AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND A vs SL A: ವೈಭವ್ ಸಿಡಿಲಬ್ಬರ..​ ತ್ರಿಕೋನ ಸರಣಿ ಗೆದ್ದ ಟೀಂ ಇಂಡಿಯಾ

India A Wins Dambulla Tri-Series Final: ಶ್ರೀಲಂಕಾದ ದಂಬುಲ್ಲಾದಲ್ಲಿ ನಡೆದ ತ್ರಿಕೋನ ಏಕದಿನ ಸರಣಿಯ ಫೈನಲ್‌ನಲ್ಲಿ ಭಾರತ ಎ ತಂಡ ಶ್ರೀಲಂಕಾ ಎ ವಿರುದ್ಧ ಭರ್ಜರಿ ಜಯ ಸಾಧಿಸಿದೆ. ವೈಭವ್ ಸೂರ್ಯವಂಶಿ ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ 378 ರನ್ ಗಳಿಸಿದ ಭಾರತ ಎ, ಆತಿಥೇಯರನ್ನು ಸೋಲಿಸಿತು. ಈ ಮೂಲಕ ಭಾರತ ಎ ತಂಡವು ಸತತ 7ನೇ ತ್ರಿಕೋನ ಸರಣಿಯನ್ನು ಗೆದ್ದು ಇತಿಹಾಸ ನಿರ್ಮಿಸಿದೆ. ಈ ಸಾಧನೆಯು ತಂಡದ ಪ್ರವಾಸಕ್ಕೆ ಅದ್ಧೂರಿ ಅಂತ್ಯ ನೀಡಿದೆ.

IND A vs SL A: ವೈಭವ್ ಸಿಡಿಲಬ್ಬರ..​ ತ್ರಿಕೋನ ಸರಣಿ ಗೆದ್ದ ಟೀಂ ಇಂಡಿಯಾ
India A
ಪೃಥ್ವಿಶಂಕರ
|

Updated on:Jun 21, 2026 | 6:44 PM

Share

ಶ್ರೀಲಂಕಾದ ದಂಬುಲ್ಲಾ ಕ್ರೀಡಾಂಗಣದಲ್ಲಿ ನಡೆದ ಭಾರತ ಎ ಹಾಗೂ ಶ್ರೀಲಂಕಾ ಎ (India A vs Sri Lanka A) ತಂಡಗಳ ನಡುವಿನ ತ್ರಿಕೋನ ಏಕದಿನ ಸರಣಿಯ ಫೈನಲ್ ಪಂದ್ಯದಲ್ಲಿ ಆತಿಥೇಯ ತಂಡವನ್ನು ಸೋಲಿಸಿದ ಭಾರತ ಎ ತಂಡ ತ್ರಿಕೋನ ಸರಣಿಯನ್ನು ತನ್ನ ತೆಕ್ಕೆಗೆ ಹಾಕಿಕೊಂಡಿದೆ. ಈ ಫೈನಲ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಭಾರತ ಎ ತಂಡ ವೈಭವ್ ಸೂರ್ಯವಂಶಿ (Vaibhav Sooryavanshi) ಅವರ ಸ್ಫೋಟಕ ಬ್ಯಾಟಿಂಗ್​ನಿಂದಾಗಿ ನಿಗದಿತ 50 ಓವರ್​ಗಳಲ್ಲಿ 378 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಶ್ರೀಲಂಕಾ ನಿಯಮಿತ ಅಂತರಗಳಲ್ಲಿ ವಿಕೆಟ್ ಕಳೆದುಕೊಂಡು ಸೋಲಿಗೆ ಶರಣಾಯಿತು. ಈ ಮೂಲಕ ಭಾರತ ತಂಡ ಸತತ 7ನೇ ತ್ರಿಕೋನ ಸರಣಿಯನ್ನು ಗೆದ್ದ ದಾಖಲೆಯೊಂದಿಗೆ ಈ ಪ್ರವಾಸವನ್ನು ಅಂತ್ಯಗೊಳಿಸಿದೆ.

ಸ್ಫೋಟಕ ಆರಂಭ ನೀಡಿದ ವೈಭವ್

ಈ ಫೈನಲ್‌ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ಎ ತಂಡವು 50 ಓವರ್‌ಗಳಲ್ಲಿ 9 ವಿಕೆಟ್‌ಗಳ ನಷ್ಟಕ್ಕೆ 377 ರನ್‌ಗಳ ಬೃಹತ್ ಮೊತ್ತವನ್ನು ಗಳಿಸಿತು. ತಂಡದ ಪರ ವೈಭವ್ ಸೂರ್ಯವಂಶಿ ಕೇವಲ 29 ಎಸೆತಗಳಲ್ಲಿ 10 ಬೌಂಡರಿ ಮತ್ತು 8 ಸಿಕ್ಸರ್‌ಗಳನ್ನು ಒಳಗೊಂಡಂತೆ 94 ರನ್ ಗಳಿಸಿದರು. ಅವರ ಸ್ಟ್ರೈಕ್ ರೇಟ್ 324 ಕ್ಕಿಂತ ಹೆಚ್ಚಿತ್ತು. ಮತ್ತೊಬ್ಬ ಆರಂಭಿಕ ಪ್ರಿಯಾಂಶ್ ಆರ್ಯ ಕೂಡ 39 ರನ್ ಗಳಿಸಿದರು. ನಾಯಕ ತಿಲಕ್ ವರ್ಮಾ ಕೂಡ 67 ರನ್‌ಗಳ ಉಪಯುಕ್ತ ಇನ್ನಿಂಗ್ಸ್ ಆಡಿದರು. ಕೊನೆಯಲ್ಲಿ ಅನುಕುಲ್ ರಾಯ್ 15 ಎಸೆತಗಳಲ್ಲಿ 39 ರನ್ ಬಾರಿಸಿ ತಂಡದ ಸ್ಕೋರ್ ಅನ್ನು 377 ರನ್​​ಗಳಿಗೆ ಕೊಂಡೊಯ್ದರು.

ಇತ್ತ ಈ ಪಂದ್ಯದಲ್ಲಿ ಶ್ರೀಲಂಕಾ ಎ ತಂಡದ ಬೌಲಿಂಗ್ ಸಾಕಷ್ಟು ದುಬಾರಿಯಾಗಿತ್ತು. ವನುಜಾ ಸಹನ್, ಕುಗಥಾಸ್ ಮಥುಲನ್ ಮತ್ತು ರವಿಂಡು ಫರ್ನಾಂಡೊ ತಲಾ ಎರಡು ವಿಕೆಟ್ ಪಡೆದರೂ, ಉಳಿದ ಬೌಲರ್‌ಗಳು ಪರಿಣಾಮ ಬೀರುವಲ್ಲಿ ವಿಫಲರಾದರು, ಇದನ್ನು ಭಾರತೀಯ ಬ್ಯಾಟ್ಸ್‌ಮನ್‌ಗಳು ಸದುಪಯೋಗಪಡಿಸಿಕೊಂಡರು.

68, 175, 67, 96, 94..! ನಿರ್ಣಾಯಕ ಪಂದ್ಯಗಳಲ್ಲಿ ಅಬ್ಬರಿಸುವ ವೈಭವ್ ಸೂರ್ಯವಂಶಿ

ಭಾರತಕ್ಕೆ ಸುಲಭ ಜಯ

ಈ ಗುರಿಯನ್ನು ಬೆನ್ನಟ್ಟಿದ ಶ್ರೀಲಂಕಾ ಎ ತಂಡ ಕಳಪೆ ಆರಂಭ ಪಡೆದುಕೊಂಡಿತು. ಮಧ್ಯಮ ಓವರ್‌ಗಳಲ್ಲಿ ಪ್ರತಿರೋಧ ತೋರಿತ್ತಾದರೂ ಭಾರತೀಯ ಬೌಲರ್‌ಗಳ ಒತ್ತಡಕ್ಕೆ ಮಣಿದು 47.1 ಓವರ್‌ಗಳಲ್ಲಿ ಕೇವಲ 311 ರನ್‌ಗಳಿಗೆ ಆಲ್ ಔಟ್ ಆಯಿತು. ತಂಡದ ಪರ ವನಜಾ ಸಹನ್ 62 ರನ್‌ ಬಾರಿಸಿದರೆ, ಸದೇರಾ ಸಮರವಿಕ್ರಮ 52 ರನ್ ಗಳಿಸಿದರು. ವಿಜಯಕಾಂತ್ ವ್ಯಾಸಕಾಂತ್ 39 ಮತ್ತು ನಾಯಕ ಸಹನ್ ಅರಚ್ಚಿಗೆ 38 ರನ್​ಗಳ ಕಾಣಿಕೆ ನೀಡಿದರಾದರೂ ತಂಡವನ್ನು ಗೆಲುವಿನ ದಡ ಮುಟ್ಟಿಸಲು ಸಾಧ್ಯವಾಗಲಿಲ್ಲ.

ಮತ್ತೊಂದೆಡೆ, ಭಾರತದ ಪರ ಯಶ್ ಠಾಕೂರ್ ಮತ್ತು ವಿಪ್ರಜ್ ನಿಗಮ್ ಅದ್ಭುತ ಬೌಲಿಂಗ್ ಮಾಡಿದರು. ಇಬ್ಬರೂ ಬೌಲರ್‌ಗಳು ತಲಾ ಮೂರು ವಿಕೆಟ್ ಪಡೆದರು. ಅನುಕುಲ್ ರಾಯ್ ಕೂಡ ಎರಡು ವಿಕೆಟ್ ಪಡೆದರು. ಅಶೋಕ್ ಶರ್ಮಾ ಮತ್ತು ತಿಲಕ್ ವರ್ಮಾ ಕೂಡ ತಲಾ ಒಂದು ವಿಕೆಟ್ ಪಡೆದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:03 pm, Sun, 21 June 26

Follow Us
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
ನೀಟ್ ಪರೀಕ್ಷೆ: ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದವರಿಗೆ ನೋ ಎಂಟ್ರಿ
ನೀಟ್ ಪರೀಕ್ಷೆ: ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದವರಿಗೆ ನೋ ಎಂಟ್ರಿ