AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IML 2025: ವಿಂಡೀಸ್ ಮಣಿಸಿದ ಇಂಡಿಯಾ ಮಾಸ್ಟರ್ಸ್​ಗೆ ಚಾಂಪಿಯನ್ ಕಿರೀಟ

India Masters Wins International Masters League T20 Final: ರಾಯ್‌ಪುರದಲ್ಲಿ ನಡೆದ ಅಂತರರಾಷ್ಟ್ರೀಯ ಮಾಸ್ಟರ್ಸ್ ಲೀಗ್ ಟಿ20 ಪಂದ್ಯಾವಳಿಯ ಫೈನಲ್‌ನಲ್ಲಿ ಭಾರತ ಮಾಸ್ಟರ್ಸ್ ತಂಡವು ವೆಸ್ಟ್ ಇಂಡೀಸ್ ಮಾಸ್ಟರ್ಸ್ ತಂಡವನ್ನು ಸೋಲಿಸಿ ಚಾಂಪಿಯನ್ ಆಯಿತು. ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ 20 ಓವರ್‌ಗಳಲ್ಲಿ 7 ವಿಕೆಟ್‌ಗಳಿಗೆ 147 ರನ್ ಗಳಿಸಿತು. ಈ ಗುರಿ ಬೆನ್ನಟಿದ ಭಾರತ ಮಾಸ್ಟರ್ಸ್ ತಂಡವು 17 ಎಸೆತಗಳು ಬಾಕಿ ಇರುವಾಗಲೇ ಗುರಿ ತಲುಪಿತು. ಈ ಗೆಲುವಿನೊಂದಿಗೆ ಭಾರತ ಮಾಸ್ಟರ್ಸ್ ತಂಡವು ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು.

IML 2025: ವಿಂಡೀಸ್ ಮಣಿಸಿದ ಇಂಡಿಯಾ ಮಾಸ್ಟರ್ಸ್​ಗೆ ಚಾಂಪಿಯನ್ ಕಿರೀಟ
India Masters
Follow us
ಪೃಥ್ವಿಶಂಕರ
|

Updated on:Mar 16, 2025 | 11:24 PM

ರಾಯ್‌ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಇಂಟರ್ನ್ಯಾಷನಲ್ ಮಾಸ್ಟರ್ಸ್ ಲೀಗ್ (International Masters League) ಟಿ20 ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಮಾಸ್ಟರ್ಸ್ ತಂಡವನ್ನು ಇಂಡಿಯಾ ಮಾಸ್ಟರ್ಸ್ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಉಭಯ ತಂಡಗಳ ನಡುವೆ ನಡೆದ ಈ ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 147 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಇಂಡಿಯಾ ಮಾಸ್ಟರ್ಸ್ ಇನ್ನು 17 ಎಸೆತಗಳು ಬಾಕಿ ಇರುವಂತೆಯೇ ಗೆಲುವಿನ ದಡ ಮುಟ್ಟಿತು.

ವಿಂಡೀಸ್ ಪೆವಿಲಿಯನ್ ಪರೇಡ್

ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ವಿಂಡೀಸ್ ಮಾಸ್ಟರ್ಸ್ ಪರ ಲೆಂಡ್ಲ್ ಸಿಮನ್ಸ್ ಅತಿ ಹೆಚ್ಚು ರನ್ ಗಳಿಸಿದರು. ಸಿಮನ್ಸ್ 41 ಎಸೆತಗಳಲ್ಲಿ 139.02 ಸ್ಟ್ರೈಕ್ ರೇಟ್‌ನಲ್ಲಿ 57 ರನ್ ಗಳಿಸಿದರು. ಈ ಇನ್ನಿಂಗ್ಸ್‌ನಲ್ಲಿ ಸಿಮನ್ಸ್ 1 ಸಿಕ್ಸರ್ ಮತ್ತು 5 ಬೌಂಡರಿಗಳನ್ನು ಬಾರಿಸಿದರು. ಇವರಲ್ಲದೆ, ಆರಂಭಿಕ ಆಟಗಾರ ಡ್ವೇನ್ ಸ್ಮಿತ್ 2 ಸಿಕ್ಸರ್ ಮತ್ತು 4 ಬೌಂಡರಿಗಳೊಂದಿಗೆ 45 ರನ್ ಗಳಿಸಿದರು. ವಿಕೆಟ್ ಕೀಪರ್ ದಿನೇಶ್ ರಾಮ್ದಿನ್ ಅಜೇಯ 12 ರನ್ ಗಳಿಸಿದರು. ಈ ಮೂವರನ್ನು ಹೊರತುಪಡಿಸಿ, ಯಾರೂ ಎರಡಂಕಿ ತಲುಪಲು ಸಾಧ್ಯವಾಗಲಿಲ್ಲ. ನಾಯಕ ಬ್ರಿಯಾನ್ ಲಾರಾ, ವಿಲಿಯಂ ಪರ್ಕಿನ್ಸ್ ಮತ್ತು ಚಾಡ್ವಿಕ್ ವಾಲ್ಟನ್ ತಲಾ 6 ರನ್ ಗಳಿಸಿದರೆ, ರವಿ ರಾಂಪಾಲ್ 2 ರನ್ ಕೊಡುಗೆ ನೀಡಿದರು. ಆಶ್ಲೇ ನರ್ಸ್ 1 ರನ್ ಗಳಿಸಿದರು.

ಮಿಂಚಿದ ವಿನಯ್ ಕುಮಾರ್

ಇಂಡಿಯಾ ಮಾಸ್ಟರ್ಸ್ ಪರ ಒಟ್ಟು 6 ಜನರು ಬೌಲಿಂಗ್ ಮಾಡಿದರು. ಆದರೆ ಇರ್ಫಾನ್ ಪಠಾಣ್ ಮತ್ತು ಧವಲ್ ಕುಲಕರ್ಣಿ ವಿಕೆಟ್ ಪಡೆಯುವಲ್ಲಿ ವಿಫಲರಾದರು. ಉಳಿದಂತೆ ವಿನಯ್ ಕುಮಾರ್ 3 ವಿಕೆಟ್ ಪಡೆದರೆ, ಶಾದಾಬ್ ನದೀಮ್ 2 ವಿಕೆಟ್ ಪಡೆದರೆ, ಪವನ್ ನೇಗಿ ಮತ್ತು ಸ್ಟುವರ್ಟ್ ಬಿನ್ನಿ ತಲಾ 1 ವಿಕೆಟ್ ಪಡೆದರು.

ಅಂಬಾಟಿ ಆರ್ಭಟ, ಭಾರತಕ್ಕೆ ಗೆಲುವು

148 ರನ್​ಗಳ ಗುರಿ ಬೆನ್ನಟ್ಟಿದ ಇಂಡಿಯಾ ಮಾಸ್ಟರ್ಸ್​ ಪರ ಅಂಬಾಟಿ ರಾಯುಡು ಸ್ಫೋಟಕ ಇನ್ನಿಂಗ್ಸ್ ಕಟ್ಟಿದರು. ರಾಯುಡು 50 ಎಸೆತಗಳಲ್ಲಿ 148 ಸ್ಟ್ರೈಕ್ ರೇಟ್‌ನಲ್ಲಿ 74 ರನ್ ಗಳಿಸಿದರು. ರಾಯುಡು ಅವರ ಇನ್ನಿಂಗ್ಸ್‌ನಲ್ಲಿ 3 ಸಿಕ್ಸರ್‌ಗಳು ಮತ್ತು 9 ಬೌಂಡರಿಗಳು ಸೇರಿದ್ದವು. ಅವರನ್ನು ಹೊರತುಪಡಿಸಿ ನಾಯಕ ಸಚಿನ್ ತೆಂಡೂಲ್ಕರ್ 18 ಎಸೆತಗಳಲ್ಲಿ 1 ಸಿಕ್ಸರ್ ಮತ್ತು 2 ಬೌಂಡರಿಗಳೊಂದಿಗೆ 25 ರನ್ ಗಳಿಸಿದರು. ಮಧ್ಯಮ ಕ್ರಮಾಂಕದಲ್ಲಿ ಗುರುಕಿರತ್ ಸಿಂಗ್ ಮಾನ್ 14 ರನ್​ಗಳ ಕಾಣಿಕೆ ನೀಡಿದರೆ, ಯೂಸುಫ್ ಪಠಾಣ್‌ಗೆ ಖಾತೆ ತೆರೆಯಲು ಸಹ ಸಾಧ್ಯವಾಗಲಿಲ್ಲ. ಕೊನೆಯಲ್ಲಿ ಯುವರಾಜ್ ಸಿಂಗ್ (13 ರನ್) ಮತ್ತು ಸ್ಟುವರ್ಟ್ ಬಿನ್ನಿ (16 ರನ್) ಜೋಡಿ ಭಾರತವನ್ನು ಗೆಲುವಿನತ್ತ ಕೊಂಡೊಯ್ದಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:14 pm, Sun, 16 March 25

ಸಿಟಿಲೈಟ್ಸ್: ದುನಿಯಾ ವಿಜಯ್ ಪುತ್ರಿ ಮೋನಿಷಾ ನಟನೆಯ ಸಣ್ಣ ಝಲಕ್ ಇಲ್ಲಿದೆ
ಸಿಟಿಲೈಟ್ಸ್: ದುನಿಯಾ ವಿಜಯ್ ಪುತ್ರಿ ಮೋನಿಷಾ ನಟನೆಯ ಸಣ್ಣ ಝಲಕ್ ಇಲ್ಲಿದೆ
Live: ವಿದೇಶಾಂಗ ಇಲಾಖೆಯಿಂದ ತುರ್ತು ಸುದ್ದಿಗೋಷ್ಠಿ
Live: ವಿದೇಶಾಂಗ ಇಲಾಖೆಯಿಂದ ತುರ್ತು ಸುದ್ದಿಗೋಷ್ಠಿ
ಸೀಸನ್​ ಮಧ್ಯ ನಾಯಕನನ್ನು ಬದಲಿಸಿದ್ದ ಆರ್​ಸಿಬಿ
ಸೀಸನ್​ ಮಧ್ಯ ನಾಯಕನನ್ನು ಬದಲಿಸಿದ್ದ ಆರ್​ಸಿಬಿ
ಪಾಕಿಸ್ತಾನದಿಂದ ಕದನವಿರಾಮ ಉಲ್ಲಂಘನೆ; ಪೇಶಾವರದಲ್ಲಿ ಭಾರತ ಪ್ರತಿದಾಳಿ
ಪಾಕಿಸ್ತಾನದಿಂದ ಕದನವಿರಾಮ ಉಲ್ಲಂಘನೆ; ಪೇಶಾವರದಲ್ಲಿ ಭಾರತ ಪ್ರತಿದಾಳಿ
ಜಮ್ಮುವಿನಲ್ಲಿ ಪಾಕ್​ನಿಂದ ಶೆಲ್ ದಾಳಿ; ಓರ್ವ ಯೋಧ ಸಾವು, 7 ಸೈನಿಕರಿಗೆ ಗಾಯ
ಜಮ್ಮುವಿನಲ್ಲಿ ಪಾಕ್​ನಿಂದ ಶೆಲ್ ದಾಳಿ; ಓರ್ವ ಯೋಧ ಸಾವು, 7 ಸೈನಿಕರಿಗೆ ಗಾಯ
ಕದನ ವಿರಾಮ ಉಲ್ಲಂಘನೆ: ಪಾಕಿಸ್ತಾನದಿಂದ ಭಾರತದ ಮೇಲೆ ಮತ್ತೆ ದಾಳಿ
ಕದನ ವಿರಾಮ ಉಲ್ಲಂಘನೆ: ಪಾಕಿಸ್ತಾನದಿಂದ ಭಾರತದ ಮೇಲೆ ಮತ್ತೆ ದಾಳಿ
ಭಾರತೀಯ ಸೇನೆ ಸಂವಿಧಾನಿಕ ಮೌಲ್ಯಗಳಲ್ಲಿ ವಿಶ್ವಾಸ ಹೊಂದಿದೆ: ಸೋಫಿಯಾ ಖುರೇಷಿ
ಭಾರತೀಯ ಸೇನೆ ಸಂವಿಧಾನಿಕ ಮೌಲ್ಯಗಳಲ್ಲಿ ವಿಶ್ವಾಸ ಹೊಂದಿದೆ: ಸೋಫಿಯಾ ಖುರೇಷಿ
ಯುದ್ಧ ಬೇಡ ಅಂತ ನಾನು ಹೇಳಿದ್ದಕ್ಕೆ ದೊಡ್ಡ ಯುದ್ಧವೇ ಆಗಿತ್ತು: ಸಿದ್ದರಾಮಯ್ಯ
ಯುದ್ಧ ಬೇಡ ಅಂತ ನಾನು ಹೇಳಿದ್ದಕ್ಕೆ ದೊಡ್ಡ ಯುದ್ಧವೇ ಆಗಿತ್ತು: ಸಿದ್ದರಾಮಯ್ಯ
ಒಂದನ್ನು ಜೈಸಲಮ್ಮೇರ್​ನಲ್ಲಿ ಪುಡಿಗಟ್ಟಿದರೆ ಮತ್ತೊಂದನ್ನು ಸಿರ್ಸಾದಲ್ಲಿ
ಒಂದನ್ನು ಜೈಸಲಮ್ಮೇರ್​ನಲ್ಲಿ ಪುಡಿಗಟ್ಟಿದರೆ ಮತ್ತೊಂದನ್ನು ಸಿರ್ಸಾದಲ್ಲಿ
ಎಲ್ಲ ಸರಿಯಾದ ಬಳಿಕ ಊರಿಗೆ ವಾಪಸ್ಸು ಬರುತ್ತೇವೆ ಎನ್ನುತ್ತಿರುವ ಜನ
ಎಲ್ಲ ಸರಿಯಾದ ಬಳಿಕ ಊರಿಗೆ ವಾಪಸ್ಸು ಬರುತ್ತೇವೆ ಎನ್ನುತ್ತಿರುವ ಜನ