Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: ಟೀಮ್ ಇಂಡಿಯಾ ಗೆದ್ದರೆ ಇತಿಹಾಸ: ಕೊಹ್ಲಿ ಪಾಲಿಗೆ ಹೊಸ ದಾಖಲೆ..!

India vs South Africa: ದಕ್ಷಿಣ ಆಫ್ರಿಕಾದಲ್ಲಿ ಟೀಮ್ ಇಂಡಿಯಾ ಕಳಪೆ ದಾಖಲೆಯನ್ನು ಹೊಂದಿದ್ದು, ಈ ದಾಖಲೆಯನ್ನು ಅಳಿಸಿ ಹಾಕುವ ವಿಶ್ವಾಸದಲ್ಲಿದ್ದಾರೆ ಕೊಹ್ಲಿ ಪಡೆ.

Team India: ಟೀಮ್ ಇಂಡಿಯಾ ಗೆದ್ದರೆ ಇತಿಹಾಸ: ಕೊಹ್ಲಿ ಪಾಲಿಗೆ ಹೊಸ ದಾಖಲೆ..!
Team India
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jan 02, 2022 | 5:01 PM

ದಕ್ಷಿಣ ಆಫ್ರಿಕಾ ವಿರುದ್ದದ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿರುವ ಟೀಮ್ ಇಂಡಿಯಾ ಇದೀಗ 2ನೇ ಪಂದ್ಯಕ್ಕಾಗಿ ಸಜ್ಜಾಗುತ್ತಿದೆ. ಜೋಹಾನ್ಸ್​ಬರ್ಗ್​ನಲ್ಲಿ ಸೋಮವಾರದಿಂದ ಶುರುವಾಗಲಿರುವ ಈ ಪಂದ್ಯದಲ್ಲಿ ಗೆದ್ದರೆ ಟೀಮ್ ಇಂಡಿಯಾ ಹೊಸ ಇತಿಹಾಸ ಬರೆಯಲಿದೆ. ಸೀಮಿತ ಓವರ್​ ಕ್ರಿಕೆಟ್​ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ದ ಟೀಮ್ ಇಂಡಿಯಾ ಪಾರುಪತ್ಯ ಸಾಧಿಸುತ್ತಾ ಬಂದಿದೆ. ಆದರೆ ಅವರದ್ದೇ ನೆಲದಲ್ಲಿ ಟೆಸ್ಟ್​ ಸರಣಿಯಲ್ಲಿ ದಕ್ಷಿಣ ಆಫ್ರಿಕಾವನ್ನು ಸೋಲಿಸಲಾಗಿಲ್ಲ ಎಂಬ ಕೊರಗು ಇನ್ನೂ ಕೂಡ ಟೀಮ್ ಇಂಡಿಯಾ ಪಾಲಿಗಿದೆ. ಅಂದರೆ ಕಳೆದ 29 ವರ್ಷಗಳಿಂದ ಭಾರತ ತಂಡವು ದಕ್ಷಿಣ ಆಫ್ರಿಕಾದಲ್ಲಿ ಟೆಸ್ಟ್ ಸರಣಿ ಗೆದ್ದಿಲ್ಲ.

ದಕ್ಷಿಣ ಆಫ್ರಿಕಾದಲ್ಲಿ ಟೀಮ್ ಇಂಡಿಯಾ ಕಳಪೆ ದಾಖಲೆಯನ್ನು ಹೊಂದಿದ್ದು, ಈ ದಾಖಲೆಯನ್ನು ಅಳಿಸಿ ಹಾಕುವ ವಿಶ್ವಾಸದಲ್ಲಿದ್ದಾರೆ ಕೊಹ್ಲಿ ಪಡೆ. ಏಕೆಂದರೆ ಭಾರತ ತಂಡ ದಕ್ಷಿಣ ಆಫ್ರಿಕಾದಲ್ಲಿ ಇದುವರೆಗೆ ಏಳು ಟೆಸ್ಟ್ ಸರಣಿಗಳನ್ನು ಆಡಿದೆ. ಅದರಲ್ಲಿ ಒಂದೇ ಒಂದು ಸರಣಿಯನ್ನು ಗೆದ್ದಿಲ್ಲ.

ಇನ್ನು ದಕ್ಷಿಣ ಆಫ್ರಿಕಾ ನೆಲದಲ್ಲಿ ಭಾರತ ಇದುವರೆಗೆ 21 ಟೆಸ್ಟ್ ಪಂದ್ಯಗಳನ್ನು ಆಡಿದೆ. ಈ ಪೈಕಿ ಕೇವಲ 4 ಪಂದ್ಯಗಳನ್ನು ಗೆದ್ದಿದ್ದಾರೆ. ಇನ್ನು 7 ಪಂದ್ಯಗಳು ಡ್ರಾ ಮಾಡಿಕೊಂಡಿದ್ದಾರೆ. ಅತ್ತ ಆತಿಥೇಯರು 10 ಪಂದ್ಯಗಳನ್ನು ಗೆಲ್ಲುವ ಮೂಲಕ ತವರಿನಲ್ಲಿ ಟೀಮ್ ಇಂಡಿಯಾ ವಿರುದ್ದ ಮೇಲುಗೈ ಸಾಧಿಸಿದೆ.

ಇದೀಗ ವಿರಾಟ್ ಕೊಹ್ಲಿ ನೇತೃತ್ವದ ಹೊಸ ಪಡೆ ದಕ್ಷಿಣ ಆಫ್ರಿಕಾ ವಿರುದ್ದ 3 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಜಯ ಸಾಧಿಸಿದೆ. ಇದೀಗ 2ನೇ ಟೆಸ್ಟ್​ ಪಂದ್ಯದಲ್ಲಿ ಜಯಗಳಿಸಿದರೆ 29 ವರ್ಷಗಳ ಕಳಪೆ ದಾಖಲೆಯ ಇತಿಹಾಸವನ್ನು ಕೊಹ್ಲಿ ಪಡೆ ಅಳಿಸಿ ಹಾಕಲಿದ್ದಾರೆ.

ಒಂದು ವೇಳೆ ಈ ಬಾರಿ ದಕ್ಷಿಣ ಆಫ್ರಿಕಾ ವಿರುದ್ದ ಭಾರತ ತಂಡವು ಟೆಸ್ಟ್ ಸರಣಿ ಗೆದ್ದರೆ, ಈ ಸಾಧನೆ ಮಾಡಿದ ಮೊದಲ ಭಾರತೀಯ ನಾಯಕ ಎಂಬ ಹೆಗ್ಗಳಿಕೆಗೆ ವಿರಾಟ್ ಕೊಹ್ಲಿ ಪಾತ್ರರಾಗಲಿದ್ದಾರೆ. ಹೀಗಾಗಿ ಈ ಸರಣಿಯು ಟೀಮ್ ಇಂಡಿಯಾ ಹಾಗೂ ವಿರಾಟ್ ಕೊಹ್ಲಿ ಪಾಲಿಗೆ ಮಹತ್ವದ ಸರಣಿ ಆಗಿದೆ.

ಸೆಂಚರಿಯನ್ ಸ್ಪೋರ್ಟ್​ಪಾರ್ಕ್​ ಸ್ಟೇಡಿಯಂನಲ್ಲಿ ನಡೆದ ಮೊದಲ ಪಂದ್ಯದಲ್ಲಿ 113 ರನ್​ಗಳ ಭರ್ಜರಿ ಜಯ ಸಾದಿಸಿರುವ ಟೀಮ್ ಇಂಡಿಯಾ 3 ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಈ ಗೆಲುವಿನ ಆತ್ಮ ವಿಶ್ವಾಸದಲ್ಲಿ ಭಾರತ ತಂಡ ಜೋಹಾನ್ಸ್​ಬರ್ಗ್​ನಲ್ಲಿ ಕಣಕ್ಕಿಳಿಯಲಿದ್ದು, ಈ ಮೂಲಕ ಹೊಸ ಇತಿಹಾಸ ನಿರ್ಮಿಸುವ ಇರಾದೆಯಲ್ಲಿದೆ.

ಇದನ್ನೂ ಓದಿ:  South Africa vs India: ಭಾರತ- ದಕ್ಷಿಣ ಆಫ್ರಿಕಾ 2ನೇ ಟೆಸ್ಟ್ ಯಾವಾಗ?, ಎಲ್ಲಿ?, ಎಷ್ಟು ಗಂಟೆಗೆ ಆರಂಭ?: ಇಲ್ಲಿದೆ ಮಾಹಿತಿ

ಇದನ್ನೂ ಓದಿ:  Ravindra Jadeja: ಸ್ಟಾರ್ ಆಲ್​ರೌಂಡರ್ ಜಡೇಜಾರನ್ನು ಆಯ್ಕೆ ಮಾಡದಿರಲು ಇದುವೇ ಕಾರಣ..!

ಇದನ್ನೂ ಓದಿ: Rohit Sharma: ಫಿಟ್​ನೆಸ್​ ಅಥವಾ ಇನ್ನೇನಾದರೂ? ರೋಹಿತ್ ಶರ್ಮಾ ಕೈ ಬಿಡಲು ಕಾರಣವೇನು?

ಇದನ್ನೂ ಓದಿ: IPL 2022: ಇವರೇ RCB ತಂಡದ ಮುಂದಿನ ಕ್ಯಾಪ್ಟನ್ ಎಂದ ಮಾಜಿ ಆರ್​ಸಿಬಿ ನಾಯಕ

(India ever won an overseas test series in South Africa)

ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ