AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆ.22 ರಂದು ಕಣಕ್ಕಿಳಿಯಲಿದೆ ಟೀಂ ಇಂಡಿಯಾ; ಎದುರಾಳಿ ಯಾರು? ಎಷ್ಟು ಗಂಟೆಗೆ ಪಂದ್ಯ?

ಭಾರತ ಮತ್ತು ಜಪಾನ್ ನಡುವಿನ ಮೊದಲ ಐತಿಹಾಸಿಕ T20 ಪಂದ್ಯ ಆಗಸ್ಟ್ 22 ರಂದು ನಡೆಯಲಿದೆ. ಏಷ್ಯನ್ ಗೇಮ್ಸ್‌ಗಾಗಿ ಆಯ್ಕೆಯಾದ ಯುವ ಭಾರತೀಯ ತಂಡವು ಈ ಪಂದ್ಯದಲ್ಲಿ ಕಣಕ್ಕಿಳಿಯಲಿದೆ. ಭಾರತ-ಜಪಾನ್ ರಾಜತಾಂತ್ರಿಕ ಸಂಬಂಧಗಳ 75ನೇ ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಈ ಪಂದ್ಯ ಕ್ರೀಡೆಗಳ ಮೂಲಕ ಸ್ನೇಹ ಸಂಬಂಧ ಬಲಪಡಿಸುವ ಉದ್ದೇಶ ಹೊಂದಿದೆ. ಇದನ್ನು ಫ್ಯಾನ್‌ಕೋಡ್ ಅಪ್ಲಿಕೇಶನ್‌ನಲ್ಲಿ ನೇರವಾಗಿ ವೀಕ್ಷಿಸಬಹುದು.

ಸೆ.22 ರಂದು ಕಣಕ್ಕಿಳಿಯಲಿದೆ ಟೀಂ ಇಂಡಿಯಾ; ಎದುರಾಳಿ ಯಾರು? ಎಷ್ಟು ಗಂಟೆಗೆ ಪಂದ್ಯ?
ಟೀಂ ಇಂಡಿಯಾ
ಪೃಥ್ವಿಶಂಕರ
|

Updated on: Sep 19, 2026 | 7:42 PM

Share

ಅಫ್ಘಾನಿಸ್ತಾನ್ ವಿರುದ್ಧದ ಟಿ20 ಸರಣಿಯನ್ನು ಆಡಿ ಮುಗಿಸಿರುವ ಟೀಂ ಇಂಡಿಯಾ, ಏಷ್ಯನ್ ಗೇಮ್ಸ್​ನಲ್ಲಿ ಪಾಲ್ಗೊಳ್ಳಲು ಸಕಲ ತಯಾರಿ ಮಾಡಿಕೊಂಡಿದೆ. ಆದರೆ ಈ ಪಂದ್ಯಾವಳಿಯಲ್ಲಿ ಭಾಗವಹಿಸುವುದಕ್ಕೆ ಮುನ್ನ ಟೀಂ ಇಂಡಿಯಾ ಜಪಾನ್ ವಿರುದ್ಧ ಏಕೈಕ ಟಿ20 ಪಂದ್ಯವನ್ನಾಡಲಿದೆ. ಅಂತರರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲಿ ಭಾರತ ಮತ್ತು ಜಪಾನ್ ಕ್ರಿಕೆಟ್ ತಂಡಗಳು ಮೊದಲ ಬಾರಿಗೆ ಪರಸ್ಪರ ಮುಖಾಮುಖಿಯಾಗುತ್ತಿರುವುದರಿಂದ ಅಭಿಮಾನಿಗಳಲ್ಲಿ ಆಸಕ್ತಿ ಇಮ್ಮಡಿಗೊಂಡಿದೆ. ಈ ಐತಿಹಾಸಿಕ ಏಕೈಕ ಟಿ20 ಪಂದ್ಯ ಈ ತಿಂಗಳ 22 ರಂದು ಜಪಾನ್‌ನ ಸಾನೋ ಕ್ರೀಡಾಂಗಣದಲ್ಲಿ ನಡೆಯಲಿದೆ.

ಪಂದ್ಯದ ವಿವರ ಹೀಗಿದೆ

ಪಂದ್ಯವು ಭಾರತೀಯ ಕಾಲಮಾನ ಬೆಳಿಗ್ಗೆ 9:30 ಕ್ಕೆ ಆರಂಭವಾಗಲಿದೆ. ಅಭಿಮಾನಿಗಳು OTT ಪ್ಲಾಟ್‌ಫಾರ್ಮ್‌ಗಳಲ್ಲಿ ಮಾತ್ರ ಪಂದ್ಯವನ್ನು ವೀಕ್ಷಿಸಲು ಸಾಧ್ಯವಾಗುತ್ತದೆ. ಟಿವಿ ಪ್ರಸಾರ ಹಕ್ಕುಗಳಿಗಾಗಿ ಯಾವುದೇ ಚಾನೆಲ್ ಮುಂದೆ ಬರದ ಕಾರಣ, ಇದು ಫ್ಯಾನ್‌ಕೋಡ್ ಅಪ್ಲಿಕೇಶನ್‌ನಲ್ಲಿ ಮಾತ್ರ ನೇರಪ್ರಸಾರವಾಗಲಿದೆ. ಕ್ರಿಕೆಟ್ ಅಭಿಮಾನಿಗಳು ತಮ್ಮ ಸ್ಮಾರ್ಟ್‌ಫೋನ್‌ಗಳು ಅಥವಾ ಇತರ ಸಾಧನಗಳಲ್ಲಿ ಪಂದ್ಯವನ್ನು ವೀಕ್ಷಿಸಬಹುದು.

ಈ ಏಕೈಕ ಟಿ20 ಪಂದ್ಯಕ್ಕೂ ಬಿಸಿಸಿಐ, ಏಷ್ಯನ್ ಕ್ರೀಡಾಕೂಟಕ್ಕೆ ಈಗಾಗಲೇ ಘೋಷಿಸಲಾದ ತಂಡವನ್ನೇ ಕಣಕ್ಕಿಳಿಸಲಿದೆ. ಈ ತಂಡದಲ್ಲಿ, ಹಿರಿಯ ಆಟಗಾರರ ಬದಲು ಯುವ ಪ್ರತಿಭೆಗಳಿಗೆ ಆದ್ಯತೆ ನೀಡಲಾಗಿದೆ. ಯುವ ಆಟಗಾರರಿಗೆ ಅಂತರರಾಷ್ಟ್ರೀಯ ಅನುಭವ ನೀಡುವುದು ಮತ್ತು ಅವರ ಸಾಮರ್ಥ್ಯಗಳನ್ನು ಪರೀಕ್ಷಿಸುವುದು ಈ ನಿರ್ಧಾರದ ಹಿಂದಿನ ಉದ್ದೇಶವಾಗಿದೆ. ಭಾರತ ಇತ್ತೀಚೆಗೆ ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯನ್ನು 3-0 ಅಂತರದಿಂದ ಗೆದ್ದುಕೊಂಡಿತು. ಆ ಗೆಲುವಿನ ನಂತರ, ಈ ಯುವ ತಂಡವು ಜಪಾನಿನ ನೆಲದಲ್ಲಿ ಹೇಗೆ ಪ್ರದರ್ಶನ ನೀಡುತ್ತದೆ ಎಂಬುದನ್ನು ನೋಡಲು ಆಸಕ್ತಿದಾಯಕವಾಗಿರುತ್ತದೆ.

ಈ ಪಂದ್ಯದ ವಿಶೇಷತೆ ಏನು?

ಈ ಪಂದ್ಯ ಕೇವಲ ಕ್ರಿಕೆಟ್ ಪಂದ್ಯವಲ್ಲ, ರಾಜತಾಂತ್ರಿಕ ಮಹತ್ವವನ್ನೂ ಹೊಂದಿದೆ. ಭಾರತ ಮತ್ತು ಜಪಾನ್ ನಡುವಿನ ಕ್ರೀಡಾ ಕ್ಷೇತ್ರದಲ್ಲಿ ಸಹಕಾರವನ್ನು ಮತ್ತಷ್ಟು ಹೆಚ್ಚಿಸುವ ಉದ್ದೇಶದಿಂದ ಈ ಪಂದ್ಯವನ್ನು ಆಯೋಜಿಸಲಾಗಿದೆ. ಕ್ರೀಡೆಗಳ ಮೂಲಕ ಎರಡೂ ದೇಶಗಳ ನಡುವಿನ ಸ್ನೇಹ ಸಂಬಂಧವನ್ನು ಬಲಪಡಿಸುವ ಉದ್ದೇಶದಿಂದ ಟೀಂ ಇಂಡಿಯಾ ಮೊದಲ ಬಾರಿಗೆ ಜಪಾನ್ ತಂಡವನ್ನು ಎದುರಿಸಲಿದೆ. ಭಾರತ ಮತ್ತು ಜಪಾನ್ ನಡುವಿನ ರಾಜತಾಂತ್ರಿಕ ಸಂಬಂಧಗಳ 75 ನೇ ವಾರ್ಷಿಕೋತ್ಸವದ ನೆನಪಿಗಾಗಿ ಈ ಪಂದ್ಯವನ್ನು ಆಡಲಾಗುತ್ತಿದೆ. ಜಪಾನ್​ನಲ್ಲಿ ಕ್ರಿಕೆಟ್ ಜನಪ್ರಿಯತೆಯ ಕೊರತೆಯಿರುವ ಸಂದರ್ಭದಲ್ಲಿ, ಈ ಪಂದ್ಯವು ಕ್ರಿಕೆಟ್ ಅನ್ನು ಹೊಸ ಪ್ರೇಕ್ಷಕರಿಗೆ ಹತ್ತಿರ ತರಬಹುದು ಎಂಬುದು ಬಿಸಿಸಿಐ ಉದ್ದೇಶವಾಗಿದೆ.

ಅಫ್ಘನ್ ವಿರುದ್ದದ ಟಿ20 ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದ ಭಾರತ

ಟೀಂ ಇಂಡಿಯಾದ ಮುಂದಿನ ವೇಳಾಪಟ್ಟಿ

ಜಪಾನ್ ವಿರುದ್ಧದ ಈ ಏಕೈಕ ಟಿ20 ಪಂದ್ಯದ ಹೊರತಾಗಿ, ಈ ತಿಂಗಳು ಟೀಂ ಇಂಡಿಯಾ ಬಿಡುವಿಲ್ಲದ ವೇಳಾಪಟ್ಟಿಯನ್ನು ಹೊಂದಿದೆ. ಜಪಾನ್‌ನಲ್ಲಿ ನಡೆಯಲಿರುವ ಏಷ್ಯನ್ ಕ್ರೀಡಾಕೂಟದಲ್ಲಿ ಭಾಗವಹಿಸುವುದರ ಜೊತೆಗೆ, ಭಾರತವು ವೆಸ್ಟ್ ಇಂಡೀಸ್ ವಿರುದ್ಧ ಏಕದಿನ ಮತ್ತು ಟಿ20 ಸರಣಿಯಲ್ಲೂ ಮುಖಾಮುಖಿಯಾಗಲಿದೆ. ಈ ಸರಣಿಯ ಪಂದ್ಯಗಳು ಯುವ ಆಟಗಾರರಿಗೆ ತಮ್ಮ ಪ್ರತಿಭೆಯನ್ನು ಸಾಬೀತುಪಡಿಸಲು ಉತ್ತಮ ಅವಕಾಶವನ್ನು ಒದಗಿಸುತ್ತವೆ. ಜಪಾನ್ ವಿರುದ್ಧದ ಪಂದ್ಯದಲ್ಲಿ ಯುವ ಭಾರತೀಯ ತಂಡವು ಹೇಗೆ ಪ್ರದರ್ಶನ ನೀಡುತ್ತದೆ ಎಂಬುದನ್ನು ನೋಡಲು ಕ್ರಿಕೆಟ್ ಜಗತ್ತು ಕುತೂಹಲದಿಂದ ಕಾಯುತ್ತಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕಲಬುರಗಿ ಯುವತಿಯನ್ನ ಬಾಂಗ್ಲಾದೇಶಕ್ಕೆ ಕರೆದೊಯ್ದು ಟಾರ್ಚರ್
ಕಲಬುರಗಿ ಯುವತಿಯನ್ನ ಬಾಂಗ್ಲಾದೇಶಕ್ಕೆ ಕರೆದೊಯ್ದು ಟಾರ್ಚರ್
ಗರ್ಭಿಣಿ ಹಸುವನ್ನು ಅರ್ಧ ತಿಂದು ರೈತನನ್ನು ಬೆನ್ನಟ್ಟಿದ ಹುಲಿ
ಗರ್ಭಿಣಿ ಹಸುವನ್ನು ಅರ್ಧ ತಿಂದು ರೈತನನ್ನು ಬೆನ್ನಟ್ಟಿದ ಹುಲಿ
ಸಂಘಟನೆಗೆ ಮತ್ತಷ್ಟು ಬಲ‌ ತುಂಬಲು ಕಾಂಗ್ರೆಸ್ ಪ್ಲ್ಯಾನ್: ಹೊಸ ಸಮಿತಿ
ಸಂಘಟನೆಗೆ ಮತ್ತಷ್ಟು ಬಲ‌ ತುಂಬಲು ಕಾಂಗ್ರೆಸ್ ಪ್ಲ್ಯಾನ್: ಹೊಸ ಸಮಿತಿ
ಬಿಸಿಯೂಟ ಮೆನುಗೆ ಚಿಕನ್ ಬಿರಿಯಾನಿ ಸೇರ್ಪಡೆಗೆ ತಮಿಳುನಾಡು ಸರ್ಕಾರ ಚಿಂತನೆ
ಬಿಸಿಯೂಟ ಮೆನುಗೆ ಚಿಕನ್ ಬಿರಿಯಾನಿ ಸೇರ್ಪಡೆಗೆ ತಮಿಳುನಾಡು ಸರ್ಕಾರ ಚಿಂತನೆ
ತಮ್ಮನಾಗಲು ಯೋಗ್ಯತೆಗಳಿರಬೇಕು: ಅಣ್ಣ ಎಂದ ಮಂಜನಿಗೆ ಗುನ್ನಾ ಇಟ್ಟ ಕಿಚ್ಚ
ತಮ್ಮನಾಗಲು ಯೋಗ್ಯತೆಗಳಿರಬೇಕು: ಅಣ್ಣ ಎಂದ ಮಂಜನಿಗೆ ಗುನ್ನಾ ಇಟ್ಟ ಕಿಚ್ಚ
ವಂದೇ ಮಾತರಂ ಎರಡೇ ಚರಣ ಹಾಡಿದ್ದಕ್ಕೆ ಬಿಜೆಪಿ ಶಾಸಕ ಅಸಮಾಧಾನ
ವಂದೇ ಮಾತರಂ ಎರಡೇ ಚರಣ ಹಾಡಿದ್ದಕ್ಕೆ ಬಿಜೆಪಿ ಶಾಸಕ ಅಸಮಾಧಾನ
ಬಳ್ಳಾರಿ: 2 ತಿಂಗಳಿನಿಂದ ವೇತನವಿಲ್ಲದೆ ಬಿಸಿಯೂಟ ಕಾರ್ಯಕರ್ತರ ಪರದಾಟ!
ಬಳ್ಳಾರಿ: 2 ತಿಂಗಳಿನಿಂದ ವೇತನವಿಲ್ಲದೆ ಬಿಸಿಯೂಟ ಕಾರ್ಯಕರ್ತರ ಪರದಾಟ!
ಭಾರತೀಯ ವಾಯುಪಡೆಗೆ ಹೆಚ್ಎಎಲ್ ನಿರ್ಮಿತ ಯುದ್ಧ ವಿಮಾನಗಳ ಹಸ್ತಾಂತರ
ಭಾರತೀಯ ವಾಯುಪಡೆಗೆ ಹೆಚ್ಎಎಲ್ ನಿರ್ಮಿತ ಯುದ್ಧ ವಿಮಾನಗಳ ಹಸ್ತಾಂತರ
ಅವಕಾಶ ಕೊಟ್ಟ ವೇದಿಕೆಗೆ ಅಗೌರವ; ಕಿಚ್ಚನ ಕ್ಲಾಸ್ ಹೇಗಿದೆ ನೋಡಿ
ಅವಕಾಶ ಕೊಟ್ಟ ವೇದಿಕೆಗೆ ಅಗೌರವ; ಕಿಚ್ಚನ ಕ್ಲಾಸ್ ಹೇಗಿದೆ ನೋಡಿ
ಕೆಪಿಎಸ್​ಸಿ ಹಗರಣ: ಜ್ಞಾನೇಂದ್ರ ಕುಮಾರ್, ಕನ್ನಾಳೆ ಬಂಧಿಸಿದ ಇಡಿ
ಕೆಪಿಎಸ್​ಸಿ ಹಗರಣ: ಜ್ಞಾನೇಂದ್ರ ಕುಮಾರ್, ಕನ್ನಾಳೆ ಬಂಧಿಸಿದ ಇಡಿ