AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND A vs AUS A: ಬೆಟ್ಟದಂತ ಗುರಿ ಬೆನ್ನಟ್ಟಿ ವಿಶ್ವ ದಾಖಲೆ ಮುರಿದ ಟೀಂ ಇಂಡಿಯಾ

IND A vs AUS A: ಲಕ್ನೋದಲ್ಲಿ ನಡೆದ ಅನಧಿಕೃತ ಟೆಸ್ಟ್ ಪಂದ್ಯದಲ್ಲಿ ಭಾರತ ಎ ತಂಡ ಆಸ್ಟ್ರೇಲಿಯಾ ಎ ವಿರುದ್ಧ 412 ರನ್‌ಗಳ ಬೃಹತ್ ಗುರಿ ಬೆನ್ನಟ್ಟಿ 1-0 ಅಂತರದಿಂದ ಸರಣಿ ಗೆದ್ದಿದೆ. ಈ ಮೂಲಕ ಕ್ರಿಕೆಟ್ ಇತಿಹಾಸದಲ್ಲಿ ನಾಲ್ಕನೇ ಇನ್ನಿಂಗ್ಸ್‌ನಲ್ಲಿ 400ಕ್ಕೂ ಹೆಚ್ಚು ರನ್ ಚೇಸ್ ಮಾಡಿದ ಮೊದಲ ತಂಡವೆಂಬ ವಿಶ್ವ ದಾಖಲೆ ನಿರ್ಮಿಸಿದೆ. ಕೆಎಲ್ ರಾಹುಲ್ (176*) ಮತ್ತು ಸಾಯಿ ಸುದರ್ಶನ್ (100) ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.

IND A vs AUS A: ಬೆಟ್ಟದಂತ ಗುರಿ ಬೆನ್ನಟ್ಟಿ ವಿಶ್ವ ದಾಖಲೆ ಮುರಿದ ಟೀಂ ಇಂಡಿಯಾ
India A
ಪೃಥ್ವಿಶಂಕರ
|

Updated on:Sep 26, 2025 | 8:49 PM

Share

ಲಕ್ನೋದಲ್ಲಿ ನಡೆದ ಎರಡನೇ ಅನಧಿಕೃತ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಎ ತಂಡವನ್ನು ಸೋಲಿಸಿದ ಭಾರತ ಎ (Australia A vs India A) ತಂಡ 1-0 ಅಂತರದಲ್ಲಿ ಸರಣಿಯನ್ನು ತನ್ನದಾಗಿಸಿಕೊಂಡಿದೆ. ಗಮನಾರ್ಹವಾಗಿ, ಈ ಗೆಲುವಿನೊಂದಿಗೆ ಭಾರತ ಎ ತಂಡ ವಿಶ್ವ ದಾಖಲೆಯನ್ನು ಸಹ ನಿರ್ಮಿಸಿದೆ. ನಾಲ್ಕನೇ ಇನ್ನಿಂಗ್ಸ್​ನಲ್ಲಿ 412 ರನ್​ಗಳ ಗುರಿಯನ್ನು ಬೆನ್ನಟ್ಟಿದ ಟೀಂ ಇಂಡಿಯಾ 5 ವಿಕೆಟ್​ಗಳಿಂದ ಜಯ ಸಾಧಿಸಿತು. ಈ ಮೂಲಕ ವಿಶ್ವ ಕ್ರಿಕೆಟ್‌ನಲ್ಲಿ ಇಷ್ಟು ಬೃಹತ್ ಮೊತ್ತವನ್ನು ಬೆನ್ನಟ್ಟಿ ಗೆದ್ದ ಮೊದಲ ತಂಡವೆಂಬ ವಿಶ್ವ ದಾಖಲೆ ನಿರ್ಮಿಸಿದೆ. ಟೀಂ ಇಂಡಿಯಾವನ್ನು ಬಿಟ್ಟರೆ ಬೇರೆ ಯಾವುದೇ ದೇಶದ ಎ ತಂಡವು 400 ಕ್ಕಿಂತ ಹೆಚ್ಚು ರನ್‌ಗಳ ಗುರಿಯನ್ನು ಬೆನ್ನಟ್ಟಿರಲಿಲ್ಲ. ಆದರೆ ಈಗ ಭಾರತ ಎ ತಂಡವು ಈ ಸಾಧನೆಯನ್ನು ಮಾಡಿದೆ.

ಭಾರತ ಎ ತಂಡದ ವಿಶ್ವ ದಾಖಲೆ

412 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟುವ ಮೂಲಕ ಭಾರತ ಎ ತಂಡವು ಆಸ್ಟ್ರೇಲಿಯಾ ಎ ತಂಡ ನಿರ್ಮಿಸಿದ್ದ ದಾಖಲೆಯನ್ನು ಮುರಿದಿದೆ. 2022 ರಲ್ಲಿ ಹಂಬಂಟೋಟದಲ್ಲಿ ನಡೆದಿದ್ದ ಪಂದ್ಯದಲ್ಲಿ ಶ್ರೀಲಂಕಾ ಎ ನೀಡಿದ್ದ 367 ರನ್​ಗಳ ಗುರಿಯನ್ನು ಆಸ್ಟ್ರೇಲಿಯಾ ಎ ತಂಡ ಬೆನ್ನಟ್ಟಿ ಗೆಲುವು ಸಾಧಿಸಿತ್ತು.

ಪಂದ್ಯ ಗೆಲ್ಲಿಸಿದ ರಾಹುಲ್, ಸುದರ್ಶನ್

ಭಾರತ ಎ ತಂಡದ ಗೆಲುವಿನಲ್ಲಿ ಕೆಎಲ್ ರಾಹುಲ್ ಮತ್ತು ಸಾಯಿ ಸುದರ್ಶನ್ ಪ್ರಮುಖ ಪಾತ್ರ ವಹಿಸಿದರು. ಕೆಎಲ್ ರಾಹುಲ್ 83.81 ಸ್ಟ್ರೈಕ್ ರೇಟ್‌ನಲ್ಲಿ 16 ಬೌಂಡರಿಗಳು ಮತ್ತು ನಾಲ್ಕು ಸಿಕ್ಸರ್‌ ಸಹಿತ ಅಜೇಯ 176 ರನ್ ಬಾರಿಸಿದರು. ಈ ಇನ್ನಿಂಗ್ಸ್‌ಗಾಗಿ ರಾಹುಲ್ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಸಹ ಪಡೆದರು. ಇತ್ತ ಸಾಯಿ ಸುದರ್ಶನ್ 172 ಎಸೆತಗಳಲ್ಲಿ 100 ರನ್​ಗಳ ಇನ್ನಿಂಗ್ಸ್ ಕೂಡ ಆಡಿದರು.

ಟೆಸ್ಟ್ ಕ್ರಿಕೆಟ್ ಆಡದಿರಲು ನಿರ್ಧರಿಸಿದ ಶ್ರೇಯಸ್ ಅಯ್ಯರ್; ಕಾರಣ ಕೂಡ ಬಹಿರಂಗ

ಧ್ರುವ್ ಜುರೆಲ್ ಕೂಡ 66 ಎಸೆತಗಳಲ್ಲಿ 56 ರನ್​ಗಳ ಕಾಣಿಕೆ ನೀಡಿದರು. ಭಾರತ ಎ ತಂಡದ ಗೆಲುವಿನತ್ತ ಮುನ್ನಡೆಸಿದ ಈ ಮೂವರು ಆಟಗಾರರು ಈಗ ಅಕ್ಟೋಬರ್ 2 ರಿಂದ ಆರಂಭವಾಗಲಿರುವ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಆಡಲಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:47 pm, Fri, 26 September 25

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್ ಪಲ್ಟಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್ ಪಲ್ಟಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸೊಸೆ ಗರ್ಭಿಣಿ, ಮಗ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾನೆ ಎಂದ ಮೃತನ ತಂದೆ
ಸೊಸೆ ಗರ್ಭಿಣಿ, ಮಗ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾನೆ ಎಂದ ಮೃತನ ತಂದೆ
ಯುವಕರಿಗೆ ಸ್ವಿಮ್ಮಿಂಗ್ ಪೂಲ್ ಆಗಿದ್ದ ಹೊಂಡಕ್ಕೆ ಮೊಸಳೆ ಎಂಟ್ರಿ
ಯುವಕರಿಗೆ ಸ್ವಿಮ್ಮಿಂಗ್ ಪೂಲ್ ಆಗಿದ್ದ ಹೊಂಡಕ್ಕೆ ಮೊಸಳೆ ಎಂಟ್ರಿ
ಟೈರ್ ಬ್ಲಾಸ್ಟ್ ಆಗಿ ಟಿಟಿ ವಾಹನ ಪಲ್ಟಿ, ಮಗು ಸೇರಿ 12 ಜನರಿಗೆ ಗಾಯ
ಟೈರ್ ಬ್ಲಾಸ್ಟ್ ಆಗಿ ಟಿಟಿ ವಾಹನ ಪಲ್ಟಿ, ಮಗು ಸೇರಿ 12 ಜನರಿಗೆ ಗಾಯ
ರಾಯರ ಬಗ್ಗೆ ಆಲ್ಬಂ ಸಾಂಗ್ ಮಾಡಲು ಕಾರಣ ಏನು? ವಿವರಿಸಿದ ಅಜನೀಶ್
ರಾಯರ ಬಗ್ಗೆ ಆಲ್ಬಂ ಸಾಂಗ್ ಮಾಡಲು ಕಾರಣ ಏನು? ವಿವರಿಸಿದ ಅಜನೀಶ್
Video: ಕೋಲ್ಕತ್ತಾಗೆ ಆಗಮಿಸಿದ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ರುಬಿಯೋ
Video: ಕೋಲ್ಕತ್ತಾಗೆ ಆಗಮಿಸಿದ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ರುಬಿಯೋ
ದೆಹಲಿಯ ಫರ್ನಿಚರ್ ಮಾರುಕಟ್ಟೆಯಲ್ಲಿ ಭಾರಿ ಅಗ್ನಿ ಅವಘಡ
ದೆಹಲಿಯ ಫರ್ನಿಚರ್ ಮಾರುಕಟ್ಟೆಯಲ್ಲಿ ಭಾರಿ ಅಗ್ನಿ ಅವಘಡ
ಶನಿವಾರದಂದು ಕಪ್ಪು ಬಣ್ಣದ ಬಟ್ಟೆ ಧರಿಸಿದರೆ ಏನಾಗುತ್ತೆ ಗೊತ್ತಾ?
ಶನಿವಾರದಂದು ಕಪ್ಪು ಬಣ್ಣದ ಬಟ್ಟೆ ಧರಿಸಿದರೆ ಏನಾಗುತ್ತೆ ಗೊತ್ತಾ?
ಇಂದು ಈ ರಾಶಿಯವರಿಗೆ ಜವಾಬ್ದಾರಿ ಹೆಚ್ಚಾಗಲಿದೆ!
ಇಂದು ಈ ರಾಶಿಯವರಿಗೆ ಜವಾಬ್ದಾರಿ ಹೆಚ್ಚಾಗಲಿದೆ!
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ