AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಯಕನಾಗಿ ಭಾರತದಲ್ಲಿ ಚೊಚ್ಚಲ ಟಿ20 ಸರಣಿ ಗೆದ್ದ ಶ್ರೇಯಸ್ ಅಯ್ಯರ್

ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಅಫ್ಘಾನಿಸ್ತಾನ ವಿರುದ್ಧದ ಎರಡನೇ T20 ಪಂದ್ಯವನ್ನು 7 ವಿಕೆಟ್​ಗಳಿಂದ ಗೆದ್ದ ಭಾರತ, ಸರಣಿಯನ್ನು 2-0 ಅಂತರದಿಂದ ವಶಪಡಿಸಿಕೊಂಡಿತು. ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ಟೀಂ ಇಂಡಿಯಾ ತನ್ನ ತಾಯ್ನಾಡಿನಲ್ಲಿ ಮೊದಲ T20 ಸರಣಿ ಗೆದ್ದು ದಾಖಲೆ ಬರೆಯಿತು. 160 ರನ್ ಗುರಿಯನ್ನು ಭಾರತ 15 ಓವರ್‌ಗಳಲ್ಲಿ ಸಾಧಿಸಿತು.

ನಾಯಕನಾಗಿ ಭಾರತದಲ್ಲಿ ಚೊಚ್ಚಲ ಟಿ20 ಸರಣಿ ಗೆದ್ದ ಶ್ರೇಯಸ್ ಅಯ್ಯರ್
ಭಾರತ Vs ಅಫ್ಘಾನಿಸ್ತಾನ
ಪೃಥ್ವಿಶಂಕರ
|

Updated on:Sep 15, 2026 | 10:38 PM

Share

ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಅಫ್ಘಾನಿಸ್ತಾನ ವಿರುದ್ಧದ ಎರಡನೇ ಪಂದ್ಯವನ್ನು 7 ವಿಕೆಟ್​ಗಳಿಂದ ಗೆದ್ದುಕೊಂಡ ಟೀಂ ಇಂಡಿಯಾ ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ ಮೂರು ಪಂದ್ಯಗಳ ಟಿ20 ಸರಣಿಯನ್ನು 2-0 ಅಂತರದಿಂದ ಗೆದ್ದುಕೊಂಡಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಅಫ್ಘಾನಿಸ್ತಾನ 160 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ 3 ವಿಕೆಟ್‌ಗಳನ್ನು ಕಳೆದುಕೊಂಡು 15ನೇ ಓವರ್​ನಲ್ಲಿಯೇ ಜಯ ಸಾಧಿಸಿತು. ಇದರೊಂದಿಗೆ ನಾಯಕನಾಗಿ ಶ್ರೇಯಸ್ ಅಯ್ಯರ್ ತಾಯ್ನಾಡಿಯಲ್ಲಿ ಮೊದಲ ಟಿ20 ಸರಣಿ ಗೆದ್ದ ಸಾಧನೆ ಮಾಡಿದರು. ಹಾಗೆಯೇ ಟೀಂ ಇಂಡಿಯಾ ತನ್ನ ತವರು ನೆಲದಲ್ಲೇ ಪ್ರವಾಸಿ ತಂಡವಾಗಿ ಸರಣಿ ಗೆದ್ದ ಅಪರೂಪದ ದಾಖಲೆಯನ್ನು ನಿರ್ಮಿಸಿತು.

ಅಫ್ಘನ್​ಗೆ ಆರಂಭಿಕ ಆಘಾತ

ಈ ಪಂದ್ಯದಲ್ಲಿ, ನಾಯಕ ಶ್ರೇಯಸ್ ಅಯ್ಯರ್ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು. ಹೀಗಾಗಿ ಮೊದಲು ಬ್ಯಾಟಿಂಗ್‌ ಮಾಡಿದ ಅಫ್ಘನ್ ತಂಡಕ್ಕೆ ಮತ್ತೊಮ್ಮೆ ಉತ್ತಮ ಆರಂಭ ಸಿಗಲಿಲ್ಲ. ಎರಡನೇ ಓವರ್‌ನಲ್ಲಿ ಅರ್ಷದೀಪ್ ಸಿಂಗ್ ಅಫ್ಘಾನಿಸ್ತಾನಕ್ಕೆ ಮೊದಲ ಹೊಡೆತ ನೀಡಿ ರಹಮಾನುಲ್ಲಾ ಗುರ್ಬಾಜ್ ಅವರನ್ನು ಶೂನ್ಯಕ್ಕೆ ಔಟ್ ಮಾಡಿದರು. ನಂತರ ನಾಯಕ ಇಬ್ರಾಹಿಂ ಜದ್ರಾನ್ ಆಕ್ರಮಣಕಾರಿಯಾಗಿ ಬ್ಯಾಟಿಂಗ್‌ ಮಾಡಿ ಬುಮ್ರಾ, ಅರ್ಶ್‌ದೀಪ್, ಅಕ್ಷರ್ ಪಟೇಲ್ ಮತ್ತು ಬಿಷ್ಣೋಯ್ ವಿರುದ್ಧ ಸತತ ಬೌಂಡರಿಗಳನ್ನು ಬಾರಿಸಿ 37 ರನ್ ಕಲೆಹಾಕಿದರು.

3 ವಿಕೆಟ್ ಉರುಳಿಸಿದ ನಿತೀಶ್

ಆದರೆ ಈ ವೇಳೆ ದಾಳಿಗಿಳಿದ ನಿತೀಶ್ ರೆಡ್ಡಿ ತಮ್ಮ ಮೊದಲ ಎಸೆತದಲ್ಲೇ ಅಪಾಯಕಾರಿಯಾಗಿ ಕಾಣುತ್ತಿದ್ದ ಜದ್ರಾನ್ ಅವರನ್ನು ಔಟ್ ಮಾಡಿದರು. ನಂತರ ಬಿಷ್ಣೋಯ್, ಸೆಡಿಕುಲ್ಲಾ ಅಟಲ್ ಅವರನ್ನು ಔಟ್ ಮಾಡಿದರೆ, ಗುಲ್ಬಾದಿನ್ ನೈಬ್ ನಿತೀಶ್ ಬೌಲಿಂಗ್​ನಲ್ಲಿ ಸಂಜು ಸ್ಯಾಮ್ಸನ್​ಗೆ ಸುಲಭ ಕ್ಯಾಚ್ ನೀಡಿದರು. ದರ್ವಿಶ್ ರಸೂಲಿ ಮತ್ತು ಅಜ್ಮತುಲ್ಲಾ ಉಮರ್ಜೈ ಅವರನ್ನು ಕ್ರಮವಾಗಿ ಅರ್ಶ್ದೀಪ್ ಮತ್ತು ಅಕ್ಷರ್ ಔಟ್ ಮಾಡಿದರು. ಕೊನೆಯಲ್ಲಿ, ರಶೀದ್ ಖಾನ್ 28 ರನ್ ಗಳಿಸಿ ತಂಡವನ್ನು 159ರನ್​ಗಳಿಗೆ ಕೊಂಡೊಯ್ದರು. ಭಾರತ ಪರ, ನಿತೀಶ್ ರೆಡ್ಡಿ 24ರನ್​ಗಳಿಗೆ 3 ವಿಕೆಟ್, ಅರ್ಷದೀಪ್ 35ರನ್​ಗಳಿಗೆ 2 ವಿಕೆಟ್ ಪಡೆದರು. ಬುಮ್ರಾ, ಬಿಷ್ಣೋಯ್ ಮತ್ತು ಅಕ್ಷರ್ ತಲಾ 1 ವಿಕೆಟ್ ಪಡೆದರು.

ಭಾರತಕ್ಕೆ ಸ್ಫೋಟಕ ಆರಂಭ

160 ರನ್​ಗಳ ಗುರಿಯನ್ನು ಬೆನ್ನಟ್ಟಿದ ಭಾರತಕ್ಕೆ ಆರಂಭಿಕರು ಭರ್ಜರಿ ಆರಂಭ ನೀಡಿದರು. ಸಂಜು ಸ್ಯಾಮ್ಸನ್ ಮತ್ತು ಅಭಿಷೇಕ್ ಶರ್ಮಾ ಮೊದಲ ವಿಕೆಟ್​ಗೆ ಕೇವಲ 6.2 ಓವರ್​ಗಳಲ್ಲಿ 88 ರನ್​ಗಳ ಭರ್ಜರಿ ಜೊತೆಯಾಟ ನೀಡಿದರು. ಅಭಿಷೇಕ್ 19 ಎಸೆತಗಳಲ್ಲಿ 2 ಬೌಂಡರಿ ಮತ್ತು 4 ಸಿಕ್ಸರ್​ಗಳ ಸಹಿತ 39 ರನ್ ಬಾರಿಸಿ ಔಟಾದರೆ, ಇತ್ತ ಸಂಜು ಸ್ಯಾಮ್ಸನ್ 22 ಎಸೆತಗಳಲ್ಲಿ 57 ರನ್ ಬಾರಿಸುವ ಮೂಲಕ ತಮ್ಮ ಟೀಕಾಕಾರರಿಗೆ ಸೂಕ್ತ ಉತ್ತರ ನೀಡಿದರು. ಇದರಲ್ಲಿ 7 ಬೌಂಡರಿ ಮತ್ತು 4 ಸಿಕ್ಸರ್​ಗಳು ಸೇರಿದ್ದವು.

ತಮ್ಮ ವೃತ್ತಿಜೀವನದ ಅತ್ಯಂತ ವೇಗದ ಅರ್ಧಶತಕ ಅಬ್ಬರಿಸಿದ ಸಂಜು ಸ್ಯಾಮ್ಸನ್..!

ನಂತರ ಇಶಾನ್ ಕಿಶನ್ ಅಜೇಯ 38 ರನ್ ಗಳಿಸಿ ತಂಡವನ್ನು ಗೆಲುವಿನತ್ತ ಕೊಂಡೊಯ್ದರು. ತಿಲಕ್ ವರ್ಮಾ ಕೂಡ ಅಜೇಯ 15 ರನ್ ಬಾರಿಸಿದರು. ಅಂತಿಮವಾಗಿ ಭಾರತ 14.5 ಓವರ್‌ಗಳಲ್ಲಿ 3 ವಿಕೆಟ್‌ಗಳ ನಷ್ಟಕ್ಕೆ ಗುರಿ ತಲುಪಿ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿತು. ಸರಣಿಯ ಅಂತಿಮ ಪಂದ್ಯವು ಈಗ ಸೆಪ್ಟೆಂಬರ್ 17 ರಂದು ನಡೆಯಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:29 pm, Tue, 15 September 26

Follow Us
ಜಾರಕಿಹೊಳಿ ಮೇಲೆ ಇಡಿ ದಾಳಿ:‘ಕೈ’ ಮನೆಯೊಳಗೆ ಷಡ್ಯಂತ್ರದ ಮಾತಿನ ಸದ್ದು
ಜಾರಕಿಹೊಳಿ ಮೇಲೆ ಇಡಿ ದಾಳಿ:‘ಕೈ’ ಮನೆಯೊಳಗೆ ಷಡ್ಯಂತ್ರದ ಮಾತಿನ ಸದ್ದು
ಅಂಬಾನಿ ಮನೆಯಲ್ಲಿ ಅದ್ದೂರಿ ಗಣೇಶೋತ್ಸವ; ರಾಧಿಕಾ ಮರ್ಚೆಂಟ್​ ನೃತ್ಯ
ಅಂಬಾನಿ ಮನೆಯಲ್ಲಿ ಅದ್ದೂರಿ ಗಣೇಶೋತ್ಸವ; ರಾಧಿಕಾ ಮರ್ಚೆಂಟ್​ ನೃತ್ಯ
ಬೆಂಗಳೂರಿನಲ್ಲಿ ಅಬ್ಬರಿಸಿದ ಮಳೆರಾಯ: ರಸ್ತೆಗಳೆಲ್ಲಾ ಜಲಾವೃತ!
ಬೆಂಗಳೂರಿನಲ್ಲಿ ಅಬ್ಬರಿಸಿದ ಮಳೆರಾಯ: ರಸ್ತೆಗಳೆಲ್ಲಾ ಜಲಾವೃತ!
ಕೊಪ್ಪಳ ಹಾಸ್ಟೆಲ್​​ಗೆ ಬಂದು ತಿಗಣಿಗೆ ಮದ್ದು ನೀಡಿದ ಚೆನ್ನೈ ತಜ್ಞರು
ಕೊಪ್ಪಳ ಹಾಸ್ಟೆಲ್​​ಗೆ ಬಂದು ತಿಗಣಿಗೆ ಮದ್ದು ನೀಡಿದ ಚೆನ್ನೈ ತಜ್ಞರು
ಬಿಗ್​​ಬಾಸ್​​ ಮನೆಯಿಂದ ಹೊರಬಂದಿದ್ದಕ್ಕೆ ಕಾರಣ ತಿಳಿಸಿದ ಓಂ ಪ್ರಕಾಶ್ ರಾವ್
ಬಿಗ್​​ಬಾಸ್​​ ಮನೆಯಿಂದ ಹೊರಬಂದಿದ್ದಕ್ಕೆ ಕಾರಣ ತಿಳಿಸಿದ ಓಂ ಪ್ರಕಾಶ್ ರಾವ್
ಅರಿಶಿನದ ಕೊಂಬುಗಳಿಂದಲೇ ಸಿದ್ಧವಾದ ಪರಿಸರಸ್ನೇಹಿ ಗಣೇಶನ ಮೂರ್ತಿ!
ಅರಿಶಿನದ ಕೊಂಬುಗಳಿಂದಲೇ ಸಿದ್ಧವಾದ ಪರಿಸರಸ್ನೇಹಿ ಗಣೇಶನ ಮೂರ್ತಿ!
ಕೆಡಿಪಿ ಸಭೆಗೆ ಪೊಲೀಸ್ ಆಯುಕ್ತ ಗೈರಾಗಿದ್ದಕ್ಕೆ ಸಚಿವ ಯು.ಟಿ.ಖಾದರ್ ಗರಂ
ಕೆಡಿಪಿ ಸಭೆಗೆ ಪೊಲೀಸ್ ಆಯುಕ್ತ ಗೈರಾಗಿದ್ದಕ್ಕೆ ಸಚಿವ ಯು.ಟಿ.ಖಾದರ್ ಗರಂ
ಗಂಭೀರ ಪಡೆದುಕೊಂಡ ಜಾರಕಿಹೊಳಿ ಕೇಸ್: ಇಡಿ ಸಭೆಯಲ್ಲಿ ಮಹತ್ವದ ಚರ್ಚೆ
ಗಂಭೀರ ಪಡೆದುಕೊಂಡ ಜಾರಕಿಹೊಳಿ ಕೇಸ್: ಇಡಿ ಸಭೆಯಲ್ಲಿ ಮಹತ್ವದ ಚರ್ಚೆ
LIVE: ಕೇಂದ್ರ ಸಚಿವ ಜೆ.ಪಿ‌.ನಡ್ಡಾ ಮಹತ್ವದ ಸುದ್ದಿಗೋಷ್ಠಿ
LIVE: ಕೇಂದ್ರ ಸಚಿವ ಜೆ.ಪಿ‌.ನಡ್ಡಾ ಮಹತ್ವದ ಸುದ್ದಿಗೋಷ್ಠಿ
ಕ್ಯಾರೆಕ್ಟರ್ ಲೆಸ್ ಎಂದ ಮಂಜ, ಗಂಡಸೇ ಅಲ್ಲ ಎಂದ ಕಾವ್ಯಾ: ವಿಡಿಯೋ
ಕ್ಯಾರೆಕ್ಟರ್ ಲೆಸ್ ಎಂದ ಮಂಜ, ಗಂಡಸೇ ಅಲ್ಲ ಎಂದ ಕಾವ್ಯಾ: ವಿಡಿಯೋ