AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೂರ್ಯಕುಮಾರ್ ಕಳಪೆ ಫಾರ್ಮ್​ ಬಗ್ಗೆ ಮೊದಲ ಬಾರಿಗೆ ಮೌನ ಮುರಿದ ಗೌತಮ್ ಗಂಭೀರ್

Gautam Gambhir comments: ಭಾರತ-ಆಸ್ಟ್ರೇಲಿಯಾ ಐದು ಪಂದ್ಯಗಳ ಟಿ20 ಸರಣಿ ಅಕ್ಟೋಬರ್ 19 ರಿಂದ ಆರಂಭವಾಗಲಿದೆ. ನಾಯಕ ಸೂರ್ಯಕುಮಾರ್ ಯಾದವ್ ಅವರ ಕಳಪೆ ಫಾರ್ಮ್ ಬಗ್ಗೆ ಪ್ರಶ್ನೆಗಳಿದ್ದರೂ, ಮುಖ್ಯ ಕೋಚ್ ಗೌತಮ್ ಗಂಭೀರ್ ಸೂರ್ಯನ ಆಕ್ರಮಣಕಾರಿ ವಿಧಾನವನ್ನು ಸಮರ್ಥಿಸಿಕೊಂಡಿದ್ದಾರೆ. ವೈಫಲ್ಯಗಳು ಸಹಜ, ಆದರೆ ತಂಡದ ಗಮನ ವೈಯಕ್ತಿಕ ಪ್ರದರ್ಶನಕ್ಕಿಂತ ಸಾಮೂಹಿಕ ಆಕ್ರಮಣಕಾರಿ ಆಟದ ಮೇಲೆ ಇದೆ ಎಂದು ಗಂಭೀರ್ ಸ್ಪಷ್ಟಪಡಿಸಿದ್ದಾರೆ.

ಸೂರ್ಯಕುಮಾರ್ ಕಳಪೆ ಫಾರ್ಮ್​ ಬಗ್ಗೆ ಮೊದಲ ಬಾರಿಗೆ ಮೌನ ಮುರಿದ ಗೌತಮ್ ಗಂಭೀರ್
Surya, Gambir
ಪೃಥ್ವಿಶಂಕರ
|

Updated on: Oct 27, 2025 | 9:39 PM

Share

ಭಾರತ ಮತ್ತು ಆಸ್ಟ್ರೇಲಿಯಾ (India vs Australia) ನಡುವಿನ ಐದು ಪಂದ್ಯಗಳ ಟಿ20 ಸರಣಿ ಇದೇ ಅಕ್ಟೋಬರ್ 19 ರಿಂದ ಆರಂಭವಾಗಲಿದೆ. ಏಕದಿನ ಸರಣಿಯಲ್ಲಿ ಶುಭ್​ಮನ್ ಗಿಲ್ ಟೀಂ ಇಂಡಿಯಾವನ್ನು ಮುನ್ನಡೆಸಿದರೆ, ಟಿ20 ತಂಡದ ನಾಯಕತ್ವ ಸೂರ್ಯಕುಮಾರ್ ಯಾದವ್ (Suryakumar Yadav) ಅವರ ಕೈಯಲಿದೆ. ಸೂರ್ಯಕುಮಾರ್ ನಾಯಕತ್ವದಲ್ಲಿ ಭಾರತ ಟಿ20 ತಂಡದ ಪ್ರದರ್ಶನ ಅಮೋಘವಾಗಿದೆಯಾದರೂ ಆಟಗಾರನಾಗಿ ಸೂರ್ಯನ ಪ್ರದರ್ಶನ ತೀರ ಕಳಪೆಯಾಗಿದೆ. ಹೀಗಾಗಿ ತಂಡದಲ್ಲಿ ಅವರ ಸ್ಥಾನದ ಬಗ್ಗೆಯೂ ಪ್ರಶ್ನೆಗಳು ಮೂಡಿವೆ. ಇದೀಗ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿ ಆರಂಭಕ್ಕೂ ಮುನ್ನ ಮುಖ್ಯ ಕೋಚ್ ಗೌತಮ್ ಗಂಭೀರ್ (Gautam Gambhir), ಸೂರ್ಯಕುಮಾರ್ ಫಾರ್ಮ್​ ಬಗ್ಗೆ ಮೊದಲ ಬಾರಿಗೆ ಮೌನ ಮುರಿದಿದ್ದಾರೆ.

ಯಾವುದೇ ಸಮಸ್ಯೆ ಇಲ್ಲ

ಜಿಯೋ ಹಾಟ್‌ಸ್ಟಾರ್‌ನಲ್ಲಿ ನಡೆದ ಚರ್ಚೆಯ ಸಂದರ್ಭದಲ್ಲಿ ಈ ಬಗ್ಗೆ ಮಾತನಾಡಿದ ಗಂಭೀರ್, ‘ಪ್ರಾಮಾಣಿಕವಾಗಿ ಹೇಳಬೇಕೆಂದರೆ, ಸೂರ್ಯಕುಮಾರ್ ಅವರ ಬ್ಯಾಟಿಂಗ್ ಫಾರ್ಮ್ ಬಗ್ಗೆ ನನಗೆ ಚಿಂತೆ ಇಲ್ಲ. ಏಕೆಂದರೆ ನಮ್ಮ ಡ್ರೆಸ್ಸಿಂಗ್ ಕೋಣೆಯಲ್ಲಿ ನಾವು ಹೆಚ್ಚು ಆಕ್ರಮಣಕಾರಿ ವಿಧಾನವನ್ನು ಅಳವಡಿಸಿಕೊಂಡಿದ್ದೇವೆ. ಈ ಮನಸ್ಥಿತಿಯನ್ನು ಅಳವಡಿಸಿಕೊಂಡಾಗ ವೈಫಲ್ಯಗಳು ಅನಿವಾರ್ಯ. ಸೂರ್ಯಕುಮಾರ್ 30 ಎಸೆತಗಳಲ್ಲಿ 40 ರನ್ ಗಳಿಸಿ ಟೀಕೆಗಳನ್ನು ತಪ್ಪಿಸುವುದು ಸುಲಭವಾಗುತ್ತಿತ್ತು, ಆದರೆ ಆಕ್ರಮಣಕಾರಿ ವಿಧಾನವನ್ನು ಅಳವಡಿಸಿಕೊಳ್ಳುವಾಗ ವಿಫಲರಾಗುವುದರಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ನಾವು ನಿರ್ಧರಿಸಿದ್ದೇವೆ.

ಇಡೀ ತಂಡದ ಮೇಲೆ ಇದೆ

‘ಅಲ್ಲದೆ ನಮ್ಮ ಗಮನ ಯಾವುದೇ ಒಬ್ಬ ಆಟಗಾರನ ಮೇಲೆ ಅಲ್ಲ, ಇಡೀ ತಂಡದ ಮೇಲೆ ಇದೆ. ಅಭಿಷೇಕ್ ಶರ್ಮಾ ಈಗ ಉತ್ತಮ ಫಾರ್ಮ್‌ನಲ್ಲಿದ್ದು, ಏಷ್ಯಾ ಕಪ್‌ನಾದ್ಯಂತ ಅದನ್ನು ಕಾಯ್ದುಕೊಂಡಿದ್ದಾರೆ. ಸೂರ್ಯ ಲಯಕ್ಕೆ ಬಂದಾಗ, ಅದಕ್ಕೆ ತಕ್ಕಂತೆ ಅವರು ಜವಾಬ್ದಾರಿಯನ್ನು ಹೊರುತ್ತಾರೆ. ಟಿ20 ಕ್ರಿಕೆಟ್‌ನಲ್ಲಿ, ನಮ್ಮ ಗಮನವು ವೈಯಕ್ತಿಕ ರನ್‌ಗಳ ಮೇಲೆ ಅಲ್ಲ, ಬದಲಿಗೆ ನಾವು ಯಾವ ರೀತಿಯ ಕ್ರಿಕೆಟ್ ಆಡಲು ಬಯಸುತ್ತೇವೆ ಎಂಬುದರ ಮೇಲೆ. ನಮ್ಮ ಆಕ್ರಮಣಕಾರಿ ಶೈಲಿಯಲ್ಲಿ ಬ್ಯಾಟ್ಸ್‌ಮನ್‌ಗಳು ಹೆಚ್ಚಾಗಿ ವಿಫಲರಾಗಬಹುದು, ಆದರೆ ಅಂತಿಮವಾಗಿ, ರನ್‌ಗಳಿಗಿಂತ ಪ್ರಭಾವವು ಮುಖ್ಯವಾಗಿದೆ.

IND vs AUS: ಭಾರತ ವಿರುದ್ಧದ ಟಿ20 ಸರಣಿಗೆ ಆಸ್ಟ್ರೇಲಿಯಾ ತಂಡದಲ್ಲಿ 4 ಬದಲಾವಣೆ

ಸೂರ್ಯಕುಮಾರ್ ಒಬ್ಬ ಅದ್ಭುತ ವ್ಯಕ್ತಿ

ಸೂರ್ಯಕುಮಾರ್ ಒಬ್ಬ ಅದ್ಭುತ ವ್ಯಕ್ತಿ ಮತ್ತು ಒಳ್ಳೆಯ ಜನರೇ ಒಳ್ಳೆಯ ನಾಯಕರನ್ನು ರೂಪಿಸುತ್ತಾರೆ. ಅವರ ಮುಕ್ತ ಮನೋಭಾವದ ಸ್ವಭಾವವು ಟಿ20 ಕ್ರಿಕೆಟ್‌ನ ಸಾರಕ್ಕೆ ಸಂಪೂರ್ಣವಾಗಿ ಹೊಂದಿಕೆಯಾಗುತ್ತದೆ. ಇದು ಸ್ವಾತಂತ್ರ್ಯ ಮತ್ತು ಸ್ವಯಂ ಅಭಿವ್ಯಕ್ತಿಯ ಬಗ್ಗೆ. ಕಳೆದ ಒಂದೂವರೆ ವರ್ಷದಿಂದ ಸೂರ್ಯ ಈ ಪರಿಸರವನ್ನು ಅದ್ಭುತವಾಗಿ ಕಾಪಾಡಿಕೊಂಡಿದ್ದಾರೆ. ಸೂರ್ಯಕುಮಾರ್ ಮತ್ತು ನಾನು ಎಂದಿಗೂ ತಪ್ಪುಗಳಿಗೆ ಹೆದರುವುದಿಲ್ಲ. ಪಂದ್ಯ ದೊಡ್ಡದಾದಷ್ಟೂ ನಾವು ಹೆಚ್ಚು ನಿರ್ಭೀತ ಮತ್ತು ಆಕ್ರಮಣಕಾರಿಯಾಗಿರಬೇಕು. ಸಂಕುಚಿತ ಮನೋಭಾವವು ಎದುರಾಳಿಗಳಿಗೆ ಮಾತ್ರ ಪ್ರಯೋಜನವನ್ನು ನೀಡುತ್ತದೆ. ನಮ್ಮಲ್ಲಿರುವ ಪ್ರತಿಭೆಯನ್ನು ನೀಡಿದರೆ, ನಾವು ನಿರ್ಭೀತವಾಗಿ ಆಡಿದರೆ, ನಾವು ಯಶಸ್ಸು ಸಾಧಿಸುತ್ತೇವೆ ಎಂದಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ