AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಅಡಿಲೇಡ್‌ ಟೆಸ್ಟ್; ಆಸ್ಟ್ರೇಲಿಯಾಕ್ಕೆ ಮೊದಲ ದಿನದ ಗೌರವ

IND vs AUS: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಅಡಿಲೇಡ್ ಡೇ-ನೈಟ್ ಟೆಸ್ಟ್‌ನ ಮೊದಲ ದಿನದ ಆಟ ಅಂತ್ಯಗೊಂಡಿದ್ದು, ಮೊದಲ ಇನ್ನಿಂಗ್ಸ್ ಆರಂಭಿಸಿರುವ ಆಸ್ಟ್ರೇಲಿಯಾ ಒಂದು ವಿಕೆಟ್ ನಷ್ಟದಲ್ಲಿ 86 ರನ್ ಗಳಿಸಿದೆ. ಇನ್ನು ಭಾರತ ತಂಡ ತನ್ನ ಮೊದಲ ಇನ್ನಿಂಗ್ಸ್​ನಲ್ಲಿ 180 ರನ್‌ಗಳಿಗೆ ಆಲೌಟ್ ಆಯಿತು. ಭಾರತದ ಪರ ನಿತೀಶ್ 942) ರಾಹುಲ್ (37) ಮತ್ತು ಗಿಲ್ (31) ಮಾತ್ರ ಕೊಂಚ ಗಮನಾರ್ಹ ಪ್ರದರ್ಶನ ನೀಡಿದರು.

IND vs AUS: ಅಡಿಲೇಡ್‌ ಟೆಸ್ಟ್; ಆಸ್ಟ್ರೇಲಿಯಾಕ್ಕೆ ಮೊದಲ ದಿನದ ಗೌರವ
ಆಸ್ಟ್ರೇಲಿಯಾ ತಂಡ
ಪೃಥ್ವಿಶಂಕರ
|

Updated on:Dec 06, 2024 | 5:29 PM

Share

ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಇಂದಿನಿಂದ ಆರಂಭವಾಗಿರುವ ಅಡಿಲೇಡ್ ಡೇ ನೈಟ್ ಟೆಸ್ಟ್‌ನ ಮೊದಲ ದಿನದ ಆಟ ಮುಕ್ತಾಯಗೊಂಡಿದೆ. ಈ ಮೊದಲ ದಿನದಾಟದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 180 ರನ್‌ಗಳಿಗೆ ಆಲೌಟ್ ಆಯಿತು. ಇದಕ್ಕೆ ಉತ್ತರವಾಗಿ ಆಸ್ಟ್ರೇಲಿಯಾ ದಿನದಾಟದ ಅಂತ್ಯಕ್ಕೆ ತನ್ನ ಮೊದಲ ಇನಿಂಗ್ಸ್‌ನಲ್ಲಿ ಒಂದು ವಿಕೆಟ್‌ಗೆ 86 ರನ್ ಗಳಿಸಿದೆ. ಸದ್ಯ ಮಾರ್ನಸ್ ಲಬುಶೇನ್ 20 ರನ್ ಹಾಗೂ ನಾಥನ್ ಮೆಕ್‌ಸ್ವೀನಿ 38 ರನ್‌ಗಳಿಸಿ ಕ್ರೀಸ್‌ನಲ್ಲಿದ್ದಾರೆ. ಇವರಿಬ್ಬರ ನಡುವೆ ಇದುವರೆಗೆ 62 ರನ್‌ಗಳ ಜೊತೆಯಾಟವಿದೆ. ಆಸ್ಟ್ರೇಲಿಯಾ ದಿನದಾಟದಂತ್ಯಕ್ಕೆ ಕೇವಲ 1 ವಿಕೆಟ್ ಕಳೆದುಕೊಂಡಿದ್ದು, ಆರಂಭಿಕ ಉಸ್ಮಾನ್ ಖವಾಜಾ ಜಸ್ಪ್ರೀತ್ ಬುಮ್ರಾ ಬೌಲಿಂಗ್​ನಲ್ಲಿ ರೋಹಿತ್ ಶರ್ಮಾಗೆ ಕ್ಯಾಚಿತ್ತು ನಿರ್ಗಮಿಸಿದರು.

ಭಾರತಕ್ಕೆ ಕಳಪೆ ಆರಂಭ

ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಟೀಂ ಇಂಡಿಯಾಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಆರಂಭಿಕ ಯಶಸ್ವಿ ಪಂದ್ಯದ ಮೊದಲ ಎಸೆತದಲ್ಲೇ ಎಲ್‌ಬಿಡಬ್ಲ್ಯೂ ಆಗಿ ಔಟಾದರು. ಅವರು ಖಾತೆ ತೆರೆಯಲು ಸಾಧ್ಯವಾಗಲಿಲ್ಲ. ಇದಾದ ಬಳಿಕ ಕೆಎಲ್ ರಾಹುಲ್ ಮತ್ತು ಶುಭ್​ಮನ್ ಗಿಲ್ ನಡುವೆ ಎರಡನೇ ವಿಕೆಟ್‌ಗೆ 69 ರನ್‌ಗಳ ಜೊತೆಯಾಟವಿತ್ತು. ಸ್ಟಾರ್ಕ್ ಈ ಜೊತೆಯಾಟವನ್ನು ಮುರಿದರು. ಆರಂಭಿಕ ರಾಹುಲ್ 37 ರನ್ ಗಳಿಸಿ ಪೆವಿಲಿಯನ್ ಸೇರಿಕೊಂಡರು.

ಮಧ್ಯಮ ಕ್ರಮಾಂಕದ ವೈಫಲ್ಯ

ರಾಹುಲ್ ಔಟಾದ ಕೂಡಲೇ ಟೀಂ ಇಂಡಿಯಾದ ವಿಕೆಟ್‌ಗಳ ಸುರಿಮಳೆಯಾಯಿತು. 4ನೇ ಕ್ರಮಾಂಕದಲ್ಲಿ ಬಂದ ವಿರಾಟ್ ಕೊಹ್ಲಿ ಏಳು ರನ್ ಗಳಿಸಿ ಔಟಾದರೆ, ಶುಭ್​ಮನ್ ಗಿಲ್ 31 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ನಾಯಕ ರೋಹಿತ್ ಶರ್ಮಾ ಮೂರು ರನ್ ಗಳಿಸಿ ಔಟಾದರು. ಒಂದು ಸಮಯದಲ್ಲಿ ಭಾರತದ ಸ್ಕೋರ್ ಒಂದು ವಿಕೆಟ್‌ಗೆ 69 ರನ್ ಆಗಿದ್ದರೆ, ಸ್ವಲ್ಪ ಸಮಯದ ನಂತರ ಅದು ಐದು ವಿಕೆಟ್‌ಗೆ 87 ರನ್ ಆಯಿತು. ಅಂದರೆ ಭಾರತ 18 ರನ್ ಗಳಿಸುವಷ್ಟರಲ್ಲಿ ಇನ್ನೂ ನಾಲ್ಕು ವಿಕೆಟ್ ಕಳೆದುಕೊಂಡಿತ್ತು.

ನಿತೀಶ್ ಏಕಾಂಗಿ ಹೋರಾಟ

ಇದಾದ ಬಳಿಕ ರಿಷಬ್ ಪಂತ್ ಕೂಡ 21 ರನ್ ಗಳಿಸಿ ಔಟಾದರು. ಅಶ್ವಿನ್, ನಿತೀಶ್ ರೆಡ್ಡಿ ಅವರೊಂದಿಗೆ ಇನ್ನಿಂಗ್ಸ್ ನಿಭಾಯಿಸಲು ಪ್ರಯತ್ನಿಸಿದರು ಮತ್ತು ಏಳನೇ ವಿಕೆಟ್‌ಗೆ 32 ರನ್‌ಗಳ ಜೊತೆಯಾಟವನ್ನು ಮಾಡಿದರು. ಆದರೆ ಮತ್ತೆ ದಾಳಿಗಿಳಿದ ಸ್ಟಾರ್ಕ್ ಅಶ್ವಿನ್ ವಿಕೆಟ್ ಉರುಳಿಸಿ ಈ ಜೊತೆಯಾಟ ಮುರಿದರು. ಹರ್ಷಿತ್ ರಾಣಾ ಮತ್ತು ಜಸ್ಪ್ರೀತ್ ಬುಮ್ರಾ ಖಾತೆ ತೆರೆಯದೆ ಔಟಾದರು. ಕೊನೆಯಲ್ಲಿ 54 ಎಸೆತಗಳಲ್ಲಿ ಮೂರು ಬೌಂಡರಿ ಮತ್ತು ಮೂರು ಸಿಕ್ಸರ್‌ಗಳ ಸಹಾಯದಿಂದ 42 ರನ್ ಗಳಿಸಿದ ನಿತೀಶ್ ಸ್ಟಾರ್ಕ್‌ಗೆ ಆರನೇ ಬಲಿಯಾಗುವ ಮೂಲಕ ಭಾರತದ ಇನ್ನಿಂಗ್ಸ್​ಗೆ ಅಂತ್ಯ ಹಾಡಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:28 pm, Fri, 6 December 24

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ