದೊಂದಿಗೆ ಭಾರತ ಮುಂದಿನ T20 ವಿಶ್ವಕಪ್‌ಗೆ ಸಿದ್ಧತೆಗಳನ್ನು ಪ್ರಾರಂಭಿಸಿದೆ. ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದೆ.

IND-W vs SL-W: ಲಂಕಾ ವಿರುದ್ಧ ಟಾಸ್ ಗೆದ್ದ ಟೀಂ ಇಂಡಿಯಾ; ಪ್ಲೇಯಿಂಗ್ 11 ಹೀಗಿದೆ
Ind W Vs Sl W
ಪೃಥ್ವಿಶಂಕರ
|

Updated on:Dec 21, 2025 | 6:52 PM

Share

ಭಾರತ ಹಾಗೂ ಶ್ರೀಲಂಕಾ ಮಹಿಳಾ ತಂಡಗಳು (India Women vs Sri Lanka Women) ನಡುವಿನ ಟಿ20 ಸರಣಿ ಇಂದಿನಿಂದ ಆರಂಭವಾಗಿದೆ. ಏಕದಿನ ವಿಶ್ವಕಪ್ ಪ್ರಶಸ್ತಿ ಗೆದ್ದ ನಂತರ ಭಾರತೀಯ ಮಹಿಳಾ ತಂಡ ಮೈದಾನಕ್ಕಿಳಿಯುತ್ತಿರುವುದು ಇದೇ ಮೊದಲು. ಹೀಗಾಗಿ ತಂಡದ ಪ್ರದರ್ಶನ ಹೇಗಿರಲಿದೆ ಎಂಬುದನ್ನು ನೋಡಲು ಅಭಿಮಾನಿಗಳು ಕಾತುರದಿಂದ ಕಾದು ಕುಳಿತಿದ್ದಾರೆ. ಉಭಯ ತಂಡಗಳ ನಡುವಿನ ಈ ಮೊದಲ ಪಂದ್ಯ ವಿಶಾಖಪಟ್ಟಣಂನಲ್ಲಿರುವ ACA-VDCA ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯದೊಂದಿಗೆ ಭಾರತೀಯ ಮಹಿಳಾ ತಂಡವು ಮುಂದಿನ ವರ್ಷ ನಡೆಯಲಿರುವ ಟಿ20 ವಿಶ್ವಕಪ್‌ಗೆ (T20 World Cup 2026) ತನ್ನ ಔಪಚಾರಿಕವಾಗಿ ಸಿದ್ಧತೆಗಳನ್ನು ಪ್ರಾರಂಭಿಸಿದೆ. ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದೆ.

ಟಾಸ್ ಗೆದ್ದ ಟೀಂ ಇಂಡಿಯಾ

ಮೇಲೆ ಹೇಳಿದಂತೆ ಶ್ರೀಲಂಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತೀಯ ಮಹಿಳಾ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು. ಹೀಗಾಗಿ ಶ್ರೀಲಂಕಾ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ. ಇನ್ನು ಟೀಂ ಇಂಡಿಯಾ ಪರ ವೈಷ್ಣವಿ ಶರ್ಮಾ ಭಾರತ ತಂಡಕ್ಕೆ ಪಾದಾರ್ಪಣೆ ಮಾಡಿದ್ದು, ಶ್ರೀಲಂಕಾ ವಿರುದ್ಧ ಆಡಲಿದ್ದಾರೆ.

ಯಾರು ಈ ವೈಷ್ಣವಿ ಶರ್ಮಾ?

ಮಧ್ಯಪ್ರದೇಶದ ಮತ್ತೊಬ್ಬ ಪ್ರತಿಭಾನ್ವಿತ ಆಟಗಾರ್ತಿ 19 ವರ್ಷದ ವೈಷ್ಣವಿ ಶರ್ಮಾ ಶ್ರೀಲಂಕಾ ವಿರುದ್ಧ ಅಂತಾರಾಷ್ಟ್ರೀಯ ಟಿ20ಗೆ ಪಾದಾರ್ಪಣೆ ಮಾಡಿದ್ದಾರೆ. ಈ ವರ್ಷದ ಆರಂಭದಲ್ಲಿ ಭಾರತ ಅಂಡರ್-19 ಮಹಿಳಾ ವಿಶ್ವಕಪ್ ವಿಜೇತ ತಂಡದಲ್ಲಿದ್ದ ವೈಷ್ಣವಿ ಅದ್ಭುತ ಪ್ರದರ್ಶನ ನೀಡಿದ್ದರು. ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಕೇವಲ 5 ರನ್‌ಗಳಿಗೆ 5 ವಿಕೆಟ್‌ಗಳನ್ನು ಪಡೆದು ಹ್ಯಾಟ್ರಿಕ್ ವಿಕೆಟ್ ಕೂಡ ಪಡೆದಿದ್ದರು. ಅಲ್ಲದೆ ಪಂದ್ಯಾವಳಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್​ ಕೂಡ ಆಗಿದ್ದರು. ಅಂದಿನಿಂದ ಅವರು ದೇಶೀಯ ಕ್ರಿಕೆಟ್‌ನಲ್ಲಿ ತಮ್ಮ ಅದ್ಭುತ ಫಾರ್ಮ್ ಅನ್ನು ಮುಂದುವರೆಸಿದ್ದಾರೆ. ಇನ್ನು ಸೀನಿಯರ್ ಮಹಿಳಾ ಟಿ20 ಟ್ರೋಫಿಯಲ್ಲಿ 9 ಇನ್ನಿಂಗ್ಸ್‌ಗಳನ್ನಾಡಿದ ವೈಷ್ಣವಿ 4.50 ಎಕಾನಮಿಯಲ್ಲಿ 21 ವಿಕೆಟ್‌ ಪಡೆಯುವ ಮೂಲಕ ಅತಿ ಹೆಚ್ಚು ವಿಕೆಟ್ ಪಡೆದವರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

ಭಾರತ ತಂಡದ ಪ್ಲೇಯಿಂಗ್ 11: ಸ್ಮೃತಿ ಮಂಧಾನ, ಶೆಫಾಲಿ ವರ್ಮಾ, ಜೆಮಿಮಾ ರಾಡ್ರಿಗಸ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ರಿಚಾ ಘೋಷ್ (ವಿಕೆಟ್ ಕೀಪರ್), ದೀಪ್ತಿ ಶರ್ಮಾ, ಅಮಂಜೋತ್ ಕೌರ್, ಅರುಂಧತಿ ರೆಡ್ಡಿ, ವೈಷ್ಣವಿ ಶರ್ಮಾ, ಕ್ರಾಂತಿ ಗೌಡ್, ಶ್ರೀ ಚರಣಿ.

ಶ್ರೀಲಂಕಾ ತಂಡ: ಚಾಮರಿ ಅಟಪಟ್ಟು (ನಾಯಕಿ), ಹಾಸಿನಿ ಪೆರೇರಾ, ಹರ್ಷಿತಾ ಸಮರವಿಕ್ರಮ, ವಿಶ್ಮಿ ಗುಣರತ್ನೆ, ನೀಲಾಕ್ಷಿಕಾ ಸಿಲ್ವಾ, ಕೌಶಿನಿ ನುತ್ತಯಂಗನಾ (ವಿಕೆಟ್ ಕೀಪರ್), ಕವಿಶಾ ದಿಲ್ಹಾರಿ, ಮಲ್ಕಿ ಮುದಾರ, ಇನೋಕಾ ರಣವೀರ, ಕಾವ್ಯಾ ಕವಿಂದಿ, ಶಶಿನಿ ಗಿಮ್ಹಾನಿ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:40 pm, Sun, 21 December 25

ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ