AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಏಕದಿನ ಸರಣಿಯಿಂದ ಟೀಂ ಇಂಡಿಯಾದ ಸ್ಟಾರ್ ಪ್ಲೇಯರ್ ಔಟ್; ಬದಲಿಯಾಗಿ ಬಂದಿದ್ಯಾರು?

India vs England ODI series: ಭಾರತ ಮತ್ತು ಇಂಗ್ಲೆಂಡ್ ನಡುವಿನ T20 ಸರಣಿಯಲ್ಲಿ ಭಾರತ 4-0 ಅಂತರದಿಂದ ಹೀನಾಯ ಸೋಲನುಭವಿಸಿದೆ. ಈ ಸೋಲಿಗೆ ಸೇಡು ತೀರಿಸಿಕೊಳ್ಳಲು ಭಾರತ ODI ಸರಣಿಗೆ ಸಜ್ಜಾಗಿದೆ. ಜುಲೈ 14 ರಿಂದ ಪ್ರಾರಂಭವಾಗುವ ಈ ಮೂರು ಪಂದ್ಯಗಳ ಸರಣಿಗೆ ಹರ್ಷಿತ್ ರಾಣಾ ಬದಲಿಗೆ ಯುವ ವೇಗಿ ಪ್ರಿನ್ಸ್ ಯಾದವ್ ಅವರನ್ನು ಭಾರತ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. T20 ಸೋಲಿನ ನಂತರ, ODI ಸರಣಿ ಭಾರತಕ್ಕೆ ಮಹತ್ವದ್ದಾಗಿದೆ.

IND vs ENG: ಏಕದಿನ ಸರಣಿಯಿಂದ ಟೀಂ ಇಂಡಿಯಾದ ಸ್ಟಾರ್ ಪ್ಲೇಯರ್ ಔಟ್; ಬದಲಿಯಾಗಿ ಬಂದಿದ್ಯಾರು?
Team India
ಪೃಥ್ವಿಶಂಕರ
|

Updated on:Jul 12, 2026 | 4:29 PM

Share

ಭಾರತ ಹಾಗೂ ಇಂಗ್ಲೆಂಡ್‌ (India vs England) ನಡುವಿನ ಐದು ಪಂದ್ಯಗಳ ಟಿ20 ಸರಣಿ ಅಂತ್ಯವಾಗಿದೆ. ಆತಿಥೇಯ ಇಂಗ್ಲೆಂಡ್‌ ಈ ಚುಟುಕು ಸಮರದಲ್ಲಿ ವಿಶ್ವ ಚಾಂಪಿಯನ್ ಟೀಂ ಇಂಡಿಯಾವನ್ನು 4-0 ಅಂತರದಿಂದ ಮಣಿಸಿ ಮೊಟ್ಟ ಮೊದಲ ಬಾರಿಗೆ ಟಿ20 ಸರಣಿ ಗೆದ್ದ ದಾಖಲೆಯನ್ನು ನಿರ್ಮಿಸಿತು. ಇದೀಗ ಆಂಗ್ಲರ ನಾಡಿನಲ್ಲಿ ಒಂದೇ ಒಂದು ಪಂದ್ಯವನ್ನು ಗೆಲ್ಲಲಾಗದೆ ಮುಜುಗರಕ್ಕೊಳಗಾಗಿರುವ ಟೀಂ ಇಂಡಿಯಾ, ಟಿ20 ಸರಣಿ ಸೋಲಿನ ಅವಮಾನಕ್ಕೆ ಏಕದಿನ ಸರಣಿಯಲ್ಲಿ ಸೇಡು ತೀರಿಸಿಕೊಳ್ಳುವ ಇರಾದೆಯಲ್ಲಿದೆ. ಉಭಯ ತಂಡಗಳ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಇದೇ ಜುಲೈ 14 ರಿಂದ ಆರಂಭವಾಗಲಿದೆ. ಆದರೆ ಈ ಸರಣಿ ಆರಂಭಕ್ಕೂ ಮುನ್ನವೇ ಭಾರತ ತಂಡದಲ್ಲಿ ಬದಲಾವಣೆ ಮಾಡಲಾಗಿದೆ. ಯುವ ಸ್ಟಾರ್ ಆಲ್‌ರೌಂಡರ್ ಹರ್ಷಿತ್ ರಾಣಾ ಈ ಸರಣಿಯಿಂದ ಹೊರಬಿದ್ದಿದ್ದಾರೆ. ಹೀಗಾಗಿ ಅವರ ಬದಲಿಗೆ ಯುವ ವೇಗಿ ಪ್ರಿನ್ಸ್ ಯಾದವ್ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ.

ಹರ್ಷಿತ್ ಮತ್ತು ವರುಣ್​ಗೆ ಗಾಯ

ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಏಕದಿನ ಸರಣಿ ಬರುವ ಮಂಗಳವಾರದಿಂದ ಆರಂಭವಾಗಲಿದೆ. ಆದರೆ ಈ ಸರಣಿ ಆರಂಭಕ್ಕೂ ಮುನ್ನ ಏಕದಿನ ತಂಡದಲ್ಲಿ ಬದಲಾವಣೆ ಮಾಡಲಾಗಿದೆ. ಈ ಮೊದಲು ಏಕದಿನ ತಂಡದಲ್ಲಿ ಆಯ್ಕೆಯಾಗಿದ್ದ ಹರ್ಷಿತ್ ರಾಣಾ ಗ್ರೇಡ್ 1 ಮಂಡಿರಜ್ಜು ಗಾಯದಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರನ್ನು ಏಕದಿನ ಸರಣಿಯಿಂದ ಹೊರಗಿಡಲಾಗಿದೆ ಎಂದು ಬಿಸಿಸಿಐ ಹೇಳಿದೆ. ಇತ್ತ ಸ್ಪಿನ್ನರ್ ವರುಣ್ ಚಕ್ರವರ್ತಿ ಕೂಡ ಮಂಡಿರಜ್ಜು ಗಾಯದಿಂದ (ಗ್ರೇಡ್ 2) ಬಳಲುತ್ತಿದ್ದು, ಅವರನ್ನು ಜಿಂಬಾಬ್ವೆ ವಿರುದ್ಧದ ಟಿ20 ಸರಣಿಯಿಂದ ಹೊರಗಿಡಲಾಗಿದೆ ಎಂಬ ಮಾಹಿತಿ ನೀಡಲಾಗಿದೆ. ಅಲ್ಲದೆ ವರುಣ್ ಚಕ್ರವರ್ತಿ ಬದಲಿಗೆ ರವಿ ಬಿಷ್ಣೋಯ್ ಭಾರತ ಟಿ20 ತಂಡದಲ್ಲಿ ಸ್ಥಾನ ನೀಡಲಾಗಿದೆ.

ಪ್ರಿನ್ಸ್ ಮತ್ತು ಬಿಷ್ಣೋಯ್​ಗೆ ಒಲಿದ ಅದೃಷ್ಟ

ವಾಸ್ತವವಾಗಿ ಹರ್ಷಿತ್ ರಾಣಾ ಮತ್ತು ವರುಣ್ ಇತ್ತೀಚಿನ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗೆ ಭಾರತ ತಂಡದ ಭಾಗವಾಗಿದ್ದರು. ಆದರೆ ಮೂರನೇ ಪಂದ್ಯದ ಸಮಯದಲ್ಲಿ ಗಾಯಕ್ಕೆ ತುತ್ತಾದ ಇವರನ್ನು ಸರಣಿಯಿಂದ ಹೊರಗಿಡಲಾಗಿತ್ತು. ಇದೀಗ ಬಿಸಿಸಿಐ ಮುಂಬರುವ ಸರಣಿಗೆ ಗಾಯಗೊಂಡಿರುವ ಇವರಿಬ್ಬರ ಬದಲಿಯಾಗಿ ಪ್ರಿನ್ಸ್ ಯಾದವ್ ಮತ್ತು ರವಿ ಬಿಷ್ಣೋಯ್ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ. ಕಾಕತಾಳೀಯವಾಗಿ, ಇಬ್ಬರೂ ಆಟಗಾರರು ಆಯಾ ಸ್ವರೂಪಗಳಲ್ಲಿ ಹಿಂದಿನ ಸರಣಿಯ ಭಾಗವಾಗಿದ್ದರು ಆದರೆ ಈ ಪ್ರವಾಸಗಳಿಗೆ ಅವರನ್ನು ತಂಡದಿಂದ ಕೈಬಿಡಲಾಗಿತ್ತು

ಪ್ರಿನ್ಸ್ ಯಾದವ್ ಅಫ್ಘಾನಿಸ್ತಾನ ವಿರುದ್ಧದ ಕೊನೆಯ ಏಕದಿನ ಸರಣಿಯ ಮೂಲಕ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ್ದರು. ಇತ್ತ ಬಿಷ್ಣೋಯ್ ಈಗಷ್ಟೇ ಮುಕ್ತಾಯವಾದ ಐರ್ಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯ ಭಾಗವಾಗಿದ್ದರು. ಆದರೆ ಅವರನ್ನು ಜಿಂಬಾಬ್ವೆ ಪ್ರವಾಸಕ್ಕೆ ಆಯ್ಕೆ ಮಾಡಲಾಗಿರಲಿಲ್ಲ. ಅದೃಷ್ಟವಶಾತ್, ಇಬ್ಬರೂ ಈಗ ತಂಡಕ್ಕೆ ಮರಳಿದ್ದಾರೆ. ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಜುಲೈ 14 ರಂದು ಆರಂಭವಾಗಲಿದ್ದು, ಭಾರತ ತಂಡದ ಜಿಂಬಾಬ್ವೆ ಪ್ರವಾಸ ಜುಲೈ 23 ರಂದು ಆರಂಭವಾಗಲಿದ್ದು, ಇದರಲ್ಲಿ ಮೂರು ಟಿ20 ಪಂದ್ಯಗಳು ನಡೆಯಲಿವೆ.

ಕ್ಯಾಚ್ ಹಿಡಿಯಲ್ಲ, ರನ್ ಹೊಡೆಯಲ್ಲ, ಬೌಲಿಂಗ್ ಬಗ್ಗೆ ಕೇಳಬೇಕಿಲ್ಲ; ಇವರೇನಾ ಟಿ20 ಚಾಂಪಿಯನ್ಸ್..!

ಏಕದಿನ ಸರಣಿಗೆ ಭಾರತ ತಂಡ: ಶುಭ್​ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪನಾಯಕ), ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಪ್ರಸಿದ್ಧ್ ಕೃಷ್ಣ, ಪ್ರಿನ್ಸ್ ಯಾದವ್, ಅರ್ಶ್ದೀಪ್ ಸಿಂಗ್, ಗುರ್ನೂರ್ ಬ್ರಾರ್, ಶಿವಂ ದುಬೆ.

ಜಿಂಬಾಬ್ವೆ ಸರಣಿಗೆ ಭಾರತ ಟಿ20 ತಂಡ: ಶ್ರೇಯಸ್ ಅಯ್ಯರ್ (ನಾಯಕ), ವೈಭವ್ ಸೂರ್ಯವಂಶಿ, ಅಭಿಷೇಕ್ ಶರ್ಮಾ, ತಿಲಕ್ ವರ್ಮ (ಉಪನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಶಿವಂ ದುಬೆ, ಸೂರ್ಯಾಂಶ್ ಶೆಡ್ಗೆ, ರಿಂಕು ಸಿಂಗ್, ಹರ್ಷ್ ದುಬೆ, ರವಿ ಬಿಷ್ಣೋಯಿ, ಪ್ರಿನ್ಸ್ ಯಾದವ್, ಯಶ್ ಠಾಕೂರ್, ಅಶೋಕ್ ಶರ್ಮಾ, ಮಯಾಂಕ್ ಯಾದವ್, ಪ್ರಭಾಸಿಮ್ರಾನ್ ಸಿಂಗ್ (ವಿಕೆಟ್ ಕೀಪರ್).

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:17 pm, Sun, 12 July 26

Follow Us
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಎಸ್​​. ಜಾನಕಿ ಅಂತಿಮ ದರ್ಶನದ ನೇರಪ್ರಸಾರ
ಎಸ್​​. ಜಾನಕಿ ಅಂತಿಮ ದರ್ಶನದ ನೇರಪ್ರಸಾರ