AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೆಸ್ಟ್ ಶತಕವನ್ನು ಪ್ರಭು ಶ್ರೀರಾಮನಿಗೆ ಅರ್ಪಿಸಿದ ಟೀಂ ಇಂಡಿಯಾ ಕ್ರಿಕೆಟಿಗ; ವಿಡಿಯೋ ನೋಡಿ

India A vs England Lions: ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಇಂಗ್ಲೆಂಡ್ ಲಯನ್ಸ್ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಕೆಎಸ್ ಭರತ್ ಭರ್ಜರಿ ಬ್ಯಾಟಿಂಗ್ ನಡೆಸಿ ಶತಕ ಸಿಡಿಸಿ ಮಿಂಚಿದರು. ಶತಕ ಬಾರಿಸಿದ ಕೂಡಲೇ ಕೆಎಸ್ ಭರತ್ ಮೈದಾನದ ಮಧ್ಯದಲ್ಲಿ ಸಂಭ್ರಮಾಚರಣೆ ಮಾಡಿದರು.

ಟೆಸ್ಟ್ ಶತಕವನ್ನು ಪ್ರಭು ಶ್ರೀರಾಮನಿಗೆ ಅರ್ಪಿಸಿದ ಟೀಂ ಇಂಡಿಯಾ ಕ್ರಿಕೆಟಿಗ; ವಿಡಿಯೋ ನೋಡಿ
ಕೆಎಸ್ ಭರತ್
ಪೃಥ್ವಿಶಂಕರ
|

Updated on: Jan 21, 2024 | 4:22 PM

Share

ಭಾರತ ಮತ್ತು ಇಂಗ್ಲೆಂಡ್ (India vs England) ನಡುವೆ ಜನವರಿ 25 ರಿಂದ 5 ಪಂದ್ಯಗಳ ಟೆಸ್ಟ್ ಸರಣಿ ಆರಂಭವಾಗಲಿದೆ. ಆದರೆ ಅದಕ್ಕೂ ಮುನ್ನ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ ಎ ಮತ್ತು ಇಂಗ್ಲೆಂಡ್ ಲಯನ್ಸ್ (India A vs England Lions) ತಂಡಗಳ ನಡುವೆ ಅಭ್ಯಾಸ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಕೆಎಸ್ ಭರತ್ (KS Bharat) ಭರ್ಜರಿ ಶತಕ ಸಿಡಿಸಿದ್ದಾರೆ. ಶತಕ ಬಾರಿಸಿದ ನಂತರ ಕೆಎಸ್ ಭರತ್ ಸಂಭ್ರಮಿಸಿದ ವಿಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗಿದೆ.

ಭಗವಾನ್ ರಾಮನಿಗೆ ಟೆಸ್ಟ್ ಶತಕ ಸಮರ್ಪಣೆ

ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಇಂಗ್ಲೆಂಡ್ ಲಯನ್ಸ್ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಕೆಎಸ್ ಭರತ್ ಭರ್ಜರಿ ಬ್ಯಾಟಿಂಗ್ ನಡೆಸಿ ಶತಕ ಸಿಡಿಸಿ ಮಿಂಚಿದರು. ಶತಕ ಬಾರಿಸಿದ ಕೂಡಲೇ ಕೆಎಸ್ ಭರತ್ ಮೈದಾನದ ಮಧ್ಯದಲ್ಲಿ ಸಂಭ್ರಮಾಚರಣೆ ಮಾಡಿದರು. ಬೌಂಡರಿ ಸಿಡಿಸುವ ಮೂಲಕ ಶತಕ ಪೂರೈಸಿದ ಭರತ್, ಬಿಲ್ಲನ್ನು ಹಿಡಿದು ಬಾಣ ಬಿಡುವ ಭಂಗಿಯನ್ನು ಪ್ರದರ್ಶಿಸಿ, ಭಗವಾನ್ ರಾಮನಿಗೆ ತಮ್ಮ ಶತಕವನ್ನು ಅರ್ಪಿಸಿದ್ದಾರೆ.

IND vs ENG: ‘ಟೆಸ್ಟ್ ಸರಣಿ ಗೆಲ್ಲುವ ಫೇವರೇಟ್ ತಂಡ ಭಾರತ’; ಭವಿಷ್ಯ ನುಡಿದ ಇಂಗ್ಲೆಂಡ್ ಮಾಜಿ ನಾಯಕ!

ವಾಸ್ತವವಾಗಿ, ಜನವರಿ 22 ರಂದು ಅಯೋಧ್ಯೆಯಲ್ಲಿ ಭವ್ಯವಾದ ರಾಮ ಮಂದಿರದಲ್ಲಿ ಭಗವಾನ್ ರಾಮನ ಪ್ರಾಣ ಪ್ರತಿಷ್ಠಾಪನೆಯ ಕಾರ್ಯಕ್ರಮ ನಡೆಯಲ್ಲಿದೆ. ಹೀಗಾಗಿ ತಮ್ಮ ಶತಕದ ಸಂಭ್ರಮಾಚರಣೆಯ ವಿಡಿಯೋವನ್ನು ಕೆಎಸ್ ಭರತ್ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, ನೆನಪ್ಪಿನಲ್ಲಿಟ್ಟುಕೊಳ್ಳುವಂತಹದ್ದು, ಜೈ ಶ್ರೀ ರಾಮ್ ಎಂದು ಬರೆದುಕೊಂಡಿದ್ದಾರೆ.

View this post on Instagram

A post shared by K S Bharat (@konasbharat)

ಇಂಗ್ಲೆಂಡ್ ಸರಣಿಗೆ ತಂಡದಲ್ಲಿ ಸ್ಥಾನ

ಇನ್ನು ಈ ಅಭ್ಯಾಸ ಪಂದ್ಯದಲ್ಲಿ ಭರತ್, 165 ಎಸೆತಗಳನ್ನು ಎದುರಿಸಿ 15 ಬೌಂಡರಿಗಳ ನೆರವಿನಿಂದ 116 ರನ್ ಗಳಿಸಿದರು. ಅವರ ಶತಕದ ಆಧಾರದ ಮೇಲೆ ಇಂಗ್ಲೆಂಡ್ ಲಯನ್ಸ್ ಮತ್ತು ಭಾರತ ಎ ನಡುವಿನ ಟೆಸ್ಟ್ ಪಂದ್ಯ ಡ್ರಾದಲ್ಲಿ ಅಂತ್ಯಗೊಂಡಿತು. ಇದೀಗ ಅಭ್ಯಾಸ ಪಂದ್ಯದಲ್ಲಿ ಶತಕದ ಪ್ರದರ್ಶನ ನೀಡಿರುವ ಭರತ್, ಜನವರಿ 25ರಿಂದ ನಡೆಯಲಿರುವ ಟೆಸ್ಟ್ ಸರಣಿಗೆ ಟೀಂ ಇಂಡಿಯಾದಲ್ಲಿ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಆಗಿ ಸ್ಥಾನ ಪಡೆದಿದ್ದಾರೆ. ಟೆಸ್ಟ್ ಸರಣಿಗೂ ಮುನ್ನ ಕೆಎಸ್ ಭರತ್ ಭರ್ಜರಿ ಫಾರ್ಮ್​ನಲ್ಲಿದ್ದಾರೆ. ಅವರ ಅಮೋಘ ಫಾರ್ಮ್ ನೋಡಿದರೆ ಈಗ ನಾಯಕ ರೋಹಿತ್ ಶರ್ಮಾ ಅವರಿಗೆ ಪ್ಲೇಯಿಂಗ್ ಇಲೆವೆನ್​ನಲ್ಲಿ ಅವಕಾಶ ನೀಡಬಹುದು ಎನಿಸುತ್ತಿದೆ.

ಕೆಎಸ್ ಭರತ್ ಇದುವರೆಗೆ ಟೀಂ ಇಂಡಿಯಾ ಪರ ಕೇವಲ 5 ಟೆಸ್ಟ್ ಪಂದ್ಯಗಳನ್ನಾಡಿದ್ದು 129 ರನ್ ಗಳಿಸಿದ್ದಾರೆ. ಕೆಎಸ್ ಭರತ್ ಅಲ್ಲದೆ ಇನ್ನಿಬ್ಬರು ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್‌ಗಳಾದ ಕೆಎಲ್ ರಾಹುಲ್ ಮತ್ತು ಧ್ರುವ್ ಜುರೆಲ್ ಕೂಡ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?