AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ind A vs NZ A: ಮಿಂಚಿದ ರಜತ್, ಶಾರ್ದೂಲ್, ಕುಲ್ದೀಪ್; ನಾಯಕನಾಗಿ ಮೊದಲ ಪಂದ್ಯ ಗೆದ್ದ ಸಂಜು..!

Ind A vs NZ A: ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ, ಭಾರತ ಎ ತಂಡವು ನ್ಯೂಜಿಲೆಂಡ್ ಎ ತಂಡವನ್ನು ಯಾವುದೇ ತೊಂದರೆಯಿಲ್ಲದೆ 7 ವಿಕೆಟ್‌ಗಳಿಂದ ಸೋಲಿಸಿತು.

Ind A vs NZ A: ಮಿಂಚಿದ ರಜತ್, ಶಾರ್ದೂಲ್, ಕುಲ್ದೀಪ್; ನಾಯಕನಾಗಿ ಮೊದಲ ಪಂದ್ಯ ಗೆದ್ದ ಸಂಜು..!
ಭಾರತ ಎ ತಂಡ
TV9 Web
| Edited By: |

Updated on:Sep 22, 2022 | 6:53 PM

Share

ಮುಂದಿನ ತಿಂಗಳಲ್ಲಿ ಆರಂಭವಾಗಲಿರುವ ಟಿ20 ವಿಶ್ವಕಪ್‌ಗೆ (T20 World Cup) ಎಲ್ಲಾ ದೇಶಗಳು ತಮ್ಮ ತಮ್ಮ ತಂಡಗಳನ್ನು ಪ್ರಕಟಿಸಿವೆ. ಟೀಂ ಇಂಡಿಯಾ ಕೂಡ ಈಗಾಗಲೇ 15 ಸದಸ್ಯರ ತಂಡವನ್ನು ಟಿ20 ವಿಶ್ವಕಪ್​ಗೆ ಆಯ್ಕೆ ಮಾಡಿದೆ. ಆದರೆ ಆಯ್ಕೆಯಾದ ಆ ತಂಡದಲ್ಲಿ ಆತನೊಬ್ಬನ ಹೆಸರಿರಬೇಕೆಂದು ಹೇಳಿದವರಲ್ಲಿ ಕೋಟ್ಯಾಂತರ ಜನರಿದ್ದಾರೆ. ವಾಸ್ತವವಾಗಿ ಸಂಜು ಸ್ಯಾಮ್ಸನ್​ಗೆ (Sanju Samson) ಟಿ20 ತಂಡದಲ್ಲಿ ಸ್ಥಾನ ನೀಡಬೇಕಿತ್ತು ಎಂದು ಕ್ರಿಕೆಟ್ ಪಂಡಿತರು ವಾದಿಸಿದ್ದರು. ಆದರೆ ಸಂಜುಗೆ ಟಿ20 ವಿಶ್ವಕಪ್​ನಲ್ಲಿ ಸ್ಥಾನ ನೀಡದ ಬಿಸಿಸಿಐ ಅವರನ್ನು ಕಿವೀಸ್ ಎ ವಿರುದ್ಧದ ಸರಣಿಗೆ ನಾಯಕನಾಗಿ ಮಾಡಿತ್ತು. ಈಗ ನಾಯಕನಾಗಿ ಉತ್ತಮ ಆರಂಬ ಮಾಡಿರುವ ಸಂಜು ಮೊದಲ ಪಂದ್ಯದಲ್ಲೇ ಸುಲಭ ಜಯ ಸಾಧಿಸಿದ್ದಾರೆ. ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ಎ ತಂಡವು ನ್ಯೂಜಿಲೆಂಡ್ ಎ ತಂಡವನ್ನು 7 ವಿಕೆಟ್‌ಗಳಿಂದ ಸುಲಭವಾಗಿ ಸೋಲಿಸಿತು. ಸ್ಯಾಮ್ಸನ್ ಅವರ ನಾಯಕತ್ವದಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಲ್ಲದೆ ಪ್ರಮುಖ ಇನ್ನಿಂಗ್ಸ್ ಕೂಡ ಆಡಿದರು.

ಈ ಸರಣಿಯು ಸ್ಯಾಮ್ಸನ್‌ಗೆ ಮಾತ್ರವಲ್ಲ, ಬೌಲಿಂಗ್ ಆಲ್‌ರೌಂಡರ್ ಶಾರ್ದೂಲ್ ಠಾಕೂರ್ ಅವರಿಗೂ ಮುಖ್ಯವಾಗಿದೆ. ಏಕೆಂದರೆ ಕೆಲವು ತಿಂಗಳ ಹಿಂದಿನವರೆಗೂ ಭಾರತ ತಂಡದ ಸಾಮಾನ್ಯ ಭಾಗವಾಗಿದ್ದ ಶಾರ್ದೂಲ್ ಈಗ ತಂಡದಿಂದ ಗೇಟ್​ ಪಾಸ್ ಪಡೆದುಕೊಂಡಿದ್ದಾರೆ. ಹೀಗಾಗಿ ಅದ್ಭುತ ಪ್ರದರ್ಶನದ ಮೂಲಕ ಮತ್ತೆ ತಂಡ ಸೇರುವ ತವಕದಲ್ಲಿರುವ ಠಾಕೂರ್​ಗೆ ಈ ಸರಣಿ ಬಹುಮುಖ್ಯವಾಗಿತ್ತು. ಶಾರ್ದೂಲ್ ಕೂಡ ಈ ಬಾರಿ ವಿಶ್ವಕಪ್ ತಂಡಕ್ಕೆ ಲಗ್ಗೆ ಇಡಲು ಸಾಧ್ಯವಾಗಲಿಲ್ಲ ಇಂತಹ ಪರಿಸ್ಥಿತಿಯಲ್ಲಿ ಮತ್ತೊಮ್ಮೆ ತಮ್ಮ ಸಾಮರ್ಥ್ಯ ಸಾಬೀತು ಪಡಿಸಲು ಇದೊಂದು ಉತ್ತಮ ಅವಕಾಶವಾಗಿದ್ದು, ಮೊದಲ ಪಂದ್ಯದಲ್ಲೇ ಪರಿಣಾಮಕಾರಿ ಪ್ರದರ್ಶನ ನೀಡಿದರು.

ಶಾರ್ದೂಲ್-ಕುಲದೀಪ್ ಮಿಂಚಿಂಗ್

ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ಶಾರ್ದೂಲ್ ಠಾಕೂರ್ ಭಾರತಕ್ಕೆ ಗೆಲುವಿನ ಅಡಿಪಾಯವನ್ನು ಸಿದ್ಧಪಡಿಸಿದರು. ಮಧ್ಯಪ್ರದೇಶದ ವೇಗದ ವೇಗಿ ಕುಲದೀಪ್ ಸೇನ್ ಜೊತೆಗೆ ಉತ್ತಮ ಬೌಲಿಂಗ್ ಪ್ರದರ್ಶಿಸಿದ ಶಾರ್ದೂಲ್, ನ್ಯೂಜಿಲೆಂಡ್ ತಂಡದ ಅಗ್ರ ಮತ್ತು ಮಧ್ಯಮ ಕ್ರಮಾಂಕವನ್ನು ಸಂಪೂರ್ಣವಾಗಿ ನಾಶಪಡಿಸಿದರು. ಹೀಗಾಗಿ ನ್ಯೂಜಿಲೆಂಡ್‌ನ 8 ವಿಕೆಟ್‌ಗಳು ಕೇವಲ 74 ರನ್‌ಗಳಿಗೆ ಬಿದ್ದವು, ಅದರಲ್ಲಿ 7 ವಿಕೆಟ್‌ಗಳನ್ನು ಇಬ್ಬರೂ ಬೌಲರ್‌ಗಳು ಕಬಳಿಸಿದರು.

ಆದರೆ ಕೊನೆಯ ಹಂತದಲ್ಲಿ ಎದ್ದುನಿಂತ ನ್ಯೂಜಿಲೆಂಡ್ ಒಂಬತ್ತನೇ ವಿಕೆಟ್‌ಗೆ 89 ರನ್‌ಗಳ ಜೊತೆಯಾಟವನ್ನು ನೀಡಿತು. ಅದರ ಆಧಾರದ ಮೇಲೆ ತಂಡ 167 ರನ್‌ಗಳನ್ನು ತಲುಪುವಲ್ಲಿ ಯಶಸ್ವಿಯಾಯಿತು. ಶಾರ್ದೂಲ್ 4 ಹಾಗೂ ಕುಲದೀಪ್ 3 ವಿಕೆಟ್ ಪಡೆದರು.

ಪೃಥ್ವಿ ಫೇಲ್, ಸ್ಯಾಮ್ಸನ್-ಪಾಟಿದಾರ್ ಉತ್ತಮ ಆಟ

ಅದೇ ಸಮಯದಲ್ಲಿ, ಸ್ಯಾಮ್ಸನ್ ಹೊರತುಪಡಿಸಿ, ಬ್ಯಾಟಿಂಗ್ ವಿಷಯದಲ್ಲಿ ಮತ್ತೊಬ್ಬ ಬ್ಯಾಟ್ಸ್‌ಮನ್ ಪೃಥ್ವಿ ಶಾ ಮೇಲೆ ಸಾಕಷ್ಟು ನಿರೀಕ್ಷೆ ಇತ್ತು. ಇತ್ತೀಚೆಗಷ್ಟೇ ನಡೆದ ದುಲೀಪ್ ಟ್ರೋಫಿಯಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ ಶಾ ಈ ಸರಣಿಯಲ್ಲೂ ಅಬ್ಬರದ ಬ್ಯಾಟಿಂಗ್ ಮಾಡುವ ನಿರೀಕ್ಷೆ ಹೊಂದಿದ್ದರು. ಆದರೆ ಅಲ್ಪ ಮೊತ್ತದ ಮುಂದೆ ಮೊದಲ ಅವಕಾಶದಲ್ಲಿ ವಿಫಲರಾಗಿ ಕೇವಲ 17 ರನ್ ಗಳಿಸಲಷ್ಟೇ ಶಕ್ತರಾದರು. ಅದೇ ಸಮಯದಲ್ಲಿ ಟೀಂ ಇಂಡಿಯಾದಲ್ಲಿ ಸಿಕ್ಕ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಲು ವಿಫಲರಾದ ರಿತುರಾಜ್ ಗಾಯಕ್ವಾಡ್, ಮೊದಲ ಪಂದ್ಯದಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ಗಾಯಕ್ವಾಡ್ ತಮ್ಮ ಉತ್ತಮ ಫಾರ್ಮ್ ಮುಂದುವರೆಸಿ 41 ರನ್‌ಗಳ ಇನ್ನಿಂಗ್ಸ್ ಆಡಿದರು.

ಅಂತಿಮವಾಗಿ ನಾಯಕ ಸ್ಯಾಮ್ಸನ್, ರಜತ್ ಪಾಟಿದಾರ್ ಜೊತೆ 69 ರನ್​ಗಳ ಜೊತೆಯಾಟವಾಡಿ ತಂಡವನ್ನು ಗೆಲುವಿನತ್ತ ಮುನ್ನಡೆಸಿದರು. ಈ ವರ್ಷ ಪ್ರಥಮ ದರ್ಜೆ ಹಾಗೂ ಟಿ20ಯಲ್ಲಿ ಅಮೋಘ ಬ್ಯಾಟಿಂಗ್‌ ಪ್ರದರ್ಶಿಸಿದ್ದ ಎಂಪಿ ಬ್ಯಾಟ್ಸ್‌ಮನ್‌ ಪಾಟಿದಾರ್‌, ಏಕದಿನ ಮಾದರಿಯಲ್ಲೂ ತಮ್ಮ ಆವೇಗವನ್ನು ಮುಂದುವರಿಸಿ 45 ರನ್‌ ಗಳಿಸಿದರು. ಅದೇ ಸಮಯದಲ್ಲಿ, ಸ್ಯಾಮ್ಸನ್ ಕೂಡ ಯಾವುದೇ ತೊಂದರೆಯಿಲ್ಲದೆ 29 ರನ್ಗಳ ಅಜೇಯ ಇನ್ನಿಂಗ್ಸ್ ಆಡಿದರು. ಅದರಲ್ಲಿ 3 ಅತ್ಯುತ್ತಮ ಸಿಕ್ಸರ್ಗಳನ್ನು ಹೊಡೆದ ಸಂಜು, ಕೇವಲ 32 ಓವರ್ಗಳಲ್ಲಿ ತಂಡವನ್ನು ಜಯದ ದಡ ಸೇರಿಸಿದರು.

Published On - 6:53 pm, Thu, 22 September 22

Follow Us
Web contact
Web contact

TV9 Kannada

Read More
ಅಲ್ಲೆಲ್ಲೋ ಯುದ್ಧ ನಡೀತಿದ್ರೆ ಇಲ್ಯಾಕೆ ಚಿನ್ನ ಖರೀದಿ ಮಾಡಬಾರದು?
ಅಲ್ಲೆಲ್ಲೋ ಯುದ್ಧ ನಡೀತಿದ್ರೆ ಇಲ್ಯಾಕೆ ಚಿನ್ನ ಖರೀದಿ ಮಾಡಬಾರದು?
ಸಾರ್ವಜನಿಕರೇ ಬೆಂಗಳೂರಿನ ಈ ರಸ್ತೆಗಳಲ್ಲಿ ಓಡಾಡುವಾಗ ಹುಷಾರ್!
ಸಾರ್ವಜನಿಕರೇ ಬೆಂಗಳೂರಿನ ಈ ರಸ್ತೆಗಳಲ್ಲಿ ಓಡಾಡುವಾಗ ಹುಷಾರ್!
ಲವ್ ವಿಚಾರಕ್ಕೆ 17ರ ಮಗಳನ್ನೇ ಕೊಂದ ಅಪ್ಪ: ತಂದೆಯ ಅಸಲಿ ಮುಖ ಬಯಲು
ಲವ್ ವಿಚಾರಕ್ಕೆ 17ರ ಮಗಳನ್ನೇ ಕೊಂದ ಅಪ್ಪ: ತಂದೆಯ ಅಸಲಿ ಮುಖ ಬಯಲು
ಶತಕದ ಪಂದ್ಯದಲ್ಲಿ ಒಂದೇ ರನ್​ಗೆ ಸುಸ್ತಾದ ಶ್ರೇಯಸ್ ಅಯ್ಯರ್
ಶತಕದ ಪಂದ್ಯದಲ್ಲಿ ಒಂದೇ ರನ್​ಗೆ ಸುಸ್ತಾದ ಶ್ರೇಯಸ್ ಅಯ್ಯರ್
ಅರಬ್ಬಿ ಸಮುದ್ರದಲ್ಲಿ ಹೆಚ್ಚಿದ ಗಾಳಿಯ ವೇಗ: ಲಂಗರು ಹಾಕಿದ ನೂರಾರು ಬೋಟ್​​​​
ಅರಬ್ಬಿ ಸಮುದ್ರದಲ್ಲಿ ಹೆಚ್ಚಿದ ಗಾಳಿಯ ವೇಗ: ಲಂಗರು ಹಾಕಿದ ನೂರಾರು ಬೋಟ್​​​​
ನಿಯಂತ್ರಣ ತಪ್ಪಿ ಏಕಾಏಕಿ ರೆಸ್ಟೋರೆಂಟ್ ಒಳಗೆ ನುಗ್ಗಿದ ಕಾರು
ನಿಯಂತ್ರಣ ತಪ್ಪಿ ಏಕಾಏಕಿ ರೆಸ್ಟೋರೆಂಟ್ ಒಳಗೆ ನುಗ್ಗಿದ ಕಾರು
ಜಿಟಿ ದೇವೇಗೌಡಗೆ ಶಾಕ್: ಸ್ವಪಕ್ಷದ ಶಾಸಕರನ್ನ ದೂರವಿಟ್ಟು​ ಸಮಾವೇಶ
ಜಿಟಿ ದೇವೇಗೌಡಗೆ ಶಾಕ್: ಸ್ವಪಕ್ಷದ ಶಾಸಕರನ್ನ ದೂರವಿಟ್ಟು​ ಸಮಾವೇಶ
ಕಲಬುರಗಿಯಲ್ಲಿ ಮಾಜಿ ಸೈನಿಕನ ಬರ್ಬರ ಹತ್ಯೆ: ಆಗಿದ್ದೇನು?
ಕಲಬುರಗಿಯಲ್ಲಿ ಮಾಜಿ ಸೈನಿಕನ ಬರ್ಬರ ಹತ್ಯೆ: ಆಗಿದ್ದೇನು?
ನಿರಾಶ್ರಿತರ ಕೇಂದ್ರದಲ್ಲಿದ್ದ ವಿದೇಶಿ ಅಕ್ರಮ ವಲಸಿಗರು ಪರಾರಿ!
ನಿರಾಶ್ರಿತರ ಕೇಂದ್ರದಲ್ಲಿದ್ದ ವಿದೇಶಿ ಅಕ್ರಮ ವಲಸಿಗರು ಪರಾರಿ!
ಶನಿ ಅಮಾವಾಸ್ಯೆ, ವೀಕೆಂಡ್ ಹಿನ್ನೆಲೆ ಮಲೆ ಮಹದೇಶ್ವರ ಬೆಟ್ಟದಲ್ಲಿ ಭಕ್ತಸಾಗರ
ಶನಿ ಅಮಾವಾಸ್ಯೆ, ವೀಕೆಂಡ್ ಹಿನ್ನೆಲೆ ಮಲೆ ಮಹದೇಶ್ವರ ಬೆಟ್ಟದಲ್ಲಿ ಭಕ್ತಸಾಗರ