ಪಾಕ್ ಪಡೆಯನ್ನು ಸದೆಬಡಿದು ವಿಶ್ವ ದಾಖಲೆ ಸರಿಗಟ್ಟಿದ ಟೀಮ್ ಇಂಡಿಯಾ

India vs Pakistan: 192 ರನ್​ಗಳ ಸುಲಭ ಗುರಿ ಪಡೆದ ಟೀಮ್ ಇಂಡಿಯಾ ಪರ ನಾಯಕ ರೋಹಿತ್ ಶರ್ಮಾ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ ಹಿಟ್​ಮ್ಯಾನ್ 63 ಎಸೆತಗಳಲ್ಲಿ 6 ಭರ್ಜರಿ ಸಿಕ್ಸ್ ಹಾಗೂ 6 ಫೋರ್​ಗಳೊಂದಿಗೆ 86 ರನ್ ಚಚ್ಚಿದರು.

ಪಾಕ್ ಪಡೆಯನ್ನು ಸದೆಬಡಿದು ವಿಶ್ವ ದಾಖಲೆ ಸರಿಗಟ್ಟಿದ ಟೀಮ್ ಇಂಡಿಯಾ
IND vs PAKImage Credit source: Gettyimages
Follow us
| Updated By: ಝಾಹಿರ್ ಯೂಸುಫ್

Updated on: Oct 14, 2023 | 9:08 PM

ಏಕದಿನ ವಿಶ್ವಕಪ್​ನ 12ನೇ ಪಂದ್ಯದಲ್ಲಿ ಪಾಕಿಸ್ತಾನ್ ವಿರುದ್ದ ಟೀಮ್ ಇಂಡಿಯಾ ಆಮೋಘ ಗೆಲುವು ದಾಖಲಿಸಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡಿದ್ದರು. ನಾಯಕನ ನಿರ್ಧಾರವನ್ನು ಸಮರ್ಥಿಸುವಂತೆ ಟೀಮ್ ಇಂಡಿಯಾ ಬೌಲರ್​ಗಳು ಭರ್ಜರಿ ದಾಳಿ ಸಂಘಟಿಸಿದ್ದರು. ಇದಾಗ್ಯೂ ಪಾಕಿಸ್ತಾನ್ ತಂಡ 30 ಓವರ್​ಗಳಲ್ಲಿ 3 ವಿಕೆಟ್ ನಷ್ಟಕ್ಕೆ 155 ರನ್​ ಕಲೆಹಾಕುವಲ್ಲಿ ಯಶಸ್ವಿಯಾಗಿತ್ತು.

ಆದರೆ 30 ರಿಂದ 40ರವರೆಗಿನ ಓವರ್​ಗಳ ವೇಳೆ ಟೀಮ್ ಇಂಡಿಯಾ ಬೌಲರ್​ಗಳು ಅದ್ಭುತ ದಾಳಿ ಸಂಘಟಿಸುವಲ್ಲಿ ಯಶಸ್ವಿಯಾದರು. ಪರಿಣಾಮ 36 ರನ್​ ಕಲೆಹಾಕುವಷ್ಟರಲ್ಲಿ ಪಾಕ್ ತಂಡ 7 ವಿಕೆಟ್​ಗಳು ಉರುಳಿದ್ದವು. ಇದರೊಂದಿಗೆ ಪಾಕ್​ ತಂಡ 42.5 ಓವರ್​ಗಳಲ್ಲಿ 191 ರನ್​ಗಳಿಗೆ ಆಲೌಟ್ ಆಯಿತು.

192 ರನ್​ಗಳ ಸುಲಭ ಗುರಿ ಪಡೆದ ಟೀಮ್ ಇಂಡಿಯಾ ಪರ ನಾಯಕ ರೋಹಿತ್ ಶರ್ಮಾ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ ಹಿಟ್​ಮ್ಯಾನ್ 63 ಎಸೆತಗಳಲ್ಲಿ 6 ಭರ್ಜರಿ ಸಿಕ್ಸ್ ಹಾಗೂ 6 ಫೋರ್​ಗಳೊಂದಿಗೆ 86 ರನ್ ಚಚ್ಚಿದರು. ಇನ್ನು 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಶ್ರೇಯಸ್ ಅಯ್ಯರ್ ಆಕರ್ಷಕ ಅರ್ಧಶತಕ ಬಾರಿಸಿದರು. ಈ ಮೂಲಕ ಟೀಮ್ ಇಂಡಿಯಾ 30.3 ಓವರ್​ಗಳಲ್ಲಿ 3 ವಿಕೆಟ್​ ನಷ್ಟದೊಂದಿಗೆ 192 ರನ್​ಗಳಿಸಿ ಗೆಲುವಿನ ನಗೆ ಬೀರಿತು.

ಪಾಕ್ ವಿಶ್ವ ದಾಖಲೆ ಸರಿಗಟ್ಟಿದ ಭಾರತ:

ವಿಶೇಷ ಎಂದರೆ ಪಾಕಿಸ್ತಾನ್ ವಿರುದ್ಧದ ಈ ಗೆಲುವಿನೊಂದಿಗೆ ಪಾಕ್ ತಂಡದ ಹೆಸರಿನಲ್ಲಿದ್ದ ವಿಶೇಷ ವಿಶ್ವ ದಾಖಲೆಯನ್ನು ಟೀಮ್ ಇಂಡಿಯಾ ಸರಿಗಟ್ಟಿದೆ.  ಏಕದಿನ ವಿಶ್ವಕಪ್​ನಲ್ಲಿ ಒಂದೇ ತಂಡದ ವಿರುದ್ಧ ಏಕಪಕ್ಷೀಯವಾಗಿ ಅತೀ ಹೆಚ್ಚು ಗೆಲುವು ದಾಖಲಿಸಿದ ವಿಶ್ವ ದಾಖಲೆ ಪಾಕಿಸ್ತಾನ್ ಹೆಸರಿನಲ್ಲಿತ್ತು.

ಶ್ರೀಲಂಕಾ ವಿರುದ್ಧ ಪಾಕ್ ಪಡೆ ಏಕದಿನ ವಿಶ್ವಕಪ್​ನಲ್ಲಿ 8 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಆದರೆ ಏಕದಿನ ವಿಶ್ವಕಪ್​ನಲ್ಲಿ ಪಾಕ್ ವಿರುದ್ಧ ಲಂಕಾ ತಂಡ ಇದುವರೆಗೆ ಒಂದೇ ಒಂದು ಜಯ ಸಾಧಿಸಿಲ್ಲ.ಇದೀಗ ಭಾರತ ತಂಡವು ಏಕದಿನ ವಿಶ್ವಕಪ್​ನಲ್ಲಿ  ಪಾಕಿಸ್ತಾನ್ ತಂಡಕ್ಕೆ 8ನೇ ಬಾರಿ ಸೋಲುಣಿಸಿದೆ. ಈ ಮೂಲಕ ಪಾಕ್ ತಂಡದ ಹೆಸರಿನಲ್ಲಿದ್ದ 8-0 ಏಕಪಕ್ಷೀಯ ಜಯದ ವಿಶ್ವ ದಾಖಲೆಯನ್ನು ಟೀಮ್ ಇಂಡಿಯಾ ಸರಿಗಟ್ಟಿರುವುದು ವಿಶೇಷ.

ಭಾರತ (ಪ್ಲೇಯಿಂಗ್ 11): ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

ಇದನ್ನೂ ಓದಿ: Rohit Sharma: ಭರ್ಜರಿ ಸೆಂಚುರಿಯೊಂದಿಗೆ 10 ದಾಖಲೆ ಬರೆದ ಹಿಟ್​ಮ್ಯಾನ್

ಪಾಕಿಸ್ತಾನ್ (ಪ್ಲೇಯಿಂಗ್ 11): ಅಬ್ದುಲ್ಲಾ ಶಫೀಕ್, ಇಮಾಮ್-ಉಲ್-ಹಕ್, ಬಾಬರ್ ಆಝಂ (ನಾಯಕ), ಮೊಹಮ್ಮದ್ ರಿಝ್ವಾನ್, ಸೌದ್ ಶಕೀಲ್, ಇಫ್ತಿಕರ್ ಅಹ್ಮದ್, ಶಾದಾಬ್ ಖಾನ್, ಮೊಹಮ್ಮದ್ ನವಾಝ್, ಹಸನ್ ಅಲಿ, ಶಾಹೀನ್ ಅಫ್ರಿದಿ, ಹ್ಯಾರಿಸ್ ರೌಫ್.

 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ