AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI: ಟೀಮ್ ಇಂಡಿಯಾಗೆ ಭರ್ಜರಿ ಜಯ: ಸರಣಿ ಕ್ಲೀನ್ ಸ್ವೀಪ್

India vs West Indies Test Series: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಣ ಟೆಸ್ಟ್ ಸರಣಿ ಮುಗಿದಿದೆ. 2 ಪಂದ್ಯಗಳ ಈ ಸರಣಿಯ ಎರಡೂ ಮ್ಯಾಚ್​ಗಳಲ್ಲೂ ಟೀಮ್ ಇಂಡಿಯಾ ಜಯ ಸಾಧಿಸಿದೆ. ಮೊದಲ ಪಂದ್ಯದಲ್ಲಿ ಇನಿಂಗ್ಸ್ ಹಾಗೂ 140 ರನ್​ಗಳ ಜಯ ಸಾಧಿಸಿದ್ದ ಭಾರತ ತಂಡವು ಇದೀಗ ದ್ವಿತೀಯ ಪಂದ್ಯದಲ್ಲೂ ಜಯಭೇರಿ ಬಾರಿಸಿದೆ.

IND vs WI: ಟೀಮ್ ಇಂಡಿಯಾಗೆ ಭರ್ಜರಿ ಜಯ: ಸರಣಿ ಕ್ಲೀನ್ ಸ್ವೀಪ್
Team India
ಝಾಹಿರ್ ಯೂಸುಫ್
|

Updated on: Oct 14, 2025 | 10:32 AM

Share

ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಜಯದೊಂದಿಗೆ ಎರಡು ಪಂದ್ಯಗಳ ಸರಣಿಯನ್ನು ಟೀಮ್ ಇಂಡಿಯಾ 2-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ಯಶಸ್ವಿ ಜೈಸ್ವಾಲ್ (175) ಹಾಗೂ ಶುಭ್​ಮನ್ ಗಿಲ್ (129) ಶತಕ ಸಿಡಿಸಿದ್ದರು. ಈ ಸೆಂಚುರಿಗಳ ನೆರವಿನೊಂದಿಗೆ ಭಾರತ ತಂಡವು ಮೊದಲ ಇನಿಂಗ್ಸ್​ನಲ್ಲಿ 5 ವಿಕೆಟ್ ನಷ್ಟಕ್ಕೆ 518 ರನ್​ಗಳಿಸಿ ಡಿಕ್ಲೇರ್ ಘೋಷಿಸಿತು.

ಇದರ ಬೆನ್ನಲ್ಲೇ ಮೊದಲ ಇನಿಂಗ್ಸ್ ಶುರು ಮಾಡಿದ ವೆಸ್ಟ್ ಇಂಡೀಸ್ ತಂಡವು ಕೇವಲ 248 ರನ್​ಗಳಿಗೆ ಆಲೌಟ್ ಆಗಿದ್ದರು. ಅತ್ತ 270 ರನ್​ಗಳ ಮುನ್ನಡೆ ಪಡೆದ ಟೀಮ್ ಇಂಡಿಯಾ ಫಾಲೋ ಆನ್ ಹೇರಿತು. ಅದರಂತೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ವೆಸ್ಟ್ ಇಂಡೀಸ್ ಪರ ಜಾನ್​ ಕ್ಯಾಂಪ್​ಬೆಲ್ (115) ಹಾಗೂ ಶೈ ಹೋಪ್ (103) ಶತಕ ಸಿಡಿಸಿದರು.

ಇನ್ನು ಏಳನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಜಸ್ಟಿನ್ ಗ್ರೀವ್ಸ್ 50 ರನ್​ಗಳ ಕೊಡಗೆ ನೀಡಿದರು. ಈ ಮೂಲಕ ವೆಸ್ಟ್ ಇಂಡೀಸ್ ತಂಡವು ದ್ವಿತೀಯ ಇನಿಂಗ್ಸ್​ನಲ್ಲಿ 390 ರನ್​ಗಳಿಸಿ ಆಲೌಟ್ ಆಯಿತು.

121 ರನ್​ಗಳ ಗುರಿ:

ಮೊದಲ ಇನಿಂಗ್ಸ್​ನಲ್ಲಿ 270 ರನ್​ಗಳ ಮುನ್ನಡೆ ಪಡೆದಿದ್ದ ಟೀಮ್ ಇಂಡಿಯಾ ದ್ವಿತೀಯ ಇನಿಂಗ್ಸ್​ನಲ್ಲಿ 121 ರನ್​ಗಳ ಗುರಿ ಪಡೆಯಿತು. ಅದರಂತೆ ಸೆಕೆಂಡ್ ಇನಿಂಗ್ಸ್ ಶುರು ಮಾಡಿದ ಭಾರತ ತಂಡವು ಆರಂಭದಲ್ಲೇ ಯಶಸ್ವಿ ಜೈಸ್ವಾಲ್ (8) ವಿಕೆಟ್ ಕಳೆದುಕೊಂಡಿತು.

ಈ ಹಂತದಲ್ಲಿ ಜೊತೆಗೂಡಿದ ಕೆಎಲ್ ರಾಹುಲ್ ಹಾಗೂ ಸಾಯಿ ಸುದರ್ಶನ್ 79 ರನ್​ಗಳ ಜೊತೆಯಾಟವಾಡಿದರು. ಆದರೆ ತಂಡದ ಮೊತ್ತ 88 ರನ್ ಆಗಿದ್ದ ವೇಳೆ ಸಾಯಿ ಸುದರ್ಶನ್ (39) ಔಟಾದರು. ಇದರ ಬೆನ್ನಲ್ಲೇ ಶುಭ್​ಮನ್ ಗಿಲ್ (13) ಕೂಡ ವಿಕೆಟ್ ಒಪ್ಪಿಸಿದರು.

ಆ ನಂತರದ ಜೊತೆಗೂಡಿದ ಕೆಎಲ್ ರಾಹುಲ್ (58) ಹಾಗೂ ಧ್ರುವ್ ಜುರೆಲ್ (6) 35.1 ಓವರ್​ಗಳಲ್ಲಿ ತಂಡವನ್ನು 124 ರನ್​ಗಳ ಗುರಿ ತಲುಪಿಸುವ ಮೂಲಕ ಭಾರತ ತಂಡಕ್ಕೆ 7 ವಿಕೆಟ್​ಗಳ ಜಯ ತಂದುಕೊಟ್ಟರು. ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ಎರಡು ಪಂದ್ಯಗಳ ಸರಣಿಯನ್ನು 2-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ.

ಭಾರತ ಪ್ಲೇಯಿಂಗ್ ಇಲೆವೆನ್: ಯಶಸ್ವಿ ಜೈಸ್ವಾಲ್ , ಕೆಎಲ್ ರಾಹುಲ್ , ಸಾಯಿ ಸುದರ್ಶನ್ , ಶುಭ್​ಮನ್ ಗಿಲ್ (ನಾಯಕ) , ಧ್ರುವ ಜುರೆಲ್ ( ​​ವಿಕೆಟ್ ಕೀಪರ್ ) , ರವೀಂದ್ರ ಜಡೇಜಾ , ವಾಷಿಂಗ್ಟನ್ ಸುಂದರ್ , ನಿತೀಶ್ ಕುಮಾರ್ ರೆಡ್ಡಿ , ಕುಲ್ದೀಪ್ ಯಾದವ್ , ಜಸ್​ಪ್ರೀತ್ ಬುಮ್ರಾ , ಮೊಹಮ್ಮದ್ ಸಿರಾಜ್.

ಇದನ್ನೂ ಓದಿ: IPL 2026: ಐಪಿಎಲ್​ ಆಟಗಾರರ ರಿಟೈನ್​ಗೆ ಡೇಟ್ ಫಿಕ್ಸ್

ವೆಸ್ಟ್ ಇಂಡೀಸ್ ಪ್ಲೇಯಿಂಗ್ ಇಲೆವೆನ್: ಜಾನ್ ಕ್ಯಾಂಪ್‌ಬೆಲ್ , ತೇಜ್​ನರೈನ್ ಚಂದ್ರಪಾಲ್ , ಅಲಿಕ್ ಅಥನಾಝ್ , ಶೈ ಹೋಪ್ , ರೋಸ್ಟನ್ ಚೇಸ್ (ನಾಯಕ) , ಟೆವಿನ್ ಇಮ್ಲಾಚ್ (ವಿಕೆಟ್ ಕೀಪರ್) , ಜಸ್ಟಿನ್ ಗ್ರೀವ್ಸ್ , ಜೋಮೆಲ್ ವಾರಿಕನ್ , ಖಾರಿ ಪಿಯರೆ , ಆಂಡರ್ಸನ್ ಫಿಲಿಪ್ , ಜೇಡನ್ ಸೀಲ್ಸ್.

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು