AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rahul Dravid: ರಾಹುಲ್ ದ್ರಾವಿಡ್ ಬಂದ್ಮೇಲೆ ಟೀಮ್ ಇಂಡಿಯಾದ ಅದೃಷ್ಟ ಬದಲಾಯಿತಾ?

India vs South Africa 3rd Test: ಟಿ20 ವಿಶ್ವಕಪ್​ ಸೋಲಿಗೆ ಟೀಮ್ ಇಂಡಿಯಾ ಟಾಸ್ ಸೋತಿರುವುದು ಕೂಡ ಒಂದು ಕಾರಣ ಎಂದು ವಿಶ್ಲೇಷಿಸಲಾಗಿತ್ತು. ಏಕೆಂದರೆ ಟೀಮ್ ಇಂಡಿಯಾ ಟಾಸ್ ಸೋತ ಎರಡು ಪಂದ್ಯಗಳಲ್ಲಿ ಪಾಕಿಸ್ತಾನ್ ಹಾಗೂ ನ್ಯೂಜಿಲೆಂಡ್ ವಿರುದ್ದ ಪರಾಜಯಗೊಂಡಿತು.

Rahul Dravid: ರಾಹುಲ್ ದ್ರಾವಿಡ್ ಬಂದ್ಮೇಲೆ ಟೀಮ್ ಇಂಡಿಯಾದ ಅದೃಷ್ಟ ಬದಲಾಯಿತಾ?
Rahul Dravid-Virat Kohli
TV9 Web
| Edited By: |

Updated on: Jan 11, 2022 | 6:09 PM

Share

ಭಾರತ-ದಕ್ಷಿಣ ಆಫ್ರಿಕಾ (India vs South Africa 3rd Test) ವಿರುದ್ದದ ಮೂರು ಪಂದ್ಯಗಳ ಟೆಸ್ಟ್​ ಸರಣಿಯಲ್ಲಿ ಟೀಮ್ ಇಂಡಿಯಾ (Team India) ಮೂರು ಪಂದ್ಯಗಳಲ್ಲೂ ಟಾಸ್ ಗೆದ್ದಿರುವುದು ವಿಶೇಷ. ಅದರಲ್ಲೂ ಟಾಸ್ ವಿಷಯದಲ್ಲಿ ನತದೃಷ್ಟ ನಾಯಕರಾಗಿ ಗುರುತಿಸಿಕೊಂಡಿದ್ದ ವಿರಾಟ್ ಕೊಹ್ಲಿ (Virat Kohli) ಬ್ಯಾಕ್ ಟು ಬ್ಯಾಕ್ ಟಾಸ್ ಗೆಲ್ಲುವ ಮೂಲಕ ಗಮನ ಸೆಳೆದಿದ್ದಾರೆ. ವಿಶೇಷ ಎಂದರೆ ರಾಹುಲ್ ದ್ರಾವಿಡ್ (Rahul Dravid) ಕೋಚ್ ಆದ ಬಳಿಕ ಟೀಮ್ ಇಂಡಿಯಾ ಟಾಸ್ ಸೋತಿಲ್ಲ ಎಂಬುದು ಇಲ್ಲಿ ಗಮನಾರ್ಹ. ಅಂದರೆ ರಾಹುಲ್ ದ್ರಾವಿಡ್ ನೇತೃತ್ವದಲ್ಲಿ ಟೀಮ್ ಇಂಡಿಯಾ ಒಟ್ಟು 8 ಪಂದ್ಯಗಳನ್ನು ಆಡಿದೆ. ಈ 8 ಪಂದ್ಯಗಳಲ್ಲೂ ಭಾರತ ತಂಡವೇ ಟಾಸ್ ಗೆದ್ದಿದೆ.

ನ್ಯೂಜಿಲೆಂಡ್ ವಿರುದ್ದದ 2 ಟೆಸ್ಟ್ ಪಂದ್ಯಗಳಲ್ಲಿ ಮತ್ತು ಮೂರು ಏಕದಿನ ಪಂದ್ಯಗಳಲ್ಲಿ ಟೀಮ್ ಇಂಡಿಯಾ ಟಾಸ್ ಗೆದ್ದರೆ, ಇದೀಗ ದಕ್ಷಿಣ ಆಫ್ರಿಕಾ ವಿರುದ್ದದ ಟೆಸ್ಟ್​ ಸರಣಿಯ ಮೂರು ಪಂದ್ಯಗಳಲ್ಲೂ ಟಾಸ್ ಜಯಿಸಿದೆ. ಇನ್ನೂ ರಾಹುಲ್ ದ್ರಾವಿಡ್ ಕೋಚಿಂಗ್ ಅಡಿಯಲ್ಲಿ ವಿರಾಟ್ ಕೊಹ್ಲಿ ಮೂರು ಬಾರಿ ನಾಯಕರಾಗಿ ಕಾಣಿಸಿಕೊಂಡಿದ್ದಾರೆ. ಈ ವೇಳೆ ಮೂರು ಬಾರಿ ಕೂಡ ಕೊಹ್ಲಿ ಟಾಸ್ ಗೆದ್ದಿರುವುದು ವಿಶೇಷ.

ಅತ್ತ ಟಿ20 ವಿಶ್ವಕಪ್​ ಸೋಲಿಗೆ ಟೀಮ್ ಇಂಡಿಯಾ ಟಾಸ್ ಸೋತಿರುವುದು ಕೂಡ ಒಂದು ಕಾರಣ ಎಂದು ವಿಶ್ಲೇಷಿಸಲಾಗಿತ್ತು. ಏಕೆಂದರೆ ಟೀಮ್ ಇಂಡಿಯಾ ಟಾಸ್ ಸೋತ ಎರಡು ಪಂದ್ಯಗಳಲ್ಲಿ ಪಾಕಿಸ್ತಾನ್ ಹಾಗೂ ನ್ಯೂಜಿಲೆಂಡ್ ವಿರುದ್ದ ಪರಾಜಯಗೊಂಡಿತು. ಈ ಹೀನಾಯ ಸೋಲುಗಳ ಬಳಿಕ ಟೀಮ್ ಇಂಡಿಯಾ ಸತತವಾಗಿ 8 ಬಾರಿ ಟಾಸ್ ಗೆದ್ದಿರುವುದೇ ಅಚ್ಚರಿ.

ಹೀಗಾಗಿ ರಾಹುಲ್ ದ್ರಾವಿಡ್ ಅವರ ಆಗಮನ ಟೀಮ್ ಇಂಡಿಯಾದ ಅದೃಷ್ಟ ಬದಲಾಯಿತಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಒಟ್ಟಿನಲ್ಲಿ ದಕ್ಷಿಣ ಆಫ್ರಿಕಾ ವಿರುದ್ದ ಟೀಮ್ ಇಂಡಿಯಾ ಕೇಪ್​ ಟೌನ್​ನಲ್ಲಿ ಮೂರನೇ ಟೆಸ್ಟ್ ಪಂದ್ಯವನ್ನು ಆಡುತ್ತಿದ್ದು, ಈ ಪಂದ್ಯದಲ್ಲಿ ಭಾರತ ತಂಡ ಗೆದ್ದರೆ ದಕ್ಷಿಣ ಆಫ್ರಿಕಾ ವಿರುದ್ದ ಟೆಸ್ಟ್ ಸರಣಿ ಗೆದ್ದ ಐತಿಹಾಸಿಕ ದಾಖಲೆ ನಿರ್ಮಿಸಲಿದೆ. ಏಕೆಂದರೆ ಕಳೆದ 30 ವರ್ಷಗಳಲ್ಲಿ ಟೀಮ್ ಇಂಡಿಯಾ ಸೌತ್ ಆಫ್ರಿಕಾದಲ್ಲಿ ಟೆಸ್ಟ್ ಸರಣಿ ಗೆದ್ದಿಲ್ಲ. ಹೀಗಾಗಿ ರಾಹುಲ್ ದ್ರಾವಿಡ್ ಆಗಮನ ಟೀಮ್ ಇಂಡಿಯಾದ ಅದೃಷ್ಟವನ್ನು ಬದಲಿಸಲಿದೆಯಾ ಎಂಬುದು ಈ ಪಂದ್ಯದ ಫಲಿತಾಂಶದಿಂದ ನಿರ್ಧಾರವಾಗಲಿದೆ.

ಇದನ್ನೂ ಓದಿ: IPL 2022: ಮತ್ತೆ RCB ಪರ ಆಡಬೇಕೆಂದ ಸ್ಟಾರ್ ಬೌಲರ್

ಇದನ್ನೂ ಓದಿ:  Sachin Tendulkar: ಆಲ್‌ ಟೈಮ್ ಬೆಸ್ಟ್‌ 11 ಹೆಸರಿಸಿದ ಸಚಿನ್: ಪ್ರಮುಖ ಆಟಗಾರರಿಗಿಲ್ಲ ಸ್ಥಾನ

ಇದನ್ನೂ ಓದಿ: IPL 2022 Mega Auction: ಐಪಿಎಲ್ ಮೆಗಾ ಹರಾಜು ಡೇಟ್ ಫಿಕ್ಸ್..!

ಇದನ್ನೂ ಓದಿ: IPL 2022: ಅಹಮದಾಬಾದ್ ತಂಡಕ್ಕೆ ಟೀಮ್ ಇಂಡಿಯಾ ಮಾಜಿ ಆಟಗಾರ ಕೋಚ್..!

(India has never lost a toss, since Rahul Dravid becomes the Head coach)

ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ