AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಗಿಲ್ ಶತಕ, ಸಿರಾಜ್- ಆಕಾಶ್ ಮಾರಕ ದಾಳಿ; ದಿನದಾಟದಂತ್ಯಕ್ಕೆ ಇಂಗ್ಲೆಂಡ್ 72/3

England Needs 536 Runs to Win: ಭಾರತ ತಂಡ 4ನೇ ದಿನದಾಟದಲ್ಲಿ 427 ರನ್‌ಗಳಿಗೆ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡು ಇಂಗ್ಲೆಂಡ್‌ಗೆ 608 ರನ್‌ಗಳ ಬೃಹತ್ ಗುರಿಯನ್ನು ನೀಡಿತು. ದಿನದಾಟದ ಅಂತ್ಯಕ್ಕೆ ಇಂಗ್ಲೆಂಡ್ 72 ರನ್‌ಗಳಿಗೆ 3 ವಿಕೆಟ್ ಕಳೆದುಕೊಂಡಿತು. ಆಕಾಶ್ ದೀಪ್ 2 ಮತ್ತು ಮೊಹಮ್ಮದ್ ಸಿರಾಜ್ 1 ವಿಕೆಟ್ ಪಡೆದರು. ಕೊನೆಯ ದಿನದಾಟದಲ್ಲಿ ಇಂಗ್ಲೆಂಡ್ ಗೆಲುವಿಗೆ 536 ರನ್‌ಗಳು ಮತ್ತು ಭಾರತಕ್ಕೆ 7 ವಿಕೆಟ್‌ಗಳು ಬೇಕಾಗಿದೆ.

IND vs ENG: ಗಿಲ್ ಶತಕ, ಸಿರಾಜ್- ಆಕಾಶ್ ಮಾರಕ ದಾಳಿ; ದಿನದಾಟದಂತ್ಯಕ್ಕೆ ಇಂಗ್ಲೆಂಡ್ 72/3
Team India
ಪೃಥ್ವಿಶಂಕರ
|

Updated on:Jul 05, 2025 | 11:21 PM

Share

ಎಡ್ಜ್‌ಬಾಸ್ಟನ್‌ ಟೆಸ್ಟ್​ನ 4ನೇ ದಿನದಾಟದಲ್ಲಿ 427 ರನ್​ಗಳಿಗೆ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡು ಆತಿಥೇಯ ಇಂಗ್ಲೆಂಡ್​ ಗೆಲುವಿಗೆ 608 ರನ್​ಗಳ ಬೃಹತ್ ಗುರಿ ನೀಡಿರುವ ಟೀಂ ಇಂಡಿಯಾ (Team India), ದಿನದಾಟದಂತ್ಯಕ್ಕೆ ಆಂಗ್ಲ ತಂಡದ ಪ್ರಮುಖ 3 ವಿಕೆಟ್ ಕಬಳಿಸಿ ಕೇವಲ 72 ರನ್​ಗಳನ್ನು ಬಿಟ್ಟುಕೊಟ್ಟಿದೆ. ಹೀಗಾಗಿ ಐದನೇ ಹಾಗೂ ಕೊನೆಯ ದಿನದಾಟದಲ್ಲಿ ಇಂಗ್ಲೆಂಡ್ ಗೆಲುವಿಗೆ 536 ರನ್​ಗಳು ಬೇಕಿದ್ದರೆ, ಟೀಂ ಇಂಡಿಯಾ ಗೆಲುವಿಗೆ ಇನ್ನ 7 ವಿಕೆಟ್​ಗಳ ಅಗತ್ಯವಿದೆ. ಎರಡನೇ ಇನ್ನಿಂಗ್ಸ್​ನಲ್ಲಿ ಟೀಂ ಇಂಡಿಯಾ ಪರ ಬೌಲಿಂಗ್‌ನಲ್ಲಿ ಮತ್ತೊಮ್ಮೆ ಮಿಂಚಿದ ವೇಗಿ ಆಕಾಶ್ ದೀಪ್ (Akash Deep) ಪ್ರಮುಖ 2 ವಿಕೆಟ್ ಕಬಳಿಸಿದರೆ, ಮೊಹಮ್ಮದ್ ಸಿರಾಜ್ (Mohammed Siraj) ಒಂದು ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು. ಇಂಗ್ಲೆಂಡ್ ಪರ ಹ್ಯಾರಿ ಬ್ರೂಕ್ ಹಾಗೂ ಓಲಿ ಪೋಪ್ ಅಜೇಯರಾಗಿ ಉಳಿದಿದ್ದು, ಕೊನೆಯ ದಿನದಾಟಕ್ಕೆ ಬ್ಯಾಟಿಂಗ್‌ ಕಾಯ್ದುಕೊಂಡಿದ್ದಾರೆ.

3 ವಿಕೆಟ್ ಕಳೆದುಕೊಂಡ ಇಂಗ್ಲೆಂಡ್

ಭಾರತ ನೀಡಿದ 608 ರನ್​ಗಳ ಬೃಹತ್ ಗುರಿ ಬೆನ್ನಟ್ಟಿದ ಇಂಗ್ಲೆಂಡ್ ಉತ್ತಮ ಆರಂಭವನ್ನು ಪಡೆಯಲಿಲ್ಲ. ಆರಂಭಿಕ ಜ್ಯಾಕ್ ಕ್ರೌಲಿ ಬೇಗನೆ ಅಂದರೆ ಖಾತೆ ತೆರೆಯದೆ ಔಟಾದರು. ಈ ವಿಕೆಟ್ ಮೊಹಮ್ಮದ್ ಸಿರಾಜ್ ಪಾಲಾಯಿತು. ಇದರ ನಂತರ ಹೊಡಿಬಡಿ ಆಟಕ್ಕೆ ಮುಂದಾಗಿದ್ದ ಬೆನ್ ಡಕೆಟ್​ಗೂ ಪೆವಿಲಿಯನ್ ಹಾದಿ ತೋರಿಸುವಲ್ಲಿ ಆಕಾಶ್ ದೀಪ್ ಯಶಸ್ವಿಯಾದರು. ಹೀಗಾಗಿ ತಂಡ ಬೇಗನೇ 2 ವಿಕೆಟ್ ಕಳೆದುಕೊಂಡಿದ್ದರಿಂದ ಅನುಭವಿ ಬ್ಯಾಟ್ಸ್​ಮನ್ ಜೋ ರೂಟ್ ಮೇಲೆ ಸಾಕಷ್ಟು ಜವಾಬ್ದಾರಿ ಇತ್ತು. ಆದರೆ ಆಕಾಶ್ ದೀಪ್ ಎಸೆದ ಮ್ಯಾಜಿಕಲ್ ಎಸೆತಕ್ಕೆ ಆರು ರನ್ ಗಳಿಸಿದ್ದ ಜೋ ರೂಟ್ ಕ್ಲೀನ್ ಬೌಲ್ಡ್ ಆದರು. ಇನ್ನು ಐದನೇ ದಿನದಾಟಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿರುವ ಓಲಿ ಪೋಪ್ 24 ರನ್ ಬಾರಿಸಿದ್ದರೆ, ಹ್ಯಾರಿ ಬ್ರೂಕ್ 15 ರನ್ ಕಲೆಹಾಕಿದ್ದಾರೆ.

IND vs ENG: ಸಿರಾಜ್ ದಾಳಿಗೆ ಸೊನ್ನೆ ಸುತ್ತಿದ್ದ ಇಂಗ್ಲೆಂಡ್ ಆರಂಭಿಕ; ವಿಡಿಯೋ

ಭಾರತಕ್ಕೆ ಗಿಲ್ ಶತಕದ ಆಸರೆ

ಇದಕ್ಕೂ ಮೊದಲು ಟೀಂ ಇಂಡಿಯಾದ ಎರಡನೇ ಇನ್ನಿಂಗ್ಸ್ 427 ರನ್​ಗಳಿಗೆ ಅಂತ್ಯಗೊಂಡಿತು. ಟೀಂ ಇಂಡಿಯಾ ಪರ ಎರಡನೇ ಇನ್ನಿಂಗ್ಸ್​ನಲ್ಲೂ ಮಿಂಚಿದ ನಾಯಕ ಶುಭ್​ಮನ್​ ಗಿಲ್ ಭರ್ಜರಿ ಶತಕ ಸಿಡಿಸಿದಲ್ಲದೆ, 161 ರನ್​ಗಳ ಸ್ಫೋಟಕ ಇನ್ನಿಂಗ್ಸ್ ಆಡಿದರು. ನಾಯಕ ಗಿಲ್​ಗೆ ಉತ್ತಮ ಸಾಥ್ ನೀಡಿದ ರಿಷಭ್ ಪಂತ್ 65 ರನ್​ಗಳ ಇನ್ನಿಂಗ್ಸ್ ಆಡಿದರೆ, ಇತ್ತ ರವೀಂದ್ರ ಜಡೇಜಾ ಕೂಡ 69 ರನ್​ಗಳ ಕಾಣಿಕೆ ನೀಡಿದರು. ಈ ಮೂವರನ್ನು ಹೊರತುಪಡಿಸಿ ಕೆಎಲ್ ರಾಹುಲ್ ಕೂಡ 55 ರನ್​ಗಳ ಇನ್ನಿಂಗ್ಸ್ ಆಡಿದರು. ಇತ್ತ ಇಂಗ್ಲೆಂಡ್‌ ಪರ ಎಲ್ಲಾ ಬೌಲರ್​ಗಳು ದುಬಾರಿಯಾಗಿದ್ದರು. ವೇಗಿ ಟಂಗ್ ಹಾಗೂ ಸ್ಪಿನ್ನರ್ ಶೋಯೆಬ್ ಬಶೀರ್ ತಲಾ 2 ವಿಕೆಟ್ ಪಡೆದರೆ, ಬ್ರೈಡನ್ ಕಾರ್ಸೆ ಮತ್ತು ಜೋ ರೂಟ್ ತಲಾ ಒಂದು ವಿಕೆಟ್ ಪಡೆದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:12 pm, Sat, 5 July 25

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ