AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Under-19 World Cup 2022: ಕ್ವಾರ್ಟರ್​ ಫೈನಲ್​ನಲ್ಲಿ ಬಾಂಗ್ಲಾ ವಿರುದ್ಧ ಭಾರತಕ್ಕೆ ಭರ್ಜರಿ ಜಯ; ಸೆಮಿಫೈನಲ್​​ನಲ್ಲಿ ಎದುರಾಳಿ ಯಾರು?

ಕೆರೆಬಿಯನ್ ನಾಡಿನಲ್ಲಿ ನಡೆಯುತ್ತಿರುವ ಅಂಡರ್-19 ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾರತವು ಬಾಂಗ್ಲಾದೇಶದ ವಿರುದ್ಧ ಕ್ವಾರ್ಟರ್​​ ಫೈನಲ್​ನಲ್ಲಿ ಐದು ವಿಕೆಟ್​ಗಳ ಜಯ ಸಾಧಿಸಿದೆ.

Under-19 World Cup 2022: ಕ್ವಾರ್ಟರ್​ ಫೈನಲ್​ನಲ್ಲಿ ಬಾಂಗ್ಲಾ ವಿರುದ್ಧ ಭಾರತಕ್ಕೆ ಭರ್ಜರಿ ಜಯ; ಸೆಮಿಫೈನಲ್​​ನಲ್ಲಿ ಎದುರಾಳಿ ಯಾರು?
ಭಾರತ ತಂಡದ ಆಟಗಾರರ ಸಂಭ್ರಮ
TV9 Web
| Updated By: shivaprasad.hs|

Updated on:Jan 30, 2022 | 9:31 AM

Share

ಆ್ಯಂಟಿಗುವಾ: ವೆಸ್ಟ್​​ ಇಂಡೀಸ್​ನಲ್ಲಿ ನಡೆಯುತ್ತಿರುವ ಅಂಡರ್-19 ವಿಶ್ವಕಪ್​​ನಲ್ಲಿ (Under- 19 World Cup 2022) ಭಾರತ ತಂಡದ (Indian Cricket Team) ವಿಜಯ ಯಾತ್ರೆ ಮುಂದುವರೆದಿದೆ. ನಿನ್ನೆ (ಶನಿವಾರ ಜ.29) ನಡೆದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶವನ್ನು 5 ವಿಕೆಟ್​ಗಳಿಂದ ಮಣಿಸಿದ ಭಾರತವು ಸೆಮಿಫೈನಲ್​ಗೇರಿದೆ. ಆ್ಯಂಟಿಗುವಾದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡವು ಮೊದಲು ಬೌಲಿಂಗ್ ಆಯ್ದುಕೊಂಡಿತು. ನಾಯಕ ಯಶ್ ಧುಲ್ ಆಯ್ಕೆಯನ್ನು ಸಮರ್ಥಿಸಿಕೊಂಡ ಭಾರತದ ಬೌಲರ್​ಗಳು ಬಾಂಗ್ಲಾದೇಶದ ಬ್ಯಾಟರ್​ಗಳು ಕ್ರೀಸ್ ಮೇಲೆ ನಿಲ್ಲಲು ಸಮಾಯಾವಕಾಶವನ್ನೇ ನೀಡಲಿಲ್ಲ. ಎರಡನೇ ಓವರ್​ನಲ್ಲಿಯೇ ವಿಕೆಟ್ ಕಬಳಿಸಿದ ರವಿಕುಮಾರ್ ಬಾಂಗ್ಲಾದೇಶದ ಬ್ಯಾಟಿಂಗ್ ಕುಸಿತಕ್ಕೆ ನಾಂದಿ ಹಾಡಿದರು. ಅಲ್ಲಿಂದ ಬಾಂಗ್ಲಾ ತಂಡ ಚೇತರಿಸಿಕೊಳ್ಳಲೇ ಇಲ್ಲ. ಎಂಟನೇ ಓವರ್ ಒಳಗೆ ಬಾಂಗ್ಲಾ ತನ್ನ ಮೂರು ಬ್ಯಾಟರ್​ಗಳನ್ನು ಕಳೆದುಕೊಂಡಿತ್ತು. ಮೂರೂ ವಿಕೆಟ್​ಗಳು ರವಿಕುಮಾರ್ ಪಾಲಾಗಿತ್ತು. ಯಶಸ್ವಿ ಬೌಲಿಂಗ್ ದಾಳಿ ನಡೆಸಿದ ಭಾರತ ತಂಡ ಬಾಂಗ್ಲಾವನ್ನು 111 ರನ್ನುಗಳಿಗೆ ಕಟ್ಟಿಹಾಕುವಲ್ಲಿ ಯಶಸ್ವಿಯಾಯಿತು.

ನಂತರ ಬ್ಯಾಟಿಂಗ್ ನಡೆಸಿದ ಭಾರತ ಕೂಡ ಉತ್ತಮ ಆರಂಭ ಪಡೆಯಲಿಲ್ಲ. ಓಪನಿಂಗ್ ಬ್ಯಾಟರ್ ಹರ್ನೂರ್ ಸಿಂಗ್ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರು. ನಂತರ ತಂಡವನ್ನು ಆಧರಿಸಿದ ಅಂಗ್ಕ್ರಿಶ್ ರಘುವಂಶಿ ಹಾಗೂ ಶೈಕ್ ರಶೀದ್ ಎರಡನೇ ವಿಕೆಟ್​ಗೆ 70 ರನ್ ಪೇರಿಸಿದರು. ರಘುವಂಶಿ 44 ರನ್​ ಗಳಿಸಿದ್ದಾಗ ವಿಕೆಟ್ ಒಪ್ಪಿಸಿದರು. ನಂತರದಲ್ಲಿ ಭಾರತ ಬ್ಯಾಟಿಂಗ್​ನಲ್ಲಿ ಸಣ್ಣ ಕುಸಿತ ಕಂಡಿತು. ಸಿದ್ಧಾರ್ಥ್ ಯಾದವ್ 6ಕ್ಕೆ ವಿಕೆಟ್ ಒಪ್ಪಿಸಿದರೆ, ರಾಜ್ ಬವಾ ಸೊನ್ನೆ ಸುತ್ತಿದರು.

ಗೆಲುವಿನತ್ತ ಕೊಂಡೊಯ್ದ ನಾಯಕ!: ಭಾರತ ತಂಡದ ನಾಯಕ ಯಶ್ ಧುಲ್ ಟೂರ್ನಿಯುಲ್ಲಿ ಗಮನ ಸೆಳೆಯುತ್ತಿದ್ದಾರೆ. ಕೊರೊನಾದಿಂದ ಚೇತರಿಸಿಕೊಂಡು ಕಣಕ್ಕಿಳಿದಿದ್ದ ಅವರು, ತಂಡವನ್ನು ಗೆಲುವಿನ ಗುರಿ ಮುಟ್ಟಿಸಿದರು. 26 ಎಸೆತಗಳಲ್ಲಿ 20 ರನ್​ಗಳ ಜವಾಬ್ದಾರಿಯುತ ಆಟವನ್ನು ಅವರಾಡಿದರು. ಯಶ್ ಧುಲ್​ಗೆ ಸಾಥ್ ನೀಡಿದ್ದು- ಕೌಶಲ್ ತಾಂಬೆ (11 ರನ್). ಕೌಶಲ್ ಭರ್ಜರಿ ಸಿಕ್ಸರ್ ಮೂಲಕ ತಂಡದ ಜಯವನ್ನು ಸಾರಿದರು. ಏಳು ಓವರ್​ಗಳ ದಾಳಿಯಲ್ಲಿ 1 ಮೇಡನ್​ ಸಹಿತ ಕೇವಲ 14 ರನ್​ ನೀಡಿ 3 ವಿಕೆಟ್ ಕಬಳಿಸಿದ ರವಿ ಕುಮಾರ್ ಅವರಿಗೆ ಪಂದ್ಯಶ್ರೇಷ್ಠ ಪ್ರಶಸ್ತಿ ಲಭಿಸಿತು.

ಮುಂದಿನ ಎದುರಾಳಿ ಆಸ್ಟ್ರೇಲಿಯಾ, ಪಂದ್ಯ ಯಾವಾಗ? ಭಾರತ ತಂಡವೀಗ ಕ್ವಾರ್ಟರ್​ ಫೈನಲ್ ಗೆದ್ದು ಸೆಮಿಫೈನಲ್ ಪ್ರವೇಶಿಸಿದೆ. ಅಲ್ಲಿ ಆಸ್ಟ್ರೇಲಿಯಾ ಭಾರತಕ್ಕೆ ಸವಾಲೊಡ್ಡಲಿದೆ.  ಬುಧವಾರ ಅಂದರೆ ಫೆಬ್ರವರಿ 2ರಂದು ಎರಡನೇ ಸೆಮಿಫೈನಲ್ ಪಂದ್ಯ ನಡೆಯಲಿದ್ದು, ಜಿದ್ದಾಜಿದ್ದಿನ ಪೈಪೋಟಿಯನ್ನು ನಿರೀಕ್ಷಿಸಲಾಗಿದೆ. ಆ್ಯಂಟಿಗುವಾದಲ್ಲಿ ಪಂದ್ಯ ನಡೆಯಲಿದೆ.

ಇದನ್ನೂ ಓದಿ:

IND vs WI: ವಿಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯಕ್ಕೆ ಟೀಂ ಇಂಡಿಯಾದ ಉಪನಾಯಕ ಯಾರು ಗೊತ್ತಾ?

1w, 4, 4, 1w, 6, 6, 6: ಇಂಗ್ಲೆಂಡ್- ವಿಂಡೀಸ್ ರೋಚಕ ಪಂದ್ಯ: ಕೊನೆಯ ಓವರ್​ನಲ್ಲಿ 30 ರನ್​ಗಳ ಚೇಸಿಂಗ್..ಆದರೆ

Published On - 9:23 am, Sun, 30 January 22

ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್