AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND-W vs SL-W: ಟಾಸ್ ಗೆದ್ದ ಶ್ರೀಲಂಕಾ; ಟೀಂ ಇಂಡಿಯಾದಲ್ಲಿ 2 ಬದಲಾವಣೆ

IND-W vs SL-W 4th T20: ಭಾರತ-ಶ್ರೀಲಂಕಾ ಮಹಿಳಾ ಟಿ20 ಸರಣಿಯ 4ನೇ ಪಂದ್ಯ ಇಂದು ತಿರುವನಂತಪುರದಲ್ಲಿ ನಡೆಯುತ್ತಿದೆ. 3-0 ಅಂತರದಲ್ಲಿ ಸರಣಿ ಗೆದ್ದ ಭಾರತಕ್ಕೆ ಇದು ಔಪಚಾರಿಕ ಪಂದ್ಯವಾದರೂ, ಮುಂಬರುವ ವಿಶ್ವಕಪ್ ದೃಷ್ಟಿಯಿಂದ ತಪ್ಪುಗಳನ್ನು ತಿದ್ದಿಕೊಳ್ಳಲು ಪ್ರಮುಖವಾಗಿದೆ. ಶ್ರೀಲಂಕಾ ಟಾಸ್ ಗೆದ್ದು ಭಾರತವನ್ನು ಮೊದಲು ಬ್ಯಾಟಿಂಗ್‌ಗೆ ಆಹ್ವಾನಿಸಿದೆ.

IND-W vs SL-W: ಟಾಸ್ ಗೆದ್ದ ಶ್ರೀಲಂಕಾ; ಟೀಂ ಇಂಡಿಯಾದಲ್ಲಿ 2 ಬದಲಾವಣೆ
Ind W Vs Sl W
ಪೃಥ್ವಿಶಂಕರ
|

Updated on:Dec 28, 2025 | 6:55 PM

Share

ಭಾರತ ಮತ್ತು ಶ್ರೀಲಂಕಾ ( India vs Sri Lanka) ಮಹಿಳಾ ತಂಡಗಳ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ನಾಲ್ಕನೇ ಪಂದ್ಯ ಇಂದು ತಿರುವನಂತಪುರದಲ್ಲಿ (Thiruvananthapuram) ನಡೆಯುತ್ತಿದೆ. ಹರ್ಮನ್‌ಪ್ರೀತ್ ಕೌರ್ (Harmanpreet Kaur) ನೇತೃತ್ವದ ಭಾರತ ತಂಡವು ಈಗಾಗಲೇ ಸರಣಿಯಲ್ಲಿ 3-0 ಮುನ್ನಡೆ ಸಾಧಿಸಿದ್ದು, ಸರಣಿಯನ್ನು ಕೈವಶಮಾಡಿಕೊಂಡಿದೆ. ಹೀಗಾಗಿನ ಉಳಿದಿರುವ ಎರಡು ಪಂದ್ಯಗಳು ಭಾರತ ತಂಡಕ್ಕೆ ಕೇವಲ ಔಪಚಾರಿಕವಾಗಿವೆ. ಆದಾಗ್ಯೂ ಮುಂಬರುವ ವಿಶ್ವಕಪ್ ದೃಷ್ಟಿಯಿಂದ ಟೀಂ ಇಂಡಿಯಾ ಯಾವ ಪಂದ್ಯವನ್ನು ನಿರ್ಲಕ್ಷಿಸುವಂತಿಲ್ಲ. ಆದ್ದರಿಂದ ಹರ್ಮನ್​ ಪಡೆ ಮೊದಲ ಮೂರು ಪಂದ್ಯಗಳಲ್ಲಿ ಮಾಡಿದ ಕೆಲವು ತಪ್ಪುಗಳನ್ನು ತಿದ್ದಿಕೊಳ್ಳಲು ಉಳಿದಿರುವ ಎರಡು ಪಂದ್ಯಗಳಲ್ಲಿ ಮಾಡಬೇಕಿದೆ.

ಟಾಸ್ ಗೆದ್ದ ಶ್ರೀಲಂಕಾ

ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ತಂಡವು ಆತಿಥೇಯರನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದೆ. ಈ ಸರಣಿಯಲ್ಲಿ ಲಂಕಾ ತಂಡ ಟಾಸ್ ಗೆದ್ದಿರುವುದು ಇದೇ ಮೊದಲು. ಮೊದಲ 3 ಪಂದ್ಯಗಳಲ್ಲಿ ಟಾಸ್ ಗೆದ್ದಿದ್ದ ಟೀಂ ಇಂಡಿಯಾ ಪಂದ್ಯವನ್ನು ಗೆದ್ದುಕೊಂಡಿತ್ತು. ಇದೀಗ ನಾಲ್ಕನೇ ಪಂದ್ಯದಲ್ಲಿ ಟಾಸ್ ಗೆದ್ದಿರುವ ಲಂಕಾ ಭಾರತವನ್ನು ಬ್ಯಾಟಿಂಗ್​ಗೆ ಆಹ್ವಾನಿಸಿದೆ. ಹಾಗೆಯೇ ಈ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ 2 ಬದಲಾವಣೆ ಮಾಡಲಾಗಿದ್ದು, ಜೆಮಿಮಾ ರೊಡ್ರಿಗಸ್ ಹಾಗೂ ಕ್ರಾಂತಿ ಗೌಡ್ ಈ ಪಂದ್ಯದಿಂದ ಹೊರಗುಳಿದಿದ್ದಾರೆ. ಹೀಗಾಗಿ ಅವರ ಬದಲಿಗೆ ಹರ್ಲೀನ್ ಡಿಯೋಲ್ ಮತ್ತು ಅರುಂಧತಿ ರೆಡ್ಡಿ ತಂಡದಲ್ಲಿ ಆಡುತ್ತಿದ್ದಾರೆ.

ಉಭಯ ತಂಡಗಳು

ಭಾರತ ತಂಡ: ಶಫಾಲಿ ವರ್ಮಾ, ಸ್ಮೃತಿ ಮಂಧಾನ, ಹರ್ಲೀನ್ ಡಿಯೋಲ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ರಿಚಾ ಘೋಷ್ (ವಿಕೆಟ್ ಕೀಪರ್), ದೀಪ್ತಿ ಶರ್ಮಾ, ಅಮಂಜೋತ್ ಕೌರ್, ವೈಷ್ಣವಿ ಶರ್ಮಾ, ಶ್ರೀ ಚರಣಿ, ರೇಣುಕಾ ಸಿಂಗ್ ಠಾಕೂರ್, ಅರುಂಧತಿ ರೆಡ್ಡಿ.

ಶ್ರೀಲಂಕಾ ತಂಡ: ಹಾಸಿನಿ ಪೆರೇರಾ, ಚಾಮರಿ ಅಟಾಪಟು (ನಾಯಕಿ), ಹರ್ಷಿತಾ ಸಮರವಿಕ್ರಮ, ಇಮೇಶಾ ದುಲಾನಿ, ನೀಲಾಕ್ಷಿಕಾ ಸಿಲ್ವಾ, ಕವಿಶಾ ದಿಲ್ಹಾರಿ, ಕೌಶಿನಿ ನುತ್ಯಂಗನಾ (ವಿಕೆಟ್ ಕೀಪರ್), ಮಲ್ಶಾ ಶೆಹಾನಿ, ನಿಮಾಶಾ ಮೀಪಗೆ, ಕಾವ್ಯಾ ಕವಿಂದಿ, ರಶ್ಮಿಕಾ ಸೆವ್ವಂಡಿ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:49 pm, Sun, 28 December 25

ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!
ಅಲ್ಲಾ ತೆಗೆದುಕೊಳ್ಳುವ ನಿರ್ಧಾರವೇ ಅಂತಿಮ: ಮುಫ್ತಿ
ಅಲ್ಲಾ ತೆಗೆದುಕೊಳ್ಳುವ ನಿರ್ಧಾರವೇ ಅಂತಿಮ: ಮುಫ್ತಿ
ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಮುಸ್ಲಿಂ ಮನೆಯಲ್ಲಿ ಪ್ರಸಾದ ವ್ಯವಸ್ಥೆ
ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಮುಸ್ಲಿಂ ಮನೆಯಲ್ಲಿ ಪ್ರಸಾದ ವ್ಯವಸ್ಥೆ