AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

AUA-W vs IND-W: 114 ರನ್‌ಗಳಿಂದ ಸೋತ ಟೀಂ ಇಂಡಿಯಾ; ಆಸೀಸ್ ವನಿತಾ ಪಡೆಗೆ ಟಿ20 ಸರಣಿ

IND-A vs AUS-A Women 2nd T20I: ಭಾರತ-ಎ ಮಹಿಳಾ ಕ್ರಿಕೆಟ್ ತಂಡ ಆಸ್ಟ್ರೇಲಿಯಾ ಪ್ರವಾಸದಲ್ಲಿ ಸತತ ಎರಡನೇ ಪಂದ್ಯವನ್ನೂ ಸೋತು ಸರಣಿಯನ್ನು ಕಳೆದುಕೊಂಡಿದೆ.ತಂಡದ ಬ್ಯಾಟರ್​ಗಳ ಕಳಪೆ ಪ್ರದರ್ಶನವೇ ಸೋಲಿಗೆ ಕಾರಣ. ಎರಡನೇ ಟಿ20 ಪಂದ್ಯದಲ್ಲಿ 187 ರನ್​ಗಳ ಗುರಿ ಬೆನ್ನಟ್ಟಿದ ಭಾರತ ಕೇವಲ 73 ರನ್​ಗಳಿಗೆ ಆಲೌಟ್ ಆಯಿತು . ಮುಂದಿನ ಪಂದ್ಯ ಆಗಸ್ಟ್ 10 ರಂದು ನಡೆಯಲಿದೆ.

AUA-W vs IND-W: 114 ರನ್‌ಗಳಿಂದ ಸೋತ ಟೀಂ ಇಂಡಿಯಾ; ಆಸೀಸ್ ವನಿತಾ ಪಡೆಗೆ ಟಿ20 ಸರಣಿ
Aua W Vs Ind W
ಪೃಥ್ವಿಶಂಕರ
|

Updated on:Aug 09, 2025 | 5:27 PM

Share

ಆಸ್ಟ್ರೇಲಿಯಾ ಪ್ರವಾಸದಲ್ಲಿ ಭಾರತ ವನಿತಾ ಎ ತಂಡದ (India A Women’s team) ಕಳಪೆ ಪ್ರದರ್ಶನ ಮುಂದುವರೆದಿದೆ. ಸತತ ಎರಡನೇ ಪಂದ್ಯದಲ್ಲೂ ರಾಧಾ ಯಾದವ್ (Radha Yadav) ನೇತೃತ್ವದ ಭಾರತ ತಂಡ ಸೋಲನ್ನು ಎದುರಿಸಿದಲ್ಲದೆ ಸರಣಿಯನ್ನೂ ಕಳೆದುಕೊಂಡಿದೆ. ಆಸ್ಟ್ರೇಲಿಯಾ ವಿರುದ್ಧ ನಡೆದ ಎರಡನೇ ಅನಧಿಕೃತ ಟಿ20ಐ ಪಂದ್ಯದಲ್ಲಿ ಟೀಂ ಇಂಡಿಯಾದ 9 ಬ್ಯಾಟರ್​ಗಳು ಒಟ್ಟಾಗಿ ಕೇವಲ 24 ರನ್‌ಗಳನ್ನು ಮಾತ್ರ ಗಳಿಸಿದರು. ಅವರ ಕಳಪೆ ಬ್ಯಾಟಿಂಗ್‌ನಿಂದಾಗಿ ಭಾರತ 114 ರನ್‌ಗಳ ಹೀನಾಯ ಸೋಲನ್ನು ಎದುರಿಸಬೇಕಾಯಿತು. ಇದಕ್ಕೂ ಮೊದಲು ನಡೆದಿದ್ದ ಮೊದಲ ಟಿ20ಐ ಪಂದ್ಯದಲ್ಲಿ ಭಾರತ-ಎ ಮಹಿಳಾ ತಂಡವು 13 ರನ್‌ಗಳಿಂದ ಸೋಲನ್ನು ಎದುರಿಸಬೇಕಾಯಿತು. ಇದರೊಂದಿಗೆ, ಆಸ್ಟ್ರೇಲಿಯಾ ಮೂರು ಪಂದ್ಯಗಳ ಟಿ20ಐ ಸರಣಿಯಲ್ಲಿ 2-0 ಅಂತರದಿಂದ ಮುನ್ನಡೆ ಸಾಧಿಸಿದೆ.

ಭಾರತ ತಂಡದ ಕಳಪೆ ಬ್ಯಾಟಿಂಗ್

ಭಾರತ-ಎ ಮಹಿಳಾ ತಂಡವು ಪ್ರಸ್ತುತ ಆಸ್ಟ್ರೇಲಿಯಾ ಪ್ರವಾಸದಲ್ಲಿದೆ. ಮೊದಲ ಟಿ20ಐ ಪಂದ್ಯವನ್ನು ಸೋತ ನಂತರ, ಭಾರತ ತಂಡವು ಎರಡನೇ ಪಂದ್ಯವನ್ನು ಯಾವುದೇ ಬೆಲೆ ತೆತ್ತಾದರೂ ಗೆಲ್ಲಲೇಬೇಕಾಯಿತು, ಆದರೆ ತಂಡದ ಬ್ಯಾಟರ್​ಗಳು ತುಂಬಾ ನಾಚಿಕೆಗೇಡಿನ ಪ್ರದರ್ಶನ ನೀಡಿದ ಕಾರಣ ಪಂದ್ಯವನ್ನು ಮತ್ತು ಸರಣಿಯನ್ನು ಕಳೆದುಕೊಳ್ಳಬೇಕಾಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ-ಎ ಮಹಿಳಾ ತಂಡವು 20 ಓವರ್‌ಗಳಲ್ಲಿ 4 ವಿಕೆಟ್‌ಗಳಿಗೆ 187 ರನ್ ಗಳಿಸಿತು.

73 ರನ್‌ಗಳಿಗೆ ಆಲೌಟ್

ಇದಕ್ಕೆ ಉತ್ತರವಾಗಿ, ಇಡೀ ಭಾರತ ತಂಡವು 15.1 ಓವರ್‌ಗಳಲ್ಲಿ 73 ರನ್‌ಗಳಿಗೆ ಆಲೌಟ್ ಆಯಿತು. ಕನ್ನಡತಿ ವೃಂದಾ ದಿನೇಶ್  ತಂಡದ ಪರ ಅತಿ ಹೆಚ್ಚು 21 ರನ್‌ಗಳನ್ನು ಗಳಿಸಿದರು. ಇವರ ಹೊರತಾಗಿ, ಮಿನ್ನು ಮಣಿ 20 ರನ್‌ಗಳ ಇನ್ನಿಂಗ್ಸ್ ಆಡಿದರು. ಇವರ ಹೊರತಾಗಿ, ಯಾವುದೇ ಬ್ಯಾಟರ್​​ಗೆ ಎರಡಂಕಿಯನ್ನು ತಲುಪಲು ಸಾಧ್ಯವಾಗಲಿಲ್ಲ. ಆಸ್ಟ್ರೇಲಿಯಾ ಪರ ಕಿಮ್ ಗ್ರಾತ್ 3 ಓವರ್‌ಗಳಲ್ಲಿ ಕೇವಲ 7 ರನ್‌ಗಳನ್ನು ನೀಡಿ 4 ವಿಕೆಟ್ ಕಬಳಿಸಿದರೆ, ಆಮಿ ಅಗರ್ ಮತ್ತು ಟೆಸ್ ಫ್ಲಿಂಟಾಫ್ ತಲಾ ಎರಡು ವಿಕೆಟ್‌ಗಳನ್ನು ಪಡೆದರು.

ಅಲಿಸಾ ಹೀಲಿ ಅದ್ಭುತ ಬ್ಯಾಟಿಂಗ್

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡವು ಉತ್ತಮ ಆರಂಭ ಪಡೆಯಿತು. ತಂಡದ ಆರಂಭಿಕ ಆಟಗಾರ್ತಿ ತಹ್ಲಿಯಾ ವಿಲ್ಸನ್ ಮತ್ತು ಅಲಿಸಾ ಹೀಲಿ ಮೊದಲ ವಿಕೆಟ್‌ಗೆ 64 ಎಸೆತಗಳಲ್ಲಿ 95 ರನ್‌ಗಳ ಜೊತೆಯಾಟವಾಡಿದರು. ಅಲಿಸಾ ಹೀಲಿ 44 ಎಸೆತಗಳಲ್ಲಿ 12 ಬೌಂಡರಿಗಳ ಸಹಾಯದಿಂದ 70 ರನ್ ಗಳಿಸಿದರೆ, ತಹ್ಲಿಯಾ ವಿಲ್ಸನ್ 35 ಎಸೆತಗಳಲ್ಲಿ 6 ಬೌಂಡರಿಗಳ ಸಹಾಯದಿಂದ 43 ರನ್ ಗಳಿಸಿದರು.

IND vs NZ: ರಾಧಾ ಏಕಾಂಗಿ ಹೋರಾಟ ವ್ಯರ್ಥ; 2ನೇ ಏಕದಿನ ಪಂದ್ಯ ಗೆದ್ದ ಕಿವೀಸ್ ತಂಡ

ಇವರಲ್ಲದೆ, ಅನಿಕಾ ಲೆರಾಯ್ಡ್ 21 ಎಸೆತಗಳಲ್ಲಿ 5 ಬೌಂಡರಿಗಳ ಸಹಾಯದಿಂದ 35 ರನ್ ಗಳಿಸುವ ಮೂಲಕ ಮಿಂಚಿದರು. ಕರ್ಟ್ನಿ ವೆಬ್ 13 ಎಸೆತಗಳಲ್ಲಿ ಅಜೇಯ 26 ರನ್ ಗಳಿಸಿದರು. ಈ ರೀತಿಯಾಗಿ, ತಂಡವು 20 ಓವರ್‌ಗಳಲ್ಲಿ 4 ವಿಕೆಟ್‌ಗಳಿಗೆ 187 ರನ್ ಗಳಿಸಿತು. ರಾಧಾ ಯಾದವ್ ಟೀಂ ಇಂಡಿಯಾ ಪರ ಗರಿಷ್ಠ ಎರಡು ವಿಕೆಟ್ ಪಡೆದರು. ಪ್ರೇಮಾ ರಾವತ್ ಒಂದು ವಿಕೆಟ್ ಪಡೆದರು. ಕೊನೆಯ ಟಿ20ಐ ಪಂದ್ಯ ಆಗಸ್ಟ್ 10 ರಂದು ನಡೆಯಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:24 pm, Sat, 9 August 25

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ