AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾ ಮುಂದಿನ ಪಂದ್ಯವನ್ನು ಎಷ್ಟು ರನ್​ಗಳ ಅಂತರದಿಂದ ಗೆಲ್ಲಬೇಕು?

T20 World Cup 2026: ಟಿ20 ವಿಶ್ವಕಪ್​ನ ಮೊದಲ 4 ಮ್ಯಾಚ್​ಗಳಲ್ಲಿ ಭರ್ಜರಿ ಜಯ ಸಾಧಿಸಿದ್ದ ಟೀಮ್ ಇಂಡಿಯಾ ಇದೀಗ ಸೌತ್ ಆಫ್ರಿಕಾ ವಿರುದ್ಧ ಹೀನಾಯ ಸೋಲನುಭವಿಸಿದೆ. ಈ ಸೋಲಿನ ಹೊರತಾಗಿಯೂ ಭಾರತ ತಂಡವು ಝಿಂಬಾಬ್ವೆ ಹಾಗೂ ವೆಸ್ಟ್ ಇಂಡೀಸ್ ವಿರುದ್ಧ ಗೆದ್ದು ಸೆಮಿಫೈನಲ್​ಗೇರಬಹುದು. ಹೀಗೆ ಸೆಮಿಫೈನಲ್​ಗೇರಲು ಟೀಮ್ ಇಂಡಿಯಾದ ಸಮೀಕರಣ ಈ ಕೆಳಗಿನಂತಿದೆ...

ಟೀಮ್ ಇಂಡಿಯಾ ಮುಂದಿನ ಪಂದ್ಯವನ್ನು ಎಷ್ಟು ರನ್​ಗಳ ಅಂತರದಿಂದ ಗೆಲ್ಲಬೇಕು?
Team India
ಝಾಹಿರ್ ಯೂಸುಫ್
|

Updated on: Feb 23, 2026 | 2:08 PM

Share

ಸೌತ್ ಆಫ್ರಿಕಾ ವಿರುದ್ಧದ ಸೋಲಿನ ಬೆನ್ನಲ್ಲೇ ಟೀಮ್ ಇಂಡಿಯಾದ ಸೆಮಿಫೈನಲ್ ಲೆಕ್ಕಾಚಾರಗಳು ಶುರುವಾಗಿದೆ. ಇದಕ್ಕೆ ಮುಖ್ಯ ಕಾರಣ ಭಾರತ ತಂಡವು ಹೀನಾಯವಾಗಿ ಸೋತಿರುವುದು. ಅಂದರೆ ಸೌತ್ ಆಫ್ರಿಕಾ ವಿರುದ್ಧದ 76 ರನ್​ಗಳ ಅಂತರದಿಂದ ಸೋತಿರುವ ಕಾರಣ ಟೀಮ್ ಇಂಡಿಯಾದ ನೆಟ್ ರನ್ ರೇಟ್ -3.800 ಕ್ಕೆ ಕುಸಿದಿದೆ. ಈ ನೆಗೆಟಿವ್ ನೆಟ್ ರನ್ ರೇಟ್ ಅನ್ನು ಪಾಸಿಟಿಮ್ ಮಾಡಬೇಕಿದ್ದರೆ ಭಾರತ ತಂಡವು ಮುಂದಿನ ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಬೇಕು.

ಅದರಂತೆ ಭಾರತ ತಂಡವು ತನ್ನ ಮುಂದಿನ ಪಂದ್ಯದಲ್ಲಿ ಝಿಂಬಾಬ್ವೆ ವಿರುದ್ಧ ಎಷ್ಟು ರನ್​ಗಳ ಅಂತರದಿಂದ ಗೆಲ್ಲಬೇಕು ಎಂದು ನೋಡುವುದಾದರೆ…

  • ಮೊದಲು ಬ್ಯಾಟಿಂಗ್ ಲೆಕ್ಕಾಚಾರ: ಭಾರತ ತಂಡವು  200ಕ್ಕೂ ಹೆಚ್ಚು ರನ್ ಗಳಿಸಬೇಕು ಮತ್ತು ಎದುರಾಳಿ ತಂಡವನ್ನು ಕನಿಷ್ಠ 70 ರಿಂದ 80 ರನ್‌ಗಳ ಅಂತರದಿಂದ ಸೋಲಿಸಬೇಕು.
  • ಮೊದಲು ಬೌಲಿಂಗ್ ಲೆಕ್ಕಾಚಾರ: ಎದುರಾಳಿ ತಂಡವನ್ನು 130 ರಿಂದ 140 ರನ್​ಗಳ ಒಳಗೆ ಆಲೌಟ್ ಮಾಡಬೇಕು.
  • ಚೇಸಿಂಗ್ ಲೆಕ್ಕಾಚಾರ: ಎದುರಾಳಿ ತಂಡವನ್ನು 140 ರನ್​ಗೆ ಆಲೌಟ್ ಮಾಡಿದರೆ ಟೀಮ್ ಇಂಡಿಯಾ ಈ ಗುರಿಯನ್ನು 9 ರಿಂದ 10 ಓವರ್​ಗಳಲ್ಲಿ ಚೇಸ್ ಮಾಡಬೇಕು.

ಈ ಮೂರು ಲೆಕ್ಕಾಚಾರಗಳೊಂದಿಗೆ ಭಾರತ ತಂಡವು ಝಿಂಬಾಬ್ವೆ ವಿರುದ್ಧ ಕಣಕ್ಕಿಳಿಯುವ ಸಾಧ್ಯತೆಯಿದೆ. ಅಲ್ಲದೆ ಈ ಮ್ಯಾಚ್​ನಲ್ಲಿ ಭರ್ಜರಿ ಜಯ ಸಾಧಿಸಿದರೆ ಟೀಮ್ ಇಂಡಿಯಾದ ನೆಟ್ ರನ್ ರೇಟ್ + ಆಗಲಿದೆ.

ಇನ್ನು ವೆಸ್ಟ್ ಇಂಡೀಸ್ ವಿರುದ್ಧ ಕೂಡ ಭರ್ಜರಿ ಜಯ ಸಾಧಿಸುವ ಮೂಲಕ ಭಾರತ ತಂಡವು ತನ್ನ ನೆಟ್ ರನ್ ರೇಟ್​ ಅನ್ನು ಹೆಚ್ಚಿಸಿಕೊಳ್ಳಬಹುದು. ಈ ಮೂಲಕ 4 ಅಂಕಗಳೊಂದಿಗೆ ನೆಟ್ ರನ್ ರೇಟ್​ನಲ್ಲಿ ಇತರೆ ತಂಡಗಳನ್ನು ಹಿಂದಿಕ್ಕಿ ಸೆಮಿಫೈನಲ್​ಗೇರಬಹುದು.

ನೆಟ್ ರನ್ ರೇಟ್ ಲೆಕ್ಕಾಚಾರವಿಲ್ಲದೇ ಸೆಮಿಫೈನಲ್​ಗೇರಬಹುದೇ?

ನೆಟ್ ರನ್ ರೇಟ್ ಲೆಕ್ಕಾಚಾರವಿಲ್ಲದೇ ಭಾರತ ತಂಡ ಸೆಮಿಫೈನಲ್​ಗೆ ಪ್ರವೇಶಿಸಬಹುದು. ಆದರೆ ಇಲ್ಲಿ ಸೌತ್ ಆಫ್ರಿಕಾ ತಂಡವು ತನ್ನ ಮುಂದಿನ ಎರಡು ಮ್ಯಾಚ್​​ಗಳಲ್ಲಿ ಝಿಂಬಾಬ್ವೆ ಮತ್ತು ವೆಸ್ಟ್ ಇಂಡೀಸ್ ವಿರುದ್ಧ ಗೆಲ್ಲಬೇಕು.

ಹೀಗಾದಲ್ಲಿ ವೆಸ್ಟ್ ಇಂಡೀಸ್ ಹಾಗೂ ಝಿಂಬಾಬ್ವೆ ತಂಡಕ್ಕೆ ಸೋಲುಣಿಸಿ ಟೀಮ್ ಇಂಡಿಯಾ ನೇರವಾಗಿ ಸೆಮಿಫೈನಲ್​ಗೆ ಪ್ರವೇಶಿಸಬಹುದು.

ಇದನ್ನೂ ಓದಿ: ಇಬ್ಬರಲ್ಲಿ ಒಬ್ಬರು… ಟೀಮ್ ಇಂಡಿಯಾದಲ್ಲಿ ಮಹತ್ವದ ಬದಲಾವಣೆ

ಭಾರತದ ಮುಂದಿನ ಪಂದ್ಯಗಳ ವೇಳಾಪಟ್ಟಿ:

  • ಫೆಬ್ರವರಿ 26, 2026: ಭಾರತ vs ಝಿಂಬಾಬ್ವೆ  (ಚೆನ್ನೈ)
  • ಮಾರ್ಚ್ 01, 2026: ವೆಸ್ಟ್ ಇಂಡೀಸ್ vs ಭಾರತ (ಕೋಲ್ಕತ್ತಾ)
Follow Us
ಇಂದು ಈ ರಾಶಿಯವರು ಮಾತಿನ ಮೇಲೆ ನಿಗಾ ವಹಿಸಿ!
ಇಂದು ಈ ರಾಶಿಯವರು ಮಾತಿನ ಮೇಲೆ ನಿಗಾ ವಹಿಸಿ!
ಭಾಮಾ ಹರೀಶ್ ಪುತ್ರ ನಿಧನ: ಘಟನೆ ವಿವರಿಸಿದ ಜೊತೆಯಲ್ಲಿದ್ದ ಗೆಳೆಯ
ಭಾಮಾ ಹರೀಶ್ ಪುತ್ರ ನಿಧನ: ಘಟನೆ ವಿವರಿಸಿದ ಜೊತೆಯಲ್ಲಿದ್ದ ಗೆಳೆಯ
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!