AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತ್ರಿಕೋನ ಸರಣಿಗೆ ಭಾರತ ಎ ತಂಡ ಪ್ರಕಟ; ವೈಭವ್ ಸೂರ್ಯವಂಶಿಗೆ ತಂಡದಲ್ಲಿ ಸ್ಥಾನ

India A Squad for Sri Lanka Tri-Series 2026: ಐಪಿಎಲ್ ನಂತರ ಶ್ರೀಲಂಕಾದಲ್ಲಿ ನಡೆಯಲಿರುವ ಭಾರತ ಎ, ಶ್ರೀಲಂಕಾ ಎ ಮತ್ತು ಅಫ್ಘಾನಿಸ್ತಾನ ಎ ತಂಡಗಳ ತ್ರಿಕೋನ ಏಕದಿನ ಸರಣಿಗೆ ಬಿಸಿಸಿಐ ಭಾರತ ಎ ತಂಡವನ್ನು ಪ್ರಕಟಿಸಿದೆ. ತಿಲಕ್ ವರ್ಮಾ ನಾಯಕರಾಗಿದ್ದು, ರಿಯಾನ್ ಪರಾಗ್ ಉಪನಾಯಕರಾಗಿದ್ದಾರೆ. ಐಪಿಎಲ್‌ನಲ್ಲಿ ಗಮನ ಸೆಳೆದ ವೈಭವ್ ಸೂರ್ಯವಂಶಿ, ಪ್ರಿಯಾಂಶ್ ಆರ್ಯ ಸೇರಿದಂತೆ ಹಲವು ಯುವ ಆಟಗಾರರಿಗೆ ಈ ಸರಣಿಯಲ್ಲಿ ಅವಕಾಶ ನೀಡಲಾಗಿದೆ. ಜೂನ್ 9 ರಿಂದ 21 ರವರೆಗೆ ಸರಣಿ ನಡೆಯಲಿದೆ.

ತ್ರಿಕೋನ ಸರಣಿಗೆ ಭಾರತ ಎ ತಂಡ ಪ್ರಕಟ; ವೈಭವ್ ಸೂರ್ಯವಂಶಿಗೆ ತಂಡದಲ್ಲಿ ಸ್ಥಾನ
India A Squad
ಪೃಥ್ವಿಶಂಕರ
|

Updated on: May 14, 2026 | 5:13 PM

Share

2026 ರ ಐಪಿಎಲ್ (IPL 2026) ಮುಗಿಯುವ ಹಂತಕ್ಕೆ ಬಂದಿದೆ. ಕೆಲವೇ ದಿನಗಳಲ್ಲಿ ಪ್ಲೇಆಫ್ ಸುತ್ತು ಆರಂಭವಾಗಲಿದೆ. ಐಪಿಎಲ್ ಅಂತ್ಯದೊಂದಿಗೆ ಟೀಂ ಇಂಡಿಯಾದ (Team India) ಅಂತರರಾಷ್ಟ್ರೀಯ ಕ್ಯಾಲೆಂಡರ್ ಕೂಡ ಶುರುವಾಗಲಿದೆ. ಅದರಂತೆ, ಭಾರತ ಎ ತಂಡವು ಶ್ರೀಲಂಕಾ ಪ್ರವಾಸ ಮಾಡಲಿದ್ದು, ಈ ಪ್ರವಾಸದಲ್ಲಿ ಶ್ರೀಲಂಕಾ ಎ, ಭಾರತ ಎ ಮತ್ತು ಅಫ್ಘಾನಿಸ್ತಾನ ಎ ತಂಡಗಳನ್ನು ಒಳಗೊಂಡ ಏಕದಿನ ತ್ರಿಕೋನ ಸರಣಿ (Tri-Series) ನಡೆಯಲಿದೆ. ಇದೀಗ ಬಿಸಿಸಿಐ ಈ ಸರಣಿಗೆ ಭಾರತ ಎ ತಂಡವನ್ನು ಪ್ರಕಟಿಸಿದೆ. ಐಪಿಎಲ್‌ನಲ್ಲಿ ತಮ್ಮ ಬ್ಯಾಟಿಂಗ್ ಮೂಲಕ ಗಮನ ಸೆಳೆಯುತ್ತಿರುವ ವೈಭವ್ ಸೂರ್ಯವಂಶಿ ಸೇರಿದಂತೆ ಹಲವಾರು ಯುವ ಆಟಗಾರರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ.

ಭಾರತ ಎ ತಂಡ ಪ್ರಕಟ

ಈ ಸರಣಿಗೆ ತಿಲಕ್ ವರ್ಮಾ ಅವರನ್ನು ಭಾರತ ಎ ತಂಡದ ನಾಯಕರನ್ನಾಗಿ ನೇಮಿಸಲಾಗಿದೆ, ರಿಯಾನ್ ಪರಾಗ್ ಉಪನಾಯಕರಾಗಿದ್ದಾರೆ. ಸರಣಿಯ ನಂತರ ಭಾರತ ಎ, ಶ್ರೀಲಂಕಾ ಎ ವಿರುದ್ಧ ಎರಡು ಬಹು-ದಿನದ (ರೆಡ್-ಬಾಲ್) ಪಂದ್ಯಗಳನ್ನು ಸಹ ಆಡಲಿದೆ. ಈ ಟೆಸ್ಟ್ ಪಂದ್ಯಗಳಿಗೆ ತಂಡವನ್ನು ನಂತರ ಪ್ರಕಟಿಸಲಾಗುವುದು. ತ್ರಿಕೋನ ಸರಣಿಯು ಜೂನ್ 9 ರಂದು ಪ್ರಾರಂಭವಾಗಲಿದ್ದು, ಜೂನ್ 21 ರಂದು ಅಂತಿಮ ಪಂದ್ಯ ನಡೆಯಲಿದೆ. ಎಲ್ಲಾ ತಂಡಗಳು ಪರಸ್ಪರ ಎರಡು ಬಾರಿ ಮುಖಾಮುಖಿಯಾಗಲಿದ್ದು, ಅಗ್ರ ಎರಡು ತಂಡಗಳು ಫೈನಲ್‌ನಲ್ಲಿ ಮುಖಾಮುಖಿಯಾಗಲಿವೆ.

ಐಪಿಎಲ್‌ನಲ್ಲಿ ರನ್ ಮಳೆ ಹರಿಸುತ್ತಿರುವ ಪ್ರಿಯಾಂಶ್ ಆರ್ಯ, ಆಯುಷ್ ಬಡೋನಿ ಮತ್ತು ಪ್ರಭ್ಸಿಮ್ರಾನ್ ಸಿಂಗ್ ಅವರಂತಹ ಯುವ ಆಟಗಾರರನ್ನು ಸಹ ಏಕದಿನ ತ್ರಿಕೋನ ಸರಣಿಗೆ ಆಯ್ಕೆ ಮಾಡಲಾಗಿದೆ. ಏತನ್ಮಧ್ಯೆ, ಯಶ್ ಠಾಕೂರ್, ಯುಧ್ವೀರ್ ಸಿಂಗ್, ಅನ್ಶುಲ್ ಕಾಂಬೋಜ್ ಮತ್ತು ಅರ್ಷದ್ ಖಾನ್ ಅವರಂತಹ ಯುವ ಬೌಲರ್‌ಗಳಿಗೂ ಈ ಸರಣಿಯಲ್ಲಿ ದೊಡ್ಡ ಅವಕಾಶ ಸಿಗಲಿದೆ.

ತ್ರಿಕೋನ ಸರಣಿಗೆ ಭಾರತ ಎ ತಂಡ

  • ತಿಲಕ್ ವರ್ಮಾ (ನಾಯಕ)
  •  ಪ್ರಿಯಾಂಶ್ ಆರ್ಯ
  • ​ ವೈಭವ್ ಸೂರ್ಯವಂಶಿ
  •  ರಿಯಾನ್ ಪರಾಗ್ (ಉಪನಾಯಕ)
  •  ಆಯುಷ್ ಬದೋನಿ
  • ನಿಶಾಂತ್ ಸಿಂಧು
  •  ಹರ್ಷ ದುಬೆ
  • ಸೂರ್ಯಾಂಶ್ ಶೆಡ್ಜ್
  •  ಪ್ರಭಾಸಿಮ್ರಾನ್ ಸಿಂಗ್ (ವಿಕೆಟ್ ಕೀಪರ್)
  •  ಕುಮಾರ್ ಕುಶಾಗ್ರಾ (ವಿಕೆಟ್ ಕೀಪರ್)
  • ವಿಪ್ರಜ್ ನಿಗಮ್
  • ಯಶ್ ಠಾಕೂರ್
  •  ಯುದ್ಧವೀರ್ ಸಿಂಗ್
  •  ಅಂಶುಲ್ ಕಾಂಬೋಜ್
  • ಅರ್ಷದ್ ಖಾನ್

ತ್ರಿಕೋನ ಸರಣಿ ವೇಳಾಪಟ್ಟಿ

  • ಜೂನ್ 9: ಭಾರತ ಎ vsಶ್ರೀಲಂಕಾ ಎ
  • ಜೂನ್ 11: ಭಾರತ ಎ vs ಅಫ್ಘಾನಿಸ್ತಾನ ಎ
  • ಜೂನ್ 13: ಅಫ್ಘಾನಿಸ್ತಾನ ಎ vs ಶ್ರೀಲಂಕಾ ಎ
  • ಜೂನ್ 15: ಭಾರತ ಎ ವಿರುದ್ಧ ಶ್ರೀಲಂಕಾ ಎ
  • ಜೂನ್ 17: ಭಾರತ ಎ vs ಅಫ್ಘಾನಿಸ್ತಾನ ಎ
  • ಜೂನ್ 19: ಅಫ್ಘಾನಿಸ್ತಾನ ಎ vs ಶ್ರೀಲಂಕಾ ಎ
  • ಜೂನ್ 21: ಫೈನಲ್ ಪಂದ್ಯ

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ