AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

29 ವರ್ಷಗಳ ಬಳಿಕ 6 ಮಂದಿಯನ್ನು ಸೊನ್ನೆ ಸುತ್ತಿಸಿದ ಟೀಮ್ ಇಂಡಿಯಾ

India vs England 2nd Test: ಬರ್ಮಿಂಗ್​ಹ್ಯಾಮ್​ನ ಎಡ್ಜ್​ಬಾಸ್ಟನ್​ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್​ನಲ್ಲಿ 587 ರನ್​ಗಳಿಸಿದರೆ, ಇಂಗ್ಲೆಂಡ್ ಮೊದಲ ಇನಿಂಗ್ಸ್​ನಲ್ಲಿ 407 ರನ್​ಗಳಿಸಿ ಆಲೌಟ್ ಆಗಿದೆ. ಟೀಮ್ ಇಂಡಿಯಾ ಪರ ಮೊಹಮ್ಮದ್ ಸಿರಾಜ್ 6 ವಿಕೆಟ್ ಪಡೆದರೆ, ಆಕಾಶ್ ದೀಪ್ 4 ವಿಕೆಟ್ ಕಬಳಿಸಿ ಮಿಂಚಿದ್ದಾರೆ.

29 ವರ್ಷಗಳ ಬಳಿಕ 6 ಮಂದಿಯನ್ನು ಸೊನ್ನೆ ಸುತ್ತಿಸಿದ ಟೀಮ್ ಇಂಡಿಯಾ
Team India
ಝಾಹಿರ್ ಯೂಸುಫ್
|

Updated on: Jul 05, 2025 | 11:05 AM

Share

ಬರೋಬ್ಬರಿ 29 ವರ್ಷಗಳ ಟೀಮ್ ಇಂಡಿಯಾ ಬೌಲರ್​ಗಳು ಟೆಸ್ಟ್ ಕ್ರಿಕೆಟ್​ನಲ್ಲಿ ಪರಾಕ್ರಮ ಮರೆದಿದ್ದಾರೆ. ಅದು ಕೂಡ ಆತಿಥೇಯ ಇಂಗ್ಲೆಂಡ್​ನ 6 ಬ್ಯಾಟರ್​ಗಳನ್ನು ಶೂನ್ಯಕ್ಕೆ ಔಟ್ ಮಾಡುವ ಮೂಲಕ. ಹೌದು, ಟೆಸ್ಟ್ ಕ್ರಿಕೆಟ್​ ಇತಿಹಾಸದಲ್ಲೇ ಭಾರತೀಯ ಬೌಲರ್​ಗಳು ಇನಿಂಗ್ಸ್​ವೊಂದರಲ್ಲಿ ಆರು ಮಂದಿಯನ್ನು ಸೊನ್ನೆಗೆ ಔಟ್ ಮಾಡಿರುವುದು ಕೇವಲ ಎರಡು ಬಾರಿ ಮಾತ್ರ.

1996 ರಲ್ಲಿ ಸೌತ್ ಆಫ್ರಿಕಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಬೌಲರ್​ಗಳು 6 ಮಂದಿಯನ್ನು ಶೂನ್ಯಕ್ಕೆ ಔಟ್ ಮಾಡಿದ್ದರು. ಅಹಮದಾಬಾದ್​ನಲ್ಲಿ ನಡೆದಿದ್ದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್​ನಲ್ಲಿ 233 ರನ್​ ಕಲೆಹಾಕಿದರೆ, ಸೌತ್ ಆಫ್ರಿಕಾ 244 ರನ್​ ಗಳಿಸಿತು.

11 ರನ್​ಗಳ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಭಾರತ ತಂಡವು ಕೇವಲ 190 ರನ್​ಗಳಿಗೆ ಆಲೌಟ್ ಆಯಿತು. ಅದರಂತೆ ದ್ವಿತೀಯ ಇನಿಂಗ್ಸ್​ನಲ್ಲಿ 180 ರನ್​ಗಳ ಸುಲಭ ಗುರಿ ಪಡೆದ ಸೌತ್ ಆಫ್ರಿಕಾ ತಂಡವನ್ನು ಟೀಮ್ ಇಂಡಿಯಾ ಬೌಲರ್​ಗಳು ಅಂದು ಕೇವಲ 105 ರನ್​ಗಳಿಗೆ ಆಲೌಟ್ ಮಾಡಿದ್ದರು.

ಈ ವೇಳೆ ಸೌತ್ ಆಫ್ರಿಕಾದ ದಾಂಡಿಗರಾದ ಆ್ಯಂಡ್ರೊ ಹಡ್ಸನ್ (0), ಡೇರಿಲ್ ಕುಲ್ಲಿನನ್ (0), ಜಾಂಟಿ ರೋಡ್ಸ್ (0)​, ಪ್ಯಾಟ್ ಸಿಮೊಕ್ಸ್ (0), ಫ್ಯಾನಿ ಡಿವಿಲಿಯರ್ಸ್ (0) ಹಾಗೂ ಪೌಲ್ ಆ್ಯಡಮ್ಸ್ (0) ಶೂನ್ಯಕ್ಕೆ ವಿಕೆಟ್ ಒಪಿಸಿದ್ದರು.

ಕನ್ನಡಿಗರ ಕಮಾಲ್:

ಟೀಮ್ ಇಂಡಿಯಾದ ಈ ಐತಿಹಾಸಿಕ ಸಾಧನೆ ಹಿಂದಿರುವುದು ಕನ್ನಡಿಗರು ಎಂಬುದು ವಿಶೇಷ. ಅಂದರೆ ಅಂದು ಟೀಮ್ ಇಂಡಿಯಾ ಪರ ಬಿಗು ದಾಳಿ ಸಂಘಟಿಸಿದ ಜಾವಗಲ್ ಶ್ರೀನಾಥ್ 4 ಮಂದಿಯನ್ನು ಶೂನ್ಯಕ್ಕೆ ಔಟ್ ಮಾಡಿದರೆ, ಅನಿಲ್ ಕುಂಬ್ಳೆ ಇಬ್ಬರನ್ನು ಸೊನ್ನೆ ಸುತ್ತಿಸಿದ್ದರು. ಈ ಮೂಲಕ ಟೀಮ್ ಇಂಡಿಯಾ ಮೊದಲ ಬಾರಿಗೆ ಟೆಸ್ಟ್​ ಇನಿಂಗ್ಸ್​ವೊಂದರಲ್ಲಿ ಆರು ಮಂದಿಯನ್ನು ಶೂನ್ಯಕ್ಕೆ ಔಟ್ ಮಾಡಿದ ಸಾಧನೆ ಮಾಡಿದ್ದರು.

29 ವರ್ಷಗಳ ಹೊಸ ದಾಖಲೆ:

ಬರೋಬ್ಬರಿ 29 ವರ್ಷಗಳ ಬಳಿಕ ಭಾರತೀಯ ಬೌಲರ್​ಗಳು ಮತ್ತೊಮ್ಮೆ ಇನಿಂಗ್ಸ್​ವೊಂದರಲ್ಲಿ ಆರು ಮಂದಿಯನ್ನು ಸೊನ್ನೆಗೆ ಔಟ್ ಮಾಡಿದ್ದಾರೆ. ಈ ಬಾರಿ ಟೀಮ್ ಇಂಡಿಯಾ ಮುಂದೆ ಸೊನ್ನೆ ಸುತ್ತಿರುವುದು ಇಂಗ್ಲೆಂಡ್​ನ ಆರಂಭಿಕ ದಾಂಡಿಗ ಬೆನ್ ಡಕೆಟ್ (0), ಸ್ಫೋಟಕ ಬ್ಯಾಟರ್ ಒಲೀ ಪೋಪ್ (0), ನಾಯಕ ಬೆನ್ ಸ್ಟೋಕ್ಸ್ (0), ಆಲ್​ರೌಂಡರ್ ಬ್ರೈಡನ್ ಕಾರ್ಸೆ (0), ಜೋಶ್ ಟಂಗ್ (0) ಹಾಗೂ ಶೊಯೆಬ್ ಬಶೀರ್ (0).

ಈ ಆರು ಮಂದಿಯಲ್ಲಿ ನಾಲ್ವರನ್ನು ಮೊಹಮ್ಮದ್ ಸಿರಾಜ್ ಔಟ್ ಮಾಡಿದರೆ, ಮತ್ತಿಬ್ಬರನ್ನು ಆಕಾಶ್ ದೀಪ್ ಶೂನ್ಯದೊಂದಿಗೆ ಪೆವಿಲಿಯನ್​ಗೆ ಕಳುಹಿಸಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ವೇಗಿಗಳು ಇದೇ ಮೊದಲ ಬಾರಿಗೆ ಟೆಸ್ಟ್ ಇನಿಂಗ್ಸ್​ವೊಂದರಲ್ಲಿ ಆರು ಮಂದಿಯನ್ನು ಶೂನ್ಯಕ್ಕೆ ಔಟ್ ಮಾಡಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಇದನ್ನೂ ಓದಿ: ಯಶಸ್ವಿ ಜೈಸ್ವಾಲ್ ಆರ್ಭಟಕ್ಕೆ ದ್ರಾವಿಡ್, ಸೆಹ್ವಾಗ್ ದಾಖಲೆಗಳೇ ಧೂಳೀಪಟ

ಅಂದರೆ 1996 ರಲ್ಲಿ ವೇಗದ ಬೌಲರ್ ಜಾವಗಲ್ ಶ್ರೀನಾಥ್ ಹಾಗೂ ಸ್ಪಿನ್ನರ್ ಅನಿಲ್ ಕುಂಬ್ಳೆ ಜೊತೆಗೂಡಿ ಈ ಸಾಧನೆ ಮಾಡಿದರೆ, ಈ ಬಾರಿ ಟೀಮ್ ಇಂಡಿಯಾ ವೇಗಿಗಳಾದ ಮೊಹಮ್ಮದ್ ಸಿರಾಜ್ ಹಾಗೂ ಆಕಾಶ್ ದೀಪ್ ಜೊತೆಗೂಡಿ 6 ಮಂದಿಯನ್ನು ಸೊನ್ನೆ ಸುತ್ತಿಸಿದ್ದಾರೆ. ಈ ಮೂಲಕ ಭಾರತೀಯ ವೇಗಿಗಳಿಬ್ಬರು ಜೊತೆಗೂಡಿ ಐತಿಹಾಸಿಕ ಸಾಧನೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್