AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2.5 ವರ್ಷಗಳ ದಾಖಲೆಗೆ ಬ್ರೇಕ್: ಐರ್ಲೆಂಡ್ ವಿರುದ್ಧ ಟೀಮ್ ಇಂಡಿಯಾ ಸರಣಿ ಗೆಲ್ಲಲ್ಲ!

Ireland vs India, 1st T20I: ಭಾರತದ ವಿರುದ್ಧ ಮೊದಲ ಟಿ20 ಪಂದ್ಯದಲ್ಲೇ ಐರ್ಲೆಂಡ್ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಐರ್ಲೆಂಡ್ ತಂಡವು 20 ಓವರ್​ಗಳಲ್ಲಿ 182 ರನ್ ಕಲೆಹಾಕಿತ್ತು. ಈ ಗುರಿಯನ್ನು ಬೆನ್ನತ್ತಿದ ಭಾರತ ತಂಡವು 18.5 ಓವರ್​ಗಳಲ್ಲಿ 148 ರನ್​ಗಳಿಸಿ ಆಲೌಟ್ ಆಗುವ ಮೂಲಕ 34 ರನ್​ಗಳಿಂದ ಸೋಲೊಪ್ಪಿಕೊಂಡಿದೆ.

2.5 ವರ್ಷಗಳ ದಾಖಲೆಗೆ ಬ್ರೇಕ್: ಐರ್ಲೆಂಡ್ ವಿರುದ್ಧ ಟೀಮ್ ಇಂಡಿಯಾ ಸರಣಿ ಗೆಲ್ಲಲ್ಲ!
Team India Image Credit source: BCCI
ಝಾಹಿರ್ ಯೂಸುಫ್
|

Updated on: Jun 27, 2026 | 9:36 AM

Share

ಭಾರತ ತಂಡವು ಕೊನೆಗೂ ಐರ್ಲೆಂಡ್ ವಿರುದ್ಧ ಸೋಲೊಪ್ಪಿಕೊಂಡಿದೆ. ಅದು ಕೂಡ 10 ಪಂದ್ಯಗಳ ಬಳಿಕ. ಅಂದರೆ ಟೀಮ್ ಇಂಡಿಯಾ ಐರ್ಲೆಂಡ್ ವಿರುದ್ಧ 10 ಬಾರಿ ಮುಖಾಮುಖಿಯಾಗಿತ್ತು. ಈ ವೇಳೆ ಹತ್ತು ಪಂದ್ಯಗಳಲ್ಲೂ ಜಯ ಸಾಧಿಸಿತ್ತು. ಆದರೆ 11ನೇ ಮ್ಯಾಚ್​ನಲ್ಲಿ ಭಾರತ ತಂಡಕ್ಕೆ ಸೋಲುಣಿಸುವಲ್ಲಿ ಐರ್ಲೆಂಡ್ ತಂಡ ಯಶಸ್ವಿಯಾಗಿದೆ. ಈ ಯಶಸ್ಸಿನೊಂದಿಗೆ ಐರಿಷ್ ಪಡೆ ಇದೇ ಮೊದಲ ಬಾರಿಗೆ ಭಾರತದ ವಿರುದ್ಧ ಸರಣಿಯನ್ನು ಡ್ರಾ ಮಾಡಿಕೊಳ್ಳಲಿದೆ.

ಟೀಮ್ ಇಂಡಿಯಾ ಸರಣಿ ಗೆಲ್ಲಲ್ಲ!

ಭಾರತ ಮತ್ತು ಐರ್ಲೆಂಡ್ ನಡುವೆ ನಡೆಯುತ್ತಿರುವುದು 2 ಪಂದ್ಯಗಳ ಟಿ20 ಸರಣಿ. ಈ ಸರಣಿಯ ಮೊದಲ ಮ್ಯಾಚ್​ನಲ್ಲಿ ಐರ್ಲೆಂಡ್ ಗೆದ್ದಿದೆ. ಹೀಗಾಗಿ ದ್ವಿತೀಯ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದರೂ ಸರಣಿ 1-1 ಅಂತರದಿಂದ ಸಮಗೊಳ್ಳಲಿದೆ. ಹೀಗಾಗಿ ಈ ಬಾರಿ ಭಾರತ ತಂಡಕ್ಕೆ ಸರಣಿ ಗೆಲ್ಲಲು ಯಾವುದೇ ಅವಕಾಶ ಇರುವುದಿಲ್ಲ.

ಮತ್ತೊಂದೆಡೆ ದ್ವಿತೀಯ ಪಂದ್ಯದಲ್ಲೂ ಟೀಮ್ ಇಂಡಿಯಾಗೆ ಸೋಲುಣಿಸಿದರೆ ಐರ್ಲೆಂಡ್ ತಂಡವು ಹೊಸ ಬರೆಯಬಹುದು. ಅಂದರೆ 2-0 ಅಂತರದಿಂದ ಇದೇ ಮೊದಲ ಬಾರಿಗೆ ಭಾರತದ ವಿರುದ್ಧ ಟಿ20 ಸರಣಿ ಗೆಲ್ಲುವ ಅವಕಾಶ ಐರ್ಲೆಂಡ್ ಮುಂದಿದೆ.

2.5 ವರ್ಷಗಳ ದಾಖಲೆಗೆ ಬ್ರೇಕ್:

ಐರ್ಲೆಂಡ್ ವಿರುದ್ಧದ ಮೊದಲ ಪಂದ್ಯದಲ್ಲಿನ ಸೋಲಿನೊಂದಿಗೆ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಸತತ 12 ಸರಣಿಗಳನ್ನು ಗೆದ್ದು ಬೀಗಿದ್ದ ಟೀಮ್ ಇಂಡಿಯಾದ ಅಜೇಯ ನಾಗಾಲೋಟಕ್ಕೆ ಬ್ರೇಕ್ ಬಿದ್ದಿದೆ.

ಡಿಸೆಂಬರ್ 2023ರಲ್ಲಿ ಸೌತ್ ಆಫ್ರಿಕಾ ವಿರುದ್ಧದ ಸರಣಿಯನ್ನು 1-1 ರಿಂದ ಡ್ರಾ ಮಾಡಿಕೊಂಡ ನಂತರ, ಭಾರತ ಆಡಿದ ಎಲ್ಲಾ 12 ಟಿ20 ಸರಣಿಗಳನ್ನು ಸತತವಾಗಿ ಗೆದ್ದುಕೊಂಡಿತ್ತು. ಆದರೆ ಕೇವಲ 2 ಪಂದ್ಯಗಳ ಈ ಸಣ್ಣ ಸರಣಿಯ ಮೊದಲ ಪಂದ್ಯದಲ್ಲೇ ಸೋತಿರುವುದರಿಂದ, ಭಾರತಕ್ಕೆ ಈಗ ಈ ಸರಣಿಯನ್ನು ಗೆಲ್ಲಲು ಸಾಧ್ಯವಿಲ್ಲ.

ಜೂನ್ 28ರಂದು ನಡೆಯಲಿರುವ ಮುಂದಿನ ಪಂದ್ಯವನ್ನು ಗೆದ್ದರೆ ಮಾತ್ರ ಸರಣಿಯನ್ನು 1-1 ರಿಂದ ಸಮಬಲ ಮಾಡಿಕೊಳ್ಳಬಹುದಾಗಿದೆ.

ಹೀಗಾಗಿ ಈ ಸರಣಿಯ ದ್ವಿತೀಯ ಮ್ಯಾಚ್ ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕ. ಈ ಪಂದ್ಯದಲ್ಲಿ ಗೆದ್ದರೆ ಮಾತ್ರ ಭಾರತ ತಂಡವು ಸರಣಿಯನ್ನು ಡ್ರಾ ಮಾಡಿಕೊಳ್ಳಬಹುದು. ಹಾಗಾಗಿ ಭಾನುವಾರ ನಡೆಯಲಿರುವ ಎರಡನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಕಡೆಯಿಂದ ಭರ್ಜರಿ ಪ್ರದರ್ಶನವನ್ನು ನಿರೀಕ್ಷಿಸಬಹುದು.

ಇದನ್ನೂ ಓದಿ: ಅಭಿಷೇಕ್ ಆರ್ಭಟಕ್ಕೆ ಧಗ್ಗರು ದಾಂಡಿಗರ ದಾಖಲೆ ಧೂಳೀಪಟ

ಭಾರತ ಟಿ20 ತಂಡ: ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ (ಉಪನಾಯಕ), ರವಿ ಬಿಷ್ಣೋಯ್, ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ಇಶಾನ್ ಕಿಶನ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಶಿವಂ ದುಬೆ, ವರುಣ್ ಚಕ್ರವರ್ತಿ, ಪ್ರಿನ್ಸ್ ಯಾದವ್, ವೈಭವ್ ಸೂರ್ಯವಂಶಿ, ಪ್ರಸಿದ್ಧ್ ಕೃಷ್ಣ, ಸೂರ್ಯಂಶ್ ಶೆಡ್ಗೆ.

Follow Us
ಈ ರಾಶಿಯವರಿಗೆ ಇಂದು ಅದೃಷ್ಟ ಕೂಡಿ ಬರಲಿದೆ
ಈ ರಾಶಿಯವರಿಗೆ ಇಂದು ಅದೃಷ್ಟ ಕೂಡಿ ಬರಲಿದೆ
ಚಿಕ್ಕಬಳ್ಳಾಪುರ: ಅನ್ನಭಾಗ್ಯ ಯೋಜನೆಯ ಗೋಧಿ ಅಕ್ರಮ ಸಾಗಾಟ, 14 ಟನ್ ವಶಕ್ಕೆ
ಚಿಕ್ಕಬಳ್ಳಾಪುರ: ಅನ್ನಭಾಗ್ಯ ಯೋಜನೆಯ ಗೋಧಿ ಅಕ್ರಮ ಸಾಗಾಟ, 14 ಟನ್ ವಶಕ್ಕೆ
ಮೈಸೂರು ರಸ್ತೆ To ಮಾಗಡಿ ರಸ್ತೆ ಕೇವಲ 15 ನಿಮಿಷ: ಹೇಗಿದೆ ನೋಡಿ ಕೃಷ್ಣ ಪಥ
ಮೈಸೂರು ರಸ್ತೆ To ಮಾಗಡಿ ರಸ್ತೆ ಕೇವಲ 15 ನಿಮಿಷ: ಹೇಗಿದೆ ನೋಡಿ ಕೃಷ್ಣ ಪಥ
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ