AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಬುಮ್ರಾ ಜೊತೆ ನಾಲ್ವರು ಸ್ಪಿನ್ನರ್​ಗಳು: ಟೀಮ್ ಇಂಡಿಯಾದ ಮಾಸ್ಟರ್​ ಪ್ಲ್ಯಾನ್

India vs England Test: ಭಾರತ ಮತ್ತು ಇಂಗ್ಲೆಂಡ್ ನಡುವಣ 2ನೇ ಟೆಸ್ಟ್ ಪಂದ್ಯ ಫೆಬ್ರವರಿ 2 ರಿಂದ ಶುರುವಾಗಲಿದೆ. ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ನಡೆಯಲಿರುವ ಈ ಪಂದ್ಯದ ಮೂಲಕ ಕಂಬ್ಯಾಕ್ ಮಾಡುವ ಇರಾದೆಯಲ್ಲಿದೆ ಟೀಮ್ ಇಂಡಿಯಾ.

IND vs ENG: ಬುಮ್ರಾ ಜೊತೆ ನಾಲ್ವರು ಸ್ಪಿನ್ನರ್​ಗಳು: ಟೀಮ್ ಇಂಡಿಯಾದ ಮಾಸ್ಟರ್​ ಪ್ಲ್ಯಾನ್
Team India
TV9 Web
| Edited By: |

Updated on: Jan 31, 2024 | 11:15 AM

Share

ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಸೋಲಿನ ಬೆನ್ನಲ್ಲೇ ಟೀಮ್ ಇಂಡಿಯಾ (Team India) ಎಚ್ಚೆತ್ತುಕೊಂಡಿದೆ. ಮೊದಲ ಪಂದ್ಯದಲ್ಲಿ ಆಂಗ್ಲರು ಹೆಣೆದ ರಣತಂತ್ರವನ್ನೇ ಇದೀಗ ಪ್ರತಿತಂತ್ರವಾಗಿ ಪ್ರಯೋಗಿಸಲು ಭಾರತ ತಂಡ ಮುಂದಾಗಿದೆ. ಇದಕ್ಕಾಗಿ ಪ್ಲೇಯಿಂಗ್ ಇಲೆವೆನ್​ನಲ್ಲಿ ಮಹತ್ವದ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿದೆ.

ಹೈದರಾಬಾದ್​ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವು ಮೂವರು ಸ್ಪಿನ್ನರ್ ಹಾಗೂ ಓರ್ವ ವೇಗಿಯನ್ನು ಮಾತ್ರ ಕಣಕ್ಕಿಳಿಸಿದ್ದರು. ಅಲ್ಲದೆ ನಾಲ್ಕನೇ ಸ್ಪಿನ್ನರ್ ಆಗಿ ಜೋ ರೂಟ್ ಅವರನ್ನು ಬಳಿಸಿಕೊಂಡಿದ್ದರು. ಅಂದರೆ ಮೊದಲ ಪಂದ್ಯದಲ್ಲಿ  ಇಂಗ್ಲೆಂಡ್ ಪರ ನಾಲ್ವರು ಸ್ಪಿನ್ನರ್​ಗಳು ಬೌಲಿಂಗ್ ಮಾಡಿದ್ದರು.

ಇದೀಗ ಇದೇ ರಣತಂತ್ರವನ್ನು ಪ್ರಯೋಗಿಸಲು ಟೀಮ್ ಇಂಡಿಯಾ ಪ್ಲ್ಯಾನ್ ರೂಪಿಸಿದೆ. ಅದರಂತೆ ವಿಶಾಖಪಟ್ಟಣದಲ್ಲಿ ನಡೆಯಲಿರುವ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಲ್ವರು ಸ್ಪಿನ್ನರ್​ಗಳೊಂದಿಗೆ ಕಣಕ್ಕಿಳಿಯುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

ವಿಶಾಖಪಟ್ಟಣದ ವೈಎಸ್​ ರಾಜಶೇಖರ ರೆಡ್ಡಿ ಕ್ರಿಕೆಟ್ ಮೈದಾನದಲ್ಲಿನ ಪಿಚ್ ಸ್ಪಿನ್ನರ್​​ಗಳಿಗೆ ಸಹಕಾರಿ. ಹೀಗಾಗಿ ಆಡುವ ಬಳಗದಲ್ಲಿ ನಾಲ್ವರು ಸ್ಪಿನ್ನರ್​ಗಳನ್ನು ಕಣಕ್ಕಿಳಿಸಲು ಟೀಮ್ ಇಂಡಿಯಾ ಯೋಜನೆ ರೂಪಿಸುತ್ತಿದೆ.

ಅದರಂತೆ ಭಾರತದ ಪರ ಅಕ್ಷರ್ ಪಟೇಲ್ ಹಾಗೂ ರವಿಚಂದ್ರನ್ ಅಶ್ವಿನ್ ಕಣಕ್ಕಿಳಿಯುವುದು ಖಚಿತ. ಇನ್ನು ಮೂರನೇ ಆಲ್​ರೌಂಡರ್​ ಆಗಿ ವಾಷಿಂಗ್ಟನ್ ಸುಂದರ್​ಗೆ ಚಾನ್ಸ್ ಸಿಗಬಹುದು. ಹಾಗೆಯೇ ಪರಿಪೂರ್ಣ ಸ್ಪಿನ್ನರ್ ರೂಪದಲ್ಲಿ ಕುಲ್ದೀಪ್ ಯಾದವ್ ಕಣಕ್ಕಿಳಿಯಬಹುದು.

ವೇಗಿ ಸಿರಾಜ್ ಔಟ್:

ನಾಲ್ವರು ಸ್ಪಿನ್ನರ್​ಗಳನ್ನು ಕಣಕ್ಕಿಳಿಸಲು ಮುಂದಾದರೆ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಿಂದ ಮೊಹಮ್ಮದ್ ಸಿರಾಜ್ ಹೊರಬೀಳಲಿದ್ದಾರೆ. ಮೊದಲ ಪಂದ್ಯದಲ್ಲಿ ಸಾಧಾರಣ ಪ್ರದರ್ಶನ ನೀಡಿದ್ದ ಸಿರಾಜ್ ಬದಲಿಗೆ ಕುಲ್ದೀಪ್ ಯಾದವ್​ಗೆ ಚಾನ್ಸ್ ಸಿಗುವ ಸಾಧ್ಯತೆಯಿದೆ.

ಕೆಎಲ್​ಆರ್​-ಜಡ್ಡು ಅಲಭ್ಯ:

ಇತ್ತ ದ್ವಿತೀಯ ಟೆಸ್ಟ್ ಪಂದ್ಯದಿಂದ ಕೆಎಲ್ ರಾಹುಲ್ ಹಾಗೂ ರವೀಂದ್ರ ಜಡೇಜಾ ಹೊರಗುಳಿದಿದ್ದಾರೆ. ಮಂಡಿರಜ್ಜು ಗಾಯದ ಸಮಸ್ಯೆ ಕಾರಣ ಜಡ್ಡು ಅಲಭ್ಯರಾದರೆ, ತೊಡೆಸಂಧು ನೋವಿನ ಸಮಸ್ಯೆಯ ಕಾರಣ ಕೆಎಲ್ ರಾಹುಲ್ ದ್ವಿತೀಯ ಪಂದ್ಯದಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ.

ಇಲ್ಲಿ ಇಬ್ಬರು ಆಟಗಾರರು ಹೊರಗುಳಿದಿರುವ ಕಾರಣ ಮತ್ತಿಬ್ಬರು ಆಟಗಾರರನ್ನು ಆಡುವ ಬಳಗಕ್ಕೆ ಸೇರಿಸಿಕೊಳ್ಳುವ ಅವಕಾಶವಿದೆ. ಅದರಂತೆ ಇಲ್ಲಿ ಜಡೇಜಾ ಸ್ಥಾನದಲ್ಲಿ ಆಲ್​ರೌಂಡರ್ ವಾಷಿಂಗ್ಟನ್​​ ಸುಂದರ್​ಗೆ ಅವಕಾಶ ದೊರೆಯಲಿದೆ.

ಇದನ್ನೂ ಓದಿ: IPL 2024: RCB ಗೆ ವಿಂಡೀಸ್ ವೇಗಿ?

ಹಾಗೆಯೇ ಕೆಎಲ್ ರಾಹುಲ್ ಸ್ಥಾನದಲ್ಲಿ ಸರ್ಫರಾಝ್ ಖಾನ್ ಅಥವಾ ರಜತ್ ಪಾಟಿದಾರ್ ಕಾಣಿಸಿಕೊಳ್ಳಬಹುದು. ಈ ಮೂಲಕ ಬಲಿಷ್ಠ ಪಡೆಯೊಂದಿಗೆ ಇಂಗ್ಲೆಂಡ್ ತಂಡವನ್ನು ಅಣಿಯಲು ಟೀಮ್ ಇಂಡಿಯಾ ಭರ್ಜರಿ ಪ್ಲ್ಯಾನ್ ರೂಪಿಸುತ್ತಿದೆ.

ಭಾರತ ಟೆಸ್ಟ್ ತಂಡ:

ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ಶ್ರೇಯಸ್ ಅಯ್ಯರ್, ಕೆಎಸ್ ಭರತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಕೇಶ್ ಕುಮಾರ್, ಜಸ್ಪ್ರೀತ್ ಬುಮ್ರಾ, ಸರ್ಫರಾಝ್ ಖಾನ್, ವಾಷಿಂಗ್ಟನ್ ಸುಂದರ್, ಸೌರಭ್ ಕುಮಾರ್, ಅವೇಶ್ ಖಾನ್.

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ