AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs BAN: ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ ಏಕಪಕ್ಷೀಯ ಗೆಲುವು

Women's T20 World Cup 2026: ಮ್ಯಾಂಚೆಸ್ಟರ್‌ನಲ್ಲಿ ನಡೆದ 2026ರ ಮಹಿಳಾ ಟಿ20 ವಿಶ್ವಕಪ್‌ನ ನಿರ್ಣಾಯಕ ಪಂದ್ಯದಲ್ಲಿ ಭಾರತ ಬಾಂಗ್ಲಾದೇಶವನ್ನು ಸೋಲಿಸಿ ಸೆಮಿಫೈನಲ್ ರೇಸ್‌ನಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಬಾಂಗ್ಲಾ 136 ರನ್‌ಗಳ ಗುರಿ ನೀಡಿತು. ಟೀಂ ಇಂಡಿಯಾ 17ನೇ ಓವರ್‌ನಲ್ಲಿ 5 ವಿಕೆಟ್‌ಗಳಿಂದ ಗೆಲುವು ಸಾಧಿಸಿತು. ರಾಧಾ ಯಾದವ್ 3 ವಿಕೆಟ್ ಪಡೆದರು. ಕಳಪೆ ಫೀಲ್ಡಿಂಗ್ ಹೊರತಾಗಿಯೂ ಭಾರತದ ಗೆಲುವು ಸೆಮಿಫೈನಲ್ ಆಸೆಯನ್ನು ಜೀವಂತವಾಗಿಟ್ಟಿದೆ.

IND vs BAN: ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ ಏಕಪಕ್ಷೀಯ ಗೆಲುವು
Ind Vs Ban Women
ಪೃಥ್ವಿಶಂಕರ
|

Updated on:Jun 25, 2026 | 10:50 PM

Share

ಮ್ಯಾಂಚೆಸ್ಟರ್‌ನಲ್ಲಿ ನಡೆದ 2026 ರ ಮಹಿಳಾ ಟಿ20 ವಿಶ್ವಕಪ್‌ನ (Women’s T20 World Cup 2026) 23ನೇ ಪಂದ್ಯದಲ್ಲಿ ಭಾರತ ಹಾಗೂ ಬಾಂಗ್ಲಾದೇಶ (Bangladesh vs India) ತಂಡಗಳು ಮುಖಾಮುಖಿಯಾಗಿದ್ದವು. ಸೆಮಿಫೈನಲ್‌ ದೃಷ್ಟಿಯಿಂದ ಈ ಪಂದ್ಯ ಉಭಯ ತಂಡಗಳಿಗೂ ನಿರ್ಣಾಯಕವಾಗಿತ್ತು. ಅದರಂತೆ ಈ ಗೆಲ್ಲಲೇಬೇಕಾದ ಪಂದ್ಯದಲ್ಲಿ ಟೀಂ ಇಂಡಿಯಾ ಏಕಪಕ್ಷೀಯ ಗೆಲುವು ದಾಖಲಿಸಿ ಸೆಮಿಫೈನಲ್​ ರೇಸ್​ನಲ್ಲಿ ಜೀವಂತವಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಬಾಂಗ್ಲಾದೇಶ ತಂಡ 20 ಓವರ್​ಗಳಲ್ಲಿ 8 ವಿಕೆಟ್​ಗಳ ನಷ್ಟಕ್ಕೆ 136 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ 17ನೇ ಓವರ್​ನಲ್ಲಿ 5 ವಿಕೆಟ್‌ಗಳನ್ನು ಕಳೆದುಕೊಂಡು ಜಯದ ನಗೆಬೀರಿತು. ಇತ್ತ ಈ ಸೋಲಿನೊಂದಿಗೆ ಬಾಂಗ್ಲಾ ತಂಡ ಸೆಮಿಫೈನಲ್‌ ರೇಸ್​ನಿಂದ ಭಾಗಶಃ ಹೊರಬಿದ್ದಿದೆ.

ಬಾಂಗ್ಲಾದೇಶದ ಬ್ಯಾಟಿಂಗ್ ವೈಫಲ್ಯ

ಟಾಸ್ ಗೆದ್ದ ಬಾಂಗ್ಲಾದೇಶ ಬ್ಯಾಟಿಂಗ್ ಮಾಡಲು ನಿರ್ಧರಿಸಿತ್ತಾದರೂ ಕೇವಲ 5 ಬ್ಯಾಟರ್​ಗಳಿಗೆ ಮಾತ್ರ ಎರಡಂಕಿ ತಲುಪಲು ಸಾಧ್ಯವಾಯಿತು. ಈ 5 ಬ್ಯಾಟರ್​ಗಳು ಉತ್ತಮ ಆರಂಭವನ್ನು ಪಡೆದರಾದರೂ ಯಾರಿಗೂ ಈ ಇನ್ನಿಂಗ್ಸ್ ಅನ್ನು ದೊಡ್ಡ ಸ್ಕೋರ್‌ ಆಗಿ ಪರಿವರ್ತಿಸಲು ಸಾಧ್ಯವಾಗಲಿಲ್ಲ. ಹೀಗಾಗಿ ಬಾಂಗ್ಲಾದೇಶ ಪರ ಜುವೈರಿಯಾ ಫಿರ್ದೌಸ್ ಅತ್ಯಧಿಕ 33 ರನ್​ಗಳ ಇನ್ನಿಂಗ್ಸ್ ಆಡಿದರೆ, ನಾಯಕಿ ನಿಗರ್ ಸುಲ್ತಾನ 27 ಎಸೆತಗಳಲ್ಲಿ 32 ರನ್ ಗಳಿಸಿದರು. ಶೋಭನಾ ಕೂಡ 22 ರನ್​ಗಳ ಕಾಣಿಕೆ ನೀಡಿದರು.

ಭಾರತದ ಕಳಪೆ ಫಿಲ್ಡಿಂಗ್

ಟೀಂ ಇಂಡಿಯಾ ಪರ ಬೌಲಿಂಗ್‌ನಲ್ಲಿ ಮಿಂಚಿದ ರಾಧಾ ಯಾದವ್ 3 ವಿಕೆಟ್ ಪಡೆದರೆ ಶ್ರೀ ಚರಣಿ 2 ವಿಕೆಟ್ ಕಬಳಿಸಿದರು. ರೇಣುಕಾ ಸಿಂಗ್ ಠಾಕೂರ್ ಮತ್ತು ನಂದಿನಿ ಶರ್ಮಾ ತಲಾ 1 ವಿಕೆಟ್ ಪಡೆದರು. ಆದಾಗ್ಯೂ ಈ ಪಂದ್ಯದಲ್ಲಿ ಬಾಂಗ್ಲಾ ತಂಡ 100 ರನ್​ಗಳ ಗಡಿ ದಾಟಲು ಟೀಂ ಇಂಡಿಯಾದ ಕಳಪೆ ಫಿಲ್ಡಿಂಗ್ ಪ್ರಮುಖ ಕಾರಣವಾಯಿತು. ಎಂದಿನಂತೆ ಈ ಪಂದ್ಯದಲ್ಲೂ ಟೀಂ ಇಂಡಿಯಾ ಆಟಗಾರ್ತಿಯರು 4 ಸುಲಭ ಕ್ಯಾಚ್‌ಗಳನ್ನು ಕೈಚೆಲ್ಲಿದರು. ಹೀಗಾಗಿ ಬಾಂಗ್ಲಾ ತಂಡ 136 ರನ್ ಕಲೆಹಾಕಿತು. ಇಲ್ಲದಿದ್ದರೆ ತಂಡದ ಸ್ಕೋರ್ 100 ರ ಗಡಿ ಕೂಡ ದಾಟುತ್ತಿರಲಿಲ್ಲ.

ಅರ್ಧಶತಕ ಬಾರಿಸಿದ ಶೆಫಾಲಿ

ಈ ಗುರಿ ಬೆನ್ನಟ್ಟಿದ ಭಾರತಕ್ಕೆ ಉತ್ತಮ ಆರಂಭ ಸಿಕ್ಕಿತ್ತಾದರೂ ಸ್ಮೃತಿ ಮಂಧಾನ ಬೇಗನೇ ಔಟಾದರು. ಆದರೆ ಶೆಫಾಲಿ ವರ್ಮಾ ಬೌಂಡರಿಗಳ ಮಳೆ ಸುರಿಸಿ ಕೇವಲ 29 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಆದರೆ 9 ನೇ ಓವರ್‌ನಲ್ಲಿ ಶೆಫಾಲಿ 53 ರನ್‌ಗಳಿಗೆ ಔಟಾದರು. ಶೆಫಾಲಿ ಔಟಾಗುತ್ತಿದ್ದಂತೆ ಭಾರತದ ಇನ್ನಿಂಗ್ಸ್ ಇದ್ದಕ್ಕಿದ್ದಂತೆ ಕುಸಿಯಿತು. ಪರಿಣಾಮವಾಗಿ 98 ರ ಹೊತ್ತಿಗೆ ತಂಡವು ನಾಲ್ಕು ವಿಕೆಟ್‌ಗಳನ್ನು ಕಳೆದುಕೊಂಡಿತು.

IND vs BAN: ಟಿ20 ವಿಶ್ವಕಪ್​ನಲ್ಲಿ ಅತ್ಯಧಿಕ ವಿಕೆಟ್; ದಾಖಲೆ ಬರೆದ ಶ್ರೀ ಚರಣಿ

17ನೇ ಓವರ್​ನಲ್ಲಿ ಗೆದ್ದ ಭಾರತ

ಇದರ ಜೊತೆಗೆ ಕ್ರೀಸ್‌ನಲ್ಲಿ ಬ್ಯಾಟರ್​ಗಳ ನಡುವೆ ಸಮನ್ವಯದ ಕೊರತೆಯೂ ಸ್ಪಷ್ಟವಾಗಿ ಕಾಣುತ್ತಿತ್ತು. ನಾಯಕಿ ಹರ್ಮನ್‌ಪ್ರೀತ್ ಕೌರ್ ಮತ್ತು ಜೆಮಿಮಾ ರೊಡ್ರಿಗಸ್ ರನ್ನಿಂಗ್ ವಿಚಾರದಲ್ಲಿ ಹಲವು ಬಾರಿ ಗೊಂದಲಕ್ಕೀಡಾದರು. ಇದು ರನ್-ಔಟ್‌ ಅವಕಾಶವನ್ನು ಸೃಷ್ಟಿಸಿತು. ಆದರೆ ಬಾಂಗ್ಲಾದೇಶದ ಫೀಲ್ಡಿಂಗ್ ಕಳಪೆಯಾಗಿದ್ದ ಕಾರಣ ಇವರಿಬ್ಬರು ಔಟಾಗುವುದರಿಂದ ಪಾರಾದರು. ಅಂತಿಮವಾಗಿ, ಟೀಂ ಇಂಡಿಯಾ 16.5 ಓವರ್‌ಗಳಲ್ಲಿ ಗುರಿ ಸಾಧಿಸಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:32 pm, Thu, 25 June 26

Follow Us
ಜಮ್ಮು ಕಾಶ್ಮೀರದ ಬಾರಾಮುಲ್ಲಾದಲ್ಲಿ ಸೇತುವೆ ಕುಸಿತ; 10 ಜನರಿಗೆ ಗಾಯ
ಜಮ್ಮು ಕಾಶ್ಮೀರದ ಬಾರಾಮುಲ್ಲಾದಲ್ಲಿ ಸೇತುವೆ ಕುಸಿತ; 10 ಜನರಿಗೆ ಗಾಯ
ಮಂಗಳೂರಿಗೆ ಬಂದ ಶಾರುಖ್ ಖಾನ್, ಬಾದ್​​ಶಾನ ನೋಡಲು ಮುಗಿಬಿದ್ದ ಜನ
ಮಂಗಳೂರಿಗೆ ಬಂದ ಶಾರುಖ್ ಖಾನ್, ಬಾದ್​​ಶಾನ ನೋಡಲು ಮುಗಿಬಿದ್ದ ಜನ
ಅಂಗಡಿ ಗೋಡೆ ಕೊರೆದು 10 ಕೆಜಿ ಬೆಳ್ಳಿ ಕಳ್ಳತನ ಕೇಸ್​​: ಯುವಕ ಅರೆಸ್ಟ್
ಅಂಗಡಿ ಗೋಡೆ ಕೊರೆದು 10 ಕೆಜಿ ಬೆಳ್ಳಿ ಕಳ್ಳತನ ಕೇಸ್​​: ಯುವಕ ಅರೆಸ್ಟ್
33 ಕ್ರಸ್ಟ್ ಗೇಟ್ ಚೇಂಜ್ ಮಾಡಿ ಉದ್ಘಾಟಿಸಿದ್ದು ನನ್ನ ಭಾಗ್ಯ: ಡಿಕೆಶಿ
33 ಕ್ರಸ್ಟ್ ಗೇಟ್ ಚೇಂಜ್ ಮಾಡಿ ಉದ್ಘಾಟಿಸಿದ್ದು ನನ್ನ ಭಾಗ್ಯ: ಡಿಕೆಶಿ
ಕೃಷಿ ತಾಪಂಡ ಮನೆಯಲ್ಲಿ ಉದ್ಯಮಿ ವೈಶಾಖ್ ಸಾವು, ಆಪ್ತ ಗೆಳೆಯ ಹೇಳಿದ್ದೇನು?
ಕೃಷಿ ತಾಪಂಡ ಮನೆಯಲ್ಲಿ ಉದ್ಯಮಿ ವೈಶಾಖ್ ಸಾವು, ಆಪ್ತ ಗೆಳೆಯ ಹೇಳಿದ್ದೇನು?
ಜೂ 28ರಂದು ರಾಷ್ಟ್ರೀಯ ಲಸಿಕಾ ದಿನ: ಚಿಕ್ಕ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ
ಜೂ 28ರಂದು ರಾಷ್ಟ್ರೀಯ ಲಸಿಕಾ ದಿನ: ಚಿಕ್ಕ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ
ಮುತ್ತತ್ತಿ ದುರಂತ: ಕೊನೇ ಕ್ಷಣದ ವಿಡಿಯೋ ವೈರಲ್
ಮುತ್ತತ್ತಿ ದುರಂತ: ಕೊನೇ ಕ್ಷಣದ ವಿಡಿಯೋ ವೈರಲ್
ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಂದ ಕ್ರಸ್ಟ್ ಗೇಟ್‌ಗಳು ಲೋಕಾರ್ಪಣೆ
ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಂದ ಕ್ರಸ್ಟ್ ಗೇಟ್‌ಗಳು ಲೋಕಾರ್ಪಣೆ
ಸಾಯುವುದಕ್ಕೂ ಮೊದಲು ಕೃಷಿ ತಾಪಂಡಗೆ ವೈಶಾಕ್ ಕಳುಹಿಸಿದ ಸಂದೇಶ ಏನು?
ಸಾಯುವುದಕ್ಕೂ ಮೊದಲು ಕೃಷಿ ತಾಪಂಡಗೆ ವೈಶಾಕ್ ಕಳುಹಿಸಿದ ಸಂದೇಶ ಏನು?
ಪಠ್ಯದಲ್ಲಿ ಕೇಸರೀಕರಣ ವಿವಾದ: ಬಿಜೆಪಿ ವಿರುದ್ಧ ಮಧು ಬಂಗಾರಪ್ಪ ಕಿಡಿ
ಪಠ್ಯದಲ್ಲಿ ಕೇಸರೀಕರಣ ವಿವಾದ: ಬಿಜೆಪಿ ವಿರುದ್ಧ ಮಧು ಬಂಗಾರಪ್ಪ ಕಿಡಿ