AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಂಡೀಸ್ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾದ ಸ್ಟಾರ್ ಆಟಗಾರರು ಅಲಭ್ಯ

Team India: ಸೆಪ್ಟೆಂಬರ್‌ನಲ್ಲಿ ವೆಸ್ಟ್ ಇಂಡೀಸ್ ಏಕದಿನ ಸರಣಿ ಮತ್ತು ಏಷ್ಯನ್ ಗೇಮ್ಸ್ 2026 ಏಕಕಾಲದಲ್ಲಿ ನಡೆಯಲಿವೆ. ಜಸ್ಪ್ರೀತ್ ಬುಮ್ರಾ, ಶ್ರೇಯಸ್ ಅಯ್ಯರ್ ಮತ್ತು ಇಶಾನ್ ಕಿಶನ್ ಸೇರಿದಂತೆ ಹಲವು ಪ್ರಮುಖ ಆಟಗಾರರು ಏಷ್ಯನ್ ಗೇಮ್ಸ್‌ಗೆ ತೆರಳುವುದರಿಂದ ವೆಸ್ಟ್ ಇಂಡೀಸ್ ಸರಣಿಗೆ ಅಲಭ್ಯರಾಗಲಿದ್ದಾರೆ. ಬಿಸಿಸಿಐಗೆ ಇದು ಸವಾಲಾಗಿದೆ, ಟೀಂ ಇಂಡಿಯಾ ಪ್ರಮುಖರಿಲ್ಲದೆ ಏಕದಿನ ಸರಣಿ ಆಡಬೇಕಾಗುತ್ತದೆ.

ವಿಂಡೀಸ್ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾದ ಸ್ಟಾರ್ ಆಟಗಾರರು ಅಲಭ್ಯ
Team India
ಪೃಥ್ವಿಶಂಕರ
|

Updated on: Jul 24, 2026 | 6:58 PM

Share

ಪ್ರಸ್ತುತ ಟೀಂ ಇಂಡಿಯಾ (Team India), ಜಿಂಬಾಬ್ವೆ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿಯನ್ನು ಆಡುತ್ತಿದೆ. ಈ ಸರಣಿಯ ಬಳಿಕ ಶ್ರೀಲಂಕಾ ವಿರುದ್ಧ ಟೆಸ್ಟ್ ಸರಣಿಯನ್ನು ಆಡಲಿದೆ. ಈ ಸರಣಿಗಾಗಿ ಮುಂದಿನ ತಿಂಗಳು ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದೆ. ಅಲ್ಲಿಂದ ವಿವಿಧ ಸ್ವರೂಪಗಳಲ್ಲಿ ಬೇರೆ ಬೇರೆ ದೇಶಗಳ ವಿರುದ್ಧ ಟೀಂ ಇಂಡಿಯಾ ಪಂದ್ಯಗಳನ್ನು ಆಡಲಿದೆ. ಆ ಪ್ರಕಾರ ಟೀಂ ಇಂಡಿಯಾ ಸೆಪ್ಟೆಂಬರ್​ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ (India vs West Indies) ಏಕದಿನ ಸರಣಿಯನ್ನು ಆಡಲಿದೆ. ಆದರೆ ಈ ಸರಣಿಗೆ ಜಸ್ಪ್ರೀತ್ ಬುಮ್ರಾ, ಶ್ರೇಯಸ್ ಅಯ್ಯರ್ ಮತ್ತು ಇಶಾನ್ ಕಿಶನ್ ಸೇರಿದಂತೆ ಹಲವಾರು ಪ್ರಮುಖ ಆಟಗಾರರು ಅಲಭ್ಯರಾಗುವ ಸಾಧ್ಯತೆಗಳುವೆ. ಏಕೆಂದರೆ ಅವರೆಲ್ಲರೂ 2026 ರ ಏಷ್ಯನ್ ಗೇಮ್ಸ್​ನಲ್ಲಿ ತಂಡವನ್ನು ಪ್ರತಿನಿಧಿಸಲಿದ್ದಾರೆ.

ಏಷ್ಯನ್ ಗೇಮ್ಸ್ 2026

ಸೆಪ್ಟೆಂಬರ್ ಅಂತ್ಯದಲ್ಲಿ ಜಪಾನ್‌ನಲ್ಲಿ ನಡೆಯಲಿರುವ ಏಷ್ಯನ್ ಗೇಮ್ಸ್ 2026 ರಲ್ಲಿ ಮತ್ತೊಮ್ಮೆ ಭಾರತ ತಂಡ ತನ್ನ ಚಾಂಪಿಯನ್ ಪಟ್ಟವನ್ನು ಉಳಿಸಿಕೊಳ್ಳುವ ಸಲುವಾಗಿ ಕಣಕ್ಕಿಳಿಯಲಿದೆ. ಹಿಂದಿನ ಕ್ರೀಡಾಕೂಟದಲ್ಲಿ ಭಾರತ ಚಿನ್ನದ ಪದಕ ಗೆದ್ದಿದೆ. ಆಗ ಬಿಸಿಸಿಐ ಯುವ ಆಟಗಾರರ ತಂಡವನ್ನು ಈ ಪಂದ್ಯಾವಳಿಗೆ ಕಳುಹಿಸಿಕೊಟ್ಟಿತ್ತು. ಆದರೆ ಈ ಬಾರಿ ಬಿಸಿಸಿಐ ಹೊಸ ನಾಯಕ ಶ್ರೇಯಸ್ ಅಯ್ಯರ್ ನೇತೃತ್ವದಲ್ಲಿ ಜಸ್ಪ್ರೀತ್ ಬುಮ್ರಾ ಅವರಂತಹ ಸ್ಟಾರ್ ಆಟಗಾರರನ್ನು ಒಳಗೊಂಡ ಅತ್ಯಂತ ಬಲಿಷ್ಠ ತಂಡವನ್ನು ಕಳುಹಿಸಿಕೊಡಲು ನಿರ್ಧರಿಸಿದೆ.

ಈ ಪಂದ್ಯಗಳಿಗೆ ತಂಡವನ್ನು ಈಗಾಗಲೇ ಘೋಷಿಸಲಾಗಿತ್ತು, ಇದೀಗ ಪಂದ್ಯಗಳ ವೇಳಾಪಟ್ಟಿಯನ್ನು ಇಂದು ಘೋಷಿಸಲಾಗಿದೆ. ಏಷ್ಯನ್ ಕ್ರೀಡಾಕೂಟದಲ್ಲಿ ಕ್ರಿಕೆಟ್ ಪಂದ್ಯಗಳು ಸೆಪ್ಟೆಂಬರ್ 24 ರಿಂದ ಅಕ್ಟೋಬರ್ 1 ರವರೆಗೆ ನಡೆಯಲಿದ್ದು, ಭಾರತ, ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಶ್ರೀಲಂಕಾ ನೇರವಾಗಿ ಕ್ವಾರ್ಟರ್ ಫೈನಲ್‌ಗೆ ಅರ್ಹತೆ ಪಡೆಯುತ್ತವೆ.

ಭಾರತ-ವಿಂಡೀಸ್ ನಡುವೆ ಏಕದಿನ ಸರಣಿ

ಆದಾಗ್ಯೂ, ಇದು ಈ ಸಮಯದಲ್ಲಿ ನಡೆಯಲಿರುವ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಏಕದಿನ ಸರಣಿಯ ಮೇಲೆ ಪರಿಣಾಮ ಬೀರುತ್ತದೆ. ಎರಡೂ ದೇಶಗಳ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಸೆಪ್ಟೆಂಬರ್ 27 ರಂದು ಪ್ರಾರಂಭವಾಗಿ ಅಕ್ಟೋಬರ್ 3 ರವರೆಗೆ ನಡೆಯಲಿದೆ. ಇದರರ್ಥ ಏಷ್ಯನ್ ಕ್ರೀಡಾಕೂಟ ಮತ್ತು ಏಕದಿನ ಸರಣಿ ಒಂದೇ ಸಮಯದಲ್ಲಿ ನಡೆಯಲಿವೆ. ಹೀಗಾಗಿ ಪ್ರಮುಖ ಆಟಗಾರರಿಲ್ಲದೆ ಟೀಂ ಇಂಡಿಯಾ ಏಕದಿನ ಸರಣಿಯನ್ನು ಆಡಬೇಕಾಗಿದೆ.

ಭಾರತ ಟಿ20 ತಂಡಕ್ಕೆ ಸೂರ್ಯಕುಮಾರ್ ಶೀಘ್ರದಲ್ಲೇ ಕಂಬ್ಯಾಕ್..!

ಈ ಏಕದಿನ ಸರಣಿಯಿಂದ ಹೊರಗುಳಿಯಬಹುದಾದ ಆಟಗಾರರನ್ನು ನೋಡುವುದಾದರೆ, ಇತ್ತೀಚೆಗೆ ಏಕದಿನ ತಂಡದ ಭಾಗವಾಗಿರುವ ಕೆಲವು ಪ್ರಮುಖ ಹೆಸರುಗಳು ಇದರಲ್ಲಿ ಸೇರಿವೆ. ಇದರಲ್ಲಿ ಉಪನಾಯಕ ಶ್ರೇಯಸ್ ಅಯ್ಯರ್ ಮತ್ತು ಸ್ಟಾರ್ ವೇಗಿ ಬುಮ್ರಾ, ಹಾಗೆಯೇ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಇಶಾನ್ ಕಿಶನ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಹರ್ಷಿತ್ ರಾಣಾ ಮತ್ತು ಅರ್ಷದೀಪ್ ಸಿಂಗ್ ಅವರಂತಹ ಪ್ರಮುಖ ಹೆಸರುಗಳು ಸೇರಿವೆ. ಈ ಎಲ್ಲಾ ಆಟಗಾರರು ಟಿ20 ತಂಡದ ಭಾಗವಾಗಿದ್ದಾರೆ. ಹೀಗಾಗಿ ಬಿಸಿಸಿಐ ಈ ತಂಡದಲ್ಲಿ ಬದಲಾವಣೆಗಳನ್ನು ಮಾಡುತ್ತದೆಯೇ ಅಥವಾ ಏಷ್ಯನ್ ಕ್ರೀಡಾಕೂಟಕ್ಕೆ ಆದ್ಯತೆ ನೀಡುತ್ತದೆಯೇ ಎಂಬುದನ್ನು ಕಾದುನೋಡಬೇಕಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ದೇವೇಗೌಡ್ರು ನಿವಾಸಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ
ದೇವೇಗೌಡ್ರು ನಿವಾಸಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ
ಸಿಜೆಪಿ ಪ್ರತಿಭಟನೆ: ಮುಂಜಾಗ್ರತಾ ಕ್ರಮವಾಗಿ ಪೊಲೀಸರ ರಜೆ ರದ್ದು
ಸಿಜೆಪಿ ಪ್ರತಿಭಟನೆ: ಮುಂಜಾಗ್ರತಾ ಕ್ರಮವಾಗಿ ಪೊಲೀಸರ ರಜೆ ರದ್ದು
ಚಿಕ್ಕೋಡಿ, ನಿಪ್ಪಾಣಿ ತಾಲೂಕಿನ 8 ಸೇತುವೆಗಳು ಜಲಾವೃತ
ಚಿಕ್ಕೋಡಿ, ನಿಪ್ಪಾಣಿ ತಾಲೂಕಿನ 8 ಸೇತುವೆಗಳು ಜಲಾವೃತ
ಬಿಪಿಎಲ್ ಕಾರ್ಡುದಾರರಿಗೆ ಗುಡ್​ ನ್ಯೂಸ್ ನೀಡಿದ ಆಹಾರ ಸಚಿವ ಮುನಿಯಪ್ಪ
ಬಿಪಿಎಲ್ ಕಾರ್ಡುದಾರರಿಗೆ ಗುಡ್​ ನ್ಯೂಸ್ ನೀಡಿದ ಆಹಾರ ಸಚಿವ ಮುನಿಯಪ್ಪ
ಬಿಡಾಡಿ ವಾಹನಗಳ ಟೋಯಿಂಗ್: ರಸ್ತೆ ಬದಿಯಲ್ಲಿ ನಿಂತಿದ್ದ ವಾಹನಗಳು ಜಪ್ತಿ
ಬಿಡಾಡಿ ವಾಹನಗಳ ಟೋಯಿಂಗ್: ರಸ್ತೆ ಬದಿಯಲ್ಲಿ ನಿಂತಿದ್ದ ವಾಹನಗಳು ಜಪ್ತಿ
‘ಸ್ವಾರ್ಥ ಬಿಡಿ’: ಚಿತ್ರರಂಗದವರ ಬಗ್ಗೆ ಸಾಧುಕೋಕಿಲ ಬೇಸರ
‘ಸ್ವಾರ್ಥ ಬಿಡಿ’: ಚಿತ್ರರಂಗದವರ ಬಗ್ಗೆ ಸಾಧುಕೋಕಿಲ ಬೇಸರ
ಕಾಕ್ರೋಚ್ ಹೋರಾಟಗಾರರಿಗೆ ಮುಲ್ಲಾಗಳು ಬಿರಿಯಾನಿ ತಿನ್ನಿಸ್ತಾವಸ್ರೆ: ಸಿಂಹ
ಕಾಕ್ರೋಚ್ ಹೋರಾಟಗಾರರಿಗೆ ಮುಲ್ಲಾಗಳು ಬಿರಿಯಾನಿ ತಿನ್ನಿಸ್ತಾವಸ್ರೆ: ಸಿಂಹ
ಸಾರಿಗೆ ಸಚಿವರ ಕ್ಷೇತ್ರದಲ್ಲೇ ಗೋದಾಮಾಗಿ ಮಾರ್ಪಟ್ಟಿರುವ ಬಸ್​​ ನಿಲ್ದಾಣ!
ಸಾರಿಗೆ ಸಚಿವರ ಕ್ಷೇತ್ರದಲ್ಲೇ ಗೋದಾಮಾಗಿ ಮಾರ್ಪಟ್ಟಿರುವ ಬಸ್​​ ನಿಲ್ದಾಣ!
ಚಾಲಕನ ಜೀವಕ್ಕಿಂತ ಬಿಯರ್ ಬಾಟಲಿಯೇ ಮುಖ್ಯವಾಯಿತೇ?
ಚಾಲಕನ ಜೀವಕ್ಕಿಂತ ಬಿಯರ್ ಬಾಟಲಿಯೇ ಮುಖ್ಯವಾಯಿತೇ?
ನೀಟ್ ಪ್ರತಿಭಟನೆ, ಮೋದಿ ಹೇಳಿಕೆ ಬಗ್ಗೆ ಪ್ರಲ್ಹಾದ್ ಜೋಶಿ ಮಹತ್ವದ ಹೇಳಿಕೆ
ನೀಟ್ ಪ್ರತಿಭಟನೆ, ಮೋದಿ ಹೇಳಿಕೆ ಬಗ್ಗೆ ಪ್ರಲ್ಹಾದ್ ಜೋಶಿ ಮಹತ್ವದ ಹೇಳಿಕೆ