AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ- ಐರ್ಲೆಂಡ್ ಮೊದಲ ಟಿ20 ಪಂದ್ಯ ಎಷ್ಟು ಗಂಟೆಗೆ ಆರಂಭ? ಯಾವ ಚಾನೆಲ್​ನಲ್ಲಿ ನೇರ ಪ್ರಸಾರ?

India vs Ireland 1st T20: ಭಾರತ ತಂಡ ಐರ್ಲೆಂಡ್ ಪ್ರವಾಸದಲ್ಲಿದ್ದು, ಜೂನ್ 26 ರಿಂದ ಟಿ20 ಸರಣಿ ಆರಂಭವಾಗಲಿದೆ. ನಾಯಕ ಶ್ರೇಯಸ್ ಅಯ್ಯರ್ ಸರಣಿ ಗೆಲ್ಲುವ ಇರಾದೆಯಲ್ಲಿದ್ದಾರೆ. ಐರ್ಲೆಂಡ್ ವಿರುದ್ಧ ಭಾರತ ಅಜೇಯ ದಾಖಲೆ ಹೊಂದಿದೆ. ಮೊದಲ ಟಿ20 ಬೆಲ್‌ಫಾಸ್ಟ್‌ನಲ್ಲಿ ಸಂಜೆ 6 ಗಂಟೆಗೆ ನಡೆಯಲಿದ್ದು, ಸೋನಿ ಸ್ಪೋರ್ಟ್ಸ್‌ನಲ್ಲಿ ನೇರ ಪ್ರಸಾರವಾಗಲಿದೆ.

ಭಾರತ- ಐರ್ಲೆಂಡ್ ಮೊದಲ ಟಿ20 ಪಂದ್ಯ ಎಷ್ಟು ಗಂಟೆಗೆ ಆರಂಭ? ಯಾವ ಚಾನೆಲ್​ನಲ್ಲಿ ನೇರ ಪ್ರಸಾರ?
Ind Vs Ire
ಪೃಥ್ವಿಶಂಕರ
|

Updated on: Jun 25, 2026 | 9:22 PM

Share

ಭಾರತ ಟಿ20 ತಂಡ ಪ್ರಸ್ತುತ ಐರ್ಲೆಂಡ್ (India vs Ireland) ಪ್ರವಾಸದಲ್ಲಿದೆ. ಈ ಎರಡೂ ತಂಡಗಳ ನಡುವಿನ ಟಿ20 ಸರಣಿ ಜೂನ್ 26 ರಿಂದ ಪ್ರಾರಂಭವಾಗಲಿದೆ. ನಾಯಕನಾಗಿ ಮೊದಲ ಸರಣಿಯಲ್ಲಿ ತಂಡವನ್ನು ಮುನ್ನಡೆಸುತ್ತಿರುವ ಶ್ರೇಯಸ್ ಅಯ್ಯರ್ ಸರಣಿ ಗೆಲುವಿನ ಇರಾದೆಯಲ್ಲಿದ್ದಾರೆ. ಇನ್ನು ಉಭಯ ತಂಡಗಳ ಮುಖಾಮುಖಿ ನೋಡಿದರೆ ಐರ್ಲೆಂಡ್, ಭಾರತದ ವಿರುದ್ಧ ಒಂದೇ ಒಂದು ಅಂತರರಾಷ್ಟ್ರೀಯ ಪಂದ್ಯವನ್ನು ಗೆದ್ದಿಲ್ಲ. ಭಾರತ ಮತ್ತು ಐರ್ಲೆಂಡ್ 2009 ರಿಂದ ಟಿ20 ಪಂದ್ಯಗಳನ್ನು ಆಡುತ್ತಿದ್ದು, ಎರಡೂ ತಂಡಗಳ ನಡುವೆ ಒಟ್ಟು ಎಂಟು ಪಂದ್ಯಗಳನ್ನು ಆಡಲಾಗಿದೆ. ಈ ಎಂಟು ಪಂದ್ಯಗಳನ್ನು ಭಾರತ ಗೆದ್ದುಕೊಂಡಿದೆ. ಆಶ್ಚರ್ಯಕರವೆಂದರೆ, ಆ ಎಂಟು ಪಂದ್ಯಗಳಲ್ಲಿ ಆರು ಪಂದ್ಯಗಳನ್ನು ಐರಿಶ್ ನೆಲದಲ್ಲಿ ಆಡಲಾಗಿದೆ. ಇನ್ನು ಉಭಯ ತಂಡಗಳ ಮೊದಲ ಟಿ20 ಪಂದ್ಯದ ಬಗ್ಗೆಗಿನ ಉಳಿದ ಮಾಹಿತಿ ಇಲ್ಲಿದೆ.

ಭಾರತ ಹಾಗೂ ಐರ್ಲೆಂಡ್ ನಡುವಿನ ಮೊದಲ ಟಿ20 ಪಂದ್ಯ ಯಾವಾಗ ನಡೆಯಲಿದೆ?

ಭಾರತ ಹಾಗೂ ಐರ್ಲೆಂಡ್ ನಡುವಿನ ಮೊದಲ ಟಿ20 ಪಂದ್ಯ ಜೂನ್ 26 ರಂದು ನಡೆಯಲಿದೆ.

ಭಾರತ ಹಾಗೂ ಐರ್ಲೆಂಡ್ ನಡುವಿನ ಮೊದಲ ಟಿ20 ಪಂದ್ಯ ಎಲ್ಲಿ ನಡೆಯಲಿದೆ?

ಭಾರತ ಹಾಗೂ ಐರ್ಲೆಂಡ್ ನಡುವಿನ ಮೊದಲ ಟಿ20 ಪಂದ್ಯ ಬೆಲ್‌ಫಾಸ್ಟ್ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ.

ಭಾರತ ಹಾಗೂ ಐರ್ಲೆಂಡ್ ನಡುವಿನ ಮೊದಲ ಟಿ20 ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?

ಭಾರತ ಹಾಗೂ ಐರ್ಲೆಂಡ್ ನಡುವಿನ ಮೊದಲ ಟಿ20 ಪಂದ್ಯ ಭಾರತೀಯ ಕಾಲಮಾನ ಸಂಜೆ 6 ಗಂಟೆಗೆ ಪ್ರಾರಂಭವಾಗುತ್ತದೆ.

ಭಾರತ ಹಾಗೂ ಐರ್ಲೆಂಡ್ ನಡುವಿನ ಮೊದಲ ಟಿ20 ಪಂದ್ಯವನ್ನು ಎಲ್ಲಿ ವೀಕ್ಷಿಸಬಹುದು?

ಭಾರತ ಹಾಗೂ ಐರ್ಲೆಂಡ್ ನಡುವಿನ ಮೊದಲ ಟಿ20 ಪಂದ್ಯವನ್ನು ಸೋನಿ ಸ್ಪೋರ್ಟ್ಸ್ ನೆಟ್​ವರ್ಕ್​ನಲ್ಲಿ ವೀಕ್ಷಿಸಬಹುದು.

IND vs IRE: ಭಾರತ-ಐರ್ಲೆಂಡ್ ನಡುವಿನ ಟಿ20 ಸರಣಿಯ ಸಮಯ ಬದಲಾವಣೆ

ಉಭಯ ತಂಡಗಳು

ಐರ್ಲೆಂಡ್ ತಂಡ: ಲೋರ್ಕನ್ ಟಕರ್ (ನಾಯಕ), ರಾಸ್ ಅಡೈರ್, ಬೆನ್ ಕೌಲ್ಟಿಡ್ಜ್, ಗ್ಯಾರೆತ್ ಡೆಲಾನಿ, ಜಾರ್ಜ್ ಡಾಕ್ರೆಲ್, ಸ್ಟೀಫನ್ ಡೊಹೆನಿ, ಮ್ಯಾಥ್ಯೂ ಹಂಫ್ರೈಸ್, ಗ್ಯಾವಿನ್ ಹೋಯ್, ಮ್ಯಾಥ್ಯೂ ಹೊಲ್ಲಾರ್ಡ್, ಲಿಯಾಮ್ ಮೆಕಾರ್ಥಿ, ಜೇ ಮುಂದ್ರಾ, ಹ್ಯಾರಿ ಟೆಕ್ಟರ್, ಟಿಮ್ ಟೆಕ್ಟರ್, ರೂಬೆನ್ ವಿಲ್ಸನ್.

ಭಾರತ ತಂಡ: ಶ್ರೇಯಸ್ ಅಯ್ಯರ್ (ನಾಯಕ), ಇಶಾನ್ ಕಿಶನ್, ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ಶಿವಂ ದುಬೆ, ತಿಲಕ್ ವರ್ಮಾ (ಉಪನಾಯಕ), ನಿತೀಶ್ ರೆಡ್ಡಿ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಪ್ರಿನ್ಸ್ ಯಾದವ್ ಮತ್ತು ವೈಭವ್ ಸೂರ್ಯವಂಶಿ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮಂಗಳೂರಿಗೆ ಬಂದ ಶಾರುಖ್ ಖಾನ್, ಬಾದ್​​ಶಾನ ನೋಡಲು ಮುಗಿಬಿದ್ದ ಜನ
ಮಂಗಳೂರಿಗೆ ಬಂದ ಶಾರುಖ್ ಖಾನ್, ಬಾದ್​​ಶಾನ ನೋಡಲು ಮುಗಿಬಿದ್ದ ಜನ
ಅಂಗಡಿ ಗೋಡೆ ಕೊರೆದು 10 ಕೆಜಿ ಬೆಳ್ಳಿ ಕಳ್ಳತನ ಕೇಸ್​​: ಯುವಕ ಅರೆಸ್ಟ್
ಅಂಗಡಿ ಗೋಡೆ ಕೊರೆದು 10 ಕೆಜಿ ಬೆಳ್ಳಿ ಕಳ್ಳತನ ಕೇಸ್​​: ಯುವಕ ಅರೆಸ್ಟ್
33 ಕ್ರಸ್ಟ್ ಗೇಟ್ ಚೇಂಜ್ ಮಾಡಿ ಉದ್ಘಾಟಿಸಿದ್ದು ನನ್ನ ಭಾಗ್ಯ: ಡಿಕೆಶಿ
33 ಕ್ರಸ್ಟ್ ಗೇಟ್ ಚೇಂಜ್ ಮಾಡಿ ಉದ್ಘಾಟಿಸಿದ್ದು ನನ್ನ ಭಾಗ್ಯ: ಡಿಕೆಶಿ
ಕೃಷಿ ತಾಪಂಡ ಮನೆಯಲ್ಲಿ ಉದ್ಯಮಿ ವೈಶಾಖ್ ಸಾವು, ಆಪ್ತ ಗೆಳೆಯ ಹೇಳಿದ್ದೇನು?
ಕೃಷಿ ತಾಪಂಡ ಮನೆಯಲ್ಲಿ ಉದ್ಯಮಿ ವೈಶಾಖ್ ಸಾವು, ಆಪ್ತ ಗೆಳೆಯ ಹೇಳಿದ್ದೇನು?
ಜೂ 28ರಂದು ರಾಷ್ಟ್ರೀಯ ಲಸಿಕಾ ದಿನ: ಚಿಕ್ಕ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ
ಜೂ 28ರಂದು ರಾಷ್ಟ್ರೀಯ ಲಸಿಕಾ ದಿನ: ಚಿಕ್ಕ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ
ಮುತ್ತತ್ತಿ ದುರಂತ: ಕೊನೇ ಕ್ಷಣದ ವಿಡಿಯೋ ವೈರಲ್
ಮುತ್ತತ್ತಿ ದುರಂತ: ಕೊನೇ ಕ್ಷಣದ ವಿಡಿಯೋ ವೈರಲ್
ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಂದ ಕ್ರಸ್ಟ್ ಗೇಟ್‌ಗಳು ಲೋಕಾರ್ಪಣೆ
ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಂದ ಕ್ರಸ್ಟ್ ಗೇಟ್‌ಗಳು ಲೋಕಾರ್ಪಣೆ
ಸಾಯುವುದಕ್ಕೂ ಮೊದಲು ಕೃಷಿ ತಾಪಂಡಗೆ ವೈಶಾಕ್ ಕಳುಹಿಸಿದ ಸಂದೇಶ ಏನು?
ಸಾಯುವುದಕ್ಕೂ ಮೊದಲು ಕೃಷಿ ತಾಪಂಡಗೆ ವೈಶಾಕ್ ಕಳುಹಿಸಿದ ಸಂದೇಶ ಏನು?
ಪಠ್ಯದಲ್ಲಿ ಕೇಸರೀಕರಣ ವಿವಾದ: ಬಿಜೆಪಿ ವಿರುದ್ಧ ಮಧು ಬಂಗಾರಪ್ಪ ಕಿಡಿ
ಪಠ್ಯದಲ್ಲಿ ಕೇಸರೀಕರಣ ವಿವಾದ: ಬಿಜೆಪಿ ವಿರುದ್ಧ ಮಧು ಬಂಗಾರಪ್ಪ ಕಿಡಿ
ಕಲ್ಲಯ್ಯಜ್ಜ ಶ್ರೀಗಳಿಗೆ ಮಠದ ಟ್ರಸ್ಟಿಗಳಿಂದಲೇ ಜೀವ ಬೆದರಿಕೆ ಆರೋಪ
ಕಲ್ಲಯ್ಯಜ್ಜ ಶ್ರೀಗಳಿಗೆ ಮಠದ ಟ್ರಸ್ಟಿಗಳಿಂದಲೇ ಜೀವ ಬೆದರಿಕೆ ಆರೋಪ