India Squad: ಭಾರತ ಮಹಿಳಾ ತಂಡ ಪ್ರಕಟ: ಕನ್ನಡತಿ ಆಯ್ಕೆ

India Womens Squad: ಏಕದಿನ ಹಾಗೂ ಟಿ20 ತಂಡಗಳನ್ನು ಎಂದಿನಂತೆ ಹರ್ಮನ್​ಪ್ರೀತ್ ಕೌರ್ ಮುನ್ನಡೆಸಲಿದ್ದು, ಉಪನಾಯಕಿಯಾಗಿ ಸ್ಮೃತಿ ಮಂಧಾನ ಕಾಣಿಸಿಕೊಳ್ಳಲಿದ್ದಾರೆ. ಹಾಗೆಯೇ ವಿಕೆಟ್​ಗಳಾಗಿ ಎರಡೂ ತಂಡಗಳಲ್ಲೂ ಯಾಸ್ತಿಕಾ ಭಾಟಿಯಾ ಹಾಗೂ ರಿಚಾ ಘೋಷ್ ಆಯ್ಕೆಯಾಗಿದ್ದಾರೆ.

India Squad: ಭಾರತ ಮಹಿಳಾ ತಂಡ ಪ್ರಕಟ: ಕನ್ನಡತಿ ಆಯ್ಕೆ
Team India
Follow us
| Updated By: ಝಾಹಿರ್ ಯೂಸುಫ್

Updated on:Dec 26, 2023 | 7:29 AM

ಆಸ್ಟ್ರೇಲಿಯಾ ವಿರುದ್ಧದ ಸೀಮಿತ ಓವರ್​ಗಳ ಸರಣಿಗಾಗಿ ಭಾರತ ಮಹಿಳಾ ತಂಡವನ್ನು (India Womens Squad) ಪ್ರಕಟಿಸಲಾಗಿದೆ. ಒಟ್ಟು 6 ಪಂದ್ಯಗಳ ಈ ಸರಣಿಗಾಗಿ ಆಯ್ಕೆ ಮಾಡಲಾದ ತಂಡಗಳಲ್ಲಿ ಕರ್ನಾಟಕದ ಯುವ ಆಟಗಾರ್ತಿ ಶ್ರೇಯಾಂಕಾ ಪಾಟೀಲ್ ಸ್ಥಾನ ಪಡೆದಿದ್ದಾರೆ. ಶ್ರೇಯಾಂಕಾ ಈ ಹಿಂದೆಯೇ ಟಿ20 ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಪರ ಪಾದಾರ್ಪಣೆ ಮಾಡಿದ್ದರು. ಆದರೀಗ ಏಕದಿನ ತಂಡದಲ್ಲೂ ಅವಕಾಶ ದೊರೆತಿರುವುದು ವಿಶೇಷ.

ಇನ್ನು ಏಕದಿನ ಹಾಗೂ ಟಿ20 ತಂಡಗಳನ್ನು ಎಂದಿನಂತೆ ಹರ್ಮನ್​ಪ್ರೀತ್ ಕೌರ್ ಮುನ್ನಡೆಸಲಿದ್ದು, ಉಪನಾಯಕಿಯಾಗಿ ಸ್ಮೃತಿ ಮಂಧಾನ ಕಾಣಿಸಿಕೊಳ್ಳಲಿದ್ದಾರೆ. ಹಾಗೆಯೇ ವಿಕೆಟ್​ಗಳಾಗಿ ಎರಡೂ ತಂಡಗಳಲ್ಲೂ ಯಾಸ್ತಿಕಾ ಭಾಟಿಯಾ ಹಾಗೂ ರಿಚಾ ಘೋಷ್ ಆಯ್ಕೆಯಾಗಿದ್ದಾರೆ.

ಭಾರತ-ಆಸ್ಟ್ರೇಲಿಯಾ ವೇಳಾಪಟ್ಟಿ:

ಭಾರತ ಮತ್ತು ಆಸ್ಟ್ರೇಲಿಯಾ ಮಹಿಳಾ ತಂಡಗಳ ನಡುವಣ ಸರಣಿಯು ಡಿಸೆಂಬರ್ 28 ರಿಂದ ಶುರುವಾಗಲಿದೆ. ಈ ಸರಣಿಯ ಮೂರು ಪಂದ್ಯಗಳು ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿದೆ. ಇನ್ನು ಜನವರಿ 5 ರಿಂದ ಟಿ20 ಸರಣಿ ಶುರುವಾಗಲಿದ್ದು, ಈ ಸರಣಿಯ ಎಲ್ಲಾ ಪಂದ್ಯಗಳಿಗೆ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂ ಆತಿಥ್ಯವಹಿಸಲಿದೆ.

ಭಾರತ ಏಕದಿನ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಜೆಮಿಮಾ ರೊಡ್ರಿಗಸ್, ಶಫಾಲಿ ವರ್ಮಾ, ದೀಪ್ತಿ ಶರ್ಮಾ, ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ರಿಚಾ ಘೋಷ್ (ವಿಕೆಟ್ ಕೀಪರ್), ಅಮನ್‌ಜೋತ್ ಕೌರ್, ಶ್ರೇಯಾಂಕ ಪಾಟೀಲ್, ಮನ್ನತ್ ಕಶ್ಯಪ್, ಸೈಕಾ ಇಶಾಕ್, ರೇಣುಕಾ ಸಿಂಗ್ ಠಾಕೂರ್, ಟಿಟಾಸ್ ಸಾಧು, ಪೂಜಾ ವಸ್ತ್ರಾಕರ್, ಸ್ನೇಹ ರಾಣಾ, ಹರ್ಲೀನ್ ಡಿಯೋಲ್.

ಇದನ್ನೂ ಓದಿ: IPL 2024: ಒಂದು ಎಸೆತದ ಬೆಲೆ ಬರೋಬ್ಬರಿ 7.40 ಲಕ್ಷ ರೂ..!

ಭಾರತ ಟಿ20 ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಜೆಮಿಮಾ ರೊಡ್ರಿಗಸ್, ಶಫಾಲಿ ವರ್ಮಾ, ದೀಪ್ತಿ ಶರ್ಮಾ, ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ರಿಚಾ ಘೋಷ್ (ವಿಕೆಟ್ ಕೀಪರ್), ಅಮನ್‌ಜೋತ್ ಕೌರ್, ಶ್ರೇಯಾಂಕಾ ಪಾಟೀಲ್, ಮನ್ನತ್ ಕಶ್ಯಪ್, ಸೈಕಾ ಇಶಾಕ್, ರೇಣುಕಾ ಸಿಂಗ್ ಠಾಕೂರ್, ಟಿಟಾಸ್ ಸಾಧು, ಪೂಜಾ ವಸ್ತ್ರಾಕರ್, ಕನಿಕಾ ಅಹುಜಾ, ಮಿನ್ನು ಮಣಿ.

                   ಭಾರತ-ಆಸ್ಟ್ರೇಲಿಯಾ ಏಕದಿನ ಸರಣಿ ವೇಳಾಪಟ್ಟಿ
S. No.    ದಿನಾಂಕ      ಸಮಯ ಪಂದ್ಯ             ಸ್ಥಳ
1 28-ಡಿಸೆಂಬರ್-23 01.30 PM IST ODI ವಾಂಖೆಡೆ ಸ್ಡೇಡಿಯಂ, ಮುಂಬೈ
2 30-ಡಿಸೆಂಬರ್-23 01.30 PM IST ODI ವಾಂಖೆಡೆ ಸ್ಡೇಡಿಯಂ, ಮುಂಬೈ
3 02-ಜನವರಿ-24 01.30 PM IST ODI ವಾಂಖೆಡೆ ಸ್ಡೇಡಿಯಂ, ಮುಂಬೈ
                     ಭಾರತ-ಆಸ್ಟ್ರೇಲಿಯಾ ಟಿ20 ಸರಣಿ ವೇಳಾಪಟ್ಟಿ
1 05-ಜನವರಿ-24 07.00 PM IST T20I ಡಿವೈ ಪಾಟೀಲ್ ಸ್ಟೇಡಿಯಂ, ಮುಂಬೈ
2 07-ಜನವರಿ-24 07.00 PM IST T20I ಡಿವೈ ಪಾಟೀಲ್ ಸ್ಟೇಡಿಯಂ, ಮುಂಬೈ
3 09-ಜನವರಿ-24 07.00 PM IST T20I ಡಿವೈ ಪಾಟೀಲ್ ಸ್ಟೇಡಿಯಂ, ಮುಂಬೈ

Published On - 7:26 am, Tue, 26 December 23

ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್