ತ್ರಿಕೋನ ಸರಣಿಗಾಗಿ ಶ್ರೀಲಂಕಾಕ್ಕೆ ತೆರಳಿದ ಭಾರತ ಎ ತಂಡ; ವೈಭವ್ ಹಿಂದೆ ಬಿದ್ದ ಫ್ಯಾನ್ಸ್

India A squad has reached colombo: ತಿಲಕ್ ವರ್ಮಾ ನಾಯಕತ್ವದ ಭಾರತ ಎ ತಂಡ ಶ್ರೀಲಂಕಾದಲ್ಲಿ ನಡೆಯುವ ತ್ರಿಕೋನ ಏಕದಿನ ಸರಣಿಗಾಗಿ ತೆರಳಿದೆ. ಜೂನ್ 9 ರಿಂದ ಪ್ರಾರಂಭವಾಗುವ ಈ ಸರಣಿಯಲ್ಲಿ ಭಾರತ ಎ, ಶ್ರೀಲಂಕಾ ಎ ಹಾಗೂ ಅಫ್ಘಾನಿಸ್ತಾನ ಎ ತಂಡಗಳು ಕಣಕ್ಕಿಳಿಯಲಿವೆ. ಯುವ ಪ್ರತಿಭೆಗಳಿಂದ ಕೂಡಿದ ಭಾರತ ಎ ತಂಡದಲ್ಲಿ ರಿಯಾನ್ ಪರಾಗ್ ಉಪನಾಯಕರಾಗಿದ್ದಾರೆ. ಈ ಸರಣಿಯು ಯುವ ಆಟಗಾರರಿಗೆ ತಮ್ಮ ಸಾಮರ್ಥ್ಯ ಪ್ರದರ್ಶಿಸಲು ಉತ್ತಮ ವೇದಿಕೆಯಾಗಿದೆ.

ತ್ರಿಕೋನ ಸರಣಿಗಾಗಿ ಶ್ರೀಲಂಕಾಕ್ಕೆ ತೆರಳಿದ ಭಾರತ ಎ ತಂಡ; ವೈಭವ್ ಹಿಂದೆ ಬಿದ್ದ ಫ್ಯಾನ್ಸ್
India A

Updated on: Jun 05, 2026 | 10:35 PM

ಒಂದೆಡೆ ಭಾರತ ಹಾಗೂ ಅಫ್ಘಾನಿಸ್ತಾನ ತಂಡಗಳು ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯಲು ಸಜ್ಜಾಗಿದ್ದರೆ, ಇನ್ನೊಂದೆಡೆ ತಿಲಕ್ ವರ್ಮಾ (Tilak Varma) ನೇತೃತ್ವದ ಭಾರತ ಎ ತಂಡ (India A squad) ತ್ರಿಕೋನ ಸರಣಿಗಾಗಿ ಶ್ರೀಲಂಕಾಗೆ ತೆರಳಿದೆ. ಭಾರತ, ಶ್ರೀಲಂಕಾ ಹಾಗೂ ಅಫ್ಘಾನಿಸ್ತಾನ ಎ ತಂಡಗಳ ನಡುವೆ ಏಕದಿನ ತ್ರಿಕೋನ ಸರಣಿ (Tri-nation series) ನಡೆಯಲಿದೆ. ಈ ಸರಣಿಗಾಗಿ ಬಿಸಿಸಿಐ ಈಗಾಗಲೇ ಭಾರತ ಎ ತಂಡವನ್ನು ಸಹ ಪ್ರಕಟಿಸಿದೆ. ಜೂನ್ 9 ರಿಂದ ಪ್ರಾರಂಭವಾಗಲಿರುವ ತ್ರಿಕೋನ ಸರಣಿಗಾಗಿ ಭಾರತ ಯುವ ಪಡೆ ಇಂದು ಭಾರತದಿಂದ ಶ್ರೀಲಂಕಾಗೆ ತೆರಳಿದೆ ತಂಡದ ಆಟಗಾರರು ಜೊತೆಯಾಗಿ ಶ್ರೀಲಂಕಾಗೆ ಪ್ರಯಾಣಿಸಿರುವ ಫೋಟೋಗಳನ್ನು ಬಿಸಿಸಿಐ ಹಂಚಿಕೊಂಡಿದೆ.

ತಿಲಕ್ ನಾಯಕ, ಪರಾಗ್ ಉಪನಾಯಕ

ಮೇಲೆ ಹೇಳಿದಂತೆ ಈ ಸರಣಿಗೆ ತಿಲಕ್ ವರ್ಮಾ ಅವರನ್ನು ಭಾರತ ಎ ತಂಡದ ನಾಯಕರನ್ನಾಗಿ ನೇಮಿಸಲಾಗಿದ್ದು, ರಿಯಾನ್ ಪರಾಗ್​ಗೆ ಉಪನಾಯಕತ್ವ ನೀಡಲಾಗಿದೆ. ಈ ಸರಣಿಯ ನಂತರ ಭಾರತ ಎ, ಶ್ರೀಲಂಕಾ ಎ ವಿರುದ್ಧ ಎರಡು ಬಹು-ದಿನದ (ರೆಡ್-ಬಾಲ್) ಪಂದ್ಯಗಳನ್ನು ಸಹ ಆಡಲಿದೆ. ಈ ಟೆಸ್ಟ್ ಪಂದ್ಯಗಳಿಗೆ ತಂಡವನ್ನು ನಂತರ ಪ್ರಕಟಿಸಲಾಗುವುದು. ತ್ರಿಕೋನ ಸರಣಿಯು ಜೂನ್ 9 ರಂದು ಪ್ರಾರಂಭವಾಗಲಿದ್ದು, ಜೂನ್ 21 ರಂದು ಫೈನಲ್ ಪಂದ್ಯ ನಡೆಯಲಿದೆ. ಎಲ್ಲಾ ತಂಡಗಳು ಪರಸ್ಪರ ಎರಡು ಬಾರಿ ಮುಖಾಮುಖಿಯಾಗಲಿದ್ದು, ಅಗ್ರ ಎರಡು ತಂಡಗಳು ಫೈನಲ್‌ನಲ್ಲಿ ಮುಖಾಮುಖಿಯಾಗಲಿವೆ.

ಏಕದಿನ ತ್ರಿಕೋನ ಸರಣಿ ವೇಳಾಪಟ್ಟಿ

  • ಜೂನ್ 9: ಭಾರತ ಎ vs ಶ್ರೀಲಂಕಾ ಎ
  • ಜೂನ್ 11: ಭಾರತ ಎ vs ಅಫ್ಘಾನಿಸ್ತಾನ ಎ
  • ಜೂನ್ 13: ಅಫ್ಘಾನಿಸ್ತಾನ ಎ ವಿರುದ್ಧ ಶ್ರೀಲಂಕಾ ಎ
  • ಜೂನ್ 15: ಭಾರತ ಎ vs ಶ್ರೀಲಂಕಾ ಎ
  • ಜೂನ್ 17: ಭಾರತ ಎ vs ಅಫ್ಘಾನಿಸ್ತಾನ ಎ
  • ಜೂನ್ 19: ಅಫ್ಘಾನಿಸ್ತಾನ ಎ ವಿರುದ್ಧ ಶ್ರೀಲಂಕಾ ಎ
  • ಜೂನ್ 21: ಫೈನಲ್ ಪಂದ್ಯ

ಶ್ರೀಲಂಕಾದಲ್ಲಿ ವೈಭವ್ ಕ್ರೇಜ್ ಹೇಗಿದೆ ನೋಡಿ

ಏಕದಿನ ತ್ರಿಕೋನ ಸರಣಿಗೆ ಭಾರತ ಎ ತಂಡ: ತಿಲಕ್ ವರ್ಮಾ (ನಾಯಕ), ಪ್ರಿಯಾಂಶ್ ಆರ್ಯ, ವೈಭವ್ ಸೂರ್ಯವಂಶಿ, ರಿಯಾನ್ ಪರಾಗ್ (ಉಪನಾಯಕ), ಆಯುಷ್ ಬದೋನಿ, ನಿಶಾಂತ್ ಸಿಂಧು, ಸೂರ್ಯಾಂಶ್ ಶೆಡ್ಗೆ, ಪ್ರಭುಸಿಮ್ರಾನ್ ಸಿಂಗ್ (ವಿಕೆಟ್ ಕೀಪರ್), ಕುಮಾರ್ ಕುಶಾಗ್ರ (ವಿಕೆಟ್ ಕೀಪರ್), ವಿಪ್ರಜ್ ನಿಗಮ್, ಯಶ್ ಠಾಕೂರ್, ಯುಧ್ವೀರ್ ಸಿಂಗ್, ಅಂಶುಲ್ ಕಾಂಬೋಜ್, ಅರ್ಷದ್ ಖಾನ್, ಅನುಕೂಲ್ ರಾಯ್.

pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us