AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Pakistan, ICC World Cup: ಎರಡು ಬದಲಾವಣೆ: ಪಾಕ್ ವಿರುದ್ಧದ ಪಂದ್ಯಕ್ಕೆ ಭಾರತದ ಪ್ಲೇಯಿಂಗ್ XI ಪ್ರಕಟ

India vs Pakistan Playing XI, ICC World Cup 2023: ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಐಸಿಸಿ ಏಕದಿನ ವಿಶ್ವಕಪ್​ನ 12ನೇ ಪಂದ್ಯ ಭಾರತ ಹಾಗೂ ಪಾಕಿಸ್ತಾನ ನಡುವೆ ನಡೆಯುತ್ತಿದೆ. ಈಗಾಗಲೇ ಟಾಸ್ ಪ್ರಕ್ರಿಯೆ ಕೂಡ ನಡೆದಿದೆ. ಇಂದಿನ ಪಂದ್ಯದಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡದ ಪ್ಲೇಯಿಂಗ್ ಇಲೆವೆನ್ ಹೇಗಿದೆ ಎಂಬುದನ್ನು ನೋಡೋಣ.

India vs Pakistan, ICC World Cup: ಎರಡು ಬದಲಾವಣೆ: ಪಾಕ್ ವಿರುದ್ಧದ ಪಂದ್ಯಕ್ಕೆ ಭಾರತದ ಪ್ಲೇಯಿಂಗ್ XI ಪ್ರಕಟ
India Playing XI vs Pakistan
Vinay Bhat
|

Updated on:Oct 14, 2023 | 5:07 PM

Share

ಐಸಿಸಿ ಏಕದಿನ ವಿಶ್ವಕಪ್ 2023 ರಲ್ಲಿ (ICC ODI World Cup) ಇಂದು ನಡೆಯುತ್ತಿರುವ 12ನೇ ಪಂದ್ಯದಲ್ಲಿ ಕ್ರಿಕೆಟ್ ಲೋಕದ ಬದ್ಧವೈರಿಗಳಾದ ರೋಹಿತ್ ಶರ್ಮಾ ನಾಯಕತ್ವದ ಭಾರತ ಹಾಗೂ ಬಾಬರ್ ಅಝಂ ನೇತೃತ್ವದ ಪಾಕಿಸ್ತಾನ ತಂಡಗಳು ಮುಖಾಮುಖಿ ಆಗುತ್ತಿದೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ಪಂದ್ಯ ಶುರುವಾಗಲಿದೆ. ಸದ್ಯ ಟಾಸ್ ಪ್ರಕ್ರಿಯೆ ನಡೆದಿದ್ದು, ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಉಭಯ ತಂಡಗಳು ಕೂಡ ಬಲಿಷ್ಠ ಆಟಗಾರರನ್ನೇ ಕಣಕ್ಕಿಳಿಸಿದೆ. ಇಲ್ಲಿದೆ ನೋಡಿ ಭಾರತ-ಪಾಕಿಸ್ತಾನ ತಂಡದ ಪ್ಲೇಯಿಂಗ್ ಇಲೆವೆನ್.

ಇಂದಿನ ಪಂದ್ಯಕ್ಕೆ ಟೀಮ್ ಇಂಡಿಯಾದಲ್ಲಿ ಎರಡು ಬದಲಾವಣೆ ಮಾಡಲಾಗಿದೆ. ಡೆಂಗ್ಯೂಯಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿರುವ ಶುಭ್​ಮನ್ ಗಿಲ್ ಆಡುವ ಬಳಗಕ್ಕೆ ಮರಳಿದ್ದಾರೆ. ಹೀಗಾಗಿ ಇಶಾನ್ ಕಿಶನ್ ಹೊರಬಿದ್ದಿದ್ದಾರೆ. ಅಂತೆಯೆ ಆರ್. ಅಶ್ವಿನ್ ಬದಲು ಶಾರ್ದೂಲ್ ಠಾಕೂರ್ ಸ್ಥಾನ ಪಡೆದುಕೊಂಡಿದ್ದಾರೆ.

Ind vs Pak ICC World Cup LIVE Score:

ಇದನ್ನೂ ಓದಿ
Image
ಭಾರತ-ಪಾಕ್ ಕದನದಲ್ಲಿ ಸೃಷ್ಟಿಯಾಗಬಹುದಾದ ಪ್ರಮುಖ ದಾಖಲೆಗಳಿವು
Image
ಭಾರತದ ಈ ಐದು ದಾಖಲೆಗಳನ್ನು ಮುರಿಯುವುದು ಪಾಕ್ ತಂಡಕ್ಕೆ ಅಸಾಧ್ಯ
Image
ಭಾರತ- ಪಾಕ್ ಪಂದ್ಯದಿಂದ ಡಿಸ್ನಿ-ಸ್ಟಾರ್​ಗೆ ಎಷ್ಟು ಕೋಟಿ ಆದಾಯ ಗೊತ್ತಾ?
Image
ಭಾರತ- ಪಾಕ್ ಪಂದ್ಯ; ಮೋದಿ ಮೈದಾನದ ಸುತ್ತ ಪೊಲೀಸ್ ಸರ್ಪಗಾವಲು

ಉಳಿದಂತೆ ಭರ್ಜರಿ ಫಾರ್ಮ್​ನಲ್ಲಿರುವ ವಿರಾಟ್ ಕೊಹ್ಲಿ ಹಾಗೂ ಕೆಎಲ್ ರಾಹುಲ್ ಈ ಪಂದ್ಯದಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ. ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ ಮತ್ತು ರವೀಂದ್ರ ಜಡೇಜಾ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ. 8 ಸ್ಲಾಟ್​ನಲ್ಲಿ ಶಾರ್ದೂಲ್ ಠಾಕೂರ್ ಇದ್ದಾರೆ. ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಸಿರಾಜ್ ಪ್ರಮುಖ ಬೌಲರ್​ಗಳಾಗಿದ್ದಾರೆ.

ಇತ್ತ ಪಾಕ್ ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಕಳೆದ ಪಂದ್ಯದಲ್ಲಿ ಶತಕ ಸಿಡಿಸಿ ಅಬ್ಬರಿಸಿದ್ದ ಅಬ್ದುಲ್ಲಾ ಶಫೀಕ್ ಓಪನರ್ ಆಗಿ ತಮ್ಮ ಸ್ಥಾನವನ್ನು ಖಚಿತಪಡಿಸಿಕೊಂಡಿದ್ದಾರೆ. ಇಮಾಮ್-ಉಲ್-ಹಕ್ ಇಂದಿನ ಪಂದ್ಯದಲ್ಲಿ ಮಿಂಚಬೇಕಿದೆ. ನಾಯಕ ಬಾಬರ್ ಅಝಂ ಫಾರ್ಮ್​ಗೆ ಮರಳಬೇಕಾದ ಅನಿವಾರ್ಯತೆ ಇದೆ. ಮೊಹಮ್ಮದ್ ರಿಜ್ವಾನ್ ಕಳೆದ ಪಂದ್ಯದಲ್ಲಿ ಸೆಂಚುರಿ ಸಿಡಿಸಿ ಲಯಕಂಡುಕೊಂಡಿದ್ದರು. ಸೌದ್ ಶಕೀಲ್, ಇಫ್ತಿಕರ್ ಅಹ್ಮದ್, ಶಾದಾಬ್ ಖಾನ್ ನಂತರದ ಸ್ಥಾನದಲ್ಲಿದ್ದರೆ, ಮೊಹಮ್ಮದ್ ನವಾಜ್, ಹಸನ್ ಅಲಿ, ಶಾಹೀನ್ ಅಫ್ರಿದಿ, ಹ್ಯಾರಿಸ್ ರೌಫ್ ಕೂಡ ಸ್ಥಾನ ಪಡೆದುಕೊಂಡಿದ್ದಾರೆ.

ಭಾರತ ಪ್ಲೇಯಿಂಗ್ ಇಲೆವೆನ್: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

ಪಾಕಿಸ್ತಾನ ಪ್ಲೇಯಿಂಗ್ ಇಲೆವೆನ್: ಅಬ್ದುಲ್ಲಾ ಶಫೀಕ್, ಇಮಾಮ್-ಉಲ್-ಹಕ್, ಬಾಬರ್ ಅಝಂ (ನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಸೌದ್ ಶಕೀಲ್, ಇಫ್ತಿಕರ್ ಅಹ್ಮದ್, ಶಾದಾಬ್ ಖಾನ್, ಮೊಹಮ್ಮದ್ ನವಾಜ್, ಹಸನ್ ಅಲಿ, ಶಾಹೀನ್ ಅಫ್ರಿದಿ, ಹ್ಯಾರಿಸ್ ರೌಫ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:35 pm, Sat, 14 October 23

Follow Us
Vinay Bhat
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ