AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದು ತಪ್ಪು… ಟೀಮ್ ಇಂಡಿಯಾ ಸೆಮಿಫೈನಲ್​ಗೇರುತ್ತಿದ್ದಂತೆ ಕ್ಯಾತೆ ತೆಗೆದ ಪ್ಯಾಟ್ ಕಮಿನ್ಸ್

Champions Trophy 2025: ಈ ಬಾರಿಯ ಚಾಂಪಿಯನ್ಸ್ ಟ್ರೋಫಿಯಲ್ಲಿ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಕಾಣಿಸಿಕೊಂಡಿಲ್ಲ. ಗಾಯದ ಕಾರಣ ಟೂರ್ನಿಯಿಂದ ಹೊರುಗಳಿದಿರುವ ಕಮಿನ್ಸ್ ಇದೀಗ ಟೀಮ್ ಇಂಡಿಯಾಗೆ ಹೆಚ್ಚುವರಿಯಾಗಿ ಸಿಕ್ಕಿರುವ ಅನುಕೂಲದ ಬಗ್ಗೆ ಪ್ರಶ್ನೆಗಳೆನ್ನೆತ್ತಿದ್ದಾರೆ. ಅದು ಸಹ ಭಾರತ ತಂಡ ಸೆಮಿಫೈನಲ್​ಗೇರಿದ ಬೆನ್ನಲ್ಲೇ ಎಂಬುದು ವಿಶೇಷ.

ಇದು ತಪ್ಪು... ಟೀಮ್ ಇಂಡಿಯಾ ಸೆಮಿಫೈನಲ್​ಗೇರುತ್ತಿದ್ದಂತೆ ಕ್ಯಾತೆ ತೆಗೆದ ಪ್ಯಾಟ್ ಕಮಿನ್ಸ್
Pat Cummins
ಝಾಹಿರ್ ಯೂಸುಫ್
|

Updated on: Feb 26, 2025 | 9:30 AM

Share

2025ರ ಚಾಂಪಿಯನ್ಸ್ ಟ್ರೋಫಿ ನಿರ್ಣಾಯಕ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಆತಿಥೇಯ ಪಾಕಿಸ್ತಾನ್ ಮತ್ತು ಬಾಂಗ್ಲಾದೇಶ್ ತಂಡಗಳು ಟೂರ್ನಿಯಿಂದ ಹೊರಬಿದ್ದರೆ, ಭಾರತ ಮತ್ತು ನ್ಯೂಝಿಲೆಂಡ್ ತಂಡಗಳು ಸೆಮಿಫೈನಲ್​ಗೆ ಪ್ರವೇಶಿಸಿದೆ. ಇತ್ತ ಟೀಮ್ ಇಂಡಿಯಾ ನಾಕೌಟ್ ಹಂತಕ್ಕೇರುತ್ತಿದ್ದಂತೆ ಹೊಸ ಚರ್ಚೆಯೊಂದು ಶುರುವಾಗಿದೆ. ಅದು ಕೂಡ ಭಾರತ ತಂಡಕ್ಕೆ ಹೆಚ್ಚಿನ ಅನುಕೂಲವಾಗುತ್ತಿದೆ ಎಂಬ ಪ್ಯಾಟ್ ಕಮಿನ್ಸ್ ಅವರ ಹೇಳಿಕೆಯೊಂದಿಗೆ…!

ಈ ಬಾರಿಯ ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಮ್ ಇಂಡಿಯಾ ಒಂದೇ ಮೈದಾನದಲ್ಲಿ ಪಂದ್ಯಗಳನ್ನು ಆಡುತ್ತಿದೆ. ಆದರೆ ಉಳಿದ ತಂಡಗಳನ್ನು ಒಟ್ಟು ಮೂರು ಮೈದಾನದಲ್ಲಿ ಆಡಿಸಲಾಗುತ್ತಿದೆ. ಇಲ್ಲಿ ಭಾರತ ತಂಡವು ಒಂದೇ ಸ್ಥಳದಲ್ಲಿ ಆಡುತ್ತಿರುವುದರಿಂದ ಹೆಚ್ಚಿನ ಅನುಕೂಲ ಪಡೆಯುತ್ತಿದೆ ಎಂದು ಪ್ಯಾಟ್ ಕಮಿನ್ಸ್ ಅಭಿಪ್ರಾಯಪಟ್ಟಿದ್ದಾರೆ.

ಭಾರತ ಮೊದಲೇ ಬಲಿಷ್ಠ ತಂಡ. ಇದೀಗ ಅವರು ದುಬೈ ಮೈದಾನದಲ್ಲಿ ಮಾತ್ರ ಆಡುತ್ತಿರುವುದರಿಂದ ಹೆಚ್ಚಿನ ಪ್ರಯೋಜನವನ್ನು ಸಹ ಪಡೆಯುತ್ತಿದ್ದಾರೆ. ಆದರೆ ಉಳಿದ ತಂಡಗಳಿಗೆ ಈ ಅನುಕೂಲ ದೊರೆಯುತ್ತಿಲ್ಲ ಎಂದು ಪ್ಯಾಟ್ ಕಮಿನ್ಸ್ ಹೇಳಿದ್ದಾರೆ.

ಪ್ಯಾಟ್ ಕಮಿನ್ಸ್ ಹೇಳಿಕೆಯಂತೆ, ಚಾಂಪಿಯನ್ಸ್ ಟ್ರೋಫಿಯಲ್ಲಿ ಕಣಕ್ಕಿಳಿದಿರುವ 8 ತಂಡಗಳಲ್ಲಿ 7 ಟೀಮ್​ಗಳು ರಾವಲ್ಪಿಂಡಿ, ಲಾಹೋರ್ ಹಾಗೂ ದುಬೈನಲ್ಲಿ ಪಂದ್ಯಗಳನ್ನಾಡುತ್ತಿದೆ. ಆದರೆ ಭಾರತ ತಂಡವು ದುಬೈನಲ್ಲಿ ಮಾತ್ರ ಆಡುತ್ತಿದೆ. ಇದಕ್ಕೆ ಮುಖ್ಯ ಕಾರಣ ಈ ಬಾರಿಯ ಚಾಂಪಿಯನ್ಸ್ ಟ್ರೋಫಿ ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸಿರುವುದು.

ಟೀಮ್ ಇಂಡಿಯಾ ಪಾಕಿಸ್ತಾನದಲ್ಲಿ ಟೂರ್ನಿ ಆಡಲು ಹಿಂದೇಟು ಹಾಕಿದ್ದರಿಂದ ಚಾಂಪಿಯನ್ಸ್ ಟ್ರೋಫಿಯನ್ನು ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸಲಾಗುತ್ತಿದೆ. ಅದರಂತೆ ಭಾರತದ ಪಂದ್ಯಗಳಿಗೆ ದುಬೈ ಸ್ಟೇಡಿಯಂ ಅನ್ನು ನಿಗದಿ ಮಾಡಲಾಗಿದೆ. ಹೀಗಾಗಿ ಟೀಮ್ ಇಂಡಿಯಾ ತನ್ನ ಪಂದ್ಯಗಳನ್ನು ದುಬೈ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ಮಾತ್ರ ಆಡುತ್ತಿದೆ.

ಇದನ್ನೂ ಓದಿ: ಅಬ್ಬರಿಸಿ ಬೊಬ್ಬಿರಿದು ವಿರಾಟ್ ಕೊಹ್ಲಿ ಬರೆದ ದಾಖಲೆಗಳು ಒಂದೆರೆಡಲ್ಲ..!

ಇದನ್ನೇ ಪ್ರಸ್ತಾಪಿಸಿರುವ ಪ್ಯಾಟ್ ಕಮಿನ್ಸ್, ಒಂದು ತಂಡಕ್ಕೆ ಮಾತ್ರ ಒಂದೇ ಸ್ಟೇಡಿಯಂನಲ್ಲಿ ಆಡಲು ಅನುಕೂಲ ಮಾಡಿ ಕೊಡುತ್ತಿರುವುದು ಸರಿಯಾದ ಕ್ರಮವಲ್ಲ ಎಂಬಾರ್ಥದಲ್ಲಿ ಮಾತನಾಡಿದ್ದಾರೆ. ಪ್ಯಾಟ್ ಕಮಿನ್ಸ್ ಅವರ ಈ ಹೇಳಿಕೆ ಬೆನ್ನಲ್ಲೇ ಹಲವು ಮಾಜಿ ಆಟಗಾರರು ಕೂಡ ಟೀಮ್ ಇಂಡಿಯಾಗೆ ಸಿಕ್ಕಿರುವ ಹೆಚ್ಚುವರಿ ಅನುಕೂಲದ ಬಗ್ಗೆ ಪ್ರಶ್ನೆಗಳೆನ್ನೆತ್ತಿದ್ದಾರೆ. ಇದರೊಂದಿಗೆ ಹೊಸ ಚರ್ಚೆಯೊಂದು ಶುರುವಾಗಿದ್ದು, ಈ ಚರ್ಚೆಯು ಎಲ್ಲಿಗೆ ಬಂದು ನಿಲ್ಲಲಿದೆ ಎಂಬುದನ್ನು ಕಾದು ನೋಡಬೇಕಿದೆ.

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!