AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India Capitals vs Gujarat Giants: 9 ಸಿಕ್ಸ್​, 8 ಫೋರ್: ಸಿಡಿಲಬ್ಬರದ ಶತಕ ಸಿಡಿಸಿದ ವಿಂಡೀಸ್ ಆಟಗಾರ

Legends League Cricket: 180 ರನ್​ಗಳ ಟಾರ್ಗೆಟ್ ಪಡೆದ ಇಂಡಿಯಾ ಕ್ಯಾಪಿಟಲ್ಸ್ ತಂಡ ಕೂಡ ಆರಂಭಿಕ ಆಘಾತಕ್ಕೆ ಒಳಗಾಗಿತ್ತು. ನಾಯಕ ಸೆಹ್ವಾಗ್ ಕೇವಲ 6 ರನ್​ಗಳಿಸಿ ಹೊರನಡೆದಿದ್ದರು.

India Capitals vs Gujarat Giants: 9 ಸಿಕ್ಸ್​, 8 ಫೋರ್: ಸಿಡಿಲಬ್ಬರದ ಶತಕ ಸಿಡಿಸಿದ ವಿಂಡೀಸ್ ಆಟಗಾರ
Ashley Nurse
TV9 Web
| Edited By: |

Updated on: Sep 18, 2022 | 12:32 PM

Share

ಕೊಲ್ಕತ್ತಾ ಈಡನ್ ಗಾರ್ಡನ್ಸ್ ಮೈದಾನವು ಲೆಜೆಂಡ್ಸ್ ಲೀಗ್​ನ ಮೊದಲ ಪಂದ್ಯದಲ್ಲೇ ಸಿಕ್ಸ್​-ಫೋರ್​ಗಳ ಸುರಿಮಳೆಯಾಗಿದೆ. ಶನಿವಾರ ನಡೆದ ಈ ಪಂದ್ಯದಲ್ಲಿ ವೀರೇಂದ್ರ ಸೆಹ್ವಾಗ್ ನಾಯಕತ್ವದ ಇಂಡಿಯಾ ಕ್ಯಾಪಿಟಲ್ಸ್ ಹಾಗೂ ಜಾಕ್ಸ್ ಕಾಲಿಸ್ ನೇತೃತ್ವದ ಗುಜರಾತ್ ಜೈಂಟ್ಸ್​ ತಂಡಗಳು ಮುಖಾಮುಖಿಯಾಗಿತ್ತು. ಟಾಸ್ ಗೆದ್ದ ಗುಜರಾತ್ ತಂಡವು ಮೊದಲು ಬ್ಯಾಟಿಂಗ್ ಆಯ್ದುಕೊಂಡಿತು.

ಅದರಂತೆ ಇನಿಂಗ್ಸ್ ಆರಂಭಿಸಿದ ಗುಜರಾತ್ ಜೈಂಟ್ಸ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಪವರ್​ಪ್ಲೇನಲ್ಲೇ 34 ರನ್​ಗಳಿಗೆ 4 ಪ್ರಮುಖ ವಿಕೆಟ್​ ಕಳೆದುಕೊಂಡು ಗುಜರಾತ್ ತಂಡವು ಸಂಕಷ್ಟಕ್ಕೆ ಸಿಲುಕಿತ್ತು. ಈ ವೇಳೆ ಕಣಕ್ಕಿಳಿದ ವೆಸ್ಟ್ ಇಂಡೀಸ್ ಆಟಗಾರ ಆ್ಯಶ್ಲೆ ನರ್ಸ್ ಇಡೀ ಪಂದ್ಯದ ಚಿತ್ರಣ ಬದಲಿಸಿಬಿಟ್ಟರು.

ಇಂಡಿಯಾ ಕ್ಯಾಪಿಟಲ್ಸ್​ ತಂಡದ ಬೌಲರ್​ಗಳ ಬೆಂಡೆತ್ತಿದ ನರ್ಸ್​ 9 ಸಿಕ್ಸ್ ಹಾಗೂ 8 ಫೋರ್​ನೊಂದಿಗೆ ಕೇವಲ 41 ಎಸೆತಗಳಲ್ಲಿ ಶತಕ ಸಿಡಿಸಿದರು. ಅಲ್ಲದೆ 43 ಎಸೆತಗಳಲ್ಲಿ ಅಜೇಯ 103 ರನ್​ ಬಾರಿಸುವ ಮೂಲಕ 20 ಓವರ್​ಗಳಲ್ಲಿ ತಂಡದ ಮೊತ್ತವನ್ನು 7 ವಿಕೆಟ್​ ನಷ್ಟಕ್ಕೆ 179 ಕ್ಕೆ ತಂದು ನಿಲ್ಲಿಸಿದರು.

ಇದನ್ನೂ ಓದಿ
Image
Team India: ಟೀಮ್ ಇಂಡಿಯಾ ಆಟಗಾರರ ಜೊತೆ ಕಾಣಿಸಿಕೊಂಡ ಸ್ಟಾರ್ ಕ್ರಿಕೆಟಿಗನ ಮಗ..!
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
Sanju Samson: ಧೋನಿ, ದ್ರಾವಿಡ್​ಗೂ ಸಾಧ್ಯವಾಗದ ದಾಖಲೆ ನಿರ್ಮಿಸಿದ ಸಂಜು ಸ್ಯಾಮ್ಸನ್
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

180 ರನ್​ಗಳ ಟಾರ್ಗೆಟ್ ಪಡೆದ ಇಂಡಿಯಾ ಕ್ಯಾಪಿಟಲ್ಸ್ ತಂಡ ಕೂಡ ಆರಂಭಿಕ ಆಘಾತಕ್ಕೆ ಒಳಗಾಗಿತ್ತು. ನಾಯಕ ಸೆಹ್ವಾಗ್ ಕೇವಲ 6 ರನ್​ಗಳಿಸಿ ಹೊರನಡೆದಿದ್ದರು. ಆದರೆ ಮತ್ತೋರ್ವ ಆರಂಭಿಕ ಐರ್ಲೆಂಡ್​ನ ಕೆವಿನ್ ಓಬ್ರಿಯೆನ್ ಸಿಡಿಲಬ್ಬರದ ಬ್ಯಾಟಿಂಗ್ ಮಾಡಿದ್ದರು. ಪರಿಣಾಮ ಇಂಡಿಯಾ ಕ್ಯಾಪಿಟಲ್ಸ್ ತಂಡವು ವಿಕೆಟ್ ಕಳೆದುಕೊಳ್ಳುತ್ತಿದ್ದರೂ ರನ್​ಗತಿ ಹೆಚ್ಚುತ್ತಾ ಹೋಯಿತು.

ಅದರಂತೆ ಕೆವಿನ್ ಓಬ್ರಿಯೆನ್ 61 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 15 ಫೋರ್ ಬಾರಿಸಿ ತಂಡವನ್ನು ಗೆಲುವಿನ ಅಂಚಿಗೆ ತಂದು ನಿಲ್ಲಿಸಿದರು. ಅಂತಿಮವಾಗಿ ಇಂಡಿಯಾ ಕ್ಯಾಪಿಟಲ್ಸ್ ತಂಡವು 18.4 ಓವರ್​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 180 ರನ್​ ಬಾರಿಸುವ ಮೂಲಕ 3 ವಿಕೆಟ್​ಗಳ ರೋಚಕ ಜಯವನ್ನು ತನ್ನದಾಗಿಸಿಕೊಂಡಿತು.

ಇನ್ನು ಈ ಸೋಲಿನ ಹೊರತಾಗಿಯೂ ಗುಜರಾತ್ ಜೈಂಟ್ಸ್ ಪರ ಕೇವಲ 41 ಎಸೆತಗಳಲ್ಲಿ ಸಿಡಿಲಬ್ಬರದ ಶತಕ ಸಿಡಿಸಿ ಮಿಂಚಿದ್ದ ಆ್ಯಶ್ಲೇ ನರ್ಸ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ