IND vs SA 3rd T20: ಹಿರಿಯರಿಗೆ ವಿಶ್ರಾಂತಿ: ರೋಚಕತೆ ಸೃಷ್ಟಿಸಿದೆ ಭಾರತ- ಆಫ್ರಿಕಾ ತೃತೀಯ ಟಿ20 ಕದನ

ಇಂದು ಇಂದೋರ್​ನ ಹೋಲ್ಕರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾರತ ಆಫ್ರಿಕಾ ನಡುವೆ ಮೂರನೇ ಟಿ20 ಪಂದ್ಯ ಆಯೋಜಿಸಲಾಗಿದೆ. ಟಿ20 ವಿಶ್ವಕಪ್​ಗೂ ಮುನ್ನ ಟೀಮ್ ಇಂಡಿಯಾ ಆಡುತ್ತಿರುವ ಕೊನೆಯ ಚುಟುಕು ಪಂದ್ಯ ಇದಾಗಿದ್ದು ಬೌಲಿಂಗ್ ವಿಭಾಗದಲ್ಲಿ ಪ್ರಯೋಗ ನಡೆಸುವುದು ಖಚಿತ.

IND vs SA 3rd T20: ಹಿರಿಯರಿಗೆ ವಿಶ್ರಾಂತಿ: ರೋಚಕತೆ ಸೃಷ್ಟಿಸಿದೆ ಭಾರತ- ಆಫ್ರಿಕಾ ತೃತೀಯ ಟಿ20 ಕದನ
IND vs SA
Updated By: Vinay Bhat

Updated on: Oct 04, 2022 | 8:31 AM

ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಟಿ20 ಪಂದ್ಯಗಳಲ್ಲಿ 2-0 ಮುನ್ನಡೆ ಪಡೆದುಕೊಂಡಿರುವ ಭಾರತ (India vs South Africa) ತಂಡ ಈಗಾಗಲೇ ಸರಣಿ ವಶಪಡಿಸಿಕೊಂಡಿದೆ. ಮೊದಲ ಕದನದಲ್ಲಿ 8 ವಿಕೆಟ್​ಗಳ ಜಯ ಸಾಧಿಸಿದರೆ, ಎರಡನೇ ಪಂದ್ಯದಲ್ಲಿ 16 ರನ್​ಗಳಿಂದ ಗೆದ್ದು ಬೀಗಿತ್ತು. ಇದೀಗ ಅಂತಿಮ ತೃತೀಯ ಸೆಣೆಸಾಟಕ್ಕೆ ಉಭಯ ತಂಡಗಳು ಸಜ್ಜಾಗುತ್ತಿದೆ. ಇಂದು ಇಂದೋರ್​ನ ಹೋಲ್ಕರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಮೂರನೇ ಟಿ20 ಪಂದ್ಯ ಆಯೋಜಿಸಲಾಗಿದೆ. ಟಿ20 ವಿಶ್ವಕಪ್​ಗೂ ಮುನ್ನ ಟೀಮ್ ಇಂಡಿಯಾ (Team India) ಆಡುತ್ತಿರುವ ಕೊನೆಯ ಚುಟುಕು ಪಂದ್ಯ ಇದಾಗಿದ್ದು ಬೌಲಿಂಗ್ ವಿಭಾಗದಲ್ಲಿ ಪ್ರಯೋಗ ನಡೆಸುವುದು ಖಚಿತ. ಜೊತೆಗೆ ಪ್ರಮುಖ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡುವ ಸಂಭವವಿದೆ. ರೋಹಿತ್ (Rohit Sharma) ಪಡೆಗೆ ಇದೊಂದು ಔಪಚಾರಿಕ ಪಂದ್ಯವಾದರೆ ಹರಿಣಗಳು ಕ್ಲೀನ್​ಸ್ವೀಪ್ ಮುಖಭಂಗದಿಂದ ಪಾರಾಗಲು ಹೋರಾಡಬೇಕಿದೆ.

ಕೊಹ್ಲಿ, ರಾಹುಲ್‌ಗೆ ವಿಶ್ರಾಂತಿ?:

ಮೂರನೇ ಟಿ20 ಪಂದ್ಯದಿಂದ ವಿರಾಟ್ ಕೊಹ್ಲಿ ಮತ್ತು ಕೆಎಲ್‌ ರಾಹುಲ್‌ ವಿಶ್ರಾಂತಿ ಪಡೆದುಕೊಳ್ಳುವುದು ಬಹುತೇಕ ಖಚಿತವಾಗಿದೆ. ಅಕ್ಟೋಬರ್ 6 ರಂದು ಟಿ20 ವಿಶ್ವಕಪ್‌ನ 15 ಸದಸ್ಯರ ತಂಡ ಆಸ್ಟ್ರೇಲಿಯಾಗೆ ತೆರಳಲಿದೆ. ಆದ್ದರಿಂದ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದ್ದು, ಮೂರನೇ ಟಿ20 ಪಂದ್ಯದಲ್ಲಿ ಹಲವರಿಗೆ ಅವಕಾಶ ಸಿಗುವ ಸಾಧ್ಯತೆಗಳಿವೆ. ರಾಹುಲ್ ಮತ್ತು ಕೊಹ್ಲಿ ಬದಲಿಗೆ ಶ್ರೇಯಸ್ ಅಯ್ಯರ್ ಮತ್ತು ಮೊಹಮ್ಮದ್ ಸಿರಾಜ್ ಆಡುವ ಅವಕಾಶ ಪಡೆಯಬಹುದು ಎನ್ನಲಾಗಿದೆ. ಅಲ್ಲದೆ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ರಿಷಬ್ ಪಂತ್ ಆಡುತ್ತಿದ್ದರೂ ಅವರಿಗೆ ಇದುವರೆಗೆ ಬ್ಯಾಟಿಂಗ್ ಮಾಡಲು ಅವಕಾಶ ಸಿಗಲಿಲ್ಲ. ಹೀಗಾಗಿ ರೋಹಿತ್ ಜೊತೆ ಇವರು ಓಪನರ್ ಆಗಿ ಕಣಕ್ಕಿಳಿಯುವ ಸಾಧ್ಯತೆ ಇದೆ.

ಇದನ್ನೂ ಓದಿ
IND vs SA ODI Squad: ದೇಶೀ ಕ್ರಿಕೆಟ್​ನಲ್ಲಿ ಮಿಂಚಿದರು ಏಕದಿನ ತಂಡದಲ್ಲಿ ಸ್ಥಾನ ಪಡೆಯದ 4 ನತದೃಷ್ಟ ಕ್ರಿಕೆಟಿಗರಿವರು
T20 World Cup: ಟಿ20 ವಿಶ್ವಕಪ್​ನಿಂದ ಬುಮ್ರಾ ಔಟ್..! ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ ಬಿಸಿಸಿಐ
IND vs SA: ಆಫ್ರಿಕಾ ವಿರುದ್ಧದ ಕೊನೆಯ ಪಂದ್ಯದಿಂದ ಕೊಹ್ಲಿ- ರಾಹುಲ್ ಇಬ್ಬರೂ ಔಟ್..! ಯಾರಿಗೆ ಛಾನ್ಸ್?
IND vs SA: ಏಕದಿನ ಸರಣಿಗೆ ಹೊಸಬರ ಆಯ್ಕೆ; ಟೀಂ ಇಂಡಿಯಾಕ್ಕೆ ಎಂಟ್ರಿಕೊಟ್ಟ ಆರ್​ಸಿಬಿ ರನ್ ಮೆಷಿನ್

ಟೀಮ್ ಇಂಡಿಯಾ ದೊಡ್ಡ ತಲೆನೋವಾಗಿರುವುದು ಬೌಲಿಂಗ್ ವಿಭಾಗದಲ್ಲಿ. ಕಳೆದ ಪಂದ್ಯದಲ್ಲಿ ಭಾರತದ ಬೌಲರ್‌ಗಳು ಕೊನೆಯ ನಾಲ್ಕು ಓವರ್‌ಗಳಲ್ಲಿ 65 ರನ್‌ಗಳನ್ನು ಬಿಟ್ಟುಕೊಟ್ಟರು. ಇದು ಕಳೆದ 5-6 ಪಂದ್ಯಗಳಲ್ಲಿ ಕಂಡುಬಂದಿದೆ. ಜಸ್​ಪ್ರಿತ್ ಬುಮ್ರಾ ಅಲಭ್ಯತೆ ಎದ್ದು ಕಾಣುತ್ತಿರುವುದು ನಿಜ. ಹೀಗಾಗಿ ಮೊಹಮ್ಮದ್ ಸಿರಾಜ್ ಮೇಲೆ ಒತ್ತಡವಿದೆ. ಅರ್ಶ್​ದೀಪ್ ಸಿಂಗ್, ದೀಪಕ್ ಚಹರ್, ಭುವನೇಶ್ವರ್ ಕುಮಾರ್ ವಿಕೆಟ್ ಕೀಳುವ ಜೊತೆಗೆ ಲಯ ಕಂಡುಕೊಳ್ಳಬೇಕಿದೆ.

ಇತ್ತ ಆಫ್ರಿಕಾನ್ನರ ಬೌಲಿಂಗ್ ಕೂಡ ಭಾರತದ ರೀತಿಯಲ್ಲೇ ಇದೆ. ಟಿ20 ಸ್ಪೆಷಲಿಸ್ಟ್​ಗಳಿದ್ದರೂ ಸರಾಗವಾಗಿ ರನ್ ಹರಿದುಬರುತ್ತಿದೆ. ಕೇಶವ್ ಮಹರಾಜ್ ಬಿಟ್ಟರೆ ಮತ್ಯಾರು ಪರಿಣಾಮಕಾರಿ ಆಗಿ ಗೋಚರಿಸುತ್ತಿಲ್ಲ. ಕಗಿಸೊ ರಬಾಡ, ಲುಂಗಿ ಎನ್​ಗಿಡಿ, ವೇನ್ ಪಾರ್ನೆಲ್ ದುಬಾರಿಯಾಗುತ್ತಿದ್ದಾರೆ. ಬ್ಯಾಟಿಂಗ್​ನಲ್ಲಿ ನಾಯಕ ತೆಂಬಾ ಬವುಮಾ ಸತತ ವೈಫಲ್ಯ ಅನುಭವಿಸುತ್ತಿರುವುದು ಬೇಸರದ ಸಂಗತಿ. ಡೇವಿಡ್ ಮಿಲ್ಲರ್ ಹಾಗೂ ಕ್ವಿಂಟನ್ ಡಿಕಾಕ್ ತಮ್ಮ ಕೈಲಾದಷ್ಟು ಕೊಡುಗೆ ನೀಡುತ್ತಿದ್ದಾರೆ. ಆದರೆ, ಇತರೆ ಬ್ಯಾಟರ್​ಗಳು ಯಾರೂ ಸಾಥ್ ನೀಡುತ್ತಿಲ್ಲ.

ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್ XI:

ಭಾರತ: ರೋಹಿತ್‌ ಶರ್ಮಾ (ನಾಯಕ), ರಿಷಭ್ ಪಂತ್ (ಉಪ ನಾಯಕ), ಶ್ರೇಯಸ್ ಅಯ್ಯರ್, ಸೂರ್ಯಕುಮಾರ್‌ ಯಾದವ್, ದಿನೇಶ್‌ ಕಾರ್ತಿಕ್, ಅಕ್ಷರ್‌ ಪಟೇಲ್, ಹರ್ಷಲ್ ಪಟೇಲ್, ದೀಪಕ್‌ ಚಾಹರ್‌, ಯುಜ್ವೇಂದ್ರ ಚಹಲ್, ಆರ್ಷದೀಪ್‌ ಸಿಂಗ್, ಮೊಹಮ್ಮದ್‌ ಸಿರಾಜ್.

ದಕ್ಷಿಣ ಆಫ್ರಿಕಾ: ತೆಂಬಾ ಬವುಮಾ (ನಾಯಕ), ಕ್ವಿಂಟನ್ ಡಿಕಾಕ್, ಹೆನ್ರಿಕ್ ಕ್ಲಾಸೆನ್, ಆ್ಯಡಂ ಮರ್ಕ್ರನ್, ಡೇವಿಡ್ ಮಿಲ್ಲರ್, ಟ್ರಿಸ್ಟನ್ ಸ್ಟಬ್ಸ್, ವೇಯ್ನ್ ಪಾರ್ನೆಲ್, ಕೇಶವ ಮಹಾರಾಜ್, ಕಗಿಸೊ ರಬಾಡ, ಎನ್ರಿಚ್ ನಾಕಿಯಾ, ಲುಂಗಿ ಗಿಡಿ.

Published On - 7:58 am, Tue, 4 October 22