AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಮೊದಲ ಟಿ20 ಪಂದ್ಯಕ್ಕಾಗಿ ಕೋಲ್ಕತ್ತಾಗೆ ಬಂದಿಳಿದ ಉಭಯ ತಂಡಗಳು; ವಿಡಿಯೋ

IND vs ENG: ಜನವರಿ 22 ರಿಂದ ಆರಂಭವಾಗಲಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯಕ್ಕಾಗಿ ಸೂರ್ಯಕುಮಾರ್ ಯಾದವ್ ನೇತೃತ್ವದ ಭಾರತ ಮತ್ತು ಜೋಸ್ ಬಟ್ಲರ್ ನೇತೃತ್ವದ ಇಂಗ್ಲೆಂಡ್ ತಂಡಗಳು ಕೋಲ್ಕತ್ತಾಗೆ ಬಂದಿಳಿದಿವೆ. ಇಂಗ್ಲೆಂಡ್ ವಿರುದ್ಧ ಭಾರತದ ಗೆಲುವಿನ ದಾಖಲೆ ಅದ್ಭುತವಾಗಿದ್ದು,ಈ ಸರಣಿಯಲ್ಲೂ ಮೇಲುಗೈ ಸಾಧಿಸಲಿ ಎಂಬುದು ಅಭಿಮಾನಿಗಳ ಆಶಯವಾಗಿದೆ.

IND vs ENG: ಮೊದಲ ಟಿ20 ಪಂದ್ಯಕ್ಕಾಗಿ ಕೋಲ್ಕತ್ತಾಗೆ ಬಂದಿಳಿದ ಉಭಯ ತಂಡಗಳು; ವಿಡಿಯೋ
ಭಾರತ- ಇಂಗ್ಲೆಂಡ್ ಆಟಗಾರರು
ಪೃಥ್ವಿಶಂಕರ
|

Updated on: Jan 18, 2025 | 10:38 PM

Share

ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿ ಇದೇ ಜನವರಿ 22 ರಿಂದ ಆರಂಭವಾಗಲಿದೆ. ಈ ಸರಣಿಗಾಗಿ ಈಗಾಗಲೇ ಉಭಯ ತಂಡಗಳನ್ನು ಪ್ರಕಟಿಸಲಾಗಿದೆ. ಆತಿಥೇಯ ಭಾರತ ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸುತ್ತಿದ್ದರೆ, ಅತ್ತ ಬಲಿಷ್ಠ ಇಂಗ್ಲೆಂಡ್‌ ತಂಡವನ್ನು ಜೋಸ್ ಬಟ್ಲರ್ ಮುನ್ನಡೆಸಲಿದ್ದಾರೆ. ಎರಡು ತಂಡಗಳ ನಡುವಿನ ಮೊದಲ ಟಿ20 ಪಂದ್ಯ ಜನವರಿ 22 ರಂದು ಕೋಲ್ಕತ್ತಾದ ಈಡನ್ ಗಾರ್ಡನ್‌ ಮೈದಾನದಲ್ಲಿ ಸಂಜೆ 7 ಗಂಟೆಗೆ ಆರಂಭವಾಗಲಿದೆ. ಈ ಪಂದ್ಯಕ್ಕಾಗಿ ಇದೀಗ ಉಭಯ ತಂಡಗಳು ಶನಿವಾರ ಕೋಲ್ಕತ್ತಾಗೆ ಬಂದಿಳಿದಿವೆ.

ಮೂರು ವರ್ಷಗಳ ನಂತರ ಐತಿಹಾಸಿಕ ಈಡನ್ ಗಾರ್ಡನ್​ನಲ್ಲಿ ಮೊದಲ ಟಿ20 ಪಂದ್ಯ ನಡೆಯುತ್ತಿರುವ ಕಾರಣ ಈ ಪಂದ್ಯ ಸಾಕಷ್ಟು ಮಹತ್ವ ಪಡೆದುಕೊಂಡಿದೆ. ಇದಕ್ಕೆ ಪೂರಕವಾಗಿ ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾದ ಟಿ20 ದಾಖಲೆ ಅದ್ಭುತವಾಗಿದೆ. ಉಭಯ ತಂಡಗಳ ನಡುವೆ ಇದುವರೆಗೆ ಒಟ್ಟು 24 ಪಂದ್ಯಗಳು ನಡೆದಿವೆ. ಈ ಪೈಕಿ ಭಾರತ ತಂಡ 13 ಪಂದ್ಯಗಳನ್ನು ಗೆದ್ದಿದ್ದರೆ, 11 ಪಂದ್ಯಗಳಲ್ಲಿ ಸೋಲು ಕಂಡಿದೆ.

ಆಂಗ್ಲ ಆಟಗಾರರ ಆಗಮನ

ಪ್ರಸ್ತುತ ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ SA20 ಲೀಗ್​ನಲ್ಲಿ ಪಾಲ್ಗೊಂಡಿದ್ದ ಇಂಗ್ಲೆಂಡ್‌ನ ಆಲ್‌ರೌಂಡರ್ ಲಿಯಾಮ್ ಲಿವಿಂಗ್‌ಸ್ಟೋನ್ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಇದಾದ ಬಳಿಕ ಜೋಸ್ ಬಟ್ಲರ್ ನಾಯಕತ್ವದ ಇಂಗ್ಲೆಂಡ್ ತಂಡದ ಉಳಿದ ಸದಸ್ಯರು ದುಬೈನಿಂದ ಸಂಜೆ ಕೋಲ್ಕತ್ತಾಗೆ ಆಗಮಿಸಿದ್ದಾರೆ.

ಬ್ಯಾಚ್​ಗಳಲ್ಲಿ ಬಂದ ಟೀಂ ಇಂಡಿಯಾ

ಇತ್ತ ಟೀಂ ಇಂಡಿಯಾ ಕೂಡ ಕೋಲ್ಕತ್ತಾಗೆ ಪ್ರಯಾಣ ಬೆಳೆಸಿದ್ದು, ಯುವ ಆಟಗಾರರಾದ ನಿತೀಶ್ ಕುಮಾರ್ ರೆಡ್ಡಿ ಮತ್ತು ರಿಂಕು ಸಿಂಗ್, ಕ್ಯಾಪ್ಟನ್ ಸೂರ್ಯಕುಮಾರ್ ಯಾದವ್ ಮತ್ತು ತಿಲಕ್ ವರ್ಮಾ ಮೊದಲ ಬ್ಯಾಚ್​ನಲ್ಲಿ ಆಗಮನಿಸಿದರೆ, ಮುಖ್ಯ ಕೋಚ್ ಗೌತಮ್ ಗಂಭೀರ್ ಮತ್ತು ಉಳಿದ ಆಟಗಾರರು ಸಂಜೆ ಕೋಲ್ಕತ್ತಾಗೆ ಬಂದಿಳಿದಿದ್ದಾರೆ.

ಪಿಟಿಐ ಪ್ರಕಾರ, ಸುಮಾರು 14 ತಿಂಗಳ ನಂತರ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಮರಳುತ್ತಿರುವ ಮೊಹಮ್ಮದ್ ಶಮಿ ತಡರಾತ್ರಿ ಆಗಮಿಸಲಿದ್ದು, ಅವರ ಜೊತೆ ಹಾರ್ದಿಕ್ ಪಾಂಡ್ಯ ಕೂಡ ಬರಲಿದ್ದಾರೆ. ಮೊದಲ ಪಂದ್ಯಕ್ಕೂ ಮುನ್ನ ಉಭಯ ತಂಡಗಳು ಮೂರು ಅಭ್ಯಾಸ ಸೆಷನ್​ಗಳಲ್ಲಿ ಭಾಗವಹಿಸಲಿವೆ. ಎರಡನೇ ಟಿ20 ಜನವರಿ 25 ರಂದು ಚೆನ್ನೈನಲ್ಲಿ ಮತ್ತು ಮೂರನೇ ಟಿ20 ಫೆಬ್ರವರಿ 2 ರಂದು ಮುಂಬೈನಲ್ಲಿ ನಡೆಯಲಿದೆ.

ಟಿ20 ಸರಣಿಗೆ ಉಭಯ ತಂಡಗಳು

ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್ (ಉಪನಾಯಕ), ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ಮೊಹಮ್ಮದ್ ಶಮಿ, ವರುಣ್ ಚಕ್ರವರ್ತಿ, ರವಿ ಬಿಷ್ಣೋಯ್ , ವಾಷಿಂಗ್ಟನ್ ಸುಂದರ್, ಧ್ರುವ್ ಜುರೆಲ್ (ವಿಕೆಟ್ ಕೀಪರ್).

ಇಂಗ್ಲೆಂಡ್‌ ತಂಡ: ಜೋಸ್ ಬಟ್ಲರ್ (ನಾಯಕ), ರೆಹಾನ್ ಅಹ್ಮದ್, ಜೋಫ್ರಾ ಆರ್ಚರ್, ಗಸ್ ಅಟ್ಕಿನ್ಸನ್, ಜಾಕೋಬ್ ಬೆಥೆಲ್, ಹ್ಯಾರಿ ಬ್ರೂಕ್, ಬ್ರೈಡನ್ ಕಾರ್ಸೆ, ಬೆನ್ ಡಕೆಟ್, ಜೇಮೀ ಓವರ್ಟನ್, ಜೇಮಿ ಸ್ಮಿತ್, ಲಿಯಾಮ್ ಲಿವಿಂಗ್ಸ್ಟೋನ್, ಆದಿಲ್ ರಶೀದ್, ಸಾಕಿಬ್ ಮಹಮೂದ್, ಫಿಲ್ ಸಾಲ್ಟ್, ಮಾರ್ಕ್ ವುಡ್.

ಟಿ20 ಸರಣಿಯ ವೇಳಾಪಟ್ಟಿ

  • ಮೊದಲ ಟಿ20 ಪಂದ್ಯ- 22 ಜನವರಿ, ಕೋಲ್ಕತ್ತಾ
  • ಎರಡನೇ ಟಿ20 ಪಂದ್ಯ- 25 ಜನವರಿ, ಚೆನ್ನೈ
  • ಮೂರನೇ ಟಿ20 ಪಂದ್ಯ- 28 ಜನವರಿ, ರಾಜ್‌ಕೋಟ್
  • ನಾಲ್ಕನೇ ಟಿ20 ಪಂದ್ಯ- 31 ಜನವರಿ, ಪುಣೆ
  • ಐದನೇ ಟಿ20 ಪಂದ್ಯ- 2 ಫೆಬ್ರವರಿ, ಮುಂಬೈ

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ