
ತ್ರಿಕೋನ ಸರಣಿಗಾಗಿ ಶ್ರೀಲಂಕಾ ಪ್ರವಾಸ ಮಾಡಿರುವ ಭಾರತ ಎ ತಂಡಕ್ಕೆ (India A team ) ಸತತ ಎರಡು ಸೋಲುಗಳ ಆಘಾತ ಎದುರಾಗಿದೆ. ಈ ಸರಣಿಯ ಮೊದಲ ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾ ತಂಡವನ್ನು ಮಣಿಸಿದ್ದ ತಿಲಕ್ ವರ್ಮಾ ನಾಯಕತ್ವದ ಭಾರತ ಎ ತಂಡ ಪ್ರವಾಸವನ್ನು ಗೆಲುವಿನೊಂದಿಗೆ ಆರಂಭಿಸಿತ್ತು. ಆದರೆ ಆ ಬಳಿಕ ನಡೆದ ಎರಡು ಪಂದ್ಯಗಳಲ್ಲಿ ಭಾರತ ಎ ತಂಡಕ್ಕೆ ಸೋಲಿನ ಆಘಾತ ಎದುರಾಗಿದೆ. ಎರಡನೇ ಪಂದ್ಯದಲ್ಲಿ ಅಫ್ಘಾನಿಸ್ತಾನ ಎ ತಂಡವನ್ನು ಎದುರಿಸಿದ್ದ ಭಾರತ ಎ ತಂಡ ಬೃಹತ್ ಮೊತ್ತವನ್ನ ಕಲೆಹಾಕಿತ್ತಾದರೂ ಕಳಪೆ ಬೌಲಿಂಗ್ ಹಾಗೂ ಮಳೆಯಿಂದಾಗಿ 5 ರನ್ಗಳ ಸೋಲು ಕಂಡಿತ್ತು. ಅದಾದ ಬಳಿಕ ನಡೆದ ಮೂರನೇ ಪಂದ್ಯದಲ್ಲಿ ಟೀಂ ಇಂಡಿಯಾ ಸೂಪರ್ ಓವರ್ನಲ್ಲಿ ಲಂಕಾ ವಿರುದ್ಧ ಸೋಲು ಕಂಡಿದೆ. ಈ ಸತತ ಸೋಲುಗಳ ನಡುವೆ ತಂಡದಲ್ಲಿ ಒಂದು ಪ್ರಮುಖ ಬದಲಾವಣೆ ಮಾಡಲಾಗಿದೆ.
ಐಪಿಎಲ್ನಲ್ಲಿ ಗುಜರಾತ್ ಟೈಟಾನ್ಸ್ ಪರ ಆಡುವ ಅಶೋಕ್ ಶರ್ಮಾ ತಮ್ಮ ವೇಗದ ಬೌಲಿಂಗ್ ಮೂಲಕ ಎಲ್ಲರ ಗಮನ ಸೆಳೆದಿದ್ದರು. ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಅಶೋಕ್ ಎರಡು ಬಾರಿ 150 ಕಿಮೀ ವೇಗವನ್ನು ದಾಟಿ ಬೌಲ್ ಮಾಡಿದ್ದರು. ಈ ಮೂಲಕ 2026 ರ ಐಪಿಎಲ್ನಲ್ಲಿ ಅತಿ ವೇಗದ ಚೆಂಡನ್ನು ಬೌಲ್ ಮಾಡಿದ ವೇಗಿ ಎಂಬ ದಾಖಲೆಯನ್ನು ನಿರ್ಮಿಸಿದ್ದರು. ಈಗ ಆ ಪ್ರದರ್ಶನದ ಆಧಾರದ ಮೇಲೆ, ಶ್ರೀಲಂಕಾದಲ್ಲಿ ನಡೆಯುತ್ತಿರುವ ತ್ರಿಕೋನ ಸರಣಿಗಾಗಿ ಅಶೋಕ್ ಶರ್ಮಾ ಅವರನ್ನು ಭಾರತ ಎ ತಂಡದಲ್ಲಿ ಸೇರಿಸಲಾಗಿದೆ.
🚨 News 🚨
Ashok Sharma added to India A squad for tri-series in Sri Lanka as a replacement for Yudhvir Singh.
More Details ▶️ https://t.co/Hvc2KSoBlv #TriNationSeries pic.twitter.com/jcZMZ0DDm8
— BCCI (@BCCI) June 16, 2026
ಇನ್ನು ಯುಧ್ವೀರ್ ಸಿಂಗ್ ಅವರನ್ನು ತಂಡದಿಂದ ಹೊರಗಿಟ್ಟಿರುವ ಬಗ್ಗೆ ಮಾಹಿತಿ ನೀಡಿರುವ ಬಿಸಿಸಿಐ, ಜೂನ್ 13 ರಂದು ಬೌಲಿಂಗ್ ಮಾಡುವಾಗ ಯುಧ್ವೀರ್ ಸಿಂಗ್ ಅವರ ಬಲ ಭುಜದಲ್ಲಿ ನೋವು ಕಾಣಿಸಿಕೊಂಡಿತು. ಇದಕ್ಕೂ ಮೊದಲು, ಜೂನ್ 11 ರಂದು ನಡೆದ ಫೀಲ್ಡಿಂಗ್ ಅವಧಿಯಲ್ಲಿಯೂ ಅವರು ಇದೇ ರೀತಿಯ ನೋವನ್ನು ಅನುಭವಿಸಿದ್ದರು. ಹೀಗಾಗಿ ಯುಧ್ವೀರ್ ಅವರಿಗೆ ಗಾಯದಿಂದ ಚೇತರಿಸಿಕೊಳ್ಳಲು ಸಮಯಬೇಕಾಗಿರುವುದರಿಂದ ಬಿಸಿಸಿಐ ವೈದ್ಯಕೀಯ ತಂಡವು ಅವರಿಗೆ ವಿಶ್ರಾಂತಿ ನೀಡಲು ಸೂಚಿಸಿದೆ ಎಂದಿದೆ.
ತ್ರಿಕೋನ ಸರಣಿಗೆ ಭಾರತ ಎ ತಂಡ ಪ್ರಕಟ; ವೈಭವ್ ಸೂರ್ಯವಂಶಿಗೆ ತಂಡದಲ್ಲಿ ಸ್ಥಾನ
ನವೀಕೃತ ಭಾರತ ಎ ತಂಡ: ತಿಲಕ್ ವರ್ಮಾ (ನಾಯಕ), ರುತುರಾಜ್ ಗಾಯಕ್ವಾಡ್ (ಉಪನಾಯಕ), ಪ್ರಿಯಾಂಶ್ ಆರ್ಯ, ವೈಭವ್ ಸೂರ್ಯವಂಶಿ, ಆಯುಷ್ ಬಡೋನಿ, ನಿಶಾಂತ್ ಸಿಂಧು, ಸೂರ್ಯಾಂಶ್ ಶೆಡ್ಜ್, ಪ್ರಭ್ಸಿಮ್ರಾನ್ ಸಿಂಗ್ (ವಿಕೆಟ್ಕೀಪರ್), ಕುಮಾರ್ ಕುಶಾಗ್ರಾ (ವಿಕೆಟ್ಕೀಪರ್), ವಿಪ್ರಾಜ್ ನಿಗಂ, ಯಶ್ ಠಾಕೂರ್, ಅನ್ಶುಲ್ ಕಾಂಬೋಜ್, ಅರ್ಷದ್ ಖಾನ್, ಅನುಕೂಲ್ ರಾಯ್ ಮತ್ತು ಅಶೋಕ್ ಶರ್ಮಾ.